Homeಮುಖಪುಟನಿಲ್ಲದ ಪಿಎಂಸಿ ಬ್ಯಾಂಕ್ ಗೋಳಾಟ: ಒತ್ತಡಕ್ಕೆ ಒಂದೇ ದಿನ ಮೂವರು ಗ್ರಾಹಕರ ಸಾವು

ನಿಲ್ಲದ ಪಿಎಂಸಿ ಬ್ಯಾಂಕ್ ಗೋಳಾಟ: ಒತ್ತಡಕ್ಕೆ ಒಂದೇ ದಿನ ಮೂವರು ಗ್ರಾಹಕರ ಸಾವು

- Advertisement -
- Advertisement -

ಪಂಜಾಬ್ ಮತ್ತು ಮಹಾರಾಷ್ಟ್ರ ಕೋ-ಆಪರೇಟಿವ್ ಬ್ಯಾಂಕ್ (ಪಿಎಂಸಿ) ನಲ್ಲಿ ನಡೆಸಿದ ಅಕ್ರಮ ಮತ್ತು ಭ್ರಷ್ಟಾಚಾರ ಹಿನ್ನೆಲೆಯಲ್ಲಿ ಬ್ಯಾಂಕಿನ ಮೇಲೆ ಆರ್.ಬಿ.ಐ  ಹಲವು ನಿರ್ಭಂದದ ಕ್ರಮ ಕೈಗೊಳ್ಳಲಾಗಿತ್ತು. ಹಣ ಪಡೆಯಲು ತೀವ್ರ ಮಿತಿಯನ್ನು ಹೇರಲಾಗಿತ್ತು. ಇದರಿಂದ ಹಣ ತೆಗೆಯಲು ಸಾಧ್ಯವಾಗದೇ, ಹಣ ವಾಪಸ್‌ ಬರುತ್ತದೆಯೋ, ಇಲ್ಲವೋ ಎಂಬ ಒತ್ತಡಕ್ಕೆ ಒಳಗಾಗಿ ಮುಂಬೈನಲ್ಲಿ ಮೂವರು ಖಾತೆದಾರರು ಮೃತಪಟ್ಟಿರುವ ದುರ್ಘಟನೆ ಜರುಗಿದೆ.

ಮೃತರಲ್ಲಿ ಒಬ್ಬರು ಜೆಟ್ ಏರ್ ವೇಸ್ ನೌಕರರಾಗಿದ್ದು ಇತ್ತೀಚೆಗೆ ತಮ್ಮ ಉದ್ಯೋಗ ಕಳೆದುಕೊಂಡಿದ್ದರು. ಇದೇ ಸಂದರ್ಭದಲ್ಲಿ ಬ್ಯಾಂಕಿನಲ್ಲಾದ ಘಟನೆಗಳು ಅವರಲ್ಲಿ ಆತಂಕ ಉಂಟುಮಾಡಿದ್ದು ಸಾವಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ. ಜೆಟ್ ಏರ್ ವೇಸ್ ನಲ್ಲಿ ಮಾಜಿ ಹಿರಿಯ ಟೆಕ್ನಿಷಿಯನ್ ಆಗಿದ್ದ ಸಂಜಯ್ ಗುಲಾಟಿಯವರು ಊಟ ಸೇವಿಸಿದ ನಂತರ ಮನೆಯಲ್ಲೇ ಮೃತಪಟ್ಟಿದ್ದಾರೆ ಎಂದು ಅವರ ಪತ್ನಿ ತಿಳಿಸಿದ್ದಾರೆ.

ಬ್ಯಾಂಕ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿಯೂ ಸಹ ಸಂಜಯ್ ಗುಲಾಟಿ ಭಾಗಿಯಾಗಿದ್ದರು. ಗುಲಾಟಿ ಕೇವಲ ಪಿ.ಎಂ.ಸಿ ಬ್ಯಾಂಕ್‌ನಲ್ಲಿ ಮಾತ್ರ ಖಾತೆ ಹೊಂದಿದ್ದರು, ಎಲ್ಲಾ ಹಣ ಅದೇ ಬ್ಯಾಂಕ್‌ನಲ್ಲಿತ್ತು. ಗುಲಾಟಿ ಉದ್ಯಮದಲ್ಲಿ ನಷ್ಟ ಅನುಭವಿಸಿದ್ದರು ಜೊತೆಗೆ ದೀಪಾವಳಿ ಹತ್ತಿರ ಬರುತ್ತಿದ್ದಂತೆ ತಮ್ಮ ವ್ಯವಹಾರವನ್ನು ತಹಬದಿಗೆ ತರಲು ಸಾಕಷ್ಟು ಹಣದ ಅಗತ್ಯತೆ ಇತ್ತು. ಆದರೆ ಹಣವನ್ನು ಪಿಎಂಸಿ ಬ್ಯಾಂಕಿನಿಂದ ತೆಗೆಯಲಾರದೇ, ಇತ್ತ ವ್ಯವಹಾರವನ್ನು ಸರಿದಾರಿಗೆ ತರಲಾರದೆ ಒತ್ತಡಕ್ಕೆ ಒಳಗಾಗಿ ಸಾವನಪ್ಪಿದ್ದಾರೆ ಎಂದು ಗುಲಾಟಿಯವರ ತಂದೆ ಹೇಳಿದ್ದಾರೆ.

ಪಿಎಂಸಿ ಬ್ಯಾಂಕಿನ ಮತ್ತೊಬ್ಬ ಖಾತೆದಾರರಾದ ಫತ್ತೋಮಲ್ ಪಂಜಾಬಿ ಎಂಬುವವರು, ಮುಲಂಡ್‌ನ ಸಿಂಧಿ ಕಾಲೋನಿಯಲ್ಲಿರುವ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಕುಸಿದು ಬಿದ್ದಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

39 ವರ್ಷದ ವೈದ್ಯೆ ಡಾ.ಯೋಗಿತಾ ಬಿಜ್ಲಾನಿ ಎಂಬುವವರು ಸಹ ಇದೇ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದರು. ಕಳೆದ ವರ್ಷ ಅಮೆರಿಕದಿಂದ ಮುಂಬೈಗೆ ಬಂದಿದ್ದ ಅವರು ಇಲ್ಲಿಯೇ ತಂಗಿದ್ದರು. ಬ್ಯಾಂಕಿನಲ್ಲಾದ ಬೆಳವಣಿಗೆಗಳು ಅವರನ್ನು ಕಂಗೆಡಿಸಿದ್ದವು. ಹಾಗಾಗಿ ಅವರು ತೀವ್ರ ಮತ್ತು ಬರುವ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯೋಗಿತಾ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ನಡುವೆ ಪಿಎಂಸಿ ಬ್ಯಾಂಕಿನ ಗ್ರಾಹಕರು ತಮ್ಮ ಹಣ ವಾಪಸ್‌ ಕೊಡಿ ಎಂದು ಮೋದಿ ಸರ್ಕಾರವನ್ನು ಅಂಗಲಾಚುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ದಿನನಿತ್ಯ ಹರಿದಾಡುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...