Homeಮುಖಪುಟ’ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ’: ಮೋದಿ ವಿರುದ್ಧ ಮಾಜಿ ಪಿಎಂ ಮನಮೋಹನ್ ಸಿಂಗ್ ಕಿಡಿ

’ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ’: ಮೋದಿ ವಿರುದ್ಧ ಮಾಜಿ ಪಿಎಂ ಮನಮೋಹನ್ ಸಿಂಗ್ ಕಿಡಿ

"ಮೋದಿ ಸರ್ಕಾರವು ತಮ್ಮ ತಪ್ಪುಗಳನ್ನು ಒಪ್ಪಿಕೊಂಡು ಸರಿಪಡಿಸುವ ಬದಲು ಇನ್ನೂ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ದೂಷಿಸುತ್ತಿದೆ"

- Advertisement -
- Advertisement -

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಿಯೊಂದು ಸಮಸ್ಯೆಗೂ ಜವಾಹರಲಾಲ್ ನೆಹರು ಅವರನ್ನು ದೂಷಿಸುತ್ತಿದ್ದಾರೆ ಎಂದು ಆರೋಪಿಸಿರುವ ಅವರು, “ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ” ಎಂದಿದ್ದಾರೆ.

ಕಾಂಗ್ರೆಸ್ ಎಂದಿಗೂ ರಾಜಕೀಯ ಲಾಭಕ್ಕಾಗಿ ದೇಶವನ್ನು ವಿಭಜಿಸಲಿಲ್ಲ ಅಥವಾ ಸತ್ಯವನ್ನು ಮರೆಮಾಚಲಿಲ್ಲ ಎಂದು 89 ವರ್ಷದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಹೇಳಿದ್ದಾರೆ.

“ಒಂದೆಡೆ ಜನರು ಹಣದುಬ್ಬರ ಮತ್ತು ನಿರುದ್ಯೋಗದ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಮತ್ತೊಂದೆಡೆ, ಕಳೆದ ಏಳೂವರೆ ವರ್ಷಗಳಿಂದ ಅಧಿಕಾರದಲ್ಲಿರುವ ಈಗಿನ ಸರ್ಕಾರವು ತಮ್ಮ ತಪ್ಪುಗಳನ್ನು ಒಪ್ಪಿಕೊಂಡು ಸರಿಪಡಿಸುವ ಬದಲು ಜನರ ಸಮಸ್ಯೆಗಳಿಗೆ ಇನ್ನೂ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ದೂಷಿಸುತ್ತಿದೆ” ಎಂದು ವೀಡಿಯೊ ಸಂದೇಶದಲ್ಲಿ ಡಾ. ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್, ನೆಹರು ಮತ್ತು ಪಾಕಿಸ್ತಾನದ ಬಗ್ಗೆಯಷ್ಟೇ ಮೋದಿ ಮಾತನಾಡುತ್ತಾರೆ : ರಾಹುಲ್ ಗಾಂಧಿ

 

“ಪ್ರಧಾನಿ ಸ್ಥಾನಕ್ಕೆ ವಿಶೇಷ ಮಹತ್ವವಿದೆ ಎಂದು ನಾನು ಭಾವಿಸುತ್ತೇನೆ. ಪ್ರಧಾನಿಯವರು ಇತಿಹಾಸವನ್ನು ದೂಷಿಸುವ ಬದಲು ತಮ್ಮ ಘನತೆಯನ್ನು ಕಾಯ್ದುಕೊಳ್ಳಬೇಕು. ನಾನು 10 ವರ್ಷಗಳ ಕಾಲ ಪ್ರಧಾನಿಯಾಗಿದ್ದಾಗ ನನ್ನ ಕೆಲಸದ ಮೂಲಕ ಮಾತನಾಡಿದ್ದೇನೆ. ಪ್ರಪಂಚದ ಮುಂದೆ ದೇಶವು ಪ್ರತಿಷ್ಠೆಯನ್ನು ಕಳೆದುಕೊಳ್ಳಲು ನಾನು ಎಂದಿಗೂ ಬಿಡಲಿಲ್ಲ. ನಾನು ಎಂದಿಗೂ ಭಾರತದ ಹೆಮ್ಮೆಯನ್ನು ಕುಗ್ಗಿಸಿಲ್ಲ. ನನ್ನ ವಿರುದ್ಧ ದುರ್ಬಲ, ಶಾಂತ ಮತ್ತು ಭ್ರಷ್ಟ ಎಂಬ ಸುಳ್ಳು ಆರೋಪದ ನಂತರ, ಬಿಜೆಪಿ ಮತ್ತು ಅದರ ಬಿ ಮತ್ತು ಸಿ-ಟೀಮ್ ದೇಶದ ಮುಂದೆ ಬಹಿರಂಗಗೊಳ್ಳುತ್ತಿದೆ ಎಂಬ ತೃಪ್ತಿ ನನಗಿದೆ” ಎಂದಿದ್ದಾರೆ.

“ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಆರ್ಥಿಕ ನೀತಿಯ ಬಗ್ಗೆ ತಿಳುವಳಿಕೆ ಇಲ್ಲ. ಈ ವಿಷಯ ರಾಷ್ಟ್ರಕ್ಕೆ ಸೀಮಿತವಾಗಿಲ್ಲ, ವಿದೇಶಾಂಗ ನೀತಿಯಲ್ಲೂ ಈ ಸರ್ಕಾರ ವಿಫಲವಾಗಿದೆ, ಚೀನಾ ನಮ್ಮ ಗಡಿಯಲ್ಲಿ ಕುಳಿತು ಅದನ್ನು ಹತ್ತಿಕ್ಕುವ ಪ್ರಯತ್ನಗಳನ್ನು ಮಾಡುತ್ತಿದೆ. ನಾಯಕರನ್ನು ಬಲವಂತವಾಗಿ ತಬ್ಬಿಕೊಳ್ಳುವುದು ಅಥವಾ ಅವರಿಗೆ ಬಿರಿಯಾನಿ ತಿನ್ನಿಸುವ ಮೂಲಕ ವಿದೇಶಾಂಗ ನೀತಿಯನ್ನು ನಡೆಸಲಾಗುವುದಿಲ್ಲ ಎಂದು ಪ್ರಧಾನಿ ಅರ್ಥಮಾಡಿಕೊಂಡಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ತೀಕ್ಷ್ಣವಾಗಿ ತಿವಿದಿದ್ದಾರೆ.

“ನಾವು ಎಂದಿಗೂ ಪಟ್ಟಭದ್ರ ರಾಜಕೀಯ ಲಾಭಕ್ಕಾಗಿ ದೇಶವನ್ನು ವಿಭಜಿಸಲಿಲ್ಲ. ನಾವು ಎಂದಿಗೂ ಸತ್ಯವನ್ನು ಮರೆಮಾಚಲು ಪ್ರಯತ್ನಿಸಲಿಲ್ಲ. ನಾವು ಎಂದಿಗೂ ದೇಶದ ಗೌರವ ಅಥವಾ ಪ್ರಧಾನಿ ಸ್ಥಾನಕ್ಕೆ ಧಕ್ಕೆ ತಂದಿಲ್ಲ. ಜನರು ಇಂದು ವಿಭಜನೆಯಾಗುತ್ತಿದ್ದಾರೆ. ಈ ಸರ್ಕಾರದ ನಕಲಿ ರಾಷ್ಟ್ರೀಯತೆ ಟೊಳ್ಳು ಮತ್ತು ಅಪಾಯಕಾರಿ. ಒಡೆದು ಆಳುವ ಬ್ರಿಟಿಷರ ನೀತಿಯ ಮೇಲೆ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಲಾಗುತ್ತಿದೆ. ಸರ್ಕಾರದ ಆರ್ಥಿಕ ನೀತಿಯಲ್ಲಿ ಸ್ವಾರ್ಥ ಮತ್ತು ದುರಾಸೆ ಇದೆ. ತಮ್ಮ ಸ್ವಾರ್ಥಕ್ಕಾಗಿ ಜನರನ್ನು ಒಡೆದು ಹೊಡೆದಾಡುವಂತೆ ಮಾಡುತ್ತಿದ್ದಾರೆ” ಎಂದಿದ್ದಾರೆ.

ಮುಂದುವರೆದು, ”ಕೆಲವು ದಿನಗಳ ಹಿಂದೆ ಪ್ರಧಾನಿ ಭದ್ರತೆ ಹೆಸರಿನಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಹಾಗೂ ರಾಜ್ಯದ ಜನತೆಯನ್ನು ಅವಮಾನಿಸುವ ಪ್ರಯತ್ನ ನಡೆದಿತ್ತು. ರೈತರ ಆಂದೋಲನದ ಸಂದರ್ಭದಲ್ಲೂ ಪಂಜಾಬ್‌ ಮತ್ತು ಪಂಜಾಬಿಗರ ಮಾನಹಾನಿ ಮಾಡುವ ಯತ್ನ ನಡೆದಿತ್ತು. ಪಂಜಾಬಿಗಳ ಶೌರ್ಯ, ದೇಶಪ್ರೇಮ ಮತ್ತು ತ್ಯಾಗವನ್ನು ಇಡೀ ಜಗತ್ತು ಗೌರವಿಸುತ್ತದೆ. ಆದರೆ ಎನ್‌ಡಿಎ ಸರ್ಕಾರ ಈ ಬಗ್ಗೆ ಯಾವುದೇ ಮಾತನಾಡಲಿಲ್ಲ. ಪಂಜಾಬ್‌ನ ನಿಜವಾದ ಭಾರತೀಯನಾಗಿ ಈ ಎಲ್ಲಾ ವಿಷಯಗಳು ನನ್ನನ್ನು ತೀವ್ರವಾಗಿ ನೋಯಿಸುತ್ತವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...