Homeಮುಖಪುಟಪ್ರಧಾನಿಯ ಪದವಿ ಪ್ರಕರಣ: ಮಾನನಷ್ಟ ಮೊಕದ್ದಮೆಯಲ್ಲಿ ಕೇಜ್ರಿವಾಲ್, ಎಎಪಿ ಸಂಸದನಿಗೆ ಸಮನ್ಸ್

ಪ್ರಧಾನಿಯ ಪದವಿ ಪ್ರಕರಣ: ಮಾನನಷ್ಟ ಮೊಕದ್ದಮೆಯಲ್ಲಿ ಕೇಜ್ರಿವಾಲ್, ಎಎಪಿ ಸಂಸದನಿಗೆ ಸಮನ್ಸ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದಂತೆ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜಿವಾಲ್‌, ಎಎಪಿ ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್ ಅವರಿಗೆ ಸ್ಥಳೀಯ ಕೋರ್ಟ್ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.

ಜೂನ್ 7ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್‌ನಲ್ಲಿ ಸೂಚಿಸಿದೆ. ಪ್ರಧಾನಿ ಮೋದಿ ಅವರ ಶೈಕ್ಷಣಿಕ ವಿದ್ಯಾರ್ಹತೆ ಕುರಿತು ಇಬ್ಬರ ಹೇಳಿಕೆಗೆ ಸಂಬಂಧಿಸಿ ಗುಜರಾತ್ ವಿಶ್ವವಿದ್ಯಾಲಯವು ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿತ್ತು.

ಈ ಹಿಂದೆ ಮೇ 23 ರಂದು ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿ ಸಮನ್ಸ್‌ ನೀಡಿದ್ದರೂ ಕೂಡ ಯಾರೊಬ್ಬರೂ ಹಾಜರಾಗಿರಲಿಲ್ಲ ಎಂದು ದೂರದಾರರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಆ ನಂತರ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್‌ಜೆ ಪಾಂಚಾಲ್ ಅವರ ನ್ಯಾಯಾಲಯವು ಕೇಜ್ರಿವಾಲ್ ಮತ್ತು ಸಿಂಗ್‌ಗೆ ಸಮನ್ಸ್ ನೀಡಿತು.

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಯ ವಿಚಾರವಾಗಿ ಗುಜರಾತ್ ವಿಶ್ವವಿದ್ಯಾಲಯದ ವಿರುದ್ಧ ಕೇಜ್ರಿವಾಲ್ ಅವರು “ವ್ಯಂಗ್ಯ” ಮತ್ತು “ಅವಹೇಳನಕಾರಿ” ಹೇಳಿಕೆ ನೀಡಿದ್ದರು. ಅವರ ಹೇಳಿಕೆಗಳಿಗಾಗಿ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಜಯೇಶ್ ಚೋವಾಟಿಯಾ ಅವರ ನ್ಯಾಯಾಲಯವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸಮನ್ಸ್ ಜಾರಿ ಮಾಡಿತ್ತು.

ಇದನ್ನೂ ಓದಿ: ಮೋದಿ ಪದವಿ ವಿಚಾರ: ಮಾನಹಾನಿ ಪ್ರಕರಣದಲ್ಲಿ ಕೇಜ್ರಿವಾಲ್‌, ಸಂಜಯ್ ಸಿಂಗ್‌ಗೆ ಗುಜರಾತ್ ಕೋಟ್‌ ಸಮನ್ಸ್

ಅರವಿಂದ್ ಕೇಜ್ರಿವಾಲ್ ಮತ್ತು ಸಂಜಯ್ ಸಿಂಗ್ ಅವರಿಗೆ ನ್ಯಾಯಾಲಯ ನೀಡಿರುವ ಸಮನ್ಸ್ ಇನ್ನೂ ಬಂದಿಲ್ಲ ಎಂದು ಗುಜರಾತ್‌ನ ಎಎಪಿಯ ಕಾನೂನು ಘಟಕದ ಮುಖ್ಯಸ್ಥ ಪ್ರಣವ್ ಠಕ್ಕರ್ ಸೋಮವಾರ ಹೇಳಿದ್ದಾರೆ.

ಗುಜರಾತ್‌ನ ಎಎಪಿ ಕಾನೂನು ವಿಭಾಗದ ಮುಖ್ಯಸ್ಥ ಪ್ರಣವ್ ಠಕ್ಕರ್ ಅವರು, ಕೋರ್ಟ್ ಜಾರಿಮಾಡಿದ್ದ ಸಮನ್ಸ್ ಅನ್ನು ಇಬ್ಬರೂ ಮುಖಂಡರು ಸ್ವೀಕರಿಸಬೇಕಾಗಿದೆ ಎಂದರು. ಗುಜರಾತ್ ವಿಶ್ವವಿದ್ಯಾಲಯ ಪ್ರತಿನಿಧಿಸಿದ್ದ ವಕೀಲ ಅಮಿತ್ ನಾಯರ್‌, ನೂತನ ನ್ಯಾಯಾಧೀಶರಿಗೆ ಪ್ರಕರಣದ ಹಿನ್ನೆಲೆ ಮತ್ತು ಹಿಂದೆ ಸಮನ್ಸ್ ಜಾರಿಯಾಗಿದ್ದನ್ನು ವಿವರಿಸಿದರು.

ಪ್ರಕರಣದ ಹಿನ್ನೆಲೆ

ಪ್ರಧಾನಿ ಮೋದಿ ಅವರ ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿ ವಿಶ್ವವಿದ್ಯಾಲಯದ ವಿರುದ್ಧ ವ್ಯಂಗ್ಯ, ಮಾನಹಾನಿಕರ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ ಅರವಿಂದ ಕೇಜಿವಾಲ್‌ ಮತ್ತು ಸಂಜಯ್ ಸಿಂಗ್ ವಿರುದ್ಧ ಕ್ರಿಮಿನಲ್‌ ಮಾನಹಾನಿ ಪ್ರಕರಣ ದಾಖಲಿಸಲಾಗಿತ್ತು.

ಕೇಜ್ರಿವಾಲ್ ಅವರು ಪತ್ರಿಕಾಗೋಷ್ಠಿಗಳಲ್ಲಿ ಮತ್ತು ಟ್ವಿಟರ್ ಹ್ಯಾಂಡಲ್‌ಗಳಲ್ಲಿ ಮೋದಿ ಪದವಿಯ ಬಗ್ಗೆ ವಿಶ್ವವಿದ್ಯಾಲಯವನ್ನು ಗುರಿಯಾಗಿಸಿಕೊಂಡು “ಮಾನಹಾನಿಕರ” ಹೇಳಿಕೆಗಳನ್ನು ನೀಡಿದ್ದರು. ವಿಶ್ವವಿದ್ಯಾನಿಲಯವನ್ನು ಗುರಿಯಾಗಿಸಿಕೊಂಡು ಅವರ ಹೇಳಿಕೆಗಳು ಮಾನಹಾನಿಕರ ಮತ್ತು ಸಾರ್ವಜನಿಕ ಸಂಸ್ಥೆಯ ಪ್ರತಿಷ್ಠೆಗೆ ಧಕ್ಕೆ ತಂದಿವೆ ಎಂದು ಆರೋಪಿಸಿದ್ದಾರೆ.

”ಪದವಿ ಇದ್ದರೆ ಮತ್ತು ಅದು ನಿಜವಾಗಿದ್ದರೆ, ಅದನ್ನು ಏಕೆ ನೀಡುತ್ತಿಲ್ಲ? ಅವರು ಪದವಿಯನ್ನು ನೀಡುತ್ತಿಲ್ಲ ಏಕೆಂದರೆ ಅದು ನಕಲಿಯಾಗಿರಬಹುದು.. ಮತ್ತು ಒಂದು ವೇಳೆ ಪ್ರಧಾನ ಮಂತ್ರಿಗಳು ದೆಹಲಿ ವಿಶ್ವವಿದ್ಯಾಲಯ ಮತ್ತು ಗುಜರಾತ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದ್ದರೆ, ಆನಂತರ ಗುಜರಾತ್ ವಿಶ್ವವಿದ್ಯಾಲಯವು ತನ್ನ ವಿದ್ಯಾರ್ಥಿ ದೇಶದ ಪ್ರಧಾನಿಯಾದುದನ್ನು ಆಚರಿಸಬೇಕಿತ್ತಲ್ಲವೇ? ಎಂದು ಕೇಜ್ರಿವಾಲ್‌ ಅವರ ಹೇಳಿಕೆಗಳನ್ನು ದೂರುದಾರರು ಉಲ್ಲೇಖಿಸಿದ್ದಾರೆ.

”ಅವರು ( ಗುಜರಾತ್ ವಿಶ್ವವಿದ್ಯಾಲಯ) ಪ್ರಧಾನಿಯ ನಕಲಿ ಪದವಿಯನ್ನು ಅಸಲಿ ಎಂದು ಸಾಬೀತುಪಡಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಸಿಂಗ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...