Homeಮುಖಪುಟ'ಪಿಎಂ ವಿಶ್ವಕರ್ಮ ಯೋಜನೆ' ಜಾತಿ ಆಧಾರಿತ ಉದ್ಯೋಗ ಉತ್ತೇಜಿಸುತ್ತದೆ, ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ : ತಮಿಳುನಾಡು ಸಿಎಂ

‘ಪಿಎಂ ವಿಶ್ವಕರ್ಮ ಯೋಜನೆ’ ಜಾತಿ ಆಧಾರಿತ ಉದ್ಯೋಗ ಉತ್ತೇಜಿಸುತ್ತದೆ, ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ : ತಮಿಳುನಾಡು ಸಿಎಂ

- Advertisement -
- Advertisement -

‘ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ'(PMVS) ಜಾತಿ ಆಧಾರಿತ ಉದ್ಯೋಗಗಳ ಕಲ್ಪನೆಯನ್ನು ಉತ್ತೇಜಿಸುತ್ತದೆ. ಆದ್ದರಿಂದ ಅದನ್ನು ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನವೆಂಬರ್ 27ರಂದು ಕೇಂದ್ರಕ್ಕೆ ಪತ್ರ ಬರೆದು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ರಾಜ್ಯ ಸರ್ಕಾರ ಯೋಜನೆಯ ಕುರಿತು ಅಧ್ಯಯನ ನಡೆಸಿದೆ. ಈ ವೇಳೆ ಯೋಜನೆಯು ಸಣ್ಣ ಕುಟುಂಬ ನಡೆಸುವ ಕರಕುಶಲ ಮತ್ತು ಕುಶಲಕರ್ಮಿ ಉದ್ಯೋಗದಲ್ಲಿ ತೊಡಗಿರುವವವರಿಗೆ ಮಾತ್ರ ಲಾಭ ಒದಗಿಸುವುದು ಕಂಡು ಬಂದಿದೆ. ಇದು ಮೂಲಭೂತವಾಗಿ ಕೆಳಜಾತಿಯ ಯುವಕರನ್ನು ಶಿಕ್ಷಣದ ಮೇಲೆ ಕೇಂದ್ರೀಕರಿಸುವ ಬದಲು ಜಾತಿ ಆಧಾರಿತ ಉದ್ಯೋಗಗಳಲ್ಲೇ ಉಳಿಯಲು ಪ್ರೋತ್ಸಾಹಿಸುತ್ತದೆ ಎಂದು ಸಿಎಂ ಪತ್ರದಲ್ಲಿ ಹೇಳಿದ್ದಾರೆ.

ವಿಶ್ವಕರ್ಮ ಯೋಜನೆಯು 15 ಸಾವಿರ ರೂಪಾಯಿ ಟೂಲ್‌ಕಿಟ್‌ ಪ್ರೋತ್ಸಾಹ ಧನದ ಜೊತೆಗೆ ಕೌಶಲ್ಯ ವರ್ಧನೆಗೆ ತರಬೇತಿ ಮತ್ತು ಸಾಲ ಸೌಲಭ್ಯವನ್ನು ಒದಗಿಸುತ್ತದೆ. ಮೊದಲ ಕಂತಿನಲ್ಲಿ ರೂ. 1 ಲಕ್ಷ ಮತ್ತು ಎರಡನೇ ಕಂತಿನಲ್ಲಿ ರೂ. 2 ಲಕ್ಷದವರೆಗೆ ಮೇಲಾಧಾರ-ಮುಕ್ತ ಸಾಲವನ್ನು ಶೇ. 5ರಷ್ಟು ರಿಯಾಯಿತಿ ಬಡ್ಡಿ ದರದಲ್ಲಿ ನೀಡುತ್ತದೆ.

ಯೋಜನೆಯು ಡಿಜಿಟಲ್ ವಹಿವಾಟು ಮತ್ತು ಮಾರ್ಕೆಟಿಂಗ್‌ಗೆ ಪ್ರೋತ್ಸಾಹ ಒದಗಿಸುತ್ತದೆ. ಮರಗೆಲಸ, ದೋಣಿ ತಯಾರಿಕೆ, ಕಬ್ಬಿಣದ ಶಸ್ತ್ರಾಸ್ತ್ರ ತಯಾರಿಕೆ, ಶೂ ತಯಾರಿಕೆ ಸೇರಿದಂತೆ ಕುಟುಂಬ ಪಾರಂಪರ್ಯವಾಗಿ ಬಂದಿರುವ 18 ಕೆಲಸಗಳಿಗೆ ಇದು ಅನ್ವಯಿಸುತ್ತದೆ.

ಸೆಪ್ಟೆಂಬರ್ 17, 2023ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿರುವ ಈ ಯೋಜನೆ ಕುರಿತು ಬಿಜೆಪಿ ಸರ್ಕಾರ ಬಹಳ ಹೆಮ್ಮೆ ವ್ಯಕ್ತಪಡಿಸಿದೆ. ಆದರೆ, ತಮಿಳುನಾಡು ಸರ್ಕಾರ ಯೋಜನೆಯನ್ನು ವಿರೋಧಿಸಿದೆ.

ಒಂದು ಕುಟುಂಬ ಮರಗೆಲಸ ಮಾಡಿಕೊಂಡಿದ್ದರೆ, ಅವರ ಮಕ್ಕಳೂ ಅದೇ ಕೆಲಸ ಮಾಡಿಕೊಂಡು ಹಿಂದೆ ಉಳಿಯುವುದು ಬೇಡ. ಆ ಮಕ್ಕಳು ಆಧುನಿಕ ಯುಗದಲ್ಲಿ ಉನ್ನತ ಶಿಕ್ಷಣ ಪಡೆದು, ಉತ್ತಮ ಕೆಲಸಗಳನ್ನು ಗಿಟ್ಟಿಸಿಕೊಂಡು ಸಂಬಳ ಪಡೆಯುವ ಮೂಲಕ ಸಾಮಾಜಿಕ ಮತ್ತು ಆರ್ಥಿಕವಾಗಿ ಮುಂದೆ ಬರಲಿ ಎಂಬುವುದು ತಮಿಳುನಾಡು ಸರ್ಕಾರದ ವಾದ.

ಯೋಜನೆಯ ಕುರಿತು ಟೀಕೆಗಳು ವ್ಯಕ್ತವಾದಾಗ, ತಮಿಳುನಾಡು ಸರ್ಕಾರ ಅದರ ಸಂಭಾವ್ಯ ಪರಿಣಾಮಗಳನ್ನು ನಿರ್ಣಯಿಸಲು ಸಮಿತಿಯನ್ನು ರಚಿಸಿತ್ತು. ಅದರ ವರದಿ ಆಧಾರಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ವರ್ಷದ ಜನವರಿಯಲ್ಲಿ ನಮ್ಮ ಸರ್ಕಾರ ಯೋಜನೆಯ ಕುರಿತು ಮೂರು ಬೇಡಿಕೆಗಳನ್ನು ಮುಂದಿಟ್ಟಿತ್ತು. ಅದು ಪರಿಹಾರವಾಗದೆ ಉಳಿದಿದೆ ಎಂದು ಸಿಎಂ ಸ್ಟಾಲಿನ್ ತಮ್ಮ ಪತ್ರದಲ್ಲಿ ಕೇಂದ್ರಕ್ಕೆ ಹೇಳಿದ್ದಾರೆ.

ನಿರ್ದಿಷ್ಟ ಕಸುಬಿನಲ್ಲಿ ತೊಡಗಿಸಿಕೊಂಡವರಿಗೆ ಮಾತ್ರ ಯೋಜನೆ ಲಾಭ ಎಂಬ ನಿಯಮವನ್ನು ತೆಗೆದುಹಾಕಿ, ಯಾವುದೇ ಉದ್ಯೋಗ ಮಾಡುವವರೂ ಅರ್ಹರು ಎಂಬ ನಿಯಮ ಅಳವಡಿಸಿ ಎಂದು ವಿಶ್ವಕರ್ಮ ಯೋಜನೆ ಸಂಬಂಧ ತಮಿಳುನಾಡು ಸರ್ಕಾರ ಕೇಂದ್ರವನ್ನು ಆಗ್ರಹಿಸಿತ್ತು.

ಎರಡನೆಯದಾಗಿ, ಫಲಾನುಭವಿಗಳು ತಿಳುವಳಿಕೆಯುಳ್ಳ ನಿರ್ಧಾರವನ್ನು ತೆಗೆದುಕೊಳ್ಳುವಷ್ಟು ಪ್ರಬುದ್ಧರಾಗಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಅರ್ಹತೆಯ ಕನಿಷ್ಠ ವಯಸ್ಸನ್ನು 18 ವರ್ಷದಿಂದ 35 ವರ್ಷಕ್ಕೆ ಏರಿಸಲು ರಾಜ್ಯ ಸರ್ಕಾರ ಪ್ರಸ್ತಾಪಿಸಿತ್ತು.

ಕೊನೆಯದಾಗಿ, ಗ್ರಾಮೀಣ ಪ್ರದೇಶದ ಫಲಾನುಭವಿಗಳನ್ನು ಪರಿಶೀಲಿಸುವ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿ ಮುಖ್ಯಸ್ಥರಿಗಿಂತ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗೆ (ವಿಎಒ) ವಹಿಸಬೇಕೆಂದು ಸರ್ಕಾರ ಶಿಫಾರಸು ಮಾಡಿತ್ತು.

“ನಾವು ಮುಂದಿಟ್ಟಿರುವ ಬೇಡಿಕೆಗಳು ಈಡೇರದ ಕಾರಣ, ಪ್ರಸ್ತುತ ರೂಪದಲ್ಲಿ ರಾಜ್ಯದಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮಯೋಜನೆ ಜಾರಿಗೊಳಿಸಲು ಸಾಧ್ಯವಿಲ್ಲ. ತಮಿಳುನಾಡಿನಲ್ಲಿ ಕುಶಲಕರ್ಮಿಗಳನ್ನು ಸಾಮಾಜಿಕ ನ್ಯಾಯದ ಒಟ್ಟಾರೆ ತತ್ವದಡಿಯಲ್ಲಿ ಸಬಲೀಕರಣಗೊಳಿಸಲು, ಸರ್ಕಾರ ಕುಶಲಕರ್ಮಿಗಳಿಗಾಗಿ ಹೆಚ್ಚು ಒಳಗೊಳ್ಳುವಿಕೆಯ ಮತ್ತು ಸಮಗ್ರ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿದೆ. ಅದು ಜಾತಿ ಆಧಾರಿತ ತಾರತಮ್ಯದಿಂದ ಹೊರತಾಗಿರಲಿದೆ. ನಮ್ಮ ಯೋಜನೆಯು ಜಾತಿ ಅಥವಾ ಕೌಟುಂಬಿಕ ಉದ್ಯೋಗಗಳನ್ನು ಲೆಕ್ಕಿಸದೆ ರಾಜ್ಯದ ಎಲ್ಲಾ ಕುಶಲಕರ್ಮಿಗಳಿಗೆ ಸಮಗ್ರ ಬೆಂಬಲವನ್ನು ನೀಡಲಿದೆ. ಯೋಜನೆಯು ಅವರಿಗೆ ಆರ್ಥಿಕ ನೆರವು, ತರಬೇತಿ ಮತ್ತು ಅವರ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ಸಮಗ್ರವಾಗಿ ಮತ್ತು ಒಳಗೊಳ್ಳುವಿಕೆಯ ಮೂಲಕ ಒದಗಿಸಲಿದೆ” ಎಂದು ಸ್ಟಾಲಿನ್ ಪತ್ರದಲ್ಲಿ ಹೇಳಿದ್ದಾರೆ.

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯನ್ನು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ (MoMSME),ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಸಚಿವಾಲಯ (MSDE)ಮತ್ತು ಹಣಕಾಸು ಸಚಿವಾಲಯ (MoF)ದ ಅಡಿ ಬರುವ ಹಣಕಾಸು ಸೇವೆಗಳ ಇಲಾಖೆ (DFS)ಜಂಟಿಯಾಗಿ 13,000 ಕೋಟಿ ರೂ. ವೆಚ್ಚದಲ್ಲಿ ಜಾರಿಗೊಳಿಸಿದೆ.

ಇದನ್ನೂ ಓದಿ : ಮಧ್ಯಪ್ರದೇಶ | ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗ್ರಾಮ ಪಂಚಾಯತ್ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...