Homeಮುಖಪುಟಮೊರ್ಬಿ ದುರಂತದ ಸಂತ್ರಸ್ತರನ್ನು ಭೇಟಿಯಾಗಲಿರುವ ಪ್ರಧಾನಿ: ಆಸ್ಪತ್ರೆಗೆ ನವೀಕರಣಕ್ಕೆ ಮುಂದಾದ ಸಿಬ್ಬಂದಿ

ಮೊರ್ಬಿ ದುರಂತದ ಸಂತ್ರಸ್ತರನ್ನು ಭೇಟಿಯಾಗಲಿರುವ ಪ್ರಧಾನಿ: ಆಸ್ಪತ್ರೆಗೆ ನವೀಕರಣಕ್ಕೆ ಮುಂದಾದ ಸಿಬ್ಬಂದಿ

- Advertisement -
- Advertisement -

ಗುಜರಾತ್‌ನ ಮೊರ್ಬಿ ನಗರದ ನದಿಗೆ ನಿರ್ಮಿಸಿದ್ದ ತೂಗು ಸೇತುವೆ ಕುಸಿತದಿಂದಾಗಿ ಈವರೆಗೆ 135 ಜನರು ಮೃತಪಟ್ಟಿದ್ದಾರೆ. ಗಾಯಗೊಂಡ ನೂರಕ್ಕೂ ಹೆಚ್ಚು ಮೊರ್ಬಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರನ್ನು ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೇಟಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಜಿಲ್ಲಾಸ್ಪತ್ರೆಯನ್ನು ನವೀಕರಣಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕಳಪೆ ಸ್ಥಿತಿಯಲ್ಲಿದ್ದ ಜಿಲ್ಲಾಸ್ಪತ್ರೆಯನ್ನು ತಹಬದಿಗೆ ತರಲು ಸೋಮವಾರ ರಾತ್ರಿಯಿಡಿ ಕಾರ್ಯಾಚರಣೆ ನಡೆಸಲಾಗಿದೆ ಎನ್ನಲಾಗಿದೆ. ಹಲವು ಗೋಡೆಗಳಿಗೆ ಹೊಸದಾಗಿ ಬಣ್ಣ ಬಳಿಯಲಾಗಿದೆ. ಟೈಲ್ಸ್ ಹಾಕಲಾಗಿದೆ. ಎರಡು ವಾರ್ಡ್‌ಗಳ ಬೆಡ್‌ಶೀಟ್‌ಗಳನ್ನು ಬದಲಿಸಿ ಹೊಸ ಬೆಡ್‌ಶೀಟ್‌ಗಳನ್ನು ಹಾಕಲಾಗಿದೆ. ಶಿಥಿಲ ಸ್ಥಿತಿಯಲ್ಲಿರುವ ಗೋಡೆಗಳನ್ನು ಮರೆಮಾಚಲಾಗಿದೆ. ಒಟ್ಟಾರೆಯಾಗಿ ಹೊಸ ಚಿತ್ರಣ ನೀಡಲು ಪ್ರಯತ್ನಿಸಲಾಗುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಆಸ್ಪತ್ರೆಯ ಈ ನವೀಕರಣ ಕಾರ್ಯವು ಹಿಂದೆ ಎಂದೂ ಆಗದಿದ್ದರೂ ಈ ಬಾರಿ ಪ್ರಧಾನಿ ಭೇಟಿಗಾಗಿ ನಡೆಯುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಬಿಜೆಪಿ ಪಕ್ಷವು ಪ್ರಧಾನಿ ಮಂತ್ರಿಗಳ ಫೋಟೋಶೂಟ್‌ಗಾಗಿ ಇವೆಂಟ್ ಮ್ಯಾನೆಜ್‌ಮೆಂಟ್ ಮಾಡುತ್ತಿದೆ ಎಂದು ಟೀಕಿಸಿವೆ.

“ನಾಳೆ ಪ್ರಧಾನಿ ನರೇಂದ್ರ ಮೋದಿಯವರು ಮೊರ್ಬಿಯ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಆ ಹಿನ್ನೆಲೆಯಲ್ಲಿ ಬಣ್ಣ ಬಳಿಯಲಾಗುತ್ತಿದೆ. ಹೊಳೆಯುವ ಟೈಲ್ಸ್ ಹಾಕಲಾಗುತ್ತಿದೆ. ಪ್ರಧಾನಿಯವರ ಚಿತ್ರಗಳಲ್ಲಿ ಯಾವುದೇ ಲೋಪವಾಗದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಎಷ್ಟೋ ಜನ ಸಾವನಪ್ಪಿದರೂ ಸಹ ಈವೆಂಟ್ ಮ್ಯಾನೇಜ್‌ಮೆಂಟ್‌ನಲ್ಲಿ ಬ್ಯುಸಿಯಾಗಿರುವ ಬಿಜೆಪಿಗೆ ನಾಚಿಕೆ ಎಂಬುದಿಲ್ಲ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

“ಮೊರ್ಬಿ ಸಿವಿಲ್ ಆಸ್ಪತ್ರೆಯಲ್ಲಿನ ದೃಶ್ಯಗಳಿವು. ನಾಳೆ ನಡೆಯಲಿರುವ ಪ್ರಧಾನಿ ಫೋಟೋಶೂಟ್‌ನಲ್ಲಿ ಯಾವುದೇ ಲೋಪವಾಗದಂತೆ ದುರಸ್ತಿ ಕಾರ್ಯ ನಡೆಯುತ್ತಿದೆ. ಕಳೆದ 27 ವರ್ಷಗಳಲ್ಲಿ ಬಿಜೆಪಿ ಕೆಲಸ ಮಾಡಿದ್ದರೆ, ಮಧ್ಯರಾತ್ರಿಯಲ್ಲಿ ಆಸ್ಪತ್ರೆಯನ್ನು ಅಲಂಕರಿಸುವ ಅಗತ್ಯವಿರಲಿಲ್ಲ” ಎಂದು ಆಮ್ ಆದ್ಮಿ ಪಕ್ಷ ಟ್ವೀಟ್ ಮಾಡಿದೆ.

ಇದನ್ನೂ ಓದಿ; ಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...