Homeಮುಖಪುಟತಪ್ಪು ದಾರಿಗೆಳೆಯುವ ಜಾಹೀರಾತು: ಪತಂಜಲಿ ವಿರುದ್ಧ ಕ್ರಮಕ್ಕೆ PMO ಸೂಚನೆ

ತಪ್ಪು ದಾರಿಗೆಳೆಯುವ ಜಾಹೀರಾತು: ಪತಂಜಲಿ ವಿರುದ್ಧ ಕ್ರಮಕ್ಕೆ PMO ಸೂಚನೆ

- Advertisement -
- Advertisement -

ಬಾಬಾ ರಾಮ್ ದೇವ್ ಅವರ ಪತಂಜಲಿ ಆಯುರ್ವೇದ ‘ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನಿಯಂತ್ರಿಸುವ ಕಾಯ್ದೆಯನ್ನು ಪದೇ ಪದೇ ಉಲ್ಲಂಘಿಸಿರುವುದಕ್ಕೆ’ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪ್ರಧಾನಿ ಮಂತ್ರಿ ಕಚೇರಿ ಆಯುಷ್ ಸಚಿವಾಲಯಕ್ಕೆ ನಿರ್ದೇಶಿಸಿದೆ.

ಈ ಕುರಿತು ಜನವರಿ 24ರಂದು ಆಯುಷ್ ಸಚಿವಾಲಯಕ್ಕೆ ಪಿಎಂಒ ನಿರ್ದೇಶನ  ನೀಡಿದ್ದು, ಫೆಬ್ರವರಿ 2022 ರಿಂದ ಬಾಕಿ ಉಳಿದಿರುವ ವಿಷಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸಚಿವಾಲಯವು ಉತ್ತರಾಖಂಡ ಆಯುಷ್ ಇಲಾಖೆಗೆ ಸೂಚಿಸಿದೆ.

ಪತಂಜಲಿ ಮಧುಮೇಹ, ಬೊಜ್ಜು, ಥೈರಾಯ್ಡ್ ಮತ್ತು ಹೃದ್ರೋಗಗಳ ಔಷಧಗಳ ಕುರಿತು ತಪ್ಪುದಾರಿಗೆಳೆಯುವ ಜಾಹೀರಾತು ನೀಡುತ್ತಿದೆ ಎಂದು ಹಲವು ಆರ್‌ಟಿಐ ಮಾಹಿತಿ ಬಳಿಕವೂ ಆಯುಷ್ ಸಚಿವಾಲಯ ಮತ್ತು ಉತ್ತರಾಖಂಡ ರಾಜ್ಯ ಪರವಾನಗಿ ಪ್ರಾಧಿಕಾರ (SLA) ಎರಡೂ ಮೌನವಾಗಿತ್ತು. ಡೆಹ್ರಾಡೂನ್‌ನಲ್ಲಿನ ಆಯುರ್ವೇದ ಮತ್ತು ಯುನಾನಿ ಸೇವೆಗಳು ನಿರ್ದೇಶಕರಿಗೆ ಬರೆದ ಪತ್ರದಲ್ಲಿ, ದಿವ್ಯ ಫಾರ್ಮಸಿಯಿಂದ ಔಷಧ ಹಾಗೂ ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಕಾಯ್ದೆ)-1954ರ ನಿರಂತರ ಉಲ್ಲಂಘನೆಗೆ ಸಂಬಂಧಿಸಿ ವಿಷಯವು ಉತ್ತರಾಖಂಡದ ರಾಜ್ಯ ಪರವಾನಿಗೆ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುತ್ತದೆ. ಆದ್ದರಿಂದ ಈ ವಿಷಯವನ್ನು ಪರಿಶೀಲಿಸುವಂತೆ, ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಾಗೂ ಈ ಸಚಿವಾಲಯದ ಸೂಚನೆಯಂತೆ ಮಾಹಿತಿಯನ್ನು ಅರ್ಜಿದಾರರಿಗೆ ತಿಳಿಸುವಂತೆ ಫೆಬ್ರವರಿ 2ರಂದು ಸೂಚಿಸಲಾಗಿದೆ.

ಪತಂಜಲಿ ಆಯುರ್ವೇದ DMR (OA) ಕಾಯಿದೆ- 1954ರ ಮತ್ತೆ ಮತ್ತೆ ಉಲ್ಲಂಘನೆಯ ಬಗ್ಗೆ RTI ಕಾರ್ಯಕರ್ತ ಡಾ ಕೆ ವಿ ಬಾಬು ಅವರು ಜನವರಿ 15 ರಂದು ಪ್ರಧಾನ ಮಂತ್ರಿಗಳ ಕಚೇರಿಗೆ (PMO) ದೂರು ನೀಡಿದ ನಂತರ ಉತ್ತರಾಖಂಡ SLAಗೆ ನಿರ್ದೇಶನಗಳನ್ನು ನೀಡಲಾಗಿದೆ. ಮಧ್ಯಸ್ಥಿಕೆಗಾಗಿ ನಾನು ಪಿಎಂಒಗೆ ಕೃತಜ್ಞನಾಗಿದ್ದೇನೆ ಮತ್ತು ಇದು ಪತಂಜಲಿ ಆಯುರ್ವೇದ ಅಕ್ರಮ ಜಾಹೀರಾತುಗಳನ್ನು ಕೊನೆಗೊಳಿಸುತ್ತದೆ ಎಂದು ಭಾವಿಸುತ್ತೇನೆ ಎಂದು ಬಾಬು ಹೇಳಿದರು. ಫೆಬ್ರವರಿ 2022ರಿಂದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ), ಕೇಂದ್ರ ಆಯುಷ್ ಸಚಿವಾಲಯ ಮತ್ತು ಉತ್ತರಾಖಂಡದ ಎಸ್‌ಎಲ್‌ಎನಲ್ಲಿ ಈ ಕುರಿತ ದೂರುಗಳು ಬಾಕಿ ಉಳಿದಿವೆ ಎಂದು ಬಾಬು ಹೇಳಿದ್ದಾರೆ.

ಆಯುಷ್ ಸಚಿವಾಲಯ ಸಮಸ್ಯೆಯ ಬಗ್ಗೆ ಕ್ರಮ ಕೈಗೊಳ್ಳದೆ ಮುಂದೂಡುತ್ತಿದೆ. ಪದೇ ಪದೇ ಮ್ಯಾಜಿಕ್ ರೆಮಿಡೀಸ್ ಆಕ್ಟ್‌ನ ಉಲ್ಲಂಘನೆಗಳು ನಡೆಯುತ್ತಿದ್ದರೂ SLA ಯಾವುದೇ ಕ್ರಮವನ್ನು ತೆಗೆದುಕೊಳ್ಳುತ್ತಿಲ್ಲ. ಆಯುಷ್ ಸಚಿವಾಲಯವು ಪತಂಜಲಿ ವಿರುದ್ಧ ಕ್ರಮಕ್ಕಾಗಿ ಉತ್ತರಾಖಂಡ ಎಸ್‌ಎಲ್‌ಎಗೆ ಕನಿಷ್ಠ 4 ಬಾರಿ ಪತ್ರ ಬರೆದಿದೆ ಆದರೆ ಏನೂ ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.

ಬಾಬು ಅವರು ಕೇಂದ್ರ ಆಯುಷ್ ಸಚಿವ ಸರ್ಬಾನಂದ ಸೋನೋವಾಲ್ ಅವರೊಂದಿಗೆ ಹಲವು ಬಾರಿ ಈ ವಿಚಾರವನ್ನು ಪ್ರಸ್ತಾಪಿಸಿದ್ದರು. ಸಂಸದರಾದ ಡಾ ವಿ ಶಿವದಾಸನ್ ಮತ್ತು ಕಾರ್ತಿ ಪಿ ಚಿದಂಬರಂ ಕಳೆದ ವರ್ಷವೂ ಈ ವಿಷಯವನ್ನು ಆಯುಷ್ ಸಚಿವಾಲಯದ ಮುಂದೆ ಪ್ರಸ್ತಾಪಿಸಿದ್ದರು. ಈ ವೇಳೆ ಸಚಿವಾಲಯವು  ಅವರಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿತ್ತು.

ಇದನ್ನು ಓದಿ: ಚಂಡೀಗಢ ಮೇಯರ್ ಚುನಾವಣೆ ವಿವಾದ: ‘ಪ್ರಜಾಪ್ರಭುತ್ವದ ಕೊಲೆಗೆ ಅವಕಾಶ ನೀಡುವುದಿಲ್ಲ..’ ಎಂದು ಕಿಡಿಕಾರಿದ ಸುಪ್ರೀಂ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...