Homeಮುಖಪುಟಮಾತಾಡಿ ಪ್ರಧಾನಿಗಳೇ ಮಾತನಾಡಿ: ಸ್ವಾತಂತ್ರ್ಯ ದಿನದ ಪಿಎಂ ಭಾಷಣಕ್ಕೆ ಸಲಹೆಗಳ ಸುರಿಮಳೆ

ಮಾತಾಡಿ ಪ್ರಧಾನಿಗಳೇ ಮಾತನಾಡಿ: ಸ್ವಾತಂತ್ರ್ಯ ದಿನದ ಪಿಎಂ ಭಾಷಣಕ್ಕೆ ಸಲಹೆಗಳ ಸುರಿಮಳೆ

ಒಂದು ವೇಳೆ ಪ್ರಧಾನಿಗಳು ಆಗಸ್ಟ್ 15 ರಂದು ನಮ್ಮ ಬವಣೆಗಳ ಬಗ್ಗೆ ಮಾತನಾಡದಿದ್ದರೆ ಅಂದೇ ನಾವು ನಮ್ಮ ಜನಪ್ರತಿನಿಧಿಯ ಮೂಲಕ ಜನರ ಭಾಷಣವನ್ನು ಮಾಡಿಸುತ್ತೇವೆ.

- Advertisement -
- Advertisement -

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ತಮ್ಮ ಭಾಷಣಕ್ಕೆ ಸಾರ್ವಜನಿಕರು ಸಲಹೆ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದರು. ಅದಕ್ಕೆ ನೂರಾರು ಸಲಹೆಗಳು ವ್ಯಕ್ತವಾಗುತ್ತಿದ್ದು ಕರ್ನಾಟಕದಿಂದಲೇ ಹಲವಾರು ಜನ ಪ್ರತಿಕ್ರಿಯಿಸಿದ್ದು ಜನಸಮುದಾಯಗಳ ಮೇಲಿನ ದಾಳಿಯನ್ನು ಹೇಗೆ ನಿಲ್ಲಿಸುತ್ತೀರಿ ಎಂಬುದರ ಬಗ್ಗೆ ಮಾತನಾಡಿ ಎಂದು ತಾಕೀತು ಮಾಡಿದ್ದಾರೆ.

‘ಮಾತಾಡಿ ಪ್ರಧಾನಿಗಳೇ ಮಾತನಾಡಿ’ ಎಂಬ ಘೋ‍‍‍‍‍‍‍‍‍ಷವಾಕ್ಯದಡಿಯಲ್ಲಿ ಇಂದಿನಿಂದ ಪ್ರಚಾರಾಂದೋಲನ ಆರಂಭವಾಗಿದೆ. ದಲಿತರ ಮೇಲಿನ ದೌರ್ಜನ್ಯಗಳು ಶೇ. 74 ರಷ್ಟು ಹೆಚ್ಚಾಗಿವೆ ಏಕೆ? ಎಂಬುದನ್ನು ಮಾತನಾಡಿ, ದಲಿತ ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಯಲು ಏನು ಕ್ರಮ ಕೈಗೊಳ್ಳುತ್ತೀರಿ? ಮಾತನಾಡಿ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ದೆಹಲಿಯ ದಲಿತ ಕಂದಮ್ಮಳೊಬ್ಬಳನ್ನು ಕಾಮಪಿಶಾಚಿ ಪೂಜಾರಿಯೊಬ್ಬ ಬರ್ಬರವಾಗಿ ಅತ್ಯಾಚಾರಗೈದು ಕೊಂದು ಸುಟ್ಟು ಹಾಕಿದ ಸುದ್ದಿ ಕೇಳಿದಾಗಿನಿಂದ ನಾವು ಆಘಾತಕ್ಕೊಳಗಾಗಿದ್ದೇವೆ. ಇಂತಹ ಅಮಾನುಷ ಘಟನೆಗಳಿಗೆ ಕೊನೆಯೆಂದು? ದಲಿತರೊಟ್ಟಿಗೆ ಅಲ್ಪಸಂಖ್ಯಾತ- ಮಹಿಳೆ- ಕಾರ್ಮಿಕ-ರೈತ ಸೇರಿದಂತೆ ನಾಡಿನ ಜನತೆ ಎಲ್ಲಾ ರೀತಿಯಿಂದಲೂ ತೀವ್ರ ಸಂಕಷ್ಟಕ್ಕೀಡಾಗಿರುವುದು ನಮ್ಮನ್ನು ಚಿಂತಿತರನ್ನಾಗಿ ಮಾಡಿದೆ ಇದಕ್ಕೆ ಏನು ಮಾಡುತ್ತೀರಿ ಎಂದು ಮಾತನಾಡಿ ಎಂದು ಒತ್ತಾಯಿಸಿದ್ದಾರೆ.

ನಾವು ಆಗಸ್ಟ್ 10 ರಿಂದ 15ರವರೆಗೆ ಪ್ರತಿದಿನ ಒಂದೊಂದು ಜನಸಮುದಾಯಗಳ ನೋವಿನ ಕುರಿತು ಪ್ರಧಾನಿಯವರಿಗೆ ಸಲಹೆ ನೀಡಲಿದ್ದೇವೆ. ದಲಿತ, ಅಲ್ಪಸಂಖ್ಯಾತ, ಮಹಿಳೆ, ಕಾರ್ಮಿಕ ಮತ್ತು ರೈತರ ಹಕ್ಕೊತ್ತಾಯಗಳನ್ನು ಮುನ್ನಲೆಗೆ ತರುತ್ತೇವೆ. ಪ್ರತಿ ದಿನ ಒಂದೊಂದು ಜನಸಮುದಾಯದ ನೋವುಗಳನ್ನು ವಿಡಿಯೋ, ಪೋಸ್ಟರ್, ಹಾಡು, ಭಾಷಣ, ಚಿತ್ರಗಳ ಮೂಲಕ ಮುಂದಿಟ್ಟು ಈ ಕುರಿತು ಮಾತನಾಡಿ ಎಂದು ಆಗ್ರಹಿಸುತ್ತೇವೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ಒಂದು ವೇಳೆ ಪ್ರಧಾನಿಗಳು ಆಗಸ್ಟ್ 15 ರಂದು ನಮ್ಮ ಬವಣೆಗಳ ಬಗ್ಗೆ ಮಾತನಾಡದಿದ್ದರೆ ಅಂದೇ ನಾವು ನಮ್ಮ ಜನಪ್ರತಿನಿಧಿಯ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಜನರ ಭಾಷಣವನ್ನು ಮಾಡಿಸುತ್ತೇವೆ. ಪ್ರಧಾನಿಗಳು ಮೌನ ಮುರಿಯಲಿ – ದೇಶ ಉಳಿಯಲಿ ಎಂದು ಅವರು ಒತ್ತಾಯಿಸಿದ್ದಾರೆ.

ದಲಿತರು ಉಳುಮೆ ಮಾಡುತ್ತಿರುವ ಸರ್ಕಾರಿ ಭೂಮಿಗಳಿಗೆ ಹಕ್ಕುಪತ್ರ ಯಾವಾಗ ನೀಡುತ್ತೀರಿ? ಮಾತನಾಡಿ. ಮೀಸಲಾತಿ ನೀಡುವ ಸರ್ಕಾರಿ ಉದ್ಯೋಗಗಳನ್ನು ಹೆಚ್ಚಿಸುವ ಕುರಿತು ಮಾತನಾಡಿ. ಖಾಸಗೀ ಕ್ಷೇತ್ರಗಳಲ್ಲೂ ಮೀಸಲಾತಿ ಜಾರಿಗೆ ತರುವ ಕುರಿತು ನಿಮ್ಮ ಆಲೋಚನೆ ಏನು? ಮಾತನಾಡಿ ಎಂಬ ವಿಷಯಗಳಿಂದ ಆರಂಭವಾಗಿ ರೋಹಿತ್ ವೇಮುಲನನ್ನು ಬಲಿ ತೆಗೆದುಕೊಂಡದ್ದರಲ್ಲಿ ನಿಮ್ಮ ಪಕ್ಷದ ಸಂಸದರೂ ಸಚಿವರೂ ಶಾಮೀಲಾಗಿದ್ದರು. ಸರ್ಕಾರವೂ ಶಾಮೀಲಾಗಿತ್ತು. ಆದರೆ ನ್ಯಾಯ ಸಿಗಲಿಲ್ಲ. ಕನಿಷ್ಠ ಪಕ್ಷ ರೋಹಿತ್ ಕಾಯ್ದೆಯನ್ನಾದರೂ ಜಾರಿ ಮಾಡಿ ಎಂಬ ಆಗ್ರಹಗಳು ಕೇಳಿಬಂದಿವೆ.


ಇದನ್ನೂ ಓದಿ: ವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...