Homeಮುಖಪುಟ’ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ’: ಮೋದಿ ವಿರುದ್ಧ ಮಾಜಿ ಪಿಎಂ ಮನಮೋಹನ್ ಸಿಂಗ್ ಕಿಡಿ

’ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ’: ಮೋದಿ ವಿರುದ್ಧ ಮಾಜಿ ಪಿಎಂ ಮನಮೋಹನ್ ಸಿಂಗ್ ಕಿಡಿ

"ಮೋದಿ ಸರ್ಕಾರವು ತಮ್ಮ ತಪ್ಪುಗಳನ್ನು ಒಪ್ಪಿಕೊಂಡು ಸರಿಪಡಿಸುವ ಬದಲು ಇನ್ನೂ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ದೂಷಿಸುತ್ತಿದೆ"

- Advertisement -
- Advertisement -

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಿಯೊಂದು ಸಮಸ್ಯೆಗೂ ಜವಾಹರಲಾಲ್ ನೆಹರು ಅವರನ್ನು ದೂಷಿಸುತ್ತಿದ್ದಾರೆ ಎಂದು ಆರೋಪಿಸಿರುವ ಅವರು, “ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ” ಎಂದಿದ್ದಾರೆ.

ಕಾಂಗ್ರೆಸ್ ಎಂದಿಗೂ ರಾಜಕೀಯ ಲಾಭಕ್ಕಾಗಿ ದೇಶವನ್ನು ವಿಭಜಿಸಲಿಲ್ಲ ಅಥವಾ ಸತ್ಯವನ್ನು ಮರೆಮಾಚಲಿಲ್ಲ ಎಂದು 89 ವರ್ಷದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಹೇಳಿದ್ದಾರೆ.

“ಒಂದೆಡೆ ಜನರು ಹಣದುಬ್ಬರ ಮತ್ತು ನಿರುದ್ಯೋಗದ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಮತ್ತೊಂದೆಡೆ, ಕಳೆದ ಏಳೂವರೆ ವರ್ಷಗಳಿಂದ ಅಧಿಕಾರದಲ್ಲಿರುವ ಈಗಿನ ಸರ್ಕಾರವು ತಮ್ಮ ತಪ್ಪುಗಳನ್ನು ಒಪ್ಪಿಕೊಂಡು ಸರಿಪಡಿಸುವ ಬದಲು ಜನರ ಸಮಸ್ಯೆಗಳಿಗೆ ಇನ್ನೂ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ದೂಷಿಸುತ್ತಿದೆ” ಎಂದು ವೀಡಿಯೊ ಸಂದೇಶದಲ್ಲಿ ಡಾ. ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್, ನೆಹರು ಮತ್ತು ಪಾಕಿಸ್ತಾನದ ಬಗ್ಗೆಯಷ್ಟೇ ಮೋದಿ ಮಾತನಾಡುತ್ತಾರೆ : ರಾಹುಲ್ ಗಾಂಧಿ

 

“ಪ್ರಧಾನಿ ಸ್ಥಾನಕ್ಕೆ ವಿಶೇಷ ಮಹತ್ವವಿದೆ ಎಂದು ನಾನು ಭಾವಿಸುತ್ತೇನೆ. ಪ್ರಧಾನಿಯವರು ಇತಿಹಾಸವನ್ನು ದೂಷಿಸುವ ಬದಲು ತಮ್ಮ ಘನತೆಯನ್ನು ಕಾಯ್ದುಕೊಳ್ಳಬೇಕು. ನಾನು 10 ವರ್ಷಗಳ ಕಾಲ ಪ್ರಧಾನಿಯಾಗಿದ್ದಾಗ ನನ್ನ ಕೆಲಸದ ಮೂಲಕ ಮಾತನಾಡಿದ್ದೇನೆ. ಪ್ರಪಂಚದ ಮುಂದೆ ದೇಶವು ಪ್ರತಿಷ್ಠೆಯನ್ನು ಕಳೆದುಕೊಳ್ಳಲು ನಾನು ಎಂದಿಗೂ ಬಿಡಲಿಲ್ಲ. ನಾನು ಎಂದಿಗೂ ಭಾರತದ ಹೆಮ್ಮೆಯನ್ನು ಕುಗ್ಗಿಸಿಲ್ಲ. ನನ್ನ ವಿರುದ್ಧ ದುರ್ಬಲ, ಶಾಂತ ಮತ್ತು ಭ್ರಷ್ಟ ಎಂಬ ಸುಳ್ಳು ಆರೋಪದ ನಂತರ, ಬಿಜೆಪಿ ಮತ್ತು ಅದರ ಬಿ ಮತ್ತು ಸಿ-ಟೀಮ್ ದೇಶದ ಮುಂದೆ ಬಹಿರಂಗಗೊಳ್ಳುತ್ತಿದೆ ಎಂಬ ತೃಪ್ತಿ ನನಗಿದೆ” ಎಂದಿದ್ದಾರೆ.

“ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಆರ್ಥಿಕ ನೀತಿಯ ಬಗ್ಗೆ ತಿಳುವಳಿಕೆ ಇಲ್ಲ. ಈ ವಿಷಯ ರಾಷ್ಟ್ರಕ್ಕೆ ಸೀಮಿತವಾಗಿಲ್ಲ, ವಿದೇಶಾಂಗ ನೀತಿಯಲ್ಲೂ ಈ ಸರ್ಕಾರ ವಿಫಲವಾಗಿದೆ, ಚೀನಾ ನಮ್ಮ ಗಡಿಯಲ್ಲಿ ಕುಳಿತು ಅದನ್ನು ಹತ್ತಿಕ್ಕುವ ಪ್ರಯತ್ನಗಳನ್ನು ಮಾಡುತ್ತಿದೆ. ನಾಯಕರನ್ನು ಬಲವಂತವಾಗಿ ತಬ್ಬಿಕೊಳ್ಳುವುದು ಅಥವಾ ಅವರಿಗೆ ಬಿರಿಯಾನಿ ತಿನ್ನಿಸುವ ಮೂಲಕ ವಿದೇಶಾಂಗ ನೀತಿಯನ್ನು ನಡೆಸಲಾಗುವುದಿಲ್ಲ ಎಂದು ಪ್ರಧಾನಿ ಅರ್ಥಮಾಡಿಕೊಂಡಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ತೀಕ್ಷ್ಣವಾಗಿ ತಿವಿದಿದ್ದಾರೆ.

“ನಾವು ಎಂದಿಗೂ ಪಟ್ಟಭದ್ರ ರಾಜಕೀಯ ಲಾಭಕ್ಕಾಗಿ ದೇಶವನ್ನು ವಿಭಜಿಸಲಿಲ್ಲ. ನಾವು ಎಂದಿಗೂ ಸತ್ಯವನ್ನು ಮರೆಮಾಚಲು ಪ್ರಯತ್ನಿಸಲಿಲ್ಲ. ನಾವು ಎಂದಿಗೂ ದೇಶದ ಗೌರವ ಅಥವಾ ಪ್ರಧಾನಿ ಸ್ಥಾನಕ್ಕೆ ಧಕ್ಕೆ ತಂದಿಲ್ಲ. ಜನರು ಇಂದು ವಿಭಜನೆಯಾಗುತ್ತಿದ್ದಾರೆ. ಈ ಸರ್ಕಾರದ ನಕಲಿ ರಾಷ್ಟ್ರೀಯತೆ ಟೊಳ್ಳು ಮತ್ತು ಅಪಾಯಕಾರಿ. ಒಡೆದು ಆಳುವ ಬ್ರಿಟಿಷರ ನೀತಿಯ ಮೇಲೆ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಲಾಗುತ್ತಿದೆ. ಸರ್ಕಾರದ ಆರ್ಥಿಕ ನೀತಿಯಲ್ಲಿ ಸ್ವಾರ್ಥ ಮತ್ತು ದುರಾಸೆ ಇದೆ. ತಮ್ಮ ಸ್ವಾರ್ಥಕ್ಕಾಗಿ ಜನರನ್ನು ಒಡೆದು ಹೊಡೆದಾಡುವಂತೆ ಮಾಡುತ್ತಿದ್ದಾರೆ” ಎಂದಿದ್ದಾರೆ.

ಮುಂದುವರೆದು, ”ಕೆಲವು ದಿನಗಳ ಹಿಂದೆ ಪ್ರಧಾನಿ ಭದ್ರತೆ ಹೆಸರಿನಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಹಾಗೂ ರಾಜ್ಯದ ಜನತೆಯನ್ನು ಅವಮಾನಿಸುವ ಪ್ರಯತ್ನ ನಡೆದಿತ್ತು. ರೈತರ ಆಂದೋಲನದ ಸಂದರ್ಭದಲ್ಲೂ ಪಂಜಾಬ್‌ ಮತ್ತು ಪಂಜಾಬಿಗರ ಮಾನಹಾನಿ ಮಾಡುವ ಯತ್ನ ನಡೆದಿತ್ತು. ಪಂಜಾಬಿಗಳ ಶೌರ್ಯ, ದೇಶಪ್ರೇಮ ಮತ್ತು ತ್ಯಾಗವನ್ನು ಇಡೀ ಜಗತ್ತು ಗೌರವಿಸುತ್ತದೆ. ಆದರೆ ಎನ್‌ಡಿಎ ಸರ್ಕಾರ ಈ ಬಗ್ಗೆ ಯಾವುದೇ ಮಾತನಾಡಲಿಲ್ಲ. ಪಂಜಾಬ್‌ನ ನಿಜವಾದ ಭಾರತೀಯನಾಗಿ ಈ ಎಲ್ಲಾ ವಿಷಯಗಳು ನನ್ನನ್ನು ತೀವ್ರವಾಗಿ ನೋಯಿಸುತ್ತವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

0
ದೆಹಲಿ ಎಎಪಿ ನಾಯಕಿ, ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ ವಿಭಿನ್ನ ತಿರುವನ್ನು ಪಡೆದುಕೊಂಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ಶುಕ್ರವಾರ ಎಎಪಿ...