Homeಮುಖಪುಟ‘ಪಿಎಂ ಪೋಶನ್’: ಬಿಸಿಯೂಟ ಯೋಜನೆಯ ಹೆಸರು ಬದಲಿಸಿದ ಒಕ್ಕೂಟ ಸರ್ಕಾರ!

‘ಪಿಎಂ ಪೋಶನ್’: ಬಿಸಿಯೂಟ ಯೋಜನೆಯ ಹೆಸರು ಬದಲಿಸಿದ ಒಕ್ಕೂಟ ಸರ್ಕಾರ!

- Advertisement -
- Advertisement -

ಮೋದಿ ನೇತೃತ್ವದ ಬಿಜೆಪಿ ಪಕ್ಷವು ಒಕ್ಕೂಟ ಸರ್ಕಾರದಲ್ಲಿ ಅಧಿಕಾರ ಹಿಡಿದ ನಂತರ, ಈ ಹಿಂದಿನ ಸರ್ಕಾರಗಳು ರೂಪಿಸಿದ್ದ ಹಲವಾರು ಯೋಜನೆಗಳ ಹೆಸರುಗಳನ್ನು ಬದಲಿಸಿದೆ. ಇದೀಗ, ಶಾಲೆಗಳಲ್ಲಿ ನೀಡುತ್ತಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆ ಈ ಪಟ್ಟಿಗೆ ಹೊಸದಾಗಿ ಸೇರಿಕೊಂಡಿದೆ. “ಪ್ರಧಾನಮಂತ್ರಿ ಪೋಶನ್ ಯೋಜನೆ ಅಥವಾ ಪಿಎಂ-ಪೋಶನ್ ಯೋಜನೆ” ಎಂದು ಬಿಸಿಯೂಟ ಯೋಜನೆಯ ಹೆಸರನ್ನು ಬುಧವಾರ ಬದಲಾಯಿಸಿದೆ.

ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಮುಂದಿನ ಐದು ವರ್ಷಗಳಲ್ಲಿ ಈ ಯೋಜನೆಗೆ 1.30 ಸಾವಿರ ಕೋಟಿ ವೆಚ್ಚ ಮಾಡುವುದಾಗಿ ಒಕ್ಕೂಟ ಸರ್ಕಾರ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: 5 ತಿಂಗಳಿಂದ ಬಾರದ ಗೌರವಧನ: ವೇತನ ಕೇಳಿದ ಬಿಸಿಯೂಟ ನೌಕರರ ಬಂಧನ

ಯೋಜನೆಯು ದೇಶಾದ್ಯಂತ 11.2 ಲಕ್ಷ ಶಾಲೆಗಳಲ್ಲಿ 1 ರಿಂದ 8 ನೇ ತರಗತಿಗೆ ದಾಖಲಾದ 11.8 ಕೋಟಿ ವಿದ್ಯಾರ್ಥಿಗಳನ್ನು ಒಳಗೊಂಡಿದೆ. ಈ ಯೋಜನೆಯು 2021-22 ರಿಂದ 2025-26 ರವರೆಗಿನ ಐದು ವರ್ಷಗಳ ಅವಧಿಗೆ ಒಕ್ಕೂಟ ಸರ್ಕಾರದಿಂದ 54,061.73 ಕೋಟಿ ಮತ್ತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತದಿಂದ 31,733.17 ಕೋಟಿಗಳ ಆರ್ಥಿಕ ವೆಚ್ಚವನ್ನು ಹೊಂದಿದೆ.

ಆಹಾರ ಧಾನ್ಯಗಳ ಮೇಲೆ 45,000 ಕೋಟಿ ರೂ.ಗಳ ಹೆಚ್ಚುವರಿ ವೆಚ್ಚವನ್ನು ಒಕ್ಕೂಟ ಸರ್ಕಾರ ಭರಿಸುತ್ತದೆ. ಆದ್ದರಿಂದ, ಯೋಜನೆಯ ಒಟ್ಟು ಬಜೆಟ್ 1,30,794.9 ಕೋಟಿ ಆಗಿರುತ್ತದೆ ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ ನಡೆಯುತ್ತಿರುವ ಎಲ್‌ಕೆಜಿ ಮತ್ತು ಯುಕೆಜಿ ಅಥವಾ ಬಾಲವಾಡಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಈ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಸರ್ಕಾರ ಹೇಳಿದೆ. ಪ್ರಸ್ತುತವಾಗಿ ಈ ವಿದ್ಯಾರ್ಥಿಗಳನ್ನು ಯೋಜನೆಯಲ್ಲಿ ಸೇರಿಸಲಾಗಿಲ್ಲ.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

“ಯೋಜನೆಯ ಅಡಿಯಲ್ಲಿ ನೀಡುವ ಆಹಾರವನ್ನು ಸರ್ಕಾರ ನಿರ್ಧರಿಸುವುದಿಲ್ಲ. ಇದನ್ನು ರಾಜ್ಯಗಳು ನಿರ್ಧರಿಸಬಹುದು. ರಾಜ್ಯಗಳು ತಮ್ಮ ಸ್ಥಳೀಯ ಪೌಷ್ಟಿಕಾಂಶದ ವಸ್ತುಗಳನ್ನು ಸೇರಿಸಲು ಅನುಮತಿಸಲಾಗುವುದು” ಎಂದು ಅಧಿಕಾರಿಗಳು ಹೇಳಿದ್ದಾರೆ.

“ಈ ಮೊದಲು ಈ ಅವಕಾಶ ಇರಲಿಲ್ಲ …ಬದಲಾಗಿ, ಅಧಿಕ ರಕ್ತಹೀನತೆ ಇರುವ ಜಿಲ್ಲೆಗಳಲ್ಲಿ ಮಕ್ಕಳಿಗೆ ಪೂರಕ ಪೌಷ್ಟಿಕಾಂಶದ ವಸ್ತುಗಳನ್ನು ಒದಗಿಸುವುದಕ್ಕಾಗಿ ವಿಶೇಷ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿತ್ತು” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಯೋಜನೆಯ ಸಾಮಾಜಿಕ ಲೆಕ್ಕಪರಿಶೋಧನೆಯನ್ನು ಯೋಜನೆಯ ಅಡಿಯಲ್ಲೆ ಎಲ್ಲಾ ಜಿಲ್ಲೆಗಳಲ್ಲಿ ಕಡ್ಡಾಯಗೊಳಿಸಲಾಗಿದೆ. ಈ ಯೋಜನೆಯನ್ನು ಐದು ವರ್ಷಗಳ ನಂತರ ನವೀಕರಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಇದನ್ನೂ ಓದಿ: ಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ರೀತಿ ಹೆಸರಿಡಲು PM ಏನಾದರೂ ಅವರ ಮನೆಯಿಂದ ಹಣ ತಂದು ಶಾಲಾ ಮಕ್ಕಳಿಗೆ ಅನ್ನದಾನ ಮಾಡುತ್ತಿದ್ದಾರೆಯೇ? ಜನರು ಕಟ್ಟಿದ ತೆರಿಗೆಯಿಂದಲೇ ತಾನೇ ಸರ್ಕಾರಗಳು ಇಂಥ ಯೋಜನೆಗಳನ್ನು ರೂಪಿಸುವುದು?

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...