Homeಮುಖಪುಟನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

- Advertisement -
- Advertisement -

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಲು ಲೋಕಸಭೆಗೆ ಬಂದಿಲ್ಲ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಸೋಮವಾರ (ಫೆ.9) ಸಂಸತ್ತಿನ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿಗೆ ಸಂಸದರಿಂದ ಭದ್ರತಾ ಬೆದರಿಕೆ ಇದೆ ಎಂಬ ಸ್ಪೀಕರ್ ಹೇಳಿಕೆಯನ್ನು ತಿರಸ್ಕರಿಸಿದ್ದು, “ಆರೋಪ ಮಾಡುವವರು ಕ್ರಮ ಕೈಗೊಳ್ಳಲಿ” ಎಂದು ಸವಾಲು ಹಾಕಿದ್ದಾರೆ. “ಯಾರಾದರು ಪ್ರಧಾನಿ ಮೇಲೆ ದಾಳಿ ಮಾಡುವುದಾಗಿ ಹೇಳಿದ್ದರೆ ದಯವಿಟ್ಟು ಎಫ್‌ಐಆರ್ ದಾಖಲಿಸಿ, ಆ ವ್ಯಕ್ತಿಯನ್ನು ಬಂಧಿಸಿ. ನೀವು ಯಾಕೆ ಹಾಗೆ ಮಾಡುತ್ತಿಲ್ಲ?” ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

“ಪ್ರಧಾನಿ ಸಂಸತ್ತಿಗೆ ಬರಲು ಹೆದರುತ್ತಿರುವುದು ಸಂಸದರ ಬೆದರಿಕೆಯಿಂದ ಅಲ್ಲ, ನಾನು ಆಡುತ್ತಿರುವ ಸತ್ಯದ ಮಾತುಗಳನ್ನು ಕೇಳಿ. ಅವರು ಸತ್ಯವನ್ನು ಎದುರಿಸಲಾಗದೆ ಭಯಭೀತರಾಗಿದ್ದಾರೆ. ಇದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಕಾಂಗ್ರೆಸ್ ಸದಸ್ಯರು ಪ್ರಧಾನಿಯ ಮೇಲೆ ದಾಳಿ ಮಾಡುವ ಪ್ರಶ್ನೆಯೇ ಇಲ್ಲ ಎಂದಿರುವ ಅವರು, ಪ್ರಧಾನಿ ಮೋದಿಯವರು ಸದನವನ್ನು ಎದುರಿಸುವ ಧೈರ್ಯ ತೋರಿಸಬೇಕಿತ್ತು” ಎಂದಿದ್ದಾರೆ.

“ನಾವು ಏನು ಹೇಳುತ್ತೇವೆಯೋ ಅದಕ್ಕೆ ಅವರು ಹೆದರುತ್ತಿದ್ದಾರೆ, ಮೊದಲ ಹೆಜ್ಜೆಯಾಗಿ ನರವಾಣೆಯವರ ಪುಸ್ತಕವನ್ನು ಅವರಿಗೆ ನೀಡುತ್ತೇವೆ ಎಂಬ ಭಯವಿದೆ” ಎಂದು ಹೇಳಿದ್ದಾರೆ.

“ಸರ್ಕಾರ ಬಜೆಟ್ ಕುರಿತು ಹೆಚ್ಚಿನ ಚರ್ಚೆ ಮಾಡಲು ಹಿಂಜರಿಯುತ್ತಿದೆ. ನನ್ನ ಪ್ರಕಾರ, ಅವರು ಭಾರತ-ಅಮೆರಿಕ ವ್ಯಾಪಾರ ಒಪ್ಪಂದ, ಅದು ನಮ್ಮ ರೈತರ ಮೇಲೆ ಬೀರುವ ಪರಿಣಾಮದ ಕುರಿತು ಚರ್ಚಿಸುವ ಬಗ್ಗೆ ಚಿಂತಿತರಾಗಿದ್ದಾರೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ನಾನು ನರವಾಣೆಯವರ ಪುಸ್ತಕದ ಕುರಿತು ಮಾತನಾಡಬಾರದು ಎಂದು ಸದನವನ್ನು ಪದೇ ಪದೇ ಮುಂದೂಡಲಾಗುತ್ತಿದೆ. ಆರಂಭದಲ್ಲಿ ನರವಾಣೆಯವರ ಅಪ್ರಕಟಿತ ಪುಸ್ತಕದ ಕುರಿತು ಸದನದಲ್ಲಿ ಉಲ್ಲೇಖಿಸಬಾರದು ಎಂದರು. ನಾನು ಪುಸ್ತಕದ ಬಗ್ಗೆ ಉಲ್ಲೇಖಿಸುತ್ತಿಲ್ಲ, ಅದಕ್ಕೆ ಸಂಬಂಧಿಸಿದ ಪತ್ರಿಕಾ ವರದಿಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ ಎಂದೆ. ನಂತರ ಅವರು, ಲೇಖನದ ಕುರಿತೂ ಪ್ರಸ್ತಾಪಿಸಬಾರದು ಎಂದರು. ನಾನು ಮಾತನಾಡಲೇಬೇಕು ಎಂದೆ, ಅದಕ್ಕೆ ಅವರು ನಾನು ಮಾತನಾಡದಂತೆ ತಡೆಯುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪುಸ್ತಕ ಪ್ರಕಟವಾಗಿಲ್ಲ ಎಂದು ಸುಳ್ಳು ಹೇಳಿಕೆ ನೀಡಿದ್ದಾರೆ. ಪುಸ್ತಕ ಪ್ರಕಟವಾಗಿದೆ ಮತ್ತು ನಮಗೆ ಅದರ ಪ್ರತಿ ಸಿಕ್ಕಿದೆ. ರಾಷ್ಟ್ರಪತಿಯ ಭಾಷಣಕ್ಕೆ ವಂದನಾ ನಿರ್ಣಯದಲ್ಲಿ ವಿರೋಧಪಕ್ಷದ ನಾಯಕ ಸೇರಿದಂತೆ ಇಡೀ ವಿರೋಧ ಪಕ್ಷಕ್ಕೆ ಅವಕಾಶ ನೀಡದಿರುವುದು ಅನ್ಯಾಯ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...