Homeಮುಖಪುಟಥ್ಯಾಂಕ್ಯೂ ಅಮೀರ್ ಖಾನ್ ಎಂದ ಪ್ರಧಾನಿ ನರೇಂದ್ರ ಮೋದಿ...

ಥ್ಯಾಂಕ್ಯೂ ಅಮೀರ್ ಖಾನ್ ಎಂದ ಪ್ರಧಾನಿ ನರೇಂದ್ರ ಮೋದಿ…

- Advertisement -
- Advertisement -

ಏಕಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸುವ ಪ್ರಧಾನ ಮಂತ್ರಿಯ ಕ್ರಮವನ್ನು ಶ್ಲಾಘಿಸಿದ್ದ ನಟ ಅಮೀರ್ ಖಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಧನ್ಯವಾದ ತಿಳಿಸಿದ್ದಾರೆ

ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ ಮಾತನಾಡಿದ್ದ ಪ್ರಧಾನಿಯವರು, ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯಾದ ಅಕ್ಟೋಬರ್ 2 ರಿಂದ ಪ್ಲಾಸ್ಟಿಕ್ ವಿರುದ್ಧ ಹೊಸ ಕ್ರಾಂತಿಯನ್ನು ಪ್ರಾರಂಭಿಸಬೇಕೆಂದು ಜನರನ್ನು ಕೋರಿದ್ದರು. ಈ ತಿಂಗಳ ಆರಂಭದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ ಪ್ಲಾಸ್ಟಿಕ್ ಮುಕ್ತ ಭಾರತದ ಮನವಿಯ ಮುಂದುವರಿಕೆಯಾಗಿತ್ತು.

“ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ‘ಏಕ ಬಳಕೆಯ ಪ್ಲಾಸ್ಟಿಕ್ ’ಅನ್ನು ನಿಗ್ರಹಿಸುವ ಪ್ರಯತ್ನವನ್ನು ನಾವೆಲ್ಲರೂ ಬಲವಾಗಿ ಬೆಂಬಲಿಸಬೇಕಾಗಿದೆ. ನಾವು ‘ಏಕ ಬಳಕೆಯ ಪ್ಲಾಸ್ಟಿಕ್’ ಬಳಕೆಯನ್ನು ನಿಲ್ಲಿಸುತ್ತೇವೆ ಎಂದು ಖಚಿತಪಡಿಸಿವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ” ಎಂದು ನಟ ಅಮೀರ್ ಖಾನ್ ಟ್ವೀಟ್ ಮಾಡಿದ್ದರು.

ಇದಕ್ಕಿ ಪ್ರತಿಕ್ರಿಯಿಸಿರುವ ಪ್ರಧಾನಿಯವರು “ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ತೆಗೆದುಹಾಕುವ ಆಂದೋಲನಕ್ಕೆ ಅಮೂಲ್ಯವಾದ ಬೆಂಬಲ ನೀಡಿದ್ದಕ್ಕಾಗಿ ಧನ್ಯವಾದಗಳು ಅಮೀರ್ ಖಾನ್. ನಿಮ್ಮ ಉತ್ತೇಜಕ ಮಾತುಗಳು ಚಳುವಳಿಯನ್ನು ಬಲಪಡಿಸಲು ಇತರರಿಗೆ ಪ್ರೇರಣೆ ನೀಡುತ್ತದೆ ”ಎಂದು ಟ್ವೀಟ್ ಮಾಡಿದ್ದಾರೆ.

ಭಾರತದಲ್ಲಿ ಪ್ರತಿದಿನ 15,000 ಟನ್ ಪ್ಲಾಸ್ಟಿಕ್ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಅದರಲ್ಲಿ 9,000 ಟನ್ ನಷ್ಟನ್ನು ಸಂಗ್ರಹಿಸಿ ಮರುಬಳಕೆ ಮಾಡಲಾಗುತ್ತದೆ. ಆದರೆ 6,000 ಟನ್ ಪ್ಲಾಸ್ಟಿಕ್ ತ್ಯಾಜ್ಯವು ಕಸವಾಗಿ ಹಾಗೆಯೇ ಉಳಿಯುತ್ತಿದೆ ಎಂದು 2018 ರಲ್ಲಿ ಅಂದಿನ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ರವರು ಹೇಳಿದ್ದರು.

ಈ ಕಸದ ಪ್ಲಾಸ್ಟಿಕ್ ನದಿಗಳು, ಸಾಗರಗಳು ಮತ್ತು ನೆಲದ ಮಣ್ಣಿನಲ್ಲಿ ಉಳಿದು ಪರಿಸರವನ್ನು ಕಲುಷಿತಗೊಳಿಸುತ್ತದೆ. ಸಸ್ಯಗಳ ಬೆಳವಣಿಗೆಗೆ ಅಡ್ಡಿಯಾಗುತ್ತದೆ, ಚರಂಡಿಗಳು ಮತ್ತು ಕಾಲುವೆಗಳನ್ನು ನಿರ್ಬಂಧಿಸುತ್ತದೆ ಮತ್ತು ಪರಿಸರ ವ್ಯವಸ್ಥೆಗಳನ್ನು ಏರು ಪೇರು ಮಾಡುತ್ತಿವೆ.

12 ಹಿಮಾಲಯನ್ ರಾಜ್ಯಗಳಾದ ಸಿಕ್ಕಿಂ, ಮೇಘಾಲಯ, ತ್ರಿಪುರ, ಮಿಜೋರಾಂ, ನಾಗಾಲ್ಯಾಂಡ್, ಉತ್ತರಾಖಂಡ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಮಣಿಪುರ, ಅಸ್ಸಾಂ ಮತ್ತು ಹಿಮಾಚಲ ಪ್ರದೇಶದಾದ್ಯಂತ ಪ್ಲಾಸ್ಟಿಕ್ ಮಾಲಿನ್ಯದ ವಿರುದ್ಧದ ಯುದ್ಧದಲ್ಲಿ 2018 ರ ಮೇ 26 ರಂದು ನಡೆದ ಎರಡು ಗಂಟೆಗಳ ಕಾರ್ಯಾಚರಣೆಯಲ್ಲಿ ಸ್ವಯಂಸೇವಕರು ಸುಮಾರು ನಾಲ್ಕು ಲಕ್ಷ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿದ್ದರು.

2.50 ಲಕ್ಷಕ್ಕೂ ಹೆಚ್ಚು (62.67%) ತ್ಯಾಜ್ಯ ವಸ್ತುಗಳು ಚಿಪ್ಸ್, ಮಿಠಾಯಿಗಳು, ಚೂಯಿಂಗ್ ಮತ್ತು ತಂಬಾಕು ಉತ್ಪನ್ನಗಳ ಹೊದಿಕೆಗಳನ್ನು ಒಳಗೊಂಡಿವೆ. ಮಲ್ಟಿ-ಲೇಯರ್ಡ್ ಪ್ಲಾಸ್ಟಿಕ್ ಎಂದು ವರ್ಗೀಕರಿಸಲಾದ ಇಂತಹ ಹೊದಿಕೆಗಳನ್ನು ಮರುಬಳಕೆ ಮಾಡಲಾಗುವುದಿಲ್ಲ ಮತ್ತು ಜೈವಿಕ ವಿಘಟನೀಯವಲ್ಲ ಎಂದು ತಜ್ಞರು ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನನಗಿದು ಇಷ್ಟವಾಗಲಿಲ್ಲ. ಜನಪರ ಕಾಳಜಿ ತೋರಿಸುತ್ತಲೇ ಬಂದಿರುವ ಅಮೀರ್ ಖಾನ್ ಹೇಳಿದ್ದು ನಿಜವಾದ ಸುದ್ದಿ. ಅದನ್ನು ಈ ಪ್ರಚಾರ ಪ್ರಿಯ ಪ್ರಧಾನಿ ಶ್ಲಾಘಿಸಿದ್ದು ಯಾವ ಸೀಮೆಯ ಸುದ್ದಿ!? ಆತನಿಗೆ ಇನ್ನಷ್ಟು ಪ್ರಚಾರ ಸಿಕ್ಕಿತು ಅಷ್ಟೇ. ಆತನಿಗೆ ನಿಜವಾದ ಕಾಳಜಿ ಇದ್ದರೆ ಏಕ ಬಳಕೆಯ ಪ್ಲಾಸ್ಟಿಕನ್ನು ಮೂಲದಲ್ಲೇ ನಿಷೇಧಿಸಲಿ. Lip serviceಗಳಿಗೆ ಏಕೆ ಪ್ರಚಾರ ಕೊಡುತ್ತೀರಿ?

LEAVE A REPLY

Please enter your comment!
Please enter your name here

- Advertisment -

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...