Homeಮುಖಪುಟಮಾತಾಡಿ ಪ್ರಧಾನಿಗಳೇ ಮಾತನಾಡಿ: ಸ್ವಾತಂತ್ರ್ಯ ದಿನದ ಪಿಎಂ ಭಾಷಣಕ್ಕೆ ಸಲಹೆಗಳ ಸುರಿಮಳೆ

ಮಾತಾಡಿ ಪ್ರಧಾನಿಗಳೇ ಮಾತನಾಡಿ: ಸ್ವಾತಂತ್ರ್ಯ ದಿನದ ಪಿಎಂ ಭಾಷಣಕ್ಕೆ ಸಲಹೆಗಳ ಸುರಿಮಳೆ

ಒಂದು ವೇಳೆ ಪ್ರಧಾನಿಗಳು ಆಗಸ್ಟ್ 15 ರಂದು ನಮ್ಮ ಬವಣೆಗಳ ಬಗ್ಗೆ ಮಾತನಾಡದಿದ್ದರೆ ಅಂದೇ ನಾವು ನಮ್ಮ ಜನಪ್ರತಿನಿಧಿಯ ಮೂಲಕ ಜನರ ಭಾಷಣವನ್ನು ಮಾಡಿಸುತ್ತೇವೆ.

- Advertisement -
- Advertisement -

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ತಮ್ಮ ಭಾಷಣಕ್ಕೆ ಸಾರ್ವಜನಿಕರು ಸಲಹೆ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದರು. ಅದಕ್ಕೆ ನೂರಾರು ಸಲಹೆಗಳು ವ್ಯಕ್ತವಾಗುತ್ತಿದ್ದು ಕರ್ನಾಟಕದಿಂದಲೇ ಹಲವಾರು ಜನ ಪ್ರತಿಕ್ರಿಯಿಸಿದ್ದು ಜನಸಮುದಾಯಗಳ ಮೇಲಿನ ದಾಳಿಯನ್ನು ಹೇಗೆ ನಿಲ್ಲಿಸುತ್ತೀರಿ ಎಂಬುದರ ಬಗ್ಗೆ ಮಾತನಾಡಿ ಎಂದು ತಾಕೀತು ಮಾಡಿದ್ದಾರೆ.

‘ಮಾತಾಡಿ ಪ್ರಧಾನಿಗಳೇ ಮಾತನಾಡಿ’ ಎಂಬ ಘೋ‍‍‍‍‍‍‍‍‍ಷವಾಕ್ಯದಡಿಯಲ್ಲಿ ಇಂದಿನಿಂದ ಪ್ರಚಾರಾಂದೋಲನ ಆರಂಭವಾಗಿದೆ. ದಲಿತರ ಮೇಲಿನ ದೌರ್ಜನ್ಯಗಳು ಶೇ. 74 ರಷ್ಟು ಹೆಚ್ಚಾಗಿವೆ ಏಕೆ? ಎಂಬುದನ್ನು ಮಾತನಾಡಿ, ದಲಿತ ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಯಲು ಏನು ಕ್ರಮ ಕೈಗೊಳ್ಳುತ್ತೀರಿ? ಮಾತನಾಡಿ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ದೆಹಲಿಯ ದಲಿತ ಕಂದಮ್ಮಳೊಬ್ಬಳನ್ನು ಕಾಮಪಿಶಾಚಿ ಪೂಜಾರಿಯೊಬ್ಬ ಬರ್ಬರವಾಗಿ ಅತ್ಯಾಚಾರಗೈದು ಕೊಂದು ಸುಟ್ಟು ಹಾಕಿದ ಸುದ್ದಿ ಕೇಳಿದಾಗಿನಿಂದ ನಾವು ಆಘಾತಕ್ಕೊಳಗಾಗಿದ್ದೇವೆ. ಇಂತಹ ಅಮಾನುಷ ಘಟನೆಗಳಿಗೆ ಕೊನೆಯೆಂದು? ದಲಿತರೊಟ್ಟಿಗೆ ಅಲ್ಪಸಂಖ್ಯಾತ- ಮಹಿಳೆ- ಕಾರ್ಮಿಕ-ರೈತ ಸೇರಿದಂತೆ ನಾಡಿನ ಜನತೆ ಎಲ್ಲಾ ರೀತಿಯಿಂದಲೂ ತೀವ್ರ ಸಂಕಷ್ಟಕ್ಕೀಡಾಗಿರುವುದು ನಮ್ಮನ್ನು ಚಿಂತಿತರನ್ನಾಗಿ ಮಾಡಿದೆ ಇದಕ್ಕೆ ಏನು ಮಾಡುತ್ತೀರಿ ಎಂದು ಮಾತನಾಡಿ ಎಂದು ಒತ್ತಾಯಿಸಿದ್ದಾರೆ.

ನಾವು ಆಗಸ್ಟ್ 10 ರಿಂದ 15ರವರೆಗೆ ಪ್ರತಿದಿನ ಒಂದೊಂದು ಜನಸಮುದಾಯಗಳ ನೋವಿನ ಕುರಿತು ಪ್ರಧಾನಿಯವರಿಗೆ ಸಲಹೆ ನೀಡಲಿದ್ದೇವೆ. ದಲಿತ, ಅಲ್ಪಸಂಖ್ಯಾತ, ಮಹಿಳೆ, ಕಾರ್ಮಿಕ ಮತ್ತು ರೈತರ ಹಕ್ಕೊತ್ತಾಯಗಳನ್ನು ಮುನ್ನಲೆಗೆ ತರುತ್ತೇವೆ. ಪ್ರತಿ ದಿನ ಒಂದೊಂದು ಜನಸಮುದಾಯದ ನೋವುಗಳನ್ನು ವಿಡಿಯೋ, ಪೋಸ್ಟರ್, ಹಾಡು, ಭಾಷಣ, ಚಿತ್ರಗಳ ಮೂಲಕ ಮುಂದಿಟ್ಟು ಈ ಕುರಿತು ಮಾತನಾಡಿ ಎಂದು ಆಗ್ರಹಿಸುತ್ತೇವೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ಒಂದು ವೇಳೆ ಪ್ರಧಾನಿಗಳು ಆಗಸ್ಟ್ 15 ರಂದು ನಮ್ಮ ಬವಣೆಗಳ ಬಗ್ಗೆ ಮಾತನಾಡದಿದ್ದರೆ ಅಂದೇ ನಾವು ನಮ್ಮ ಜನಪ್ರತಿನಿಧಿಯ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಜನರ ಭಾಷಣವನ್ನು ಮಾಡಿಸುತ್ತೇವೆ. ಪ್ರಧಾನಿಗಳು ಮೌನ ಮುರಿಯಲಿ – ದೇಶ ಉಳಿಯಲಿ ಎಂದು ಅವರು ಒತ್ತಾಯಿಸಿದ್ದಾರೆ.

ದಲಿತರು ಉಳುಮೆ ಮಾಡುತ್ತಿರುವ ಸರ್ಕಾರಿ ಭೂಮಿಗಳಿಗೆ ಹಕ್ಕುಪತ್ರ ಯಾವಾಗ ನೀಡುತ್ತೀರಿ? ಮಾತನಾಡಿ. ಮೀಸಲಾತಿ ನೀಡುವ ಸರ್ಕಾರಿ ಉದ್ಯೋಗಗಳನ್ನು ಹೆಚ್ಚಿಸುವ ಕುರಿತು ಮಾತನಾಡಿ. ಖಾಸಗೀ ಕ್ಷೇತ್ರಗಳಲ್ಲೂ ಮೀಸಲಾತಿ ಜಾರಿಗೆ ತರುವ ಕುರಿತು ನಿಮ್ಮ ಆಲೋಚನೆ ಏನು? ಮಾತನಾಡಿ ಎಂಬ ವಿಷಯಗಳಿಂದ ಆರಂಭವಾಗಿ ರೋಹಿತ್ ವೇಮುಲನನ್ನು ಬಲಿ ತೆಗೆದುಕೊಂಡದ್ದರಲ್ಲಿ ನಿಮ್ಮ ಪಕ್ಷದ ಸಂಸದರೂ ಸಚಿವರೂ ಶಾಮೀಲಾಗಿದ್ದರು. ಸರ್ಕಾರವೂ ಶಾಮೀಲಾಗಿತ್ತು. ಆದರೆ ನ್ಯಾಯ ಸಿಗಲಿಲ್ಲ. ಕನಿಷ್ಠ ಪಕ್ಷ ರೋಹಿತ್ ಕಾಯ್ದೆಯನ್ನಾದರೂ ಜಾರಿ ಮಾಡಿ ಎಂಬ ಆಗ್ರಹಗಳು ಕೇಳಿಬಂದಿವೆ.


ಇದನ್ನೂ ಓದಿ: ವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...