Homeಮುಖಪುಟ‘ಪಿಎಂ ಪೋಶನ್’: ಬಿಸಿಯೂಟ ಯೋಜನೆಯ ಹೆಸರು ಬದಲಿಸಿದ ಒಕ್ಕೂಟ ಸರ್ಕಾರ!

‘ಪಿಎಂ ಪೋಶನ್’: ಬಿಸಿಯೂಟ ಯೋಜನೆಯ ಹೆಸರು ಬದಲಿಸಿದ ಒಕ್ಕೂಟ ಸರ್ಕಾರ!

- Advertisement -
- Advertisement -

ಮೋದಿ ನೇತೃತ್ವದ ಬಿಜೆಪಿ ಪಕ್ಷವು ಒಕ್ಕೂಟ ಸರ್ಕಾರದಲ್ಲಿ ಅಧಿಕಾರ ಹಿಡಿದ ನಂತರ, ಈ ಹಿಂದಿನ ಸರ್ಕಾರಗಳು ರೂಪಿಸಿದ್ದ ಹಲವಾರು ಯೋಜನೆಗಳ ಹೆಸರುಗಳನ್ನು ಬದಲಿಸಿದೆ. ಇದೀಗ, ಶಾಲೆಗಳಲ್ಲಿ ನೀಡುತ್ತಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆ ಈ ಪಟ್ಟಿಗೆ ಹೊಸದಾಗಿ ಸೇರಿಕೊಂಡಿದೆ. “ಪ್ರಧಾನಮಂತ್ರಿ ಪೋಶನ್ ಯೋಜನೆ ಅಥವಾ ಪಿಎಂ-ಪೋಶನ್ ಯೋಜನೆ” ಎಂದು ಬಿಸಿಯೂಟ ಯೋಜನೆಯ ಹೆಸರನ್ನು ಬುಧವಾರ ಬದಲಾಯಿಸಿದೆ.

ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಮುಂದಿನ ಐದು ವರ್ಷಗಳಲ್ಲಿ ಈ ಯೋಜನೆಗೆ 1.30 ಸಾವಿರ ಕೋಟಿ ವೆಚ್ಚ ಮಾಡುವುದಾಗಿ ಒಕ್ಕೂಟ ಸರ್ಕಾರ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: 5 ತಿಂಗಳಿಂದ ಬಾರದ ಗೌರವಧನ: ವೇತನ ಕೇಳಿದ ಬಿಸಿಯೂಟ ನೌಕರರ ಬಂಧನ

ಯೋಜನೆಯು ದೇಶಾದ್ಯಂತ 11.2 ಲಕ್ಷ ಶಾಲೆಗಳಲ್ಲಿ 1 ರಿಂದ 8 ನೇ ತರಗತಿಗೆ ದಾಖಲಾದ 11.8 ಕೋಟಿ ವಿದ್ಯಾರ್ಥಿಗಳನ್ನು ಒಳಗೊಂಡಿದೆ. ಈ ಯೋಜನೆಯು 2021-22 ರಿಂದ 2025-26 ರವರೆಗಿನ ಐದು ವರ್ಷಗಳ ಅವಧಿಗೆ ಒಕ್ಕೂಟ ಸರ್ಕಾರದಿಂದ 54,061.73 ಕೋಟಿ ಮತ್ತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತದಿಂದ 31,733.17 ಕೋಟಿಗಳ ಆರ್ಥಿಕ ವೆಚ್ಚವನ್ನು ಹೊಂದಿದೆ.

ಆಹಾರ ಧಾನ್ಯಗಳ ಮೇಲೆ 45,000 ಕೋಟಿ ರೂ.ಗಳ ಹೆಚ್ಚುವರಿ ವೆಚ್ಚವನ್ನು ಒಕ್ಕೂಟ ಸರ್ಕಾರ ಭರಿಸುತ್ತದೆ. ಆದ್ದರಿಂದ, ಯೋಜನೆಯ ಒಟ್ಟು ಬಜೆಟ್ 1,30,794.9 ಕೋಟಿ ಆಗಿರುತ್ತದೆ ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ ನಡೆಯುತ್ತಿರುವ ಎಲ್‌ಕೆಜಿ ಮತ್ತು ಯುಕೆಜಿ ಅಥವಾ ಬಾಲವಾಡಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಈ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಸರ್ಕಾರ ಹೇಳಿದೆ. ಪ್ರಸ್ತುತವಾಗಿ ಈ ವಿದ್ಯಾರ್ಥಿಗಳನ್ನು ಯೋಜನೆಯಲ್ಲಿ ಸೇರಿಸಲಾಗಿಲ್ಲ.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

“ಯೋಜನೆಯ ಅಡಿಯಲ್ಲಿ ನೀಡುವ ಆಹಾರವನ್ನು ಸರ್ಕಾರ ನಿರ್ಧರಿಸುವುದಿಲ್ಲ. ಇದನ್ನು ರಾಜ್ಯಗಳು ನಿರ್ಧರಿಸಬಹುದು. ರಾಜ್ಯಗಳು ತಮ್ಮ ಸ್ಥಳೀಯ ಪೌಷ್ಟಿಕಾಂಶದ ವಸ್ತುಗಳನ್ನು ಸೇರಿಸಲು ಅನುಮತಿಸಲಾಗುವುದು” ಎಂದು ಅಧಿಕಾರಿಗಳು ಹೇಳಿದ್ದಾರೆ.

“ಈ ಮೊದಲು ಈ ಅವಕಾಶ ಇರಲಿಲ್ಲ …ಬದಲಾಗಿ, ಅಧಿಕ ರಕ್ತಹೀನತೆ ಇರುವ ಜಿಲ್ಲೆಗಳಲ್ಲಿ ಮಕ್ಕಳಿಗೆ ಪೂರಕ ಪೌಷ್ಟಿಕಾಂಶದ ವಸ್ತುಗಳನ್ನು ಒದಗಿಸುವುದಕ್ಕಾಗಿ ವಿಶೇಷ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿತ್ತು” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಯೋಜನೆಯ ಸಾಮಾಜಿಕ ಲೆಕ್ಕಪರಿಶೋಧನೆಯನ್ನು ಯೋಜನೆಯ ಅಡಿಯಲ್ಲೆ ಎಲ್ಲಾ ಜಿಲ್ಲೆಗಳಲ್ಲಿ ಕಡ್ಡಾಯಗೊಳಿಸಲಾಗಿದೆ. ಈ ಯೋಜನೆಯನ್ನು ಐದು ವರ್ಷಗಳ ನಂತರ ನವೀಕರಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಇದನ್ನೂ ಓದಿ: ಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ರೀತಿ ಹೆಸರಿಡಲು PM ಏನಾದರೂ ಅವರ ಮನೆಯಿಂದ ಹಣ ತಂದು ಶಾಲಾ ಮಕ್ಕಳಿಗೆ ಅನ್ನದಾನ ಮಾಡುತ್ತಿದ್ದಾರೆಯೇ? ಜನರು ಕಟ್ಟಿದ ತೆರಿಗೆಯಿಂದಲೇ ತಾನೇ ಸರ್ಕಾರಗಳು ಇಂಥ ಯೋಜನೆಗಳನ್ನು ರೂಪಿಸುವುದು?

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...