Homeಮುಖಪುಟ'ಪಿಎಂ ವಿಶ್ವಕರ್ಮ ಯೋಜನೆ' ಜಾತಿ ಆಧಾರಿತ ಉದ್ಯೋಗ ಉತ್ತೇಜಿಸುತ್ತದೆ, ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ : ತಮಿಳುನಾಡು ಸಿಎಂ

‘ಪಿಎಂ ವಿಶ್ವಕರ್ಮ ಯೋಜನೆ’ ಜಾತಿ ಆಧಾರಿತ ಉದ್ಯೋಗ ಉತ್ತೇಜಿಸುತ್ತದೆ, ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ : ತಮಿಳುನಾಡು ಸಿಎಂ

- Advertisement -
- Advertisement -

‘ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ'(PMVS) ಜಾತಿ ಆಧಾರಿತ ಉದ್ಯೋಗಗಳ ಕಲ್ಪನೆಯನ್ನು ಉತ್ತೇಜಿಸುತ್ತದೆ. ಆದ್ದರಿಂದ ಅದನ್ನು ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನವೆಂಬರ್ 27ರಂದು ಕೇಂದ್ರಕ್ಕೆ ಪತ್ರ ಬರೆದು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ರಾಜ್ಯ ಸರ್ಕಾರ ಯೋಜನೆಯ ಕುರಿತು ಅಧ್ಯಯನ ನಡೆಸಿದೆ. ಈ ವೇಳೆ ಯೋಜನೆಯು ಸಣ್ಣ ಕುಟುಂಬ ನಡೆಸುವ ಕರಕುಶಲ ಮತ್ತು ಕುಶಲಕರ್ಮಿ ಉದ್ಯೋಗದಲ್ಲಿ ತೊಡಗಿರುವವವರಿಗೆ ಮಾತ್ರ ಲಾಭ ಒದಗಿಸುವುದು ಕಂಡು ಬಂದಿದೆ. ಇದು ಮೂಲಭೂತವಾಗಿ ಕೆಳಜಾತಿಯ ಯುವಕರನ್ನು ಶಿಕ್ಷಣದ ಮೇಲೆ ಕೇಂದ್ರೀಕರಿಸುವ ಬದಲು ಜಾತಿ ಆಧಾರಿತ ಉದ್ಯೋಗಗಳಲ್ಲೇ ಉಳಿಯಲು ಪ್ರೋತ್ಸಾಹಿಸುತ್ತದೆ ಎಂದು ಸಿಎಂ ಪತ್ರದಲ್ಲಿ ಹೇಳಿದ್ದಾರೆ.

ವಿಶ್ವಕರ್ಮ ಯೋಜನೆಯು 15 ಸಾವಿರ ರೂಪಾಯಿ ಟೂಲ್‌ಕಿಟ್‌ ಪ್ರೋತ್ಸಾಹ ಧನದ ಜೊತೆಗೆ ಕೌಶಲ್ಯ ವರ್ಧನೆಗೆ ತರಬೇತಿ ಮತ್ತು ಸಾಲ ಸೌಲಭ್ಯವನ್ನು ಒದಗಿಸುತ್ತದೆ. ಮೊದಲ ಕಂತಿನಲ್ಲಿ ರೂ. 1 ಲಕ್ಷ ಮತ್ತು ಎರಡನೇ ಕಂತಿನಲ್ಲಿ ರೂ. 2 ಲಕ್ಷದವರೆಗೆ ಮೇಲಾಧಾರ-ಮುಕ್ತ ಸಾಲವನ್ನು ಶೇ. 5ರಷ್ಟು ರಿಯಾಯಿತಿ ಬಡ್ಡಿ ದರದಲ್ಲಿ ನೀಡುತ್ತದೆ.

ಯೋಜನೆಯು ಡಿಜಿಟಲ್ ವಹಿವಾಟು ಮತ್ತು ಮಾರ್ಕೆಟಿಂಗ್‌ಗೆ ಪ್ರೋತ್ಸಾಹ ಒದಗಿಸುತ್ತದೆ. ಮರಗೆಲಸ, ದೋಣಿ ತಯಾರಿಕೆ, ಕಬ್ಬಿಣದ ಶಸ್ತ್ರಾಸ್ತ್ರ ತಯಾರಿಕೆ, ಶೂ ತಯಾರಿಕೆ ಸೇರಿದಂತೆ ಕುಟುಂಬ ಪಾರಂಪರ್ಯವಾಗಿ ಬಂದಿರುವ 18 ಕೆಲಸಗಳಿಗೆ ಇದು ಅನ್ವಯಿಸುತ್ತದೆ.

ಸೆಪ್ಟೆಂಬರ್ 17, 2023ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿರುವ ಈ ಯೋಜನೆ ಕುರಿತು ಬಿಜೆಪಿ ಸರ್ಕಾರ ಬಹಳ ಹೆಮ್ಮೆ ವ್ಯಕ್ತಪಡಿಸಿದೆ. ಆದರೆ, ತಮಿಳುನಾಡು ಸರ್ಕಾರ ಯೋಜನೆಯನ್ನು ವಿರೋಧಿಸಿದೆ.

ಒಂದು ಕುಟುಂಬ ಮರಗೆಲಸ ಮಾಡಿಕೊಂಡಿದ್ದರೆ, ಅವರ ಮಕ್ಕಳೂ ಅದೇ ಕೆಲಸ ಮಾಡಿಕೊಂಡು ಹಿಂದೆ ಉಳಿಯುವುದು ಬೇಡ. ಆ ಮಕ್ಕಳು ಆಧುನಿಕ ಯುಗದಲ್ಲಿ ಉನ್ನತ ಶಿಕ್ಷಣ ಪಡೆದು, ಉತ್ತಮ ಕೆಲಸಗಳನ್ನು ಗಿಟ್ಟಿಸಿಕೊಂಡು ಸಂಬಳ ಪಡೆಯುವ ಮೂಲಕ ಸಾಮಾಜಿಕ ಮತ್ತು ಆರ್ಥಿಕವಾಗಿ ಮುಂದೆ ಬರಲಿ ಎಂಬುವುದು ತಮಿಳುನಾಡು ಸರ್ಕಾರದ ವಾದ.

ಯೋಜನೆಯ ಕುರಿತು ಟೀಕೆಗಳು ವ್ಯಕ್ತವಾದಾಗ, ತಮಿಳುನಾಡು ಸರ್ಕಾರ ಅದರ ಸಂಭಾವ್ಯ ಪರಿಣಾಮಗಳನ್ನು ನಿರ್ಣಯಿಸಲು ಸಮಿತಿಯನ್ನು ರಚಿಸಿತ್ತು. ಅದರ ವರದಿ ಆಧಾರಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ವರ್ಷದ ಜನವರಿಯಲ್ಲಿ ನಮ್ಮ ಸರ್ಕಾರ ಯೋಜನೆಯ ಕುರಿತು ಮೂರು ಬೇಡಿಕೆಗಳನ್ನು ಮುಂದಿಟ್ಟಿತ್ತು. ಅದು ಪರಿಹಾರವಾಗದೆ ಉಳಿದಿದೆ ಎಂದು ಸಿಎಂ ಸ್ಟಾಲಿನ್ ತಮ್ಮ ಪತ್ರದಲ್ಲಿ ಕೇಂದ್ರಕ್ಕೆ ಹೇಳಿದ್ದಾರೆ.

ನಿರ್ದಿಷ್ಟ ಕಸುಬಿನಲ್ಲಿ ತೊಡಗಿಸಿಕೊಂಡವರಿಗೆ ಮಾತ್ರ ಯೋಜನೆ ಲಾಭ ಎಂಬ ನಿಯಮವನ್ನು ತೆಗೆದುಹಾಕಿ, ಯಾವುದೇ ಉದ್ಯೋಗ ಮಾಡುವವರೂ ಅರ್ಹರು ಎಂಬ ನಿಯಮ ಅಳವಡಿಸಿ ಎಂದು ವಿಶ್ವಕರ್ಮ ಯೋಜನೆ ಸಂಬಂಧ ತಮಿಳುನಾಡು ಸರ್ಕಾರ ಕೇಂದ್ರವನ್ನು ಆಗ್ರಹಿಸಿತ್ತು.

ಎರಡನೆಯದಾಗಿ, ಫಲಾನುಭವಿಗಳು ತಿಳುವಳಿಕೆಯುಳ್ಳ ನಿರ್ಧಾರವನ್ನು ತೆಗೆದುಕೊಳ್ಳುವಷ್ಟು ಪ್ರಬುದ್ಧರಾಗಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಅರ್ಹತೆಯ ಕನಿಷ್ಠ ವಯಸ್ಸನ್ನು 18 ವರ್ಷದಿಂದ 35 ವರ್ಷಕ್ಕೆ ಏರಿಸಲು ರಾಜ್ಯ ಸರ್ಕಾರ ಪ್ರಸ್ತಾಪಿಸಿತ್ತು.

ಕೊನೆಯದಾಗಿ, ಗ್ರಾಮೀಣ ಪ್ರದೇಶದ ಫಲಾನುಭವಿಗಳನ್ನು ಪರಿಶೀಲಿಸುವ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿ ಮುಖ್ಯಸ್ಥರಿಗಿಂತ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗೆ (ವಿಎಒ) ವಹಿಸಬೇಕೆಂದು ಸರ್ಕಾರ ಶಿಫಾರಸು ಮಾಡಿತ್ತು.

“ನಾವು ಮುಂದಿಟ್ಟಿರುವ ಬೇಡಿಕೆಗಳು ಈಡೇರದ ಕಾರಣ, ಪ್ರಸ್ತುತ ರೂಪದಲ್ಲಿ ರಾಜ್ಯದಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮಯೋಜನೆ ಜಾರಿಗೊಳಿಸಲು ಸಾಧ್ಯವಿಲ್ಲ. ತಮಿಳುನಾಡಿನಲ್ಲಿ ಕುಶಲಕರ್ಮಿಗಳನ್ನು ಸಾಮಾಜಿಕ ನ್ಯಾಯದ ಒಟ್ಟಾರೆ ತತ್ವದಡಿಯಲ್ಲಿ ಸಬಲೀಕರಣಗೊಳಿಸಲು, ಸರ್ಕಾರ ಕುಶಲಕರ್ಮಿಗಳಿಗಾಗಿ ಹೆಚ್ಚು ಒಳಗೊಳ್ಳುವಿಕೆಯ ಮತ್ತು ಸಮಗ್ರ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿದೆ. ಅದು ಜಾತಿ ಆಧಾರಿತ ತಾರತಮ್ಯದಿಂದ ಹೊರತಾಗಿರಲಿದೆ. ನಮ್ಮ ಯೋಜನೆಯು ಜಾತಿ ಅಥವಾ ಕೌಟುಂಬಿಕ ಉದ್ಯೋಗಗಳನ್ನು ಲೆಕ್ಕಿಸದೆ ರಾಜ್ಯದ ಎಲ್ಲಾ ಕುಶಲಕರ್ಮಿಗಳಿಗೆ ಸಮಗ್ರ ಬೆಂಬಲವನ್ನು ನೀಡಲಿದೆ. ಯೋಜನೆಯು ಅವರಿಗೆ ಆರ್ಥಿಕ ನೆರವು, ತರಬೇತಿ ಮತ್ತು ಅವರ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ಸಮಗ್ರವಾಗಿ ಮತ್ತು ಒಳಗೊಳ್ಳುವಿಕೆಯ ಮೂಲಕ ಒದಗಿಸಲಿದೆ” ಎಂದು ಸ್ಟಾಲಿನ್ ಪತ್ರದಲ್ಲಿ ಹೇಳಿದ್ದಾರೆ.

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯನ್ನು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ (MoMSME),ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಸಚಿವಾಲಯ (MSDE)ಮತ್ತು ಹಣಕಾಸು ಸಚಿವಾಲಯ (MoF)ದ ಅಡಿ ಬರುವ ಹಣಕಾಸು ಸೇವೆಗಳ ಇಲಾಖೆ (DFS)ಜಂಟಿಯಾಗಿ 13,000 ಕೋಟಿ ರೂ. ವೆಚ್ಚದಲ್ಲಿ ಜಾರಿಗೊಳಿಸಿದೆ.

ಇದನ್ನೂ ಓದಿ : ಮಧ್ಯಪ್ರದೇಶ | ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗ್ರಾಮ ಪಂಚಾಯತ್ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...