Homeಮುಖಪುಟಲಾಕ್‌ಡೌನ್‌ ಘೋಷಿಸುವ ಮುನ್ನ ಪ್ರಧಾನಿ ರಾಜ್ಯಗಳನ್ನು ಸಂಪರ್ಕಿಸಬೇಕಿತ್ತು: ಚತ್ತೀಸ್‌ಘಡ ಸಿಎಂ ಭೂಪೇಶ್ ಬಾಗೇಲ್

ಲಾಕ್‌ಡೌನ್‌ ಘೋಷಿಸುವ ಮುನ್ನ ಪ್ರಧಾನಿ ರಾಜ್ಯಗಳನ್ನು ಸಂಪರ್ಕಿಸಬೇಕಿತ್ತು: ಚತ್ತೀಸ್‌ಘಡ ಸಿಎಂ ಭೂಪೇಶ್ ಬಾಗೇಲ್

ಆರ್ಥಿಕ ಬಿಕ್ಕಟ್ಟನ್ನು ತಪ್ಪಿಸುವ ಏಕೈಕ ಮಾರ್ಗವೆಂದರೆ ಹಣಕಾಸಿನ ದ್ರವ್ಯತೆಯನ್ನು ತುಂಬುವುದು ಮತ್ತು ಅಂತಿಮವಾಗಿ ಗ್ರಾಹಕರ ಖರೀದಿ ಶಕ್ತಿಯನ್ನು ಹೆಚ್ಚಿಸುವುದು. ಕೇಂದ್ರ ಸರ್ಕಾರವು ಈ ದಿಕ್ಕಿನಲ್ಲಿ ವೇಗವಾಗಿ ಚಲಿಸಬೇಕು

- Advertisement -
- Advertisement -

ಕೊರೊನಾ ಮುನ್ನಚ್ಚರಿಕೆಯ ಕಾರಣಕ್ಕೆ ದೇಶವ್ಯಾಪಿ 21 ದಿನಗಳ ಲಾಕ್‌ಡೌನ್‌ ಘೋಷಿಸುವ ಮುನ್ನ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಗಳನ್ನು ಸಂಪರ್ಕಿಸಬೇಕಿತ್ತು ಎಂದು ಚತ್ತೀಸ್‌ಘಡದ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದಿ ಹಿಂದೂ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು, “ಲಾಕ್‌ಡೌನ್‌ ಅನ್ನು ಕಾರ್ಯಗತಗೊಳಿಸಲು ಯಾರು? ಕೇಂದ್ರ ಸರ್ಕಾರವು ಸ್ವಂತವಾಗಿ ಜಾರಿ ಮಾಡಬಹುದೇ? ಇಲ್ಲ ಅಲ್ಲವೇ? ಅಂತಿಮವಾಗಿ, ಅದನ್ನು ಕಾರ್ಯಗತಗೊಳಿಸುವುದು ರಾಜ್ಯ ಸರ್ಕಾರದ ಕೆಲಸ. ಹಾಗಾದರೆ ಏಕಪಕ್ಷೀಯವಾಗಿ ಲಾಕ್‌ಡೌನ್‌ ಘೋಷಿಸುವ ಮೊದಲು ಪ್ರಧಾನಿ ಯಾವುದೇ ರಾಜ್ಯ ಸರ್ಕಾರಗಳೊಂದಿಗೆ ಮಾತನಾಡಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಹಲವಾರು ಕಾರ್ಮಿಕರು ತಮ್ಮ ಜೀವನವನ್ನು ಸಾಗಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಅವರು ತಮಗೆ ಹೆಚ್ಚು ಸುರಕ್ಷಿತವೆಂದು ಭಾವಿಸಿದ ಸ್ಥಳಗಳಿಗೆ ತೆರಳುತ್ತಾರೆ ಎಂದು ಕೇಂದ್ರವು ಊಹಿಸಿರಬೇಕು ಅಲ್ಲವೇ?  ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ರಾಜ್ಯ ಸರ್ಕಾರಗಳನ್ನು ಸಮಾಲೋಚಿಸಿದ್ದರೆ ಲಕ್ಷಾಂತರ ವಲಸಿಗರ ಸ್ಥಳಾಂತರವನ್ನು ತಪ್ಪಿಸಬಹುದಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಕಾರ್ಯತಂತ್ರ ಮಾತ್ರವಲ್ಲ; ಮಾನವೀಯತೆಯೇ ಇಲ್ಲದ ಮೋದಿ ಸರಕಾರ


ಚತ್ತೀಸ್‌ಘಡದಲ್ಲಿ ಏಳು ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಇದುವರೆಗೆ ಯಾವುದೇ ಸಾವು ಸಂಭವಿಸಿಲ್ಲ. ಮೋದಿ ರಾಷ್ಟ್ರವ್ಯಾಪಿ 21 ದಿನಗಳ ಲಾಕ್‌ಡೌನ್ ಘೋಷಿಸುವ ನಾಲ್ಕು ದಿನಗಳ ಮೊದಲೇ ಅಂದರೆ ಮಾರ್ಚ್ 21 ರಂದು ಲಾಕ್‌ಡೌನ್ ಘೋಷಿಸಿದ ಮೊದಲ ರಾಜ್ಯಗಳಲ್ಲಿ ಇದು ಒಂದು. “ನಾವು ರಾಜ್ಯದಾದ್ಯಂತ ಮುಂಬೈ-ಹೌರಾ ಹೆದ್ದಾರಿ ಸಂಪರ್ಕ ಕಡಿತ ಮಾಡಿದೆವು. ಹಾಗಾಗಿ ಕೊರೊನಾ ದೊಡ್ಡ ಮಟ್ಟದಲ್ಲಿ ಹರಡಲು ಸಾಧ್ಯವಾಗಲಿಲ್ಲ” ಎಂದಿದ್ದಾರೆ.

ಲಾಕ್‌ಡೌನ್‌ ನಂತರ ನುರಿತ ಮತ್ತು ಕೌಶಲ್ಯರಹಿತ ಕಾರ್ಮಿಕರು ಕಾರ್ಖಾನೆಗಳನ್ನು ತೊರೆದಿದ್ದಾರೆ. ಎಲ್ಲಾ ಕೈಗಾರಿಕೆಗಳು ಸ್ಥಗಿತಗೊಂಡಿವೆ. ನಾನು ಯಾವುದೇ ಅರ್ಥಶಾಸ್ತ್ರಜ್ಞನಲ್ಲ, ಆದರೆ ಖಂಡಿತವಾಗಿಯೂ, ಮುಂದಿನ ವರ್ಷಗಳಲ್ಲಿ ಈ ಲಾಕ್‌ಡೌನ್‌ನ ಆರ್ಥಿಕ ಪರಿಣಾಮವನ್ನು ನಾವು ನೋಡುತ್ತೇವೆ. ”ಲಾಕ್‌ಡೌನ್‌ ನೋಟು ರದ್ದತಿಯ ರಾಕ್ಷಸೀಕರಣದಂತೆಯೇ ಆರ್ಥಿಕತೆಯನ್ನು ಕೆಳಕ್ಕೆ ಎಳೆಯುವ ರೀತಿಯ ಪರಿಣಾಮವನ್ನು ಬೀರುತ್ತದೆ” ಎಂದು ಅವರು ಹೇಳಿದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾರ್ಚ್ 26ರ ಕೊರೊನಾ ಪ್ಯಾಕೇಜ್‌ ಘೋಷಣೆಗಳಿಂದ ಲಾಭ ಪಡೆಯದವರನ್ನು ತಲುಪಲು ಎರಡನೇ ಆರ್ಥಿಕ ಪ್ಯಾಕೇಜ್‌ನ ಅವಶ್ಯಕತೆಯಿದೆ. ಭೂಹೀನ ಕಾರ್ಮಿಕರು ಮತ್ತು ಅಸಂಘಟಿತ ವಲಯದ ಕಾರ್ಮಿಕರಿಗೆ ಇದು ಅತ್ಯವಾಗಿದೆ ಎಂದು ಅವರು ಹೇಳಿದ್ದಾರೆ.

“ಆರ್ಥಿಕ ಬಿಕ್ಕಟ್ಟನ್ನು ತಪ್ಪಿಸುವ ಏಕೈಕ ಮಾರ್ಗವೆಂದರೆ ಹಣಕಾಸಿನ ದ್ರವ್ಯತೆಯನ್ನು ತುಂಬುವುದು ಮತ್ತು ಅಂತಿಮವಾಗಿ ಗ್ರಾಹಕರ ಖರೀದಿ ಶಕ್ತಿಯನ್ನು ಹೆಚ್ಚಿಸುವುದು. ಕೇಂದ್ರ ಸರ್ಕಾರವು ಈ ದಿಕ್ಕಿನಲ್ಲಿ ವೇಗವಾಗಿ ಚಲಿಸಬೇಕಾಗುತ್ತದೆ, ”ಎಂದು ಬಾಗೆಲ್ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...