Homeಮುಖಪುಟತಮಿಳುನಾಡು ಪ್ರವಾಸದಲ್ಲಿ ಪ್ರಧಾನಿ; ‘ಗೋ ಬ್ಯಾಕ್ ಮೋದಿ’ ಟ್ರೆಂಡ್ ಮಾಡಿದ ತಮಿಳಿಗರು

ತಮಿಳುನಾಡು ಪ್ರವಾಸದಲ್ಲಿ ಪ್ರಧಾನಿ; ‘ಗೋ ಬ್ಯಾಕ್ ಮೋದಿ’ ಟ್ರೆಂಡ್ ಮಾಡಿದ ತಮಿಳಿಗರು

- Advertisement -
- Advertisement -

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎರಡು ದಿನಗಳ ತಮಿಳುನಾಡು ಪ್ರವಾಸ ಕೈಗೊಂಡಿದ್ದಾರೆ. ಆದರೆ, ಸೋಮವಾರ ಸಂಜೆಯಿಂದಲೇ ತಮಿಳಿಗರು ಎಕ್ಸ್‌ನಲ್ಲಿ ‘ಗೋ ಬ್ಯಾಕ್ ಮೋದಿ’ ಮತ್ತು ‘ಗೋ ಫ್ಯಾಸಿಸ್ಟ್ ಮೋದಿ’ ಹ್ಯಾಷ್ಟ್ಯಾಗ್‌ಗಳನ್ನು ಅನ್ನು ಟ್ರೆಂಡ್ ಮಾಡಿದ್ದಾರೆ. ಇದರ ಜತೆಗೆ, ಬಿಜೆಪಿ ಬೆಂಬಲಿಗರು ‘ವಣಕ್ಕಂ ಮೋದಿ’ ಹ್ಯಾಷ್ ಟ್ಯಾಗ್ ಅನ್ನು ಬಳಸಿದ್ದಾರೆ.

ನರೇಂದ್ರ ಮೋದಿ ಇಂದಿನಿಂದ ಎರಡು ದಿನ ತಮಿಳುನಾಡಿನಲ್ಲೆ ಇರಲಿದ್ದು, ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇಂದು ಅವರು ಸುಮಾರು ₹ 20,000 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಅನ್ನು ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಅವರು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಜತೆಗೆ ವೇದಿಕೆ ಹಂಚಿಕೊಂಡರು.

ಜನರನ್ನುದ್ದೇಶಿ ಮಾತನಾಡಿದ ಮೋದಿ, ಡಿಎಂಡಿಕೆ ಪಕ್ಷದ ಸಂಸ್ಥಾಪಕ ಮತ್ತು ಖ್ಯಾತ ನಟ ವಿಜಯಕಾಂತ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ‘ಅವರು ಚಿತ್ರರಂಗ ಮಾತ್ರವಲ್ಲದೆ ರಾಜಕೀಯದಲ್ಲೂ ಕ್ಯಾಪ್ಟನ್’ ಆಗಿದ್ದರು ಎಂದು ಹೇಳಿದರು.

‘ಕೆಲವು ದಿನಗಳ ಹಿಂದೆ ತಿರು ವಿಜಯಕಾಂತ್ ಅವರನ್ನು ಕಳೆದುಕೊಂಡಿದ್ದೇವೆ. ಅವರು ಸಿನಿಮಾ ಜಗತ್ತಿನಲ್ಲಿ ಮಾತ್ರವಲ್ಲದೆ ರಾಜಕೀಯದಲ್ಲಿಯೂ ಕ್ಯಾಪ್ಟನ್ ಆಗಿದ್ದರು. ಅವರು ಸಿನಿಮಾದಲ್ಲಿ ತಮ್ಮ ಕೆಲಸದ ಮೂಲಕ ಜನರ ಹೃದಯವನ್ನು ಗೆದ್ದರು. ಎಲ್ಲಕ್ಕಿಂತ ಹೆಚ್ಚಾಗಿ ಅವರು ರಾಜಕಾರಣಿಯಾಗಿ ಯಾವಾಗಲೂ ರಾಷ್ಟ್ರೀಯತೆಯನ್ನು ಪ್ರತಿಪಾದಿಸಿದರು. ನಾನು ಅವರಿಗೆ ನನ್ನ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪ ವ್ಯಕ್ತಪಡಿಸುತ್ತೇನೆ’ ಎಂದು ಪ್ರಧಾನಿ ಮೋದಿ ತಿರುಚಿರಾಪಳ್ಳಿಯಲ್ಲಿ ಹೇಳಿದರು.

ದೀರ್ಘ ಕಾಲದ ಅನಾರೋಗ್ಯದಿಂದ ಬಳಲಿ ಡಿಸೆಂಬರ್ 28ರಂದು ನಿಧನರಾದ ವಿಜಯಕಾಂತ್ ಅವರಿಗೆ ಪ್ರಧಾನಿ ಶ್ರದ್ಧಾಂಜಲಿ ಸಲ್ಲಿಸಿದಾಗ ಹರ್ಷೋದ್ಘಾರಗಳು ಮೊಳಗಿದವು. 71 ವರ್ಷ ವಯಸ್ಸಿನ ನಟ, ತಮಿಳುನಾಡು ರಾಜಕೀಯದ ಪ್ರಮುಖ ವ್ಯಕ್ತಿಯಾಗಿದ್ದು, 1991ರ ಚಲನಚಿತ್ರ ಕ್ಯಾಪ್ಟನ್ ಪ್ರಭಾಕರನ್ ಅವರ ಪಾತ್ರಕ್ಕಾಗಿ ‘ಕ್ಯಾಪ್ಟನ್’ ಎಂಬ ಬಿರುದನ್ನು ಪಡೆದರು.

ಇದಕ್ಕೂ ಮುನ್ನ ಅವರು ತಿರುಚಿರಾಪಳ್ಳಿಯಲ್ಲಿರುವ ಭಾರತಿದಾಸನ್ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಎರಡೂ ಕಾರ್ಯಕ್ರಮಗಳಲ್ಲಿ ಅವರು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರೊಂದಿಗೆ ವೇದಿಕೆ ಹಂಚಿಕೊಂಡರು. ಡಿಎಂಕೆಯನ್ನು ಮುನ್ನಡೆಸುತ್ತಿರುವ ಸ್ಟಾಲಿನ್, ಈ ವರ್ಷದ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಎದುರಿಸಲು ಸಜ್ಜಾಗುತ್ತಿರುವ ‘ಇಂಡಿಯಾ’ ವಿರೋಧ ಪಕ್ಷಗಳ ಪ್ರಮುಖರಾಗಿದ್ದಾರೆ.

ತಮಿಳುನಾಡಿನ ಪ್ರವಾಹದ ಬಗ್ಗೆಯೂ ಮಾತನಾಡಿದ ಪ್ರಧಾನಿ, ‘2023ರ ಕೊನೆಯ ಕೆಲವು ವಾರಗಳು ತಮಿಳುನಾಡಿನ ಅನೇಕ ಜನರಿಗೆ ಕಷ್ಟಕರವಾಗಿತ್ತು. ಭಾರೀ ಮಳೆಯಿಂದಾಗಿ ನಾವು ನಮ್ಮ ಅನೇಕ ಸಹ ನಾಗರಿಕರನ್ನು ಕಳೆದುಕೊಂಡಿದ್ದೇವೆ. ಗಮನಾರ್ಹ ಆಸ್ತಿ ನಷ್ಟವೂ ಸಂಭವಿಸಿದೆ. ಬಿಕ್ಕಟ್ಟಿನ ಸಮಯದಲ್ಲಿ ಕೇಂದ್ರ ಸರ್ಕಾರವು ತಮಿಳುನಾಡಿನ ಜನರೊಂದಿಗೆ ನಿಂತಿದೆ. ನಾವು ರಾಜ್ಯ ಸರ್ಕಾರಕ್ಕೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತಿದ್ದೇವೆ’ ಎಂದು ಅವರು ಹೇಳಿದರು.

ಹಸಿರು ಕ್ರಾಂತಿಯ ಹರಿಕಾರ ಎಂದು ಪರಿಗಣಿಸಲ್ಪಟ್ಟಿರುವ ಕೃಷಿ ವಿಜ್ಞಾನಿ ಡಾ.ಎಂ.ಎಸ್.ಸ್ವಾಮಿನಾಥನ್ ಅವರಿಗೆ ಗೌರವ ಸಲ್ಲಿಸಿದ ಮೋದಿ, ‘ತಮಿಳುನಾಡಿನ ಇನ್ನೊಬ್ಬ ಪುತ್ರ ಡಾ.ಎಂ.ಎಸ್.ಸ್ವಾಮಿನಾಥನ್ ಅವರನ್ನೂ ನಾನು ನೆನಪಿಸಿಕೊಳ್ಳುತ್ತೇನೆ. ಅವರು ನಮ್ಮ ದೇಶಕ್ಕೆ ಆಹಾರ ಭದ್ರತೆಯನ್ನು ಖಾತರಿಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕಳೆದ ವರ್ಷ ನಾವು ಅವರನ್ನೂ ಕಳೆದುಕೊಂಡಿದ್ದೇವೆ’ ಎಂದು ಪ್ರಧಾನಿ ಹೇಳಿದರು.

ಇದನ್ನೂ ಓದಿ; ಇವಿಎಂ ಕುರಿತ ನಮ್ಮ ನಿರ್ದಿಷ್ಟ ಕಳವಳಗಳನ್ನು ಆಯೋಗ ಪರಿಹರಿಸಲಿಲ್ಲ: ಜೈರಾಂ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...