Homeಮುಖಪುಟನಿಲ್ಲದ ಪಿಎಂಸಿ ಬ್ಯಾಂಕ್ ಗೋಳಾಟ: ಒತ್ತಡಕ್ಕೆ ಒಂದೇ ದಿನ ಮೂವರು ಗ್ರಾಹಕರ ಸಾವು

ನಿಲ್ಲದ ಪಿಎಂಸಿ ಬ್ಯಾಂಕ್ ಗೋಳಾಟ: ಒತ್ತಡಕ್ಕೆ ಒಂದೇ ದಿನ ಮೂವರು ಗ್ರಾಹಕರ ಸಾವು

- Advertisement -
- Advertisement -

ಪಂಜಾಬ್ ಮತ್ತು ಮಹಾರಾಷ್ಟ್ರ ಕೋ-ಆಪರೇಟಿವ್ ಬ್ಯಾಂಕ್ (ಪಿಎಂಸಿ) ನಲ್ಲಿ ನಡೆಸಿದ ಅಕ್ರಮ ಮತ್ತು ಭ್ರಷ್ಟಾಚಾರ ಹಿನ್ನೆಲೆಯಲ್ಲಿ ಬ್ಯಾಂಕಿನ ಮೇಲೆ ಆರ್.ಬಿ.ಐ  ಹಲವು ನಿರ್ಭಂದದ ಕ್ರಮ ಕೈಗೊಳ್ಳಲಾಗಿತ್ತು. ಹಣ ಪಡೆಯಲು ತೀವ್ರ ಮಿತಿಯನ್ನು ಹೇರಲಾಗಿತ್ತು. ಇದರಿಂದ ಹಣ ತೆಗೆಯಲು ಸಾಧ್ಯವಾಗದೇ, ಹಣ ವಾಪಸ್‌ ಬರುತ್ತದೆಯೋ, ಇಲ್ಲವೋ ಎಂಬ ಒತ್ತಡಕ್ಕೆ ಒಳಗಾಗಿ ಮುಂಬೈನಲ್ಲಿ ಮೂವರು ಖಾತೆದಾರರು ಮೃತಪಟ್ಟಿರುವ ದುರ್ಘಟನೆ ಜರುಗಿದೆ.

ಮೃತರಲ್ಲಿ ಒಬ್ಬರು ಜೆಟ್ ಏರ್ ವೇಸ್ ನೌಕರರಾಗಿದ್ದು ಇತ್ತೀಚೆಗೆ ತಮ್ಮ ಉದ್ಯೋಗ ಕಳೆದುಕೊಂಡಿದ್ದರು. ಇದೇ ಸಂದರ್ಭದಲ್ಲಿ ಬ್ಯಾಂಕಿನಲ್ಲಾದ ಘಟನೆಗಳು ಅವರಲ್ಲಿ ಆತಂಕ ಉಂಟುಮಾಡಿದ್ದು ಸಾವಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ. ಜೆಟ್ ಏರ್ ವೇಸ್ ನಲ್ಲಿ ಮಾಜಿ ಹಿರಿಯ ಟೆಕ್ನಿಷಿಯನ್ ಆಗಿದ್ದ ಸಂಜಯ್ ಗುಲಾಟಿಯವರು ಊಟ ಸೇವಿಸಿದ ನಂತರ ಮನೆಯಲ್ಲೇ ಮೃತಪಟ್ಟಿದ್ದಾರೆ ಎಂದು ಅವರ ಪತ್ನಿ ತಿಳಿಸಿದ್ದಾರೆ.

ಬ್ಯಾಂಕ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿಯೂ ಸಹ ಸಂಜಯ್ ಗುಲಾಟಿ ಭಾಗಿಯಾಗಿದ್ದರು. ಗುಲಾಟಿ ಕೇವಲ ಪಿ.ಎಂ.ಸಿ ಬ್ಯಾಂಕ್‌ನಲ್ಲಿ ಮಾತ್ರ ಖಾತೆ ಹೊಂದಿದ್ದರು, ಎಲ್ಲಾ ಹಣ ಅದೇ ಬ್ಯಾಂಕ್‌ನಲ್ಲಿತ್ತು. ಗುಲಾಟಿ ಉದ್ಯಮದಲ್ಲಿ ನಷ್ಟ ಅನುಭವಿಸಿದ್ದರು ಜೊತೆಗೆ ದೀಪಾವಳಿ ಹತ್ತಿರ ಬರುತ್ತಿದ್ದಂತೆ ತಮ್ಮ ವ್ಯವಹಾರವನ್ನು ತಹಬದಿಗೆ ತರಲು ಸಾಕಷ್ಟು ಹಣದ ಅಗತ್ಯತೆ ಇತ್ತು. ಆದರೆ ಹಣವನ್ನು ಪಿಎಂಸಿ ಬ್ಯಾಂಕಿನಿಂದ ತೆಗೆಯಲಾರದೇ, ಇತ್ತ ವ್ಯವಹಾರವನ್ನು ಸರಿದಾರಿಗೆ ತರಲಾರದೆ ಒತ್ತಡಕ್ಕೆ ಒಳಗಾಗಿ ಸಾವನಪ್ಪಿದ್ದಾರೆ ಎಂದು ಗುಲಾಟಿಯವರ ತಂದೆ ಹೇಳಿದ್ದಾರೆ.

ಪಿಎಂಸಿ ಬ್ಯಾಂಕಿನ ಮತ್ತೊಬ್ಬ ಖಾತೆದಾರರಾದ ಫತ್ತೋಮಲ್ ಪಂಜಾಬಿ ಎಂಬುವವರು, ಮುಲಂಡ್‌ನ ಸಿಂಧಿ ಕಾಲೋನಿಯಲ್ಲಿರುವ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಕುಸಿದು ಬಿದ್ದಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

39 ವರ್ಷದ ವೈದ್ಯೆ ಡಾ.ಯೋಗಿತಾ ಬಿಜ್ಲಾನಿ ಎಂಬುವವರು ಸಹ ಇದೇ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದರು. ಕಳೆದ ವರ್ಷ ಅಮೆರಿಕದಿಂದ ಮುಂಬೈಗೆ ಬಂದಿದ್ದ ಅವರು ಇಲ್ಲಿಯೇ ತಂಗಿದ್ದರು. ಬ್ಯಾಂಕಿನಲ್ಲಾದ ಬೆಳವಣಿಗೆಗಳು ಅವರನ್ನು ಕಂಗೆಡಿಸಿದ್ದವು. ಹಾಗಾಗಿ ಅವರು ತೀವ್ರ ಮತ್ತು ಬರುವ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯೋಗಿತಾ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ನಡುವೆ ಪಿಎಂಸಿ ಬ್ಯಾಂಕಿನ ಗ್ರಾಹಕರು ತಮ್ಮ ಹಣ ವಾಪಸ್‌ ಕೊಡಿ ಎಂದು ಮೋದಿ ಸರ್ಕಾರವನ್ನು ಅಂಗಲಾಚುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ದಿನನಿತ್ಯ ಹರಿದಾಡುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...