Homeಮುಖಪುಟಮಾತಾಡಿ ಪ್ರಧಾನಿಗಳೇ ಮಾತನಾಡಿ: ಸ್ವಾತಂತ್ರ್ಯ ದಿನದ ಪಿಎಂ ಭಾಷಣಕ್ಕೆ ಸಲಹೆಗಳ ಸುರಿಮಳೆ

ಮಾತಾಡಿ ಪ್ರಧಾನಿಗಳೇ ಮಾತನಾಡಿ: ಸ್ವಾತಂತ್ರ್ಯ ದಿನದ ಪಿಎಂ ಭಾಷಣಕ್ಕೆ ಸಲಹೆಗಳ ಸುರಿಮಳೆ

ಒಂದು ವೇಳೆ ಪ್ರಧಾನಿಗಳು ಆಗಸ್ಟ್ 15 ರಂದು ನಮ್ಮ ಬವಣೆಗಳ ಬಗ್ಗೆ ಮಾತನಾಡದಿದ್ದರೆ ಅಂದೇ ನಾವು ನಮ್ಮ ಜನಪ್ರತಿನಿಧಿಯ ಮೂಲಕ ಜನರ ಭಾಷಣವನ್ನು ಮಾಡಿಸುತ್ತೇವೆ.

- Advertisement -
- Advertisement -

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ತಮ್ಮ ಭಾಷಣಕ್ಕೆ ಸಾರ್ವಜನಿಕರು ಸಲಹೆ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದರು. ಅದಕ್ಕೆ ನೂರಾರು ಸಲಹೆಗಳು ವ್ಯಕ್ತವಾಗುತ್ತಿದ್ದು ಕರ್ನಾಟಕದಿಂದಲೇ ಹಲವಾರು ಜನ ಪ್ರತಿಕ್ರಿಯಿಸಿದ್ದು ಜನಸಮುದಾಯಗಳ ಮೇಲಿನ ದಾಳಿಯನ್ನು ಹೇಗೆ ನಿಲ್ಲಿಸುತ್ತೀರಿ ಎಂಬುದರ ಬಗ್ಗೆ ಮಾತನಾಡಿ ಎಂದು ತಾಕೀತು ಮಾಡಿದ್ದಾರೆ.

‘ಮಾತಾಡಿ ಪ್ರಧಾನಿಗಳೇ ಮಾತನಾಡಿ’ ಎಂಬ ಘೋ‍‍‍‍‍‍‍‍‍ಷವಾಕ್ಯದಡಿಯಲ್ಲಿ ಇಂದಿನಿಂದ ಪ್ರಚಾರಾಂದೋಲನ ಆರಂಭವಾಗಿದೆ. ದಲಿತರ ಮೇಲಿನ ದೌರ್ಜನ್ಯಗಳು ಶೇ. 74 ರಷ್ಟು ಹೆಚ್ಚಾಗಿವೆ ಏಕೆ? ಎಂಬುದನ್ನು ಮಾತನಾಡಿ, ದಲಿತ ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಯಲು ಏನು ಕ್ರಮ ಕೈಗೊಳ್ಳುತ್ತೀರಿ? ಮಾತನಾಡಿ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ದೆಹಲಿಯ ದಲಿತ ಕಂದಮ್ಮಳೊಬ್ಬಳನ್ನು ಕಾಮಪಿಶಾಚಿ ಪೂಜಾರಿಯೊಬ್ಬ ಬರ್ಬರವಾಗಿ ಅತ್ಯಾಚಾರಗೈದು ಕೊಂದು ಸುಟ್ಟು ಹಾಕಿದ ಸುದ್ದಿ ಕೇಳಿದಾಗಿನಿಂದ ನಾವು ಆಘಾತಕ್ಕೊಳಗಾಗಿದ್ದೇವೆ. ಇಂತಹ ಅಮಾನುಷ ಘಟನೆಗಳಿಗೆ ಕೊನೆಯೆಂದು? ದಲಿತರೊಟ್ಟಿಗೆ ಅಲ್ಪಸಂಖ್ಯಾತ- ಮಹಿಳೆ- ಕಾರ್ಮಿಕ-ರೈತ ಸೇರಿದಂತೆ ನಾಡಿನ ಜನತೆ ಎಲ್ಲಾ ರೀತಿಯಿಂದಲೂ ತೀವ್ರ ಸಂಕಷ್ಟಕ್ಕೀಡಾಗಿರುವುದು ನಮ್ಮನ್ನು ಚಿಂತಿತರನ್ನಾಗಿ ಮಾಡಿದೆ ಇದಕ್ಕೆ ಏನು ಮಾಡುತ್ತೀರಿ ಎಂದು ಮಾತನಾಡಿ ಎಂದು ಒತ್ತಾಯಿಸಿದ್ದಾರೆ.

ನಾವು ಆಗಸ್ಟ್ 10 ರಿಂದ 15ರವರೆಗೆ ಪ್ರತಿದಿನ ಒಂದೊಂದು ಜನಸಮುದಾಯಗಳ ನೋವಿನ ಕುರಿತು ಪ್ರಧಾನಿಯವರಿಗೆ ಸಲಹೆ ನೀಡಲಿದ್ದೇವೆ. ದಲಿತ, ಅಲ್ಪಸಂಖ್ಯಾತ, ಮಹಿಳೆ, ಕಾರ್ಮಿಕ ಮತ್ತು ರೈತರ ಹಕ್ಕೊತ್ತಾಯಗಳನ್ನು ಮುನ್ನಲೆಗೆ ತರುತ್ತೇವೆ. ಪ್ರತಿ ದಿನ ಒಂದೊಂದು ಜನಸಮುದಾಯದ ನೋವುಗಳನ್ನು ವಿಡಿಯೋ, ಪೋಸ್ಟರ್, ಹಾಡು, ಭಾಷಣ, ಚಿತ್ರಗಳ ಮೂಲಕ ಮುಂದಿಟ್ಟು ಈ ಕುರಿತು ಮಾತನಾಡಿ ಎಂದು ಆಗ್ರಹಿಸುತ್ತೇವೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ಒಂದು ವೇಳೆ ಪ್ರಧಾನಿಗಳು ಆಗಸ್ಟ್ 15 ರಂದು ನಮ್ಮ ಬವಣೆಗಳ ಬಗ್ಗೆ ಮಾತನಾಡದಿದ್ದರೆ ಅಂದೇ ನಾವು ನಮ್ಮ ಜನಪ್ರತಿನಿಧಿಯ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಜನರ ಭಾಷಣವನ್ನು ಮಾಡಿಸುತ್ತೇವೆ. ಪ್ರಧಾನಿಗಳು ಮೌನ ಮುರಿಯಲಿ – ದೇಶ ಉಳಿಯಲಿ ಎಂದು ಅವರು ಒತ್ತಾಯಿಸಿದ್ದಾರೆ.

ದಲಿತರು ಉಳುಮೆ ಮಾಡುತ್ತಿರುವ ಸರ್ಕಾರಿ ಭೂಮಿಗಳಿಗೆ ಹಕ್ಕುಪತ್ರ ಯಾವಾಗ ನೀಡುತ್ತೀರಿ? ಮಾತನಾಡಿ. ಮೀಸಲಾತಿ ನೀಡುವ ಸರ್ಕಾರಿ ಉದ್ಯೋಗಗಳನ್ನು ಹೆಚ್ಚಿಸುವ ಕುರಿತು ಮಾತನಾಡಿ. ಖಾಸಗೀ ಕ್ಷೇತ್ರಗಳಲ್ಲೂ ಮೀಸಲಾತಿ ಜಾರಿಗೆ ತರುವ ಕುರಿತು ನಿಮ್ಮ ಆಲೋಚನೆ ಏನು? ಮಾತನಾಡಿ ಎಂಬ ವಿಷಯಗಳಿಂದ ಆರಂಭವಾಗಿ ರೋಹಿತ್ ವೇಮುಲನನ್ನು ಬಲಿ ತೆಗೆದುಕೊಂಡದ್ದರಲ್ಲಿ ನಿಮ್ಮ ಪಕ್ಷದ ಸಂಸದರೂ ಸಚಿವರೂ ಶಾಮೀಲಾಗಿದ್ದರು. ಸರ್ಕಾರವೂ ಶಾಮೀಲಾಗಿತ್ತು. ಆದರೆ ನ್ಯಾಯ ಸಿಗಲಿಲ್ಲ. ಕನಿಷ್ಠ ಪಕ್ಷ ರೋಹಿತ್ ಕಾಯ್ದೆಯನ್ನಾದರೂ ಜಾರಿ ಮಾಡಿ ಎಂಬ ಆಗ್ರಹಗಳು ಕೇಳಿಬಂದಿವೆ.


ಇದನ್ನೂ ಓದಿ: ವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...