Homeಮುಖಪುಟಮಾತಾಡಿ ಪ್ರಧಾನಿಗಳೇ ಮಾತನಾಡಿ: ಸ್ವಾತಂತ್ರ್ಯ ದಿನದ ಪಿಎಂ ಭಾಷಣಕ್ಕೆ ಸಲಹೆಗಳ ಸುರಿಮಳೆ

ಮಾತಾಡಿ ಪ್ರಧಾನಿಗಳೇ ಮಾತನಾಡಿ: ಸ್ವಾತಂತ್ರ್ಯ ದಿನದ ಪಿಎಂ ಭಾಷಣಕ್ಕೆ ಸಲಹೆಗಳ ಸುರಿಮಳೆ

ಒಂದು ವೇಳೆ ಪ್ರಧಾನಿಗಳು ಆಗಸ್ಟ್ 15 ರಂದು ನಮ್ಮ ಬವಣೆಗಳ ಬಗ್ಗೆ ಮಾತನಾಡದಿದ್ದರೆ ಅಂದೇ ನಾವು ನಮ್ಮ ಜನಪ್ರತಿನಿಧಿಯ ಮೂಲಕ ಜನರ ಭಾಷಣವನ್ನು ಮಾಡಿಸುತ್ತೇವೆ.

- Advertisement -
- Advertisement -

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ತಮ್ಮ ಭಾಷಣಕ್ಕೆ ಸಾರ್ವಜನಿಕರು ಸಲಹೆ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದರು. ಅದಕ್ಕೆ ನೂರಾರು ಸಲಹೆಗಳು ವ್ಯಕ್ತವಾಗುತ್ತಿದ್ದು ಕರ್ನಾಟಕದಿಂದಲೇ ಹಲವಾರು ಜನ ಪ್ರತಿಕ್ರಿಯಿಸಿದ್ದು ಜನಸಮುದಾಯಗಳ ಮೇಲಿನ ದಾಳಿಯನ್ನು ಹೇಗೆ ನಿಲ್ಲಿಸುತ್ತೀರಿ ಎಂಬುದರ ಬಗ್ಗೆ ಮಾತನಾಡಿ ಎಂದು ತಾಕೀತು ಮಾಡಿದ್ದಾರೆ.

‘ಮಾತಾಡಿ ಪ್ರಧಾನಿಗಳೇ ಮಾತನಾಡಿ’ ಎಂಬ ಘೋ‍‍‍‍‍‍‍‍‍ಷವಾಕ್ಯದಡಿಯಲ್ಲಿ ಇಂದಿನಿಂದ ಪ್ರಚಾರಾಂದೋಲನ ಆರಂಭವಾಗಿದೆ. ದಲಿತರ ಮೇಲಿನ ದೌರ್ಜನ್ಯಗಳು ಶೇ. 74 ರಷ್ಟು ಹೆಚ್ಚಾಗಿವೆ ಏಕೆ? ಎಂಬುದನ್ನು ಮಾತನಾಡಿ, ದಲಿತ ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಯಲು ಏನು ಕ್ರಮ ಕೈಗೊಳ್ಳುತ್ತೀರಿ? ಮಾತನಾಡಿ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ದೆಹಲಿಯ ದಲಿತ ಕಂದಮ್ಮಳೊಬ್ಬಳನ್ನು ಕಾಮಪಿಶಾಚಿ ಪೂಜಾರಿಯೊಬ್ಬ ಬರ್ಬರವಾಗಿ ಅತ್ಯಾಚಾರಗೈದು ಕೊಂದು ಸುಟ್ಟು ಹಾಕಿದ ಸುದ್ದಿ ಕೇಳಿದಾಗಿನಿಂದ ನಾವು ಆಘಾತಕ್ಕೊಳಗಾಗಿದ್ದೇವೆ. ಇಂತಹ ಅಮಾನುಷ ಘಟನೆಗಳಿಗೆ ಕೊನೆಯೆಂದು? ದಲಿತರೊಟ್ಟಿಗೆ ಅಲ್ಪಸಂಖ್ಯಾತ- ಮಹಿಳೆ- ಕಾರ್ಮಿಕ-ರೈತ ಸೇರಿದಂತೆ ನಾಡಿನ ಜನತೆ ಎಲ್ಲಾ ರೀತಿಯಿಂದಲೂ ತೀವ್ರ ಸಂಕಷ್ಟಕ್ಕೀಡಾಗಿರುವುದು ನಮ್ಮನ್ನು ಚಿಂತಿತರನ್ನಾಗಿ ಮಾಡಿದೆ ಇದಕ್ಕೆ ಏನು ಮಾಡುತ್ತೀರಿ ಎಂದು ಮಾತನಾಡಿ ಎಂದು ಒತ್ತಾಯಿಸಿದ್ದಾರೆ.

ನಾವು ಆಗಸ್ಟ್ 10 ರಿಂದ 15ರವರೆಗೆ ಪ್ರತಿದಿನ ಒಂದೊಂದು ಜನಸಮುದಾಯಗಳ ನೋವಿನ ಕುರಿತು ಪ್ರಧಾನಿಯವರಿಗೆ ಸಲಹೆ ನೀಡಲಿದ್ದೇವೆ. ದಲಿತ, ಅಲ್ಪಸಂಖ್ಯಾತ, ಮಹಿಳೆ, ಕಾರ್ಮಿಕ ಮತ್ತು ರೈತರ ಹಕ್ಕೊತ್ತಾಯಗಳನ್ನು ಮುನ್ನಲೆಗೆ ತರುತ್ತೇವೆ. ಪ್ರತಿ ದಿನ ಒಂದೊಂದು ಜನಸಮುದಾಯದ ನೋವುಗಳನ್ನು ವಿಡಿಯೋ, ಪೋಸ್ಟರ್, ಹಾಡು, ಭಾಷಣ, ಚಿತ್ರಗಳ ಮೂಲಕ ಮುಂದಿಟ್ಟು ಈ ಕುರಿತು ಮಾತನಾಡಿ ಎಂದು ಆಗ್ರಹಿಸುತ್ತೇವೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ಒಂದು ವೇಳೆ ಪ್ರಧಾನಿಗಳು ಆಗಸ್ಟ್ 15 ರಂದು ನಮ್ಮ ಬವಣೆಗಳ ಬಗ್ಗೆ ಮಾತನಾಡದಿದ್ದರೆ ಅಂದೇ ನಾವು ನಮ್ಮ ಜನಪ್ರತಿನಿಧಿಯ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಜನರ ಭಾಷಣವನ್ನು ಮಾಡಿಸುತ್ತೇವೆ. ಪ್ರಧಾನಿಗಳು ಮೌನ ಮುರಿಯಲಿ – ದೇಶ ಉಳಿಯಲಿ ಎಂದು ಅವರು ಒತ್ತಾಯಿಸಿದ್ದಾರೆ.

ದಲಿತರು ಉಳುಮೆ ಮಾಡುತ್ತಿರುವ ಸರ್ಕಾರಿ ಭೂಮಿಗಳಿಗೆ ಹಕ್ಕುಪತ್ರ ಯಾವಾಗ ನೀಡುತ್ತೀರಿ? ಮಾತನಾಡಿ. ಮೀಸಲಾತಿ ನೀಡುವ ಸರ್ಕಾರಿ ಉದ್ಯೋಗಗಳನ್ನು ಹೆಚ್ಚಿಸುವ ಕುರಿತು ಮಾತನಾಡಿ. ಖಾಸಗೀ ಕ್ಷೇತ್ರಗಳಲ್ಲೂ ಮೀಸಲಾತಿ ಜಾರಿಗೆ ತರುವ ಕುರಿತು ನಿಮ್ಮ ಆಲೋಚನೆ ಏನು? ಮಾತನಾಡಿ ಎಂಬ ವಿಷಯಗಳಿಂದ ಆರಂಭವಾಗಿ ರೋಹಿತ್ ವೇಮುಲನನ್ನು ಬಲಿ ತೆಗೆದುಕೊಂಡದ್ದರಲ್ಲಿ ನಿಮ್ಮ ಪಕ್ಷದ ಸಂಸದರೂ ಸಚಿವರೂ ಶಾಮೀಲಾಗಿದ್ದರು. ಸರ್ಕಾರವೂ ಶಾಮೀಲಾಗಿತ್ತು. ಆದರೆ ನ್ಯಾಯ ಸಿಗಲಿಲ್ಲ. ಕನಿಷ್ಠ ಪಕ್ಷ ರೋಹಿತ್ ಕಾಯ್ದೆಯನ್ನಾದರೂ ಜಾರಿ ಮಾಡಿ ಎಂಬ ಆಗ್ರಹಗಳು ಕೇಳಿಬಂದಿವೆ.


ಇದನ್ನೂ ಓದಿ: ವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...