Homeಮುಖಪುಟ'ಪಿಎಂ ವಿಶ್ವಕರ್ಮ ಯೋಜನೆ' ಜಾತಿ ಆಧಾರಿತ ಉದ್ಯೋಗ ಉತ್ತೇಜಿಸುತ್ತದೆ, ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ : ತಮಿಳುನಾಡು ಸಿಎಂ

‘ಪಿಎಂ ವಿಶ್ವಕರ್ಮ ಯೋಜನೆ’ ಜಾತಿ ಆಧಾರಿತ ಉದ್ಯೋಗ ಉತ್ತೇಜಿಸುತ್ತದೆ, ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ : ತಮಿಳುನಾಡು ಸಿಎಂ

- Advertisement -
- Advertisement -

‘ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ'(PMVS) ಜಾತಿ ಆಧಾರಿತ ಉದ್ಯೋಗಗಳ ಕಲ್ಪನೆಯನ್ನು ಉತ್ತೇಜಿಸುತ್ತದೆ. ಆದ್ದರಿಂದ ಅದನ್ನು ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನವೆಂಬರ್ 27ರಂದು ಕೇಂದ್ರಕ್ಕೆ ಪತ್ರ ಬರೆದು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ರಾಜ್ಯ ಸರ್ಕಾರ ಯೋಜನೆಯ ಕುರಿತು ಅಧ್ಯಯನ ನಡೆಸಿದೆ. ಈ ವೇಳೆ ಯೋಜನೆಯು ಸಣ್ಣ ಕುಟುಂಬ ನಡೆಸುವ ಕರಕುಶಲ ಮತ್ತು ಕುಶಲಕರ್ಮಿ ಉದ್ಯೋಗದಲ್ಲಿ ತೊಡಗಿರುವವವರಿಗೆ ಮಾತ್ರ ಲಾಭ ಒದಗಿಸುವುದು ಕಂಡು ಬಂದಿದೆ. ಇದು ಮೂಲಭೂತವಾಗಿ ಕೆಳಜಾತಿಯ ಯುವಕರನ್ನು ಶಿಕ್ಷಣದ ಮೇಲೆ ಕೇಂದ್ರೀಕರಿಸುವ ಬದಲು ಜಾತಿ ಆಧಾರಿತ ಉದ್ಯೋಗಗಳಲ್ಲೇ ಉಳಿಯಲು ಪ್ರೋತ್ಸಾಹಿಸುತ್ತದೆ ಎಂದು ಸಿಎಂ ಪತ್ರದಲ್ಲಿ ಹೇಳಿದ್ದಾರೆ.

ವಿಶ್ವಕರ್ಮ ಯೋಜನೆಯು 15 ಸಾವಿರ ರೂಪಾಯಿ ಟೂಲ್‌ಕಿಟ್‌ ಪ್ರೋತ್ಸಾಹ ಧನದ ಜೊತೆಗೆ ಕೌಶಲ್ಯ ವರ್ಧನೆಗೆ ತರಬೇತಿ ಮತ್ತು ಸಾಲ ಸೌಲಭ್ಯವನ್ನು ಒದಗಿಸುತ್ತದೆ. ಮೊದಲ ಕಂತಿನಲ್ಲಿ ರೂ. 1 ಲಕ್ಷ ಮತ್ತು ಎರಡನೇ ಕಂತಿನಲ್ಲಿ ರೂ. 2 ಲಕ್ಷದವರೆಗೆ ಮೇಲಾಧಾರ-ಮುಕ್ತ ಸಾಲವನ್ನು ಶೇ. 5ರಷ್ಟು ರಿಯಾಯಿತಿ ಬಡ್ಡಿ ದರದಲ್ಲಿ ನೀಡುತ್ತದೆ.

ಯೋಜನೆಯು ಡಿಜಿಟಲ್ ವಹಿವಾಟು ಮತ್ತು ಮಾರ್ಕೆಟಿಂಗ್‌ಗೆ ಪ್ರೋತ್ಸಾಹ ಒದಗಿಸುತ್ತದೆ. ಮರಗೆಲಸ, ದೋಣಿ ತಯಾರಿಕೆ, ಕಬ್ಬಿಣದ ಶಸ್ತ್ರಾಸ್ತ್ರ ತಯಾರಿಕೆ, ಶೂ ತಯಾರಿಕೆ ಸೇರಿದಂತೆ ಕುಟುಂಬ ಪಾರಂಪರ್ಯವಾಗಿ ಬಂದಿರುವ 18 ಕೆಲಸಗಳಿಗೆ ಇದು ಅನ್ವಯಿಸುತ್ತದೆ.

ಸೆಪ್ಟೆಂಬರ್ 17, 2023ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿರುವ ಈ ಯೋಜನೆ ಕುರಿತು ಬಿಜೆಪಿ ಸರ್ಕಾರ ಬಹಳ ಹೆಮ್ಮೆ ವ್ಯಕ್ತಪಡಿಸಿದೆ. ಆದರೆ, ತಮಿಳುನಾಡು ಸರ್ಕಾರ ಯೋಜನೆಯನ್ನು ವಿರೋಧಿಸಿದೆ.

ಒಂದು ಕುಟುಂಬ ಮರಗೆಲಸ ಮಾಡಿಕೊಂಡಿದ್ದರೆ, ಅವರ ಮಕ್ಕಳೂ ಅದೇ ಕೆಲಸ ಮಾಡಿಕೊಂಡು ಹಿಂದೆ ಉಳಿಯುವುದು ಬೇಡ. ಆ ಮಕ್ಕಳು ಆಧುನಿಕ ಯುಗದಲ್ಲಿ ಉನ್ನತ ಶಿಕ್ಷಣ ಪಡೆದು, ಉತ್ತಮ ಕೆಲಸಗಳನ್ನು ಗಿಟ್ಟಿಸಿಕೊಂಡು ಸಂಬಳ ಪಡೆಯುವ ಮೂಲಕ ಸಾಮಾಜಿಕ ಮತ್ತು ಆರ್ಥಿಕವಾಗಿ ಮುಂದೆ ಬರಲಿ ಎಂಬುವುದು ತಮಿಳುನಾಡು ಸರ್ಕಾರದ ವಾದ.

ಯೋಜನೆಯ ಕುರಿತು ಟೀಕೆಗಳು ವ್ಯಕ್ತವಾದಾಗ, ತಮಿಳುನಾಡು ಸರ್ಕಾರ ಅದರ ಸಂಭಾವ್ಯ ಪರಿಣಾಮಗಳನ್ನು ನಿರ್ಣಯಿಸಲು ಸಮಿತಿಯನ್ನು ರಚಿಸಿತ್ತು. ಅದರ ವರದಿ ಆಧಾರಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ವರ್ಷದ ಜನವರಿಯಲ್ಲಿ ನಮ್ಮ ಸರ್ಕಾರ ಯೋಜನೆಯ ಕುರಿತು ಮೂರು ಬೇಡಿಕೆಗಳನ್ನು ಮುಂದಿಟ್ಟಿತ್ತು. ಅದು ಪರಿಹಾರವಾಗದೆ ಉಳಿದಿದೆ ಎಂದು ಸಿಎಂ ಸ್ಟಾಲಿನ್ ತಮ್ಮ ಪತ್ರದಲ್ಲಿ ಕೇಂದ್ರಕ್ಕೆ ಹೇಳಿದ್ದಾರೆ.

ನಿರ್ದಿಷ್ಟ ಕಸುಬಿನಲ್ಲಿ ತೊಡಗಿಸಿಕೊಂಡವರಿಗೆ ಮಾತ್ರ ಯೋಜನೆ ಲಾಭ ಎಂಬ ನಿಯಮವನ್ನು ತೆಗೆದುಹಾಕಿ, ಯಾವುದೇ ಉದ್ಯೋಗ ಮಾಡುವವರೂ ಅರ್ಹರು ಎಂಬ ನಿಯಮ ಅಳವಡಿಸಿ ಎಂದು ವಿಶ್ವಕರ್ಮ ಯೋಜನೆ ಸಂಬಂಧ ತಮಿಳುನಾಡು ಸರ್ಕಾರ ಕೇಂದ್ರವನ್ನು ಆಗ್ರಹಿಸಿತ್ತು.

ಎರಡನೆಯದಾಗಿ, ಫಲಾನುಭವಿಗಳು ತಿಳುವಳಿಕೆಯುಳ್ಳ ನಿರ್ಧಾರವನ್ನು ತೆಗೆದುಕೊಳ್ಳುವಷ್ಟು ಪ್ರಬುದ್ಧರಾಗಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಅರ್ಹತೆಯ ಕನಿಷ್ಠ ವಯಸ್ಸನ್ನು 18 ವರ್ಷದಿಂದ 35 ವರ್ಷಕ್ಕೆ ಏರಿಸಲು ರಾಜ್ಯ ಸರ್ಕಾರ ಪ್ರಸ್ತಾಪಿಸಿತ್ತು.

ಕೊನೆಯದಾಗಿ, ಗ್ರಾಮೀಣ ಪ್ರದೇಶದ ಫಲಾನುಭವಿಗಳನ್ನು ಪರಿಶೀಲಿಸುವ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿ ಮುಖ್ಯಸ್ಥರಿಗಿಂತ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗೆ (ವಿಎಒ) ವಹಿಸಬೇಕೆಂದು ಸರ್ಕಾರ ಶಿಫಾರಸು ಮಾಡಿತ್ತು.

“ನಾವು ಮುಂದಿಟ್ಟಿರುವ ಬೇಡಿಕೆಗಳು ಈಡೇರದ ಕಾರಣ, ಪ್ರಸ್ತುತ ರೂಪದಲ್ಲಿ ರಾಜ್ಯದಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮಯೋಜನೆ ಜಾರಿಗೊಳಿಸಲು ಸಾಧ್ಯವಿಲ್ಲ. ತಮಿಳುನಾಡಿನಲ್ಲಿ ಕುಶಲಕರ್ಮಿಗಳನ್ನು ಸಾಮಾಜಿಕ ನ್ಯಾಯದ ಒಟ್ಟಾರೆ ತತ್ವದಡಿಯಲ್ಲಿ ಸಬಲೀಕರಣಗೊಳಿಸಲು, ಸರ್ಕಾರ ಕುಶಲಕರ್ಮಿಗಳಿಗಾಗಿ ಹೆಚ್ಚು ಒಳಗೊಳ್ಳುವಿಕೆಯ ಮತ್ತು ಸಮಗ್ರ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿದೆ. ಅದು ಜಾತಿ ಆಧಾರಿತ ತಾರತಮ್ಯದಿಂದ ಹೊರತಾಗಿರಲಿದೆ. ನಮ್ಮ ಯೋಜನೆಯು ಜಾತಿ ಅಥವಾ ಕೌಟುಂಬಿಕ ಉದ್ಯೋಗಗಳನ್ನು ಲೆಕ್ಕಿಸದೆ ರಾಜ್ಯದ ಎಲ್ಲಾ ಕುಶಲಕರ್ಮಿಗಳಿಗೆ ಸಮಗ್ರ ಬೆಂಬಲವನ್ನು ನೀಡಲಿದೆ. ಯೋಜನೆಯು ಅವರಿಗೆ ಆರ್ಥಿಕ ನೆರವು, ತರಬೇತಿ ಮತ್ತು ಅವರ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ಸಮಗ್ರವಾಗಿ ಮತ್ತು ಒಳಗೊಳ್ಳುವಿಕೆಯ ಮೂಲಕ ಒದಗಿಸಲಿದೆ” ಎಂದು ಸ್ಟಾಲಿನ್ ಪತ್ರದಲ್ಲಿ ಹೇಳಿದ್ದಾರೆ.

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯನ್ನು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ (MoMSME),ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಸಚಿವಾಲಯ (MSDE)ಮತ್ತು ಹಣಕಾಸು ಸಚಿವಾಲಯ (MoF)ದ ಅಡಿ ಬರುವ ಹಣಕಾಸು ಸೇವೆಗಳ ಇಲಾಖೆ (DFS)ಜಂಟಿಯಾಗಿ 13,000 ಕೋಟಿ ರೂ. ವೆಚ್ಚದಲ್ಲಿ ಜಾರಿಗೊಳಿಸಿದೆ.

ಇದನ್ನೂ ಓದಿ : ಮಧ್ಯಪ್ರದೇಶ | ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗ್ರಾಮ ಪಂಚಾಯತ್ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...