Homeಮುಖಪುಟಮಾತಾಡಿ ಪ್ರಧಾನಿಗಳೇ ಮಾತನಾಡಿ: ಸ್ವಾತಂತ್ರ್ಯ ದಿನದ ಪಿಎಂ ಭಾಷಣಕ್ಕೆ ಸಲಹೆಗಳ ಸುರಿಮಳೆ

ಮಾತಾಡಿ ಪ್ರಧಾನಿಗಳೇ ಮಾತನಾಡಿ: ಸ್ವಾತಂತ್ರ್ಯ ದಿನದ ಪಿಎಂ ಭಾಷಣಕ್ಕೆ ಸಲಹೆಗಳ ಸುರಿಮಳೆ

ಒಂದು ವೇಳೆ ಪ್ರಧಾನಿಗಳು ಆಗಸ್ಟ್ 15 ರಂದು ನಮ್ಮ ಬವಣೆಗಳ ಬಗ್ಗೆ ಮಾತನಾಡದಿದ್ದರೆ ಅಂದೇ ನಾವು ನಮ್ಮ ಜನಪ್ರತಿನಿಧಿಯ ಮೂಲಕ ಜನರ ಭಾಷಣವನ್ನು ಮಾಡಿಸುತ್ತೇವೆ.

- Advertisement -
- Advertisement -

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ತಮ್ಮ ಭಾಷಣಕ್ಕೆ ಸಾರ್ವಜನಿಕರು ಸಲಹೆ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದರು. ಅದಕ್ಕೆ ನೂರಾರು ಸಲಹೆಗಳು ವ್ಯಕ್ತವಾಗುತ್ತಿದ್ದು ಕರ್ನಾಟಕದಿಂದಲೇ ಹಲವಾರು ಜನ ಪ್ರತಿಕ್ರಿಯಿಸಿದ್ದು ಜನಸಮುದಾಯಗಳ ಮೇಲಿನ ದಾಳಿಯನ್ನು ಹೇಗೆ ನಿಲ್ಲಿಸುತ್ತೀರಿ ಎಂಬುದರ ಬಗ್ಗೆ ಮಾತನಾಡಿ ಎಂದು ತಾಕೀತು ಮಾಡಿದ್ದಾರೆ.

‘ಮಾತಾಡಿ ಪ್ರಧಾನಿಗಳೇ ಮಾತನಾಡಿ’ ಎಂಬ ಘೋ‍‍‍‍‍‍‍‍‍ಷವಾಕ್ಯದಡಿಯಲ್ಲಿ ಇಂದಿನಿಂದ ಪ್ರಚಾರಾಂದೋಲನ ಆರಂಭವಾಗಿದೆ. ದಲಿತರ ಮೇಲಿನ ದೌರ್ಜನ್ಯಗಳು ಶೇ. 74 ರಷ್ಟು ಹೆಚ್ಚಾಗಿವೆ ಏಕೆ? ಎಂಬುದನ್ನು ಮಾತನಾಡಿ, ದಲಿತ ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಯಲು ಏನು ಕ್ರಮ ಕೈಗೊಳ್ಳುತ್ತೀರಿ? ಮಾತನಾಡಿ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ದೆಹಲಿಯ ದಲಿತ ಕಂದಮ್ಮಳೊಬ್ಬಳನ್ನು ಕಾಮಪಿಶಾಚಿ ಪೂಜಾರಿಯೊಬ್ಬ ಬರ್ಬರವಾಗಿ ಅತ್ಯಾಚಾರಗೈದು ಕೊಂದು ಸುಟ್ಟು ಹಾಕಿದ ಸುದ್ದಿ ಕೇಳಿದಾಗಿನಿಂದ ನಾವು ಆಘಾತಕ್ಕೊಳಗಾಗಿದ್ದೇವೆ. ಇಂತಹ ಅಮಾನುಷ ಘಟನೆಗಳಿಗೆ ಕೊನೆಯೆಂದು? ದಲಿತರೊಟ್ಟಿಗೆ ಅಲ್ಪಸಂಖ್ಯಾತ- ಮಹಿಳೆ- ಕಾರ್ಮಿಕ-ರೈತ ಸೇರಿದಂತೆ ನಾಡಿನ ಜನತೆ ಎಲ್ಲಾ ರೀತಿಯಿಂದಲೂ ತೀವ್ರ ಸಂಕಷ್ಟಕ್ಕೀಡಾಗಿರುವುದು ನಮ್ಮನ್ನು ಚಿಂತಿತರನ್ನಾಗಿ ಮಾಡಿದೆ ಇದಕ್ಕೆ ಏನು ಮಾಡುತ್ತೀರಿ ಎಂದು ಮಾತನಾಡಿ ಎಂದು ಒತ್ತಾಯಿಸಿದ್ದಾರೆ.

ನಾವು ಆಗಸ್ಟ್ 10 ರಿಂದ 15ರವರೆಗೆ ಪ್ರತಿದಿನ ಒಂದೊಂದು ಜನಸಮುದಾಯಗಳ ನೋವಿನ ಕುರಿತು ಪ್ರಧಾನಿಯವರಿಗೆ ಸಲಹೆ ನೀಡಲಿದ್ದೇವೆ. ದಲಿತ, ಅಲ್ಪಸಂಖ್ಯಾತ, ಮಹಿಳೆ, ಕಾರ್ಮಿಕ ಮತ್ತು ರೈತರ ಹಕ್ಕೊತ್ತಾಯಗಳನ್ನು ಮುನ್ನಲೆಗೆ ತರುತ್ತೇವೆ. ಪ್ರತಿ ದಿನ ಒಂದೊಂದು ಜನಸಮುದಾಯದ ನೋವುಗಳನ್ನು ವಿಡಿಯೋ, ಪೋಸ್ಟರ್, ಹಾಡು, ಭಾಷಣ, ಚಿತ್ರಗಳ ಮೂಲಕ ಮುಂದಿಟ್ಟು ಈ ಕುರಿತು ಮಾತನಾಡಿ ಎಂದು ಆಗ್ರಹಿಸುತ್ತೇವೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ಒಂದು ವೇಳೆ ಪ್ರಧಾನಿಗಳು ಆಗಸ್ಟ್ 15 ರಂದು ನಮ್ಮ ಬವಣೆಗಳ ಬಗ್ಗೆ ಮಾತನಾಡದಿದ್ದರೆ ಅಂದೇ ನಾವು ನಮ್ಮ ಜನಪ್ರತಿನಿಧಿಯ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಜನರ ಭಾಷಣವನ್ನು ಮಾಡಿಸುತ್ತೇವೆ. ಪ್ರಧಾನಿಗಳು ಮೌನ ಮುರಿಯಲಿ – ದೇಶ ಉಳಿಯಲಿ ಎಂದು ಅವರು ಒತ್ತಾಯಿಸಿದ್ದಾರೆ.

ದಲಿತರು ಉಳುಮೆ ಮಾಡುತ್ತಿರುವ ಸರ್ಕಾರಿ ಭೂಮಿಗಳಿಗೆ ಹಕ್ಕುಪತ್ರ ಯಾವಾಗ ನೀಡುತ್ತೀರಿ? ಮಾತನಾಡಿ. ಮೀಸಲಾತಿ ನೀಡುವ ಸರ್ಕಾರಿ ಉದ್ಯೋಗಗಳನ್ನು ಹೆಚ್ಚಿಸುವ ಕುರಿತು ಮಾತನಾಡಿ. ಖಾಸಗೀ ಕ್ಷೇತ್ರಗಳಲ್ಲೂ ಮೀಸಲಾತಿ ಜಾರಿಗೆ ತರುವ ಕುರಿತು ನಿಮ್ಮ ಆಲೋಚನೆ ಏನು? ಮಾತನಾಡಿ ಎಂಬ ವಿಷಯಗಳಿಂದ ಆರಂಭವಾಗಿ ರೋಹಿತ್ ವೇಮುಲನನ್ನು ಬಲಿ ತೆಗೆದುಕೊಂಡದ್ದರಲ್ಲಿ ನಿಮ್ಮ ಪಕ್ಷದ ಸಂಸದರೂ ಸಚಿವರೂ ಶಾಮೀಲಾಗಿದ್ದರು. ಸರ್ಕಾರವೂ ಶಾಮೀಲಾಗಿತ್ತು. ಆದರೆ ನ್ಯಾಯ ಸಿಗಲಿಲ್ಲ. ಕನಿಷ್ಠ ಪಕ್ಷ ರೋಹಿತ್ ಕಾಯ್ದೆಯನ್ನಾದರೂ ಜಾರಿ ಮಾಡಿ ಎಂಬ ಆಗ್ರಹಗಳು ಕೇಳಿಬಂದಿವೆ.


ಇದನ್ನೂ ಓದಿ: ವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...