Homeಮುಖಪುಟಮಾತಾಡಿ ಪ್ರಧಾನಿಗಳೇ ಮಾತನಾಡಿ: ಸ್ವಾತಂತ್ರ್ಯ ದಿನದ ಪಿಎಂ ಭಾಷಣಕ್ಕೆ ಸಲಹೆಗಳ ಸುರಿಮಳೆ

ಮಾತಾಡಿ ಪ್ರಧಾನಿಗಳೇ ಮಾತನಾಡಿ: ಸ್ವಾತಂತ್ರ್ಯ ದಿನದ ಪಿಎಂ ಭಾಷಣಕ್ಕೆ ಸಲಹೆಗಳ ಸುರಿಮಳೆ

ಒಂದು ವೇಳೆ ಪ್ರಧಾನಿಗಳು ಆಗಸ್ಟ್ 15 ರಂದು ನಮ್ಮ ಬವಣೆಗಳ ಬಗ್ಗೆ ಮಾತನಾಡದಿದ್ದರೆ ಅಂದೇ ನಾವು ನಮ್ಮ ಜನಪ್ರತಿನಿಧಿಯ ಮೂಲಕ ಜನರ ಭಾಷಣವನ್ನು ಮಾಡಿಸುತ್ತೇವೆ.

- Advertisement -
- Advertisement -

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ತಮ್ಮ ಭಾಷಣಕ್ಕೆ ಸಾರ್ವಜನಿಕರು ಸಲಹೆ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದರು. ಅದಕ್ಕೆ ನೂರಾರು ಸಲಹೆಗಳು ವ್ಯಕ್ತವಾಗುತ್ತಿದ್ದು ಕರ್ನಾಟಕದಿಂದಲೇ ಹಲವಾರು ಜನ ಪ್ರತಿಕ್ರಿಯಿಸಿದ್ದು ಜನಸಮುದಾಯಗಳ ಮೇಲಿನ ದಾಳಿಯನ್ನು ಹೇಗೆ ನಿಲ್ಲಿಸುತ್ತೀರಿ ಎಂಬುದರ ಬಗ್ಗೆ ಮಾತನಾಡಿ ಎಂದು ತಾಕೀತು ಮಾಡಿದ್ದಾರೆ.

‘ಮಾತಾಡಿ ಪ್ರಧಾನಿಗಳೇ ಮಾತನಾಡಿ’ ಎಂಬ ಘೋ‍‍‍‍‍‍‍‍‍ಷವಾಕ್ಯದಡಿಯಲ್ಲಿ ಇಂದಿನಿಂದ ಪ್ರಚಾರಾಂದೋಲನ ಆರಂಭವಾಗಿದೆ. ದಲಿತರ ಮೇಲಿನ ದೌರ್ಜನ್ಯಗಳು ಶೇ. 74 ರಷ್ಟು ಹೆಚ್ಚಾಗಿವೆ ಏಕೆ? ಎಂಬುದನ್ನು ಮಾತನಾಡಿ, ದಲಿತ ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಯಲು ಏನು ಕ್ರಮ ಕೈಗೊಳ್ಳುತ್ತೀರಿ? ಮಾತನಾಡಿ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ದೆಹಲಿಯ ದಲಿತ ಕಂದಮ್ಮಳೊಬ್ಬಳನ್ನು ಕಾಮಪಿಶಾಚಿ ಪೂಜಾರಿಯೊಬ್ಬ ಬರ್ಬರವಾಗಿ ಅತ್ಯಾಚಾರಗೈದು ಕೊಂದು ಸುಟ್ಟು ಹಾಕಿದ ಸುದ್ದಿ ಕೇಳಿದಾಗಿನಿಂದ ನಾವು ಆಘಾತಕ್ಕೊಳಗಾಗಿದ್ದೇವೆ. ಇಂತಹ ಅಮಾನುಷ ಘಟನೆಗಳಿಗೆ ಕೊನೆಯೆಂದು? ದಲಿತರೊಟ್ಟಿಗೆ ಅಲ್ಪಸಂಖ್ಯಾತ- ಮಹಿಳೆ- ಕಾರ್ಮಿಕ-ರೈತ ಸೇರಿದಂತೆ ನಾಡಿನ ಜನತೆ ಎಲ್ಲಾ ರೀತಿಯಿಂದಲೂ ತೀವ್ರ ಸಂಕಷ್ಟಕ್ಕೀಡಾಗಿರುವುದು ನಮ್ಮನ್ನು ಚಿಂತಿತರನ್ನಾಗಿ ಮಾಡಿದೆ ಇದಕ್ಕೆ ಏನು ಮಾಡುತ್ತೀರಿ ಎಂದು ಮಾತನಾಡಿ ಎಂದು ಒತ್ತಾಯಿಸಿದ್ದಾರೆ.

ನಾವು ಆಗಸ್ಟ್ 10 ರಿಂದ 15ರವರೆಗೆ ಪ್ರತಿದಿನ ಒಂದೊಂದು ಜನಸಮುದಾಯಗಳ ನೋವಿನ ಕುರಿತು ಪ್ರಧಾನಿಯವರಿಗೆ ಸಲಹೆ ನೀಡಲಿದ್ದೇವೆ. ದಲಿತ, ಅಲ್ಪಸಂಖ್ಯಾತ, ಮಹಿಳೆ, ಕಾರ್ಮಿಕ ಮತ್ತು ರೈತರ ಹಕ್ಕೊತ್ತಾಯಗಳನ್ನು ಮುನ್ನಲೆಗೆ ತರುತ್ತೇವೆ. ಪ್ರತಿ ದಿನ ಒಂದೊಂದು ಜನಸಮುದಾಯದ ನೋವುಗಳನ್ನು ವಿಡಿಯೋ, ಪೋಸ್ಟರ್, ಹಾಡು, ಭಾಷಣ, ಚಿತ್ರಗಳ ಮೂಲಕ ಮುಂದಿಟ್ಟು ಈ ಕುರಿತು ಮಾತನಾಡಿ ಎಂದು ಆಗ್ರಹಿಸುತ್ತೇವೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ಒಂದು ವೇಳೆ ಪ್ರಧಾನಿಗಳು ಆಗಸ್ಟ್ 15 ರಂದು ನಮ್ಮ ಬವಣೆಗಳ ಬಗ್ಗೆ ಮಾತನಾಡದಿದ್ದರೆ ಅಂದೇ ನಾವು ನಮ್ಮ ಜನಪ್ರತಿನಿಧಿಯ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಜನರ ಭಾಷಣವನ್ನು ಮಾಡಿಸುತ್ತೇವೆ. ಪ್ರಧಾನಿಗಳು ಮೌನ ಮುರಿಯಲಿ – ದೇಶ ಉಳಿಯಲಿ ಎಂದು ಅವರು ಒತ್ತಾಯಿಸಿದ್ದಾರೆ.

ದಲಿತರು ಉಳುಮೆ ಮಾಡುತ್ತಿರುವ ಸರ್ಕಾರಿ ಭೂಮಿಗಳಿಗೆ ಹಕ್ಕುಪತ್ರ ಯಾವಾಗ ನೀಡುತ್ತೀರಿ? ಮಾತನಾಡಿ. ಮೀಸಲಾತಿ ನೀಡುವ ಸರ್ಕಾರಿ ಉದ್ಯೋಗಗಳನ್ನು ಹೆಚ್ಚಿಸುವ ಕುರಿತು ಮಾತನಾಡಿ. ಖಾಸಗೀ ಕ್ಷೇತ್ರಗಳಲ್ಲೂ ಮೀಸಲಾತಿ ಜಾರಿಗೆ ತರುವ ಕುರಿತು ನಿಮ್ಮ ಆಲೋಚನೆ ಏನು? ಮಾತನಾಡಿ ಎಂಬ ವಿಷಯಗಳಿಂದ ಆರಂಭವಾಗಿ ರೋಹಿತ್ ವೇಮುಲನನ್ನು ಬಲಿ ತೆಗೆದುಕೊಂಡದ್ದರಲ್ಲಿ ನಿಮ್ಮ ಪಕ್ಷದ ಸಂಸದರೂ ಸಚಿವರೂ ಶಾಮೀಲಾಗಿದ್ದರು. ಸರ್ಕಾರವೂ ಶಾಮೀಲಾಗಿತ್ತು. ಆದರೆ ನ್ಯಾಯ ಸಿಗಲಿಲ್ಲ. ಕನಿಷ್ಠ ಪಕ್ಷ ರೋಹಿತ್ ಕಾಯ್ದೆಯನ್ನಾದರೂ ಜಾರಿ ಮಾಡಿ ಎಂಬ ಆಗ್ರಹಗಳು ಕೇಳಿಬಂದಿವೆ.


ಇದನ್ನೂ ಓದಿ: ವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...