HomeಮುಖಪುಟPMLA ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯ: ಸುಪ್ರೀಂ ಕೋರ್ಟ್

PMLA ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯ: ಸುಪ್ರೀಂ ಕೋರ್ಟ್

- Advertisement -
- Advertisement -

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 197(1) ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಸರ್ಕಾರದ ಪೂರ್ವಾನುಮತಿ ಅಗತ್ಯವಾಗಿದ್ದು, ಇದೆ ನಿಯಮ ಮನಿ ಲಾಂಡರಿಂಗ್ ತಡೆ ಕಾಯ್ದೆ ( PMLA ) ಯ ಮನಿ ಲಾಂಡರಿಂಗ್ ಪ್ರಕರಣಗಳಿಗೂ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ ಎಂದು ಬುಧವಾರ ಲೈವ್ ಲಾ ವರದಿ ಮಾಡಿದೆ.

ಮಾಜಿ ಐಎಎಸ್ ಅಧಿಕಾರಿಗಳಾದ ಬಿಭು ಪ್ರಸಾದ್ ಆಚಾರ್ಯ ಮತ್ತು ಆದಿತ್ಯನಾಥ್ ದಾಸ್ ವಿರುದ್ಧ ದಾಖಲಿಸಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ರದ್ದುಗೊಳಿಸಿದ ತೆಲಂಗಾಣ ಹೈಕೋರ್ಟ್‌ನ ತೀರ್ಪನ್ನು ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಅಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ಎತ್ತಿ ಹಿಡಿದಿದೆ. ಇಬ್ಬರು ಮಾಜಿ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಪೂರ್ವಾನುಮತಿ ಪಡೆದಿಲ್ಲ ಎಂದು ಪೀಠ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಜೊತೆಗೆ ನಡೆಸಿದ ಪಿತೂರಿಯಲ್ಲಿ ಆಚಾರ್ಯ ಅವರು ಇಂದೂ ಟೆಕ್ಜೋನ್ ಪ್ರೈವೇಟ್ ಲಿಮಿಟೆಡ್‌ಗೆ ವಿಶೇಷ ಆರ್ಥಿಕ ವಲಯ ಯೋಜನೆಗಾಗಿ 250 ಎಕರೆ ಭೂಮಿಯನ್ನು ಕಾನೂನುಬಾಹಿರವಾಗಿ ಮಂಜೂರು ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿತ್ತು. ಹಣ ಅಕ್ರಮ ವರ್ಗಾವಣೆಯಲ್ಲಿ ಪರೋಕ್ಷವಾಗಿ ಭಾಗಿಯಾಗಿರುವ ಆರೋಪ ಕೂಡಾ ಆಚಾರ್ಯ ಅವರ ಮೇಲಿದೆ. PMLA

ಜೊತೆಗೆ ಆಗ ತೆಲಂಗಾಣದ ನೀರಾವರಿ ಮತ್ತು ಸಿಎಡಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ದಾಸ್ ಅವರು ಕಾಗ್ನಾ ನದಿಯಿಂದ ಇಂಡಿಯಾ ಸಿಮೆಂಟ್ ಲಿಮಿಟೆಡ್‌ಗೆ ಹೆಚ್ಚುವರಿ 10 ಲಕ್ಷ ಲೀಟರ್ ನೀರನ್ನು ಅಕ್ರಮವಾಗಿ ಹಂಚಿಕೆ ಮಾಡಲು ಜಗನ್ಮೋಹನ್ ರೆಡ್ಡಿ ಅವರೊಂದಿಗೆ ಸಂಚು ರೂಪಿಸಿದ್ದರು ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

2019ರ ಜನವರಿ 21 ರಂದು ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ಇಲ್ಲದಿರುವುದನ್ನು ಸೂಚಿಸಿದ್ದ ತೆಲಂಗಾಣ ಹೈಕೋರ್ಟ್ ಮೊಕದ್ದಮೆಯನ್ನು ರದ್ದುಗೊಳಿಸಲು ಅನುಮತಿ ನೀಡಿತ್ತು. ಆದರೆ ಈ ತೀರ್ಪಿನ ವಿರುದ್ಧ ಜಾರಿ ನಿರ್ದೇಶನಾಲಯವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಮನಿ ಲಾಂಡರಿಂಗ್ ತಡೆ ಕಾಯಿದೆಯ 71ನೇ ಸೆಕ್ಷನ್, ಕ್ರಿಮಿನಲ್ ಪ್ರೊಸೀಜರ್ ಕೋಡ್ ಸೇರಿದಂತೆ ಇತರ ಕಾನೂನುಗಳಿಗಿಂತ ಆದ್ಯತೆ ಇವೆ ಎಂದು ಅದು ವಾದಿಸಿದೆ. ಆದರೆ ನ್ಯಾಯಾಲಯವು ಜಾರಿ ನಿರ್ದೇಶನಾಲಯದ ಈ ವಾದವನ್ನು ನಿರಾಕರಿಸಿದೆ.

ಇದನ್ನೂ ಓದಿ: ಕೋಮು ಸೌಹಾರ್ದಕ್ಕೆ ಧಕ್ಕೆ, ಮೌಢ್ಯ ಪ್ರಚಾರ : ಧೀರೇಂದ್ರ ಶಾಸ್ತ್ರಿ ಸಂದರ್ಶನ ತೆಗೆದುಹಾಕುವಂತೆ ನ್ಯೂಸ್ 18ಗೆ ಎನ್‌ಬಿಡಿಎಸ್ಎ ಸೂಚನೆ

ಕೋಮು ಸೌಹಾರ್ದಕ್ಕೆ ಧಕ್ಕೆ, ಮೌಢ್ಯ ಪ್ರಚಾರ : ಧೀರೇಂದ್ರ ಶಾಸ್ತ್ರಿ ಸಂದರ್ಶನ ತೆಗೆದುಹಾಕುವಂತೆ ನ್ಯೂಸ್ 18ಗೆ ಎನ್‌ಬಿಡಿಎಸ್ಎ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...