Homeಮುಖಪುಟಮಣಿಪುರ ಹೊತ್ತಿಯುರಿಯುತ್ತಿದ್ದರೂ ಪ್ರಧಾನಿ 'ಮೌನ', ಗೃಹ ಸಚಿವ ಶಾ 'ನಿಷ್ಟ್ರಯೋಜಕ': ಜೈರಾಮ್ ರಮೇಶ್ ವಾಗ್ದಾಳಿ

ಮಣಿಪುರ ಹೊತ್ತಿಯುರಿಯುತ್ತಿದ್ದರೂ ಪ್ರಧಾನಿ ‘ಮೌನ’, ಗೃಹ ಸಚಿವ ಶಾ ‘ನಿಷ್ಟ್ರಯೋಜಕ’: ಜೈರಾಮ್ ರಮೇಶ್ ವಾಗ್ದಾಳಿ

- Advertisement -
- Advertisement -

ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ‘ಮೌನ’ವಾಗಿದ್ದಾರೆ, ಗೃಹ ಸಚಿವ ಅಮಿತ್ ಶಾ ‘ನಿಷ್ಟ್ರಯೋಜಕ’ರಾಗಿದ್ದಾರೆ ಮತ್ತು ಮುಖ್ಯಮಂತ್ರಿ ಎನ್‌. ಬಿರೆನ್ ಸಿಂಗ್ ‘ಕಾರ್ಯಹೀನರಾಗಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ವಾಗ್ದಾಳಿ ನಡೆಸಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದರೂ ಈ ವರೆಗೂ ಪರಿಸ್ಥಿತಿ ಹತೋಟೆಗೆ ಬಂದಿಲ್ಲ. ಮಣಿಪುರ ಶಾಂತಿಗೆ ಸಂಬಂಧಿಸಿದಂತೆ ಇಲ್ಲಿನ ಹರ್‌ಕಿಶನ್ ಸಿಂಗ್ ಸರ್ಜೀತ್‌ ಭವನದಲ್ಲಿ ಭಾನುವಾರ ರಾಷ್ಟ್ರೀಯ ಸಮಾವೇಶ ನಡೆಸಲಾಯಿತು.

ಸಮಾವೇಶದಲ್ಲಿ ಭಾಗವಹಿಸಿರುವ ಜೈರಾಮ್ ರಮೇಶ್ ಅವರು, ಸಂಘರ್ಷಪೀಡಿತ ಮಣಿಪುರದ ಪರಿಸ್ಥಿತಿ ಉಲ್ಲೇಖಿಸಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ”ಯಾವುದೇ ವಿಚಾರವಾಗಿ ಸರ್ವಸಮ್ಮತಿ ಸೂಚಿಸಲು ಸಾಧ್ಯವಾಗದೇ ಇರಬಹುದು ಆದರೆ ಒಮ್ಮತಕ್ಕೆ ಬರಲು ಸಾಧ್ಯವಿದೆ. ಭಾರತ ಸಂವಿಧಾನ ರಚನೆಯಾಗಿದ್ದೇ ಹೀಗೆ… ಎಲ್ಲರಿಗೂ ಕಿವಿಯಾಗಿ, ಸಂವೇದನಾಶೀಲವಾಗಿದ್ದರೆ ಮಣಿಪುರದಲ್ಲಿ ಶಾಂತಿ ಪುನಃಸ್ಥಾಪನೆ ಸಾಧ್ಯವಿದೆ. ಇದು ಸುದೀರ್ಘ ಪ್ರಕ್ರಿಯೆ; ಒಂದು ವಾರದಲ್ಲಿ ಸಾಧ್ಯವಿಲ್ಲ. ಅದಕ್ಕೆ ಒಂದು ತಿಂಗಳು ಅಥವಾ ವರ್ಷಾನುಗಟ್ಟಲೆ ಸಮಯ ಬೇಕು” ಎಂದು ಹೇಳಿದರು.

”ಮಣಿಪುರದಲ್ಲಿ ಕೂಡಲೇ ಮುಖ್ಯಮಂತ್ರಿ ಬದಲಾವಣೆಯಾಗಬೇಕು” ಎಂದು ಜೈರಾಮ್‌ ರಮೇಶ್ ಅವರು ಆಗ್ರಹಿಸಿದರು.

ಈಶಾನ್ಯ ರಾಜ್ಯದಲ್ಲಿ ಎರಡು ಮೂಲಭೂತ ಕ್ರಮಗಳನ್ನು ಅನುಷ್ಠಾನಗೊಳಿಸಬೇಕು

1- ಯಾವುದೇ ತಾರತಮ್ಯ ಇಲ್ಲದೆ ನಿರ್ದಾಕ್ಷಿಣ್ಯವಾಗಿ ಎಲ್ಲಾ ಸಶಸ್ತ್ರ ಗುಂಪನ್ನು ನಿಶ್ಯಸ್ತ್ರೀಕರಣಗೊಳಿಸಬೇಕು.

2- ನಂಬಿಕೆ, ಸಾಮರಸ್ಯದ ವಾತಾವರಣವನ್ನು ನಿರ್ಮಿಸಬೇಕು ಎಂದು ಹೇಳಿದರು.

ಈ ಬಗ್ಗೆ ಅವರು ಟ್ವಿಟ್ ಕೂಡ ಮಾಡಿದ್ದು, ”ಹತ್ತು ಸಮಾನ ಮನಸ್ಕ ರಾಜಕೀಯ ಪಕ್ಷಗಳು ಆಯೋಜಿಸಿದ್ದ ಸಮಾವೇಶದಲ್ಲಿ ಪಾಲ್ಗೊಂಡು ಮಣಿಪುರದಲ್ಲಿ ಉದ್ಭವಿಸಿರುವ ರಾಜಕೀಯ, ಆಡಳಿತಾತ್ಮಕ ಅರಾಜಕತೆ ಕುರಿತು ಅಭಿಪ್ರಾಯ ಹಂಚಿಕೊಂಡೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ಸಿಎಂ ಸಿಂಗ್‌ರನ್ನು ಪದಚ್ಯುತಗೊಳಿಸಲು ಸರ್ವಪಕ್ಷ ಸಭೆಯಲ್ಲಿ ಒತ್ತಾಯ

ಮಣಿಪುರದ ಬಗ್ಗೆ ಪ್ರಧಾನಿಗೆ ಕಾಳಜಿಯಿದ್ದರೆ ಸಿಎಂ ಸಿಎಂ ಸ್ಥಾನದಿಂದ ಸಿಂಗ್‌ರನ್ನು ವಜಾಗೊಳಿಸಲಿ: ಖರ್ಗೆ

ಮಣಿಪುರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಿಜವಾಗಿಯೂ ಕಾಳಜಿಯಿದ್ದರೆ, ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಎನ್. ಬಿರೇನ್ ಸಿಂಗ್ ಅವರನ್ನು ವಜಾಗೊಳಿಸಬೇಕು. ಇದು ಅವರು ಮಾಡಬೇಕಾದ ಮೊದಲ ಕೆಲಸವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ”ಮಣಿಪುರ ಹಿಂಸಾಚಾರದ ವಿಚಾರವಾಗಿ ಬಿಜೆಪಿ ತನ್ನ ವೈಫಲ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ” ಎಂದಿದ್ದಾರೆ.

”ಮಣಿಪುರ ಹಿಂಸಾಚಾರ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಧಾನಿಯೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಆದರೆ, ಕಳೆದ 55 ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರದ ಹಿಂಸಾಚಾರದ ಬಗ್ಗೆ ಒಂದೇ ಒಂದು ಮಾತು ಆಡಲಿಲ್ಲ. ಪ್ರಧಾನಿ ಅವರ ಪ್ರತಿಕ್ರಿಯೆಗಾಗಿ ಇಡೀ ದೇಶವೇ ಎದುರು ನೋಡುತ್ತಿದೆ. ಮಣಿಪುರದ ಬಗ್ಗೆ ಪ್ರಧಾನಿಗೆ ನಿಜವಾಗಿಯೂ ಕಾಳಜಿ ಇದ್ದರೆ ಮುಖ್ಯಮಂತ್ರಿ ಸ್ಥಾನದಿಂದ ಬಿರೇನ್ ಸಿಂಗ್ ಅವರನ್ನು ವಜಾಗೊಳಿಸಲಿ” ಎಂದು ಹೇಳಿದರು.

”ಮೊದಲಿಗೆ ಸರ್ಕಾರವು ಎಲ್ಲ ಪಕ್ಷಗಳ ಜೊತೆ ಮಾತುಕತೆ ನಡೆಸಬೇಕು. ಉಗ್ರಗಾಮಿ ಸಂಘಟನೆ ಮತ್ತು ಸಮಾಜ ಘಾತುಕ ಶಕ್ತಿಗಳಿಂದ ಕದ್ದ ಶಸ್ತ್ರಾಸ್ತ್ರಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಭದ್ರತಾ ಪಡೆಯ ಸಹಾಯ ಪಡೆದುಕೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿಗಳನ್ನು ಮುಕ್ತಗೊಳಿಸುವ ಮೂಲಕ ಅಗತ್ಯ ವಸ್ತುಗಳು ಜನರಿಗೆ ತಲುಪುವ ಹಾಗೆ ನೋಡಿಕೊಳ್ಳಬೇಕಿದೆ. ಹೆದ್ದಾರಿಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕಿದೆ” ಎಂದು ಖರ್ಗೆ ಆಗ್ರಹಿಸಿದ್ದಾರೆ.

”ಸಂತ್ರಸ್ತ ಕುಟುಂಬಗಳಿಗೆ ಪರಿಹಾರ-ಪುನರ್ವಸತಿ ಕಲ್ಪಿಸಬೇಕು. ಈ ವಿಷಯದಲ್ಲಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ಈಗಾಗಲೇ ಘೋಷಿಸಿರುವ ಪರಿಹಾರ ಕ್ರಮಗಳು ಅಸಮರ್ಪಕವಾಗಿವೆ” ಎಂದು ಮಲ್ಲಿಕಾರ್ಜುನ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...