ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದಂತೆ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜಿವಾಲ್, ಎಎಪಿ ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್ ಅವರಿಗೆ ಸ್ಥಳೀಯ ಕೋರ್ಟ್ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.
ಜೂನ್ 7ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್ನಲ್ಲಿ ಸೂಚಿಸಿದೆ. ಪ್ರಧಾನಿ ಮೋದಿ ಅವರ ಶೈಕ್ಷಣಿಕ ವಿದ್ಯಾರ್ಹತೆ ಕುರಿತು ಇಬ್ಬರ ಹೇಳಿಕೆಗೆ ಸಂಬಂಧಿಸಿ ಗುಜರಾತ್ ವಿಶ್ವವಿದ್ಯಾಲಯವು ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿತ್ತು.
ಈ ಹಿಂದೆ ಮೇ 23 ರಂದು ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿ ಸಮನ್ಸ್ ನೀಡಿದ್ದರೂ ಕೂಡ ಯಾರೊಬ್ಬರೂ ಹಾಜರಾಗಿರಲಿಲ್ಲ ಎಂದು ದೂರದಾರರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಆ ನಂತರ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್ಜೆ ಪಾಂಚಾಲ್ ಅವರ ನ್ಯಾಯಾಲಯವು ಕೇಜ್ರಿವಾಲ್ ಮತ್ತು ಸಿಂಗ್ಗೆ ಸಮನ್ಸ್ ನೀಡಿತು.
ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಯ ವಿಚಾರವಾಗಿ ಗುಜರಾತ್ ವಿಶ್ವವಿದ್ಯಾಲಯದ ವಿರುದ್ಧ ಕೇಜ್ರಿವಾಲ್ ಅವರು “ವ್ಯಂಗ್ಯ” ಮತ್ತು “ಅವಹೇಳನಕಾರಿ” ಹೇಳಿಕೆ ನೀಡಿದ್ದರು. ಅವರ ಹೇಳಿಕೆಗಳಿಗಾಗಿ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಜಯೇಶ್ ಚೋವಾಟಿಯಾ ಅವರ ನ್ಯಾಯಾಲಯವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸಮನ್ಸ್ ಜಾರಿ ಮಾಡಿತ್ತು.
ಇದನ್ನೂ ಓದಿ: ಮೋದಿ ಪದವಿ ವಿಚಾರ: ಮಾನಹಾನಿ ಪ್ರಕರಣದಲ್ಲಿ ಕೇಜ್ರಿವಾಲ್, ಸಂಜಯ್ ಸಿಂಗ್ಗೆ ಗುಜರಾತ್ ಕೋಟ್ ಸಮನ್ಸ್
ಅರವಿಂದ್ ಕೇಜ್ರಿವಾಲ್ ಮತ್ತು ಸಂಜಯ್ ಸಿಂಗ್ ಅವರಿಗೆ ನ್ಯಾಯಾಲಯ ನೀಡಿರುವ ಸಮನ್ಸ್ ಇನ್ನೂ ಬಂದಿಲ್ಲ ಎಂದು ಗುಜರಾತ್ನ ಎಎಪಿಯ ಕಾನೂನು ಘಟಕದ ಮುಖ್ಯಸ್ಥ ಪ್ರಣವ್ ಠಕ್ಕರ್ ಸೋಮವಾರ ಹೇಳಿದ್ದಾರೆ.
ಗುಜರಾತ್ನ ಎಎಪಿ ಕಾನೂನು ವಿಭಾಗದ ಮುಖ್ಯಸ್ಥ ಪ್ರಣವ್ ಠಕ್ಕರ್ ಅವರು, ಕೋರ್ಟ್ ಜಾರಿಮಾಡಿದ್ದ ಸಮನ್ಸ್ ಅನ್ನು ಇಬ್ಬರೂ ಮುಖಂಡರು ಸ್ವೀಕರಿಸಬೇಕಾಗಿದೆ ಎಂದರು. ಗುಜರಾತ್ ವಿಶ್ವವಿದ್ಯಾಲಯ ಪ್ರತಿನಿಧಿಸಿದ್ದ ವಕೀಲ ಅಮಿತ್ ನಾಯರ್, ನೂತನ ನ್ಯಾಯಾಧೀಶರಿಗೆ ಪ್ರಕರಣದ ಹಿನ್ನೆಲೆ ಮತ್ತು ಹಿಂದೆ ಸಮನ್ಸ್ ಜಾರಿಯಾಗಿದ್ದನ್ನು ವಿವರಿಸಿದರು.
ಪ್ರಕರಣದ ಹಿನ್ನೆಲೆ
ಪ್ರಧಾನಿ ಮೋದಿ ಅವರ ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿ ವಿಶ್ವವಿದ್ಯಾಲಯದ ವಿರುದ್ಧ ವ್ಯಂಗ್ಯ, ಮಾನಹಾನಿಕರ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ ಅರವಿಂದ ಕೇಜಿವಾಲ್ ಮತ್ತು ಸಂಜಯ್ ಸಿಂಗ್ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಲಾಗಿತ್ತು.
ಕೇಜ್ರಿವಾಲ್ ಅವರು ಪತ್ರಿಕಾಗೋಷ್ಠಿಗಳಲ್ಲಿ ಮತ್ತು ಟ್ವಿಟರ್ ಹ್ಯಾಂಡಲ್ಗಳಲ್ಲಿ ಮೋದಿ ಪದವಿಯ ಬಗ್ಗೆ ವಿಶ್ವವಿದ್ಯಾಲಯವನ್ನು ಗುರಿಯಾಗಿಸಿಕೊಂಡು “ಮಾನಹಾನಿಕರ” ಹೇಳಿಕೆಗಳನ್ನು ನೀಡಿದ್ದರು. ವಿಶ್ವವಿದ್ಯಾನಿಲಯವನ್ನು ಗುರಿಯಾಗಿಸಿಕೊಂಡು ಅವರ ಹೇಳಿಕೆಗಳು ಮಾನಹಾನಿಕರ ಮತ್ತು ಸಾರ್ವಜನಿಕ ಸಂಸ್ಥೆಯ ಪ್ರತಿಷ್ಠೆಗೆ ಧಕ್ಕೆ ತಂದಿವೆ ಎಂದು ಆರೋಪಿಸಿದ್ದಾರೆ.
”ಪದವಿ ಇದ್ದರೆ ಮತ್ತು ಅದು ನಿಜವಾಗಿದ್ದರೆ, ಅದನ್ನು ಏಕೆ ನೀಡುತ್ತಿಲ್ಲ? ಅವರು ಪದವಿಯನ್ನು ನೀಡುತ್ತಿಲ್ಲ ಏಕೆಂದರೆ ಅದು ನಕಲಿಯಾಗಿರಬಹುದು.. ಮತ್ತು ಒಂದು ವೇಳೆ ಪ್ರಧಾನ ಮಂತ್ರಿಗಳು ದೆಹಲಿ ವಿಶ್ವವಿದ್ಯಾಲಯ ಮತ್ತು ಗುಜರಾತ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದ್ದರೆ, ಆನಂತರ ಗುಜರಾತ್ ವಿಶ್ವವಿದ್ಯಾಲಯವು ತನ್ನ ವಿದ್ಯಾರ್ಥಿ ದೇಶದ ಪ್ರಧಾನಿಯಾದುದನ್ನು ಆಚರಿಸಬೇಕಿತ್ತಲ್ಲವೇ? ಎಂದು ಕೇಜ್ರಿವಾಲ್ ಅವರ ಹೇಳಿಕೆಗಳನ್ನು ದೂರುದಾರರು ಉಲ್ಲೇಖಿಸಿದ್ದಾರೆ.
”ಅವರು ( ಗುಜರಾತ್ ವಿಶ್ವವಿದ್ಯಾಲಯ) ಪ್ರಧಾನಿಯ ನಕಲಿ ಪದವಿಯನ್ನು ಅಸಲಿ ಎಂದು ಸಾಬೀತುಪಡಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಸಿಂಗ್ ಹೇಳಿದ್ದಾರೆ.
Kejriwal is correct.
Assassination of right to speech and expression.