Homeಮುಖಪುಟತಪ್ಪು ದಾರಿಗೆಳೆಯುವ ಜಾಹೀರಾತು: ಪತಂಜಲಿ ವಿರುದ್ಧ ಕ್ರಮಕ್ಕೆ PMO ಸೂಚನೆ

ತಪ್ಪು ದಾರಿಗೆಳೆಯುವ ಜಾಹೀರಾತು: ಪತಂಜಲಿ ವಿರುದ್ಧ ಕ್ರಮಕ್ಕೆ PMO ಸೂಚನೆ

- Advertisement -
- Advertisement -

ಬಾಬಾ ರಾಮ್ ದೇವ್ ಅವರ ಪತಂಜಲಿ ಆಯುರ್ವೇದ ‘ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನಿಯಂತ್ರಿಸುವ ಕಾಯ್ದೆಯನ್ನು ಪದೇ ಪದೇ ಉಲ್ಲಂಘಿಸಿರುವುದಕ್ಕೆ’ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪ್ರಧಾನಿ ಮಂತ್ರಿ ಕಚೇರಿ ಆಯುಷ್ ಸಚಿವಾಲಯಕ್ಕೆ ನಿರ್ದೇಶಿಸಿದೆ.

ಈ ಕುರಿತು ಜನವರಿ 24ರಂದು ಆಯುಷ್ ಸಚಿವಾಲಯಕ್ಕೆ ಪಿಎಂಒ ನಿರ್ದೇಶನ  ನೀಡಿದ್ದು, ಫೆಬ್ರವರಿ 2022 ರಿಂದ ಬಾಕಿ ಉಳಿದಿರುವ ವಿಷಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸಚಿವಾಲಯವು ಉತ್ತರಾಖಂಡ ಆಯುಷ್ ಇಲಾಖೆಗೆ ಸೂಚಿಸಿದೆ.

ಪತಂಜಲಿ ಮಧುಮೇಹ, ಬೊಜ್ಜು, ಥೈರಾಯ್ಡ್ ಮತ್ತು ಹೃದ್ರೋಗಗಳ ಔಷಧಗಳ ಕುರಿತು ತಪ್ಪುದಾರಿಗೆಳೆಯುವ ಜಾಹೀರಾತು ನೀಡುತ್ತಿದೆ ಎಂದು ಹಲವು ಆರ್‌ಟಿಐ ಮಾಹಿತಿ ಬಳಿಕವೂ ಆಯುಷ್ ಸಚಿವಾಲಯ ಮತ್ತು ಉತ್ತರಾಖಂಡ ರಾಜ್ಯ ಪರವಾನಗಿ ಪ್ರಾಧಿಕಾರ (SLA) ಎರಡೂ ಮೌನವಾಗಿತ್ತು. ಡೆಹ್ರಾಡೂನ್‌ನಲ್ಲಿನ ಆಯುರ್ವೇದ ಮತ್ತು ಯುನಾನಿ ಸೇವೆಗಳು ನಿರ್ದೇಶಕರಿಗೆ ಬರೆದ ಪತ್ರದಲ್ಲಿ, ದಿವ್ಯ ಫಾರ್ಮಸಿಯಿಂದ ಔಷಧ ಹಾಗೂ ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಕಾಯ್ದೆ)-1954ರ ನಿರಂತರ ಉಲ್ಲಂಘನೆಗೆ ಸಂಬಂಧಿಸಿ ವಿಷಯವು ಉತ್ತರಾಖಂಡದ ರಾಜ್ಯ ಪರವಾನಿಗೆ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುತ್ತದೆ. ಆದ್ದರಿಂದ ಈ ವಿಷಯವನ್ನು ಪರಿಶೀಲಿಸುವಂತೆ, ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಾಗೂ ಈ ಸಚಿವಾಲಯದ ಸೂಚನೆಯಂತೆ ಮಾಹಿತಿಯನ್ನು ಅರ್ಜಿದಾರರಿಗೆ ತಿಳಿಸುವಂತೆ ಫೆಬ್ರವರಿ 2ರಂದು ಸೂಚಿಸಲಾಗಿದೆ.

ಪತಂಜಲಿ ಆಯುರ್ವೇದ DMR (OA) ಕಾಯಿದೆ- 1954ರ ಮತ್ತೆ ಮತ್ತೆ ಉಲ್ಲಂಘನೆಯ ಬಗ್ಗೆ RTI ಕಾರ್ಯಕರ್ತ ಡಾ ಕೆ ವಿ ಬಾಬು ಅವರು ಜನವರಿ 15 ರಂದು ಪ್ರಧಾನ ಮಂತ್ರಿಗಳ ಕಚೇರಿಗೆ (PMO) ದೂರು ನೀಡಿದ ನಂತರ ಉತ್ತರಾಖಂಡ SLAಗೆ ನಿರ್ದೇಶನಗಳನ್ನು ನೀಡಲಾಗಿದೆ. ಮಧ್ಯಸ್ಥಿಕೆಗಾಗಿ ನಾನು ಪಿಎಂಒಗೆ ಕೃತಜ್ಞನಾಗಿದ್ದೇನೆ ಮತ್ತು ಇದು ಪತಂಜಲಿ ಆಯುರ್ವೇದ ಅಕ್ರಮ ಜಾಹೀರಾತುಗಳನ್ನು ಕೊನೆಗೊಳಿಸುತ್ತದೆ ಎಂದು ಭಾವಿಸುತ್ತೇನೆ ಎಂದು ಬಾಬು ಹೇಳಿದರು. ಫೆಬ್ರವರಿ 2022ರಿಂದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ), ಕೇಂದ್ರ ಆಯುಷ್ ಸಚಿವಾಲಯ ಮತ್ತು ಉತ್ತರಾಖಂಡದ ಎಸ್‌ಎಲ್‌ಎನಲ್ಲಿ ಈ ಕುರಿತ ದೂರುಗಳು ಬಾಕಿ ಉಳಿದಿವೆ ಎಂದು ಬಾಬು ಹೇಳಿದ್ದಾರೆ.

ಆಯುಷ್ ಸಚಿವಾಲಯ ಸಮಸ್ಯೆಯ ಬಗ್ಗೆ ಕ್ರಮ ಕೈಗೊಳ್ಳದೆ ಮುಂದೂಡುತ್ತಿದೆ. ಪದೇ ಪದೇ ಮ್ಯಾಜಿಕ್ ರೆಮಿಡೀಸ್ ಆಕ್ಟ್‌ನ ಉಲ್ಲಂಘನೆಗಳು ನಡೆಯುತ್ತಿದ್ದರೂ SLA ಯಾವುದೇ ಕ್ರಮವನ್ನು ತೆಗೆದುಕೊಳ್ಳುತ್ತಿಲ್ಲ. ಆಯುಷ್ ಸಚಿವಾಲಯವು ಪತಂಜಲಿ ವಿರುದ್ಧ ಕ್ರಮಕ್ಕಾಗಿ ಉತ್ತರಾಖಂಡ ಎಸ್‌ಎಲ್‌ಎಗೆ ಕನಿಷ್ಠ 4 ಬಾರಿ ಪತ್ರ ಬರೆದಿದೆ ಆದರೆ ಏನೂ ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.

ಬಾಬು ಅವರು ಕೇಂದ್ರ ಆಯುಷ್ ಸಚಿವ ಸರ್ಬಾನಂದ ಸೋನೋವಾಲ್ ಅವರೊಂದಿಗೆ ಹಲವು ಬಾರಿ ಈ ವಿಚಾರವನ್ನು ಪ್ರಸ್ತಾಪಿಸಿದ್ದರು. ಸಂಸದರಾದ ಡಾ ವಿ ಶಿವದಾಸನ್ ಮತ್ತು ಕಾರ್ತಿ ಪಿ ಚಿದಂಬರಂ ಕಳೆದ ವರ್ಷವೂ ಈ ವಿಷಯವನ್ನು ಆಯುಷ್ ಸಚಿವಾಲಯದ ಮುಂದೆ ಪ್ರಸ್ತಾಪಿಸಿದ್ದರು. ಈ ವೇಳೆ ಸಚಿವಾಲಯವು  ಅವರಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿತ್ತು.

ಇದನ್ನು ಓದಿ: ಚಂಡೀಗಢ ಮೇಯರ್ ಚುನಾವಣೆ ವಿವಾದ: ‘ಪ್ರಜಾಪ್ರಭುತ್ವದ ಕೊಲೆಗೆ ಅವಕಾಶ ನೀಡುವುದಿಲ್ಲ..’ ಎಂದು ಕಿಡಿಕಾರಿದ ಸುಪ್ರೀಂ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...