Homeಮುಖಪುಟನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

- Advertisement -
- Advertisement -

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಲು ಲೋಕಸಭೆಗೆ ಬಂದಿಲ್ಲ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಸೋಮವಾರ (ಫೆ.9) ಸಂಸತ್ತಿನ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿಗೆ ಸಂಸದರಿಂದ ಭದ್ರತಾ ಬೆದರಿಕೆ ಇದೆ ಎಂಬ ಸ್ಪೀಕರ್ ಹೇಳಿಕೆಯನ್ನು ತಿರಸ್ಕರಿಸಿದ್ದು, “ಆರೋಪ ಮಾಡುವವರು ಕ್ರಮ ಕೈಗೊಳ್ಳಲಿ” ಎಂದು ಸವಾಲು ಹಾಕಿದ್ದಾರೆ. “ಯಾರಾದರು ಪ್ರಧಾನಿ ಮೇಲೆ ದಾಳಿ ಮಾಡುವುದಾಗಿ ಹೇಳಿದ್ದರೆ ದಯವಿಟ್ಟು ಎಫ್‌ಐಆರ್ ದಾಖಲಿಸಿ, ಆ ವ್ಯಕ್ತಿಯನ್ನು ಬಂಧಿಸಿ. ನೀವು ಯಾಕೆ ಹಾಗೆ ಮಾಡುತ್ತಿಲ್ಲ?” ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

“ಪ್ರಧಾನಿ ಸಂಸತ್ತಿಗೆ ಬರಲು ಹೆದರುತ್ತಿರುವುದು ಸಂಸದರ ಬೆದರಿಕೆಯಿಂದ ಅಲ್ಲ, ನಾನು ಆಡುತ್ತಿರುವ ಸತ್ಯದ ಮಾತುಗಳನ್ನು ಕೇಳಿ. ಅವರು ಸತ್ಯವನ್ನು ಎದುರಿಸಲಾಗದೆ ಭಯಭೀತರಾಗಿದ್ದಾರೆ. ಇದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಕಾಂಗ್ರೆಸ್ ಸದಸ್ಯರು ಪ್ರಧಾನಿಯ ಮೇಲೆ ದಾಳಿ ಮಾಡುವ ಪ್ರಶ್ನೆಯೇ ಇಲ್ಲ ಎಂದಿರುವ ಅವರು, ಪ್ರಧಾನಿ ಮೋದಿಯವರು ಸದನವನ್ನು ಎದುರಿಸುವ ಧೈರ್ಯ ತೋರಿಸಬೇಕಿತ್ತು” ಎಂದಿದ್ದಾರೆ.

“ನಾವು ಏನು ಹೇಳುತ್ತೇವೆಯೋ ಅದಕ್ಕೆ ಅವರು ಹೆದರುತ್ತಿದ್ದಾರೆ, ಮೊದಲ ಹೆಜ್ಜೆಯಾಗಿ ನರವಾಣೆಯವರ ಪುಸ್ತಕವನ್ನು ಅವರಿಗೆ ನೀಡುತ್ತೇವೆ ಎಂಬ ಭಯವಿದೆ” ಎಂದು ಹೇಳಿದ್ದಾರೆ.

“ಸರ್ಕಾರ ಬಜೆಟ್ ಕುರಿತು ಹೆಚ್ಚಿನ ಚರ್ಚೆ ಮಾಡಲು ಹಿಂಜರಿಯುತ್ತಿದೆ. ನನ್ನ ಪ್ರಕಾರ, ಅವರು ಭಾರತ-ಅಮೆರಿಕ ವ್ಯಾಪಾರ ಒಪ್ಪಂದ, ಅದು ನಮ್ಮ ರೈತರ ಮೇಲೆ ಬೀರುವ ಪರಿಣಾಮದ ಕುರಿತು ಚರ್ಚಿಸುವ ಬಗ್ಗೆ ಚಿಂತಿತರಾಗಿದ್ದಾರೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ನಾನು ನರವಾಣೆಯವರ ಪುಸ್ತಕದ ಕುರಿತು ಮಾತನಾಡಬಾರದು ಎಂದು ಸದನವನ್ನು ಪದೇ ಪದೇ ಮುಂದೂಡಲಾಗುತ್ತಿದೆ. ಆರಂಭದಲ್ಲಿ ನರವಾಣೆಯವರ ಅಪ್ರಕಟಿತ ಪುಸ್ತಕದ ಕುರಿತು ಸದನದಲ್ಲಿ ಉಲ್ಲೇಖಿಸಬಾರದು ಎಂದರು. ನಾನು ಪುಸ್ತಕದ ಬಗ್ಗೆ ಉಲ್ಲೇಖಿಸುತ್ತಿಲ್ಲ, ಅದಕ್ಕೆ ಸಂಬಂಧಿಸಿದ ಪತ್ರಿಕಾ ವರದಿಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ ಎಂದೆ. ನಂತರ ಅವರು, ಲೇಖನದ ಕುರಿತೂ ಪ್ರಸ್ತಾಪಿಸಬಾರದು ಎಂದರು. ನಾನು ಮಾತನಾಡಲೇಬೇಕು ಎಂದೆ, ಅದಕ್ಕೆ ಅವರು ನಾನು ಮಾತನಾಡದಂತೆ ತಡೆಯುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪುಸ್ತಕ ಪ್ರಕಟವಾಗಿಲ್ಲ ಎಂದು ಸುಳ್ಳು ಹೇಳಿಕೆ ನೀಡಿದ್ದಾರೆ. ಪುಸ್ತಕ ಪ್ರಕಟವಾಗಿದೆ ಮತ್ತು ನಮಗೆ ಅದರ ಪ್ರತಿ ಸಿಕ್ಕಿದೆ. ರಾಷ್ಟ್ರಪತಿಯ ಭಾಷಣಕ್ಕೆ ವಂದನಾ ನಿರ್ಣಯದಲ್ಲಿ ವಿರೋಧಪಕ್ಷದ ನಾಯಕ ಸೇರಿದಂತೆ ಇಡೀ ವಿರೋಧ ಪಕ್ಷಕ್ಕೆ ಅವಕಾಶ ನೀಡದಿರುವುದು ಅನ್ಯಾಯ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...