Homeಮುಖಪುಟನಿಲ್ಲದ ಪಿಎಂಸಿ ಬ್ಯಾಂಕ್ ಗೋಳಾಟ: ಒತ್ತಡಕ್ಕೆ ಒಂದೇ ದಿನ ಮೂವರು ಗ್ರಾಹಕರ ಸಾವು

ನಿಲ್ಲದ ಪಿಎಂಸಿ ಬ್ಯಾಂಕ್ ಗೋಳಾಟ: ಒತ್ತಡಕ್ಕೆ ಒಂದೇ ದಿನ ಮೂವರು ಗ್ರಾಹಕರ ಸಾವು

- Advertisement -
- Advertisement -

ಪಂಜಾಬ್ ಮತ್ತು ಮಹಾರಾಷ್ಟ್ರ ಕೋ-ಆಪರೇಟಿವ್ ಬ್ಯಾಂಕ್ (ಪಿಎಂಸಿ) ನಲ್ಲಿ ನಡೆಸಿದ ಅಕ್ರಮ ಮತ್ತು ಭ್ರಷ್ಟಾಚಾರ ಹಿನ್ನೆಲೆಯಲ್ಲಿ ಬ್ಯಾಂಕಿನ ಮೇಲೆ ಆರ್.ಬಿ.ಐ  ಹಲವು ನಿರ್ಭಂದದ ಕ್ರಮ ಕೈಗೊಳ್ಳಲಾಗಿತ್ತು. ಹಣ ಪಡೆಯಲು ತೀವ್ರ ಮಿತಿಯನ್ನು ಹೇರಲಾಗಿತ್ತು. ಇದರಿಂದ ಹಣ ತೆಗೆಯಲು ಸಾಧ್ಯವಾಗದೇ, ಹಣ ವಾಪಸ್‌ ಬರುತ್ತದೆಯೋ, ಇಲ್ಲವೋ ಎಂಬ ಒತ್ತಡಕ್ಕೆ ಒಳಗಾಗಿ ಮುಂಬೈನಲ್ಲಿ ಮೂವರು ಖಾತೆದಾರರು ಮೃತಪಟ್ಟಿರುವ ದುರ್ಘಟನೆ ಜರುಗಿದೆ.

ಮೃತರಲ್ಲಿ ಒಬ್ಬರು ಜೆಟ್ ಏರ್ ವೇಸ್ ನೌಕರರಾಗಿದ್ದು ಇತ್ತೀಚೆಗೆ ತಮ್ಮ ಉದ್ಯೋಗ ಕಳೆದುಕೊಂಡಿದ್ದರು. ಇದೇ ಸಂದರ್ಭದಲ್ಲಿ ಬ್ಯಾಂಕಿನಲ್ಲಾದ ಘಟನೆಗಳು ಅವರಲ್ಲಿ ಆತಂಕ ಉಂಟುಮಾಡಿದ್ದು ಸಾವಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ. ಜೆಟ್ ಏರ್ ವೇಸ್ ನಲ್ಲಿ ಮಾಜಿ ಹಿರಿಯ ಟೆಕ್ನಿಷಿಯನ್ ಆಗಿದ್ದ ಸಂಜಯ್ ಗುಲಾಟಿಯವರು ಊಟ ಸೇವಿಸಿದ ನಂತರ ಮನೆಯಲ್ಲೇ ಮೃತಪಟ್ಟಿದ್ದಾರೆ ಎಂದು ಅವರ ಪತ್ನಿ ತಿಳಿಸಿದ್ದಾರೆ.

ಬ್ಯಾಂಕ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿಯೂ ಸಹ ಸಂಜಯ್ ಗುಲಾಟಿ ಭಾಗಿಯಾಗಿದ್ದರು. ಗುಲಾಟಿ ಕೇವಲ ಪಿ.ಎಂ.ಸಿ ಬ್ಯಾಂಕ್‌ನಲ್ಲಿ ಮಾತ್ರ ಖಾತೆ ಹೊಂದಿದ್ದರು, ಎಲ್ಲಾ ಹಣ ಅದೇ ಬ್ಯಾಂಕ್‌ನಲ್ಲಿತ್ತು. ಗುಲಾಟಿ ಉದ್ಯಮದಲ್ಲಿ ನಷ್ಟ ಅನುಭವಿಸಿದ್ದರು ಜೊತೆಗೆ ದೀಪಾವಳಿ ಹತ್ತಿರ ಬರುತ್ತಿದ್ದಂತೆ ತಮ್ಮ ವ್ಯವಹಾರವನ್ನು ತಹಬದಿಗೆ ತರಲು ಸಾಕಷ್ಟು ಹಣದ ಅಗತ್ಯತೆ ಇತ್ತು. ಆದರೆ ಹಣವನ್ನು ಪಿಎಂಸಿ ಬ್ಯಾಂಕಿನಿಂದ ತೆಗೆಯಲಾರದೇ, ಇತ್ತ ವ್ಯವಹಾರವನ್ನು ಸರಿದಾರಿಗೆ ತರಲಾರದೆ ಒತ್ತಡಕ್ಕೆ ಒಳಗಾಗಿ ಸಾವನಪ್ಪಿದ್ದಾರೆ ಎಂದು ಗುಲಾಟಿಯವರ ತಂದೆ ಹೇಳಿದ್ದಾರೆ.

ಪಿಎಂಸಿ ಬ್ಯಾಂಕಿನ ಮತ್ತೊಬ್ಬ ಖಾತೆದಾರರಾದ ಫತ್ತೋಮಲ್ ಪಂಜಾಬಿ ಎಂಬುವವರು, ಮುಲಂಡ್‌ನ ಸಿಂಧಿ ಕಾಲೋನಿಯಲ್ಲಿರುವ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಕುಸಿದು ಬಿದ್ದಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

39 ವರ್ಷದ ವೈದ್ಯೆ ಡಾ.ಯೋಗಿತಾ ಬಿಜ್ಲಾನಿ ಎಂಬುವವರು ಸಹ ಇದೇ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದರು. ಕಳೆದ ವರ್ಷ ಅಮೆರಿಕದಿಂದ ಮುಂಬೈಗೆ ಬಂದಿದ್ದ ಅವರು ಇಲ್ಲಿಯೇ ತಂಗಿದ್ದರು. ಬ್ಯಾಂಕಿನಲ್ಲಾದ ಬೆಳವಣಿಗೆಗಳು ಅವರನ್ನು ಕಂಗೆಡಿಸಿದ್ದವು. ಹಾಗಾಗಿ ಅವರು ತೀವ್ರ ಮತ್ತು ಬರುವ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯೋಗಿತಾ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ನಡುವೆ ಪಿಎಂಸಿ ಬ್ಯಾಂಕಿನ ಗ್ರಾಹಕರು ತಮ್ಮ ಹಣ ವಾಪಸ್‌ ಕೊಡಿ ಎಂದು ಮೋದಿ ಸರ್ಕಾರವನ್ನು ಅಂಗಲಾಚುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ದಿನನಿತ್ಯ ಹರಿದಾಡುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...