Homeಮುಖಪುಟತಮಿಳುನಾಡು ಪ್ರವಾಸದಲ್ಲಿ ಪ್ರಧಾನಿ; ‘ಗೋ ಬ್ಯಾಕ್ ಮೋದಿ’ ಟ್ರೆಂಡ್ ಮಾಡಿದ ತಮಿಳಿಗರು

ತಮಿಳುನಾಡು ಪ್ರವಾಸದಲ್ಲಿ ಪ್ರಧಾನಿ; ‘ಗೋ ಬ್ಯಾಕ್ ಮೋದಿ’ ಟ್ರೆಂಡ್ ಮಾಡಿದ ತಮಿಳಿಗರು

- Advertisement -
- Advertisement -

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎರಡು ದಿನಗಳ ತಮಿಳುನಾಡು ಪ್ರವಾಸ ಕೈಗೊಂಡಿದ್ದಾರೆ. ಆದರೆ, ಸೋಮವಾರ ಸಂಜೆಯಿಂದಲೇ ತಮಿಳಿಗರು ಎಕ್ಸ್‌ನಲ್ಲಿ ‘ಗೋ ಬ್ಯಾಕ್ ಮೋದಿ’ ಮತ್ತು ‘ಗೋ ಫ್ಯಾಸಿಸ್ಟ್ ಮೋದಿ’ ಹ್ಯಾಷ್ಟ್ಯಾಗ್‌ಗಳನ್ನು ಅನ್ನು ಟ್ರೆಂಡ್ ಮಾಡಿದ್ದಾರೆ. ಇದರ ಜತೆಗೆ, ಬಿಜೆಪಿ ಬೆಂಬಲಿಗರು ‘ವಣಕ್ಕಂ ಮೋದಿ’ ಹ್ಯಾಷ್ ಟ್ಯಾಗ್ ಅನ್ನು ಬಳಸಿದ್ದಾರೆ.

ನರೇಂದ್ರ ಮೋದಿ ಇಂದಿನಿಂದ ಎರಡು ದಿನ ತಮಿಳುನಾಡಿನಲ್ಲೆ ಇರಲಿದ್ದು, ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇಂದು ಅವರು ಸುಮಾರು ₹ 20,000 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಅನ್ನು ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಅವರು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಜತೆಗೆ ವೇದಿಕೆ ಹಂಚಿಕೊಂಡರು.

ಜನರನ್ನುದ್ದೇಶಿ ಮಾತನಾಡಿದ ಮೋದಿ, ಡಿಎಂಡಿಕೆ ಪಕ್ಷದ ಸಂಸ್ಥಾಪಕ ಮತ್ತು ಖ್ಯಾತ ನಟ ವಿಜಯಕಾಂತ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ‘ಅವರು ಚಿತ್ರರಂಗ ಮಾತ್ರವಲ್ಲದೆ ರಾಜಕೀಯದಲ್ಲೂ ಕ್ಯಾಪ್ಟನ್’ ಆಗಿದ್ದರು ಎಂದು ಹೇಳಿದರು.

‘ಕೆಲವು ದಿನಗಳ ಹಿಂದೆ ತಿರು ವಿಜಯಕಾಂತ್ ಅವರನ್ನು ಕಳೆದುಕೊಂಡಿದ್ದೇವೆ. ಅವರು ಸಿನಿಮಾ ಜಗತ್ತಿನಲ್ಲಿ ಮಾತ್ರವಲ್ಲದೆ ರಾಜಕೀಯದಲ್ಲಿಯೂ ಕ್ಯಾಪ್ಟನ್ ಆಗಿದ್ದರು. ಅವರು ಸಿನಿಮಾದಲ್ಲಿ ತಮ್ಮ ಕೆಲಸದ ಮೂಲಕ ಜನರ ಹೃದಯವನ್ನು ಗೆದ್ದರು. ಎಲ್ಲಕ್ಕಿಂತ ಹೆಚ್ಚಾಗಿ ಅವರು ರಾಜಕಾರಣಿಯಾಗಿ ಯಾವಾಗಲೂ ರಾಷ್ಟ್ರೀಯತೆಯನ್ನು ಪ್ರತಿಪಾದಿಸಿದರು. ನಾನು ಅವರಿಗೆ ನನ್ನ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪ ವ್ಯಕ್ತಪಡಿಸುತ್ತೇನೆ’ ಎಂದು ಪ್ರಧಾನಿ ಮೋದಿ ತಿರುಚಿರಾಪಳ್ಳಿಯಲ್ಲಿ ಹೇಳಿದರು.

ದೀರ್ಘ ಕಾಲದ ಅನಾರೋಗ್ಯದಿಂದ ಬಳಲಿ ಡಿಸೆಂಬರ್ 28ರಂದು ನಿಧನರಾದ ವಿಜಯಕಾಂತ್ ಅವರಿಗೆ ಪ್ರಧಾನಿ ಶ್ರದ್ಧಾಂಜಲಿ ಸಲ್ಲಿಸಿದಾಗ ಹರ್ಷೋದ್ಘಾರಗಳು ಮೊಳಗಿದವು. 71 ವರ್ಷ ವಯಸ್ಸಿನ ನಟ, ತಮಿಳುನಾಡು ರಾಜಕೀಯದ ಪ್ರಮುಖ ವ್ಯಕ್ತಿಯಾಗಿದ್ದು, 1991ರ ಚಲನಚಿತ್ರ ಕ್ಯಾಪ್ಟನ್ ಪ್ರಭಾಕರನ್ ಅವರ ಪಾತ್ರಕ್ಕಾಗಿ ‘ಕ್ಯಾಪ್ಟನ್’ ಎಂಬ ಬಿರುದನ್ನು ಪಡೆದರು.

ಇದಕ್ಕೂ ಮುನ್ನ ಅವರು ತಿರುಚಿರಾಪಳ್ಳಿಯಲ್ಲಿರುವ ಭಾರತಿದಾಸನ್ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಎರಡೂ ಕಾರ್ಯಕ್ರಮಗಳಲ್ಲಿ ಅವರು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರೊಂದಿಗೆ ವೇದಿಕೆ ಹಂಚಿಕೊಂಡರು. ಡಿಎಂಕೆಯನ್ನು ಮುನ್ನಡೆಸುತ್ತಿರುವ ಸ್ಟಾಲಿನ್, ಈ ವರ್ಷದ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಎದುರಿಸಲು ಸಜ್ಜಾಗುತ್ತಿರುವ ‘ಇಂಡಿಯಾ’ ವಿರೋಧ ಪಕ್ಷಗಳ ಪ್ರಮುಖರಾಗಿದ್ದಾರೆ.

ತಮಿಳುನಾಡಿನ ಪ್ರವಾಹದ ಬಗ್ಗೆಯೂ ಮಾತನಾಡಿದ ಪ್ರಧಾನಿ, ‘2023ರ ಕೊನೆಯ ಕೆಲವು ವಾರಗಳು ತಮಿಳುನಾಡಿನ ಅನೇಕ ಜನರಿಗೆ ಕಷ್ಟಕರವಾಗಿತ್ತು. ಭಾರೀ ಮಳೆಯಿಂದಾಗಿ ನಾವು ನಮ್ಮ ಅನೇಕ ಸಹ ನಾಗರಿಕರನ್ನು ಕಳೆದುಕೊಂಡಿದ್ದೇವೆ. ಗಮನಾರ್ಹ ಆಸ್ತಿ ನಷ್ಟವೂ ಸಂಭವಿಸಿದೆ. ಬಿಕ್ಕಟ್ಟಿನ ಸಮಯದಲ್ಲಿ ಕೇಂದ್ರ ಸರ್ಕಾರವು ತಮಿಳುನಾಡಿನ ಜನರೊಂದಿಗೆ ನಿಂತಿದೆ. ನಾವು ರಾಜ್ಯ ಸರ್ಕಾರಕ್ಕೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತಿದ್ದೇವೆ’ ಎಂದು ಅವರು ಹೇಳಿದರು.

ಹಸಿರು ಕ್ರಾಂತಿಯ ಹರಿಕಾರ ಎಂದು ಪರಿಗಣಿಸಲ್ಪಟ್ಟಿರುವ ಕೃಷಿ ವಿಜ್ಞಾನಿ ಡಾ.ಎಂ.ಎಸ್.ಸ್ವಾಮಿನಾಥನ್ ಅವರಿಗೆ ಗೌರವ ಸಲ್ಲಿಸಿದ ಮೋದಿ, ‘ತಮಿಳುನಾಡಿನ ಇನ್ನೊಬ್ಬ ಪುತ್ರ ಡಾ.ಎಂ.ಎಸ್.ಸ್ವಾಮಿನಾಥನ್ ಅವರನ್ನೂ ನಾನು ನೆನಪಿಸಿಕೊಳ್ಳುತ್ತೇನೆ. ಅವರು ನಮ್ಮ ದೇಶಕ್ಕೆ ಆಹಾರ ಭದ್ರತೆಯನ್ನು ಖಾತರಿಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕಳೆದ ವರ್ಷ ನಾವು ಅವರನ್ನೂ ಕಳೆದುಕೊಂಡಿದ್ದೇವೆ’ ಎಂದು ಪ್ರಧಾನಿ ಹೇಳಿದರು.

ಇದನ್ನೂ ಓದಿ; ಇವಿಎಂ ಕುರಿತ ನಮ್ಮ ನಿರ್ದಿಷ್ಟ ಕಳವಳಗಳನ್ನು ಆಯೋಗ ಪರಿಹರಿಸಲಿಲ್ಲ: ಜೈರಾಂ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...