Homeಮುಖಪುಟಪ್ರಧಾನಿಯ ಪದವಿ ಪ್ರಕರಣ: ಮಾನನಷ್ಟ ಪ್ರಕರಣದಲ್ಲಿ ಕೇಜ್ರಿವಾಲ್, ಸಂಜಯ್ ಸಿಂಗ್‌ಗೆ ಗುಜರಾತ್ ಕೋರ್ಟ್ ಸಮನ್ಸ್

ಪ್ರಧಾನಿಯ ಪದವಿ ಪ್ರಕರಣ: ಮಾನನಷ್ಟ ಪ್ರಕರಣದಲ್ಲಿ ಕೇಜ್ರಿವಾಲ್, ಸಂಜಯ್ ಸಿಂಗ್‌ಗೆ ಗುಜರಾತ್ ಕೋರ್ಟ್ ಸಮನ್ಸ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ವಿಚಾರಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರಿಗೆ ಜುಲೈ 13ರಂದು ಹಾಜರಾಗುವಂತೆ ಗುಜರಾತ್ ನ್ಯಾಯಾಲಯ ಬುಧವಾರ ಆದೇಶಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಪ್ರಧಾನಿ ಮೋದಿ ಅವರ ಶೈಕ್ಷಣಿಕ ಪದವಿ ಬಗ್ಗೆ ವ್ಯಂಗ್ಯ ಮತ್ತು ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಗುಜರಾತ್ ವಿಶ್ವವಿದ್ಯಾಲಯವು ಪ್ರಕರಣ ದಾಖಲಿಸಿದೆ. ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆ ವೇಳೆ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಜಯೇಶ್ ಚೋವತಿಯಾ ಅವರು ಈ ಆದೇಶ ನೀಡಿದ್ದಾರೆ.

ಗುಜರಾತ್ ವಿಶ್ವವಿದ್ಯಾಲಯವು ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕೇಜಿವಾಲ್ ಮತ್ತು ಸಂಜಯ್‌ ಸಿಂಗ್‌ ಅವರಿಗೆ ಜೂನ್ 7ರಂದು ವಿಚಾರಣೆಗೆ ಹಾಜರಾಗುವಂತೆ ಅಹಮದಾಬಾದ್‌ನ ಮೆಟ್ರೊಪಾಲಿಟಿನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು.

ಪ್ರಾಥಮಿಕ ಅವಲೋಕನದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500 ರ ಅಡಿಯಲ್ಲಿ ಇಬ್ಬರು ಆಮ್ ಆದ್ಮಿ ಪಕ್ಷದ ನಾಯಕರ ವಿರುದ್ಧ ಮಾನನಷ್ಟ ಶಿಕ್ಷೆಗೆ ಸಂಬಂಧಿಸಿದಂತೆ ಪ್ರಕರಣವಿರುವುದು ಕಂಡುಬಂದಿದೆ ಎಂದು ನ್ಯಾಯಾಲಯ ಹೇಳಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಬುಧವಾರ ಈ ಪ್ರಕರಣ ವಿಚಾರಣೆಗೆ ಬಂದಾಗ, ಆರೋಪಿಗಳ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗಿದ್ದರು ಮತ್ತು ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದ ದಾಖಲೆಗಳನ್ನು ಕೋರಿ ಅರ್ಜಿ ಸಲ್ಲಿಸಿದ್ದರು. ಆ ದಾಖಲೆಗಳನ್ನು ಅವರಿಗೆ ಒದಗಿಸಲಾಗಿದೆ. ಅಲ್ಲದೆ, ಅವರು ಆರೋಪಿಗಳಿಗೆ ಖುದ್ದು ಹಾಜರಾತಿಗೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರು’ ಎಂದು ಗುಜರಾತ್ ವಿವಿಯ ವಕೀಲ ಅಮಿತ್ ನಾಯರ್ ತಿಳಿಸಿದರು.

ಇದನ್ನೂ ಓದಿ: ಪ್ರಧಾನಿಯ ಪದವಿ ಪ್ರಕರಣ: ಮಾನನಷ್ಟ ಮೊಕದ್ದಮೆಯಲ್ಲಿ ಕೇಜ್ರಿವಾಲ್, ಎಎಪಿ ಸಂಸದನಿಗೆ ಸಮನ್ಸ್

‘ಖುದ್ದು ಹಾಜರಾತಿಗೆ ವಿನಾಯಿತಿ ನೀಡಲು ಒಪ್ಪಿಗೆ ಸೂಚಿಸುವಾಗ, ಸಂಸದರು ಮತ್ತು ಶಾಸಕರ ವಿರುದ್ಧದ ಪ್ರಕರಣಗಳನ್ನು ತ್ವರಿತ ವಿಚಾರಣೆ ನಡೆಸುವಂತೆ ಸುತ್ತೋಲೆಯಲ್ಲಿದೆ ಎನ್ನುವುದನ್ನು ಕೋರ್ಟ್ ಎತ್ತಿ ಹೇಳಿ, ಅವರು ಯಾವಾಗ ಹಾಜರಾಗಲಿದ್ದಾರೆ? ಎಂದು ಪ್ರಶ್ನಿಸಿತು. ಆಗ, ಪ್ರತಿವಾದಿ ವಕೀಲರು ತಮ್ಮ ಕ್ಷಕಿದಾರರು ಜುಲೈ 13ರಂದು ವಿಚಾರಣೆಗೆ ಹಾಜರಿರುವುದಾಗಿ ಕೋರ್ಟ್‌ಗೆ ತಿಳಿಸಿದರು’ ಎಂದು ಅಮಿತ್ ನಾಯ‌ ತಿಳಿಸಿದರು.

ಮೋದಿ ಅವರ ಶೈಕ್ಷಣಿಕ ಪದವಿ ಪ್ರಶ್ನಿಸಿ ಎಎಪಿಯ ನಾಯಕರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು. ಮೋದಿಯವರ ಪದವಿ ಬಗ್ಗೆ ವಿವಿ ಬಗ್ಗೆ ಟೀಕಿಸುವ ಹೇಳಿಕೆಗಳನ್ನು ಪತ್ರಿಕಾಗೋಷ್ಠಿಯಲ್ಲಿ ನೀಡಿದ್ದಾರೆ. ಗುಜರಾತ್ ವಿ.ವಿ ವಿರುದ್ಧದ ಅವರ ಹೇಳಿಕೆಗಳು ಮಾನಹಾನಿಕರವಾಗಿವೆ ಮತ್ತು ವಿ.ವಿಯ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶ ಹೊಂದಿವೆ ಎಂದು ಆರೋಪಿಸಿ ವಿ.ವಿ ರಿಜಿಸ್ಟ್ರಾರ್ ಪೀಯೂಷ್ ಪಟೇಲ್ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

”ಕೇಜ್ರಿವಾಲ್ ಹಾಗೂ ಸಿಂಗ್‌ ಅವರು ಪತ್ರಿಕಾಗೋಷ್ಠಿಗಳಲ್ಲಿ ಮತ್ತು ಟ್ವಿಟರ್‌ನಲ್ಲಿ ಮೋದಿ ಪದವಿಯ ಬಗ್ಗೆ ವಿಶ್ವವಿದ್ಯಾಲಯವನ್ನು ಗುರಿಯಾಗಿಸಿಕೊಂಡು “ಮಾನಹಾನಿಕರ” ಹೇಳಿಕೆಗಳನ್ನು ನೀಡಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ವಿರುದ್ಧ ಅವರ ಹೇಳಿಕೆಗಳು ಮಾನಹಾನಿಕರವಾಗಿದೆ ಮತ್ತು ವಿಶ್ವವಿದ್ಯಾಲಯದ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶವನ್ನು ಹೊಂದಿದೆ” ಎಂದು ದೂರುದಾರರು ಹೇಳಿದ್ದಾರೆ.

ಕೇಜ್ರಿವಾಲ್‌ ಹೇಳಿಕೆ: ”ಪದವಿ ಇದ್ದರೆ ಮತ್ತು ಅದು ನಿಜವಾಗಿದ್ದರೆ, ಅದನ್ನು ಏಕೆ ನೀಡುತ್ತಿಲ್ಲ?. ಅವರು ಪದವಿಯನ್ನು ನೀಡುತ್ತಿಲ್ಲ ಏಕೆಂದರೆ ಅದು ನಕಲಿಯಾಗಿರಬಹುದು ಮತ್ತು ಪ್ರಧಾನಿ ದೆಹಲಿ ವಿಶ್ವವಿದ್ಯಾಲಯ ಮತ್ತು ಗುಜರಾತ್ ವಿಶ್ವವಿದ್ಯಾಲಯದಲ್ಲಿ ಓದಿದ್ದರೆ, ಗುಜರಾತ್ ವಿಶ್ವವಿದ್ಯಾಲಯವು ತನ್ನ ವಿದ್ಯಾರ್ಥಿ ದೇಶದ ಪ್ರಧಾನಿಯಾದುದನ್ನು ಸಂಭ್ರಮಿಸಬೇಕಿತ್ತು” ಎಂದು ಹೇಳಿದ್ದರು.

ಸಂಜಯ್ ಸಿಂಗ್: ವಿಶ್ವವಿದ್ಯಾನಿಲಯದ ಪ್ರಕಾರ, “ಅವರು (ಜಿಯು) ಪ್ರಧಾನಿಯ ನಕಲಿ ಪದವಿಯನ್ನು ಅಸಲಿ ಎಂದು ಸಾಬೀತುಪಡಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...