Homeಮುಖಪುಟಮಣಿಪುರ ಹೊತ್ತಿಯುರಿಯುತ್ತಿದ್ದರೂ ಪ್ರಧಾನಿ 'ಮೌನ', ಗೃಹ ಸಚಿವ ಶಾ 'ನಿಷ್ಟ್ರಯೋಜಕ': ಜೈರಾಮ್ ರಮೇಶ್ ವಾಗ್ದಾಳಿ

ಮಣಿಪುರ ಹೊತ್ತಿಯುರಿಯುತ್ತಿದ್ದರೂ ಪ್ರಧಾನಿ ‘ಮೌನ’, ಗೃಹ ಸಚಿವ ಶಾ ‘ನಿಷ್ಟ್ರಯೋಜಕ’: ಜೈರಾಮ್ ರಮೇಶ್ ವಾಗ್ದಾಳಿ

- Advertisement -
- Advertisement -

ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ‘ಮೌನ’ವಾಗಿದ್ದಾರೆ, ಗೃಹ ಸಚಿವ ಅಮಿತ್ ಶಾ ‘ನಿಷ್ಟ್ರಯೋಜಕ’ರಾಗಿದ್ದಾರೆ ಮತ್ತು ಮುಖ್ಯಮಂತ್ರಿ ಎನ್‌. ಬಿರೆನ್ ಸಿಂಗ್ ‘ಕಾರ್ಯಹೀನರಾಗಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ವಾಗ್ದಾಳಿ ನಡೆಸಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದರೂ ಈ ವರೆಗೂ ಪರಿಸ್ಥಿತಿ ಹತೋಟೆಗೆ ಬಂದಿಲ್ಲ. ಮಣಿಪುರ ಶಾಂತಿಗೆ ಸಂಬಂಧಿಸಿದಂತೆ ಇಲ್ಲಿನ ಹರ್‌ಕಿಶನ್ ಸಿಂಗ್ ಸರ್ಜೀತ್‌ ಭವನದಲ್ಲಿ ಭಾನುವಾರ ರಾಷ್ಟ್ರೀಯ ಸಮಾವೇಶ ನಡೆಸಲಾಯಿತು.

ಸಮಾವೇಶದಲ್ಲಿ ಭಾಗವಹಿಸಿರುವ ಜೈರಾಮ್ ರಮೇಶ್ ಅವರು, ಸಂಘರ್ಷಪೀಡಿತ ಮಣಿಪುರದ ಪರಿಸ್ಥಿತಿ ಉಲ್ಲೇಖಿಸಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ”ಯಾವುದೇ ವಿಚಾರವಾಗಿ ಸರ್ವಸಮ್ಮತಿ ಸೂಚಿಸಲು ಸಾಧ್ಯವಾಗದೇ ಇರಬಹುದು ಆದರೆ ಒಮ್ಮತಕ್ಕೆ ಬರಲು ಸಾಧ್ಯವಿದೆ. ಭಾರತ ಸಂವಿಧಾನ ರಚನೆಯಾಗಿದ್ದೇ ಹೀಗೆ… ಎಲ್ಲರಿಗೂ ಕಿವಿಯಾಗಿ, ಸಂವೇದನಾಶೀಲವಾಗಿದ್ದರೆ ಮಣಿಪುರದಲ್ಲಿ ಶಾಂತಿ ಪುನಃಸ್ಥಾಪನೆ ಸಾಧ್ಯವಿದೆ. ಇದು ಸುದೀರ್ಘ ಪ್ರಕ್ರಿಯೆ; ಒಂದು ವಾರದಲ್ಲಿ ಸಾಧ್ಯವಿಲ್ಲ. ಅದಕ್ಕೆ ಒಂದು ತಿಂಗಳು ಅಥವಾ ವರ್ಷಾನುಗಟ್ಟಲೆ ಸಮಯ ಬೇಕು” ಎಂದು ಹೇಳಿದರು.

”ಮಣಿಪುರದಲ್ಲಿ ಕೂಡಲೇ ಮುಖ್ಯಮಂತ್ರಿ ಬದಲಾವಣೆಯಾಗಬೇಕು” ಎಂದು ಜೈರಾಮ್‌ ರಮೇಶ್ ಅವರು ಆಗ್ರಹಿಸಿದರು.

ಈಶಾನ್ಯ ರಾಜ್ಯದಲ್ಲಿ ಎರಡು ಮೂಲಭೂತ ಕ್ರಮಗಳನ್ನು ಅನುಷ್ಠಾನಗೊಳಿಸಬೇಕು

1- ಯಾವುದೇ ತಾರತಮ್ಯ ಇಲ್ಲದೆ ನಿರ್ದಾಕ್ಷಿಣ್ಯವಾಗಿ ಎಲ್ಲಾ ಸಶಸ್ತ್ರ ಗುಂಪನ್ನು ನಿಶ್ಯಸ್ತ್ರೀಕರಣಗೊಳಿಸಬೇಕು.

2- ನಂಬಿಕೆ, ಸಾಮರಸ್ಯದ ವಾತಾವರಣವನ್ನು ನಿರ್ಮಿಸಬೇಕು ಎಂದು ಹೇಳಿದರು.

ಈ ಬಗ್ಗೆ ಅವರು ಟ್ವಿಟ್ ಕೂಡ ಮಾಡಿದ್ದು, ”ಹತ್ತು ಸಮಾನ ಮನಸ್ಕ ರಾಜಕೀಯ ಪಕ್ಷಗಳು ಆಯೋಜಿಸಿದ್ದ ಸಮಾವೇಶದಲ್ಲಿ ಪಾಲ್ಗೊಂಡು ಮಣಿಪುರದಲ್ಲಿ ಉದ್ಭವಿಸಿರುವ ರಾಜಕೀಯ, ಆಡಳಿತಾತ್ಮಕ ಅರಾಜಕತೆ ಕುರಿತು ಅಭಿಪ್ರಾಯ ಹಂಚಿಕೊಂಡೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ಸಿಎಂ ಸಿಂಗ್‌ರನ್ನು ಪದಚ್ಯುತಗೊಳಿಸಲು ಸರ್ವಪಕ್ಷ ಸಭೆಯಲ್ಲಿ ಒತ್ತಾಯ

ಮಣಿಪುರದ ಬಗ್ಗೆ ಪ್ರಧಾನಿಗೆ ಕಾಳಜಿಯಿದ್ದರೆ ಸಿಎಂ ಸಿಎಂ ಸ್ಥಾನದಿಂದ ಸಿಂಗ್‌ರನ್ನು ವಜಾಗೊಳಿಸಲಿ: ಖರ್ಗೆ

ಮಣಿಪುರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಿಜವಾಗಿಯೂ ಕಾಳಜಿಯಿದ್ದರೆ, ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಎನ್. ಬಿರೇನ್ ಸಿಂಗ್ ಅವರನ್ನು ವಜಾಗೊಳಿಸಬೇಕು. ಇದು ಅವರು ಮಾಡಬೇಕಾದ ಮೊದಲ ಕೆಲಸವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ”ಮಣಿಪುರ ಹಿಂಸಾಚಾರದ ವಿಚಾರವಾಗಿ ಬಿಜೆಪಿ ತನ್ನ ವೈಫಲ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ” ಎಂದಿದ್ದಾರೆ.

”ಮಣಿಪುರ ಹಿಂಸಾಚಾರ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಧಾನಿಯೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಆದರೆ, ಕಳೆದ 55 ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರದ ಹಿಂಸಾಚಾರದ ಬಗ್ಗೆ ಒಂದೇ ಒಂದು ಮಾತು ಆಡಲಿಲ್ಲ. ಪ್ರಧಾನಿ ಅವರ ಪ್ರತಿಕ್ರಿಯೆಗಾಗಿ ಇಡೀ ದೇಶವೇ ಎದುರು ನೋಡುತ್ತಿದೆ. ಮಣಿಪುರದ ಬಗ್ಗೆ ಪ್ರಧಾನಿಗೆ ನಿಜವಾಗಿಯೂ ಕಾಳಜಿ ಇದ್ದರೆ ಮುಖ್ಯಮಂತ್ರಿ ಸ್ಥಾನದಿಂದ ಬಿರೇನ್ ಸಿಂಗ್ ಅವರನ್ನು ವಜಾಗೊಳಿಸಲಿ” ಎಂದು ಹೇಳಿದರು.

”ಮೊದಲಿಗೆ ಸರ್ಕಾರವು ಎಲ್ಲ ಪಕ್ಷಗಳ ಜೊತೆ ಮಾತುಕತೆ ನಡೆಸಬೇಕು. ಉಗ್ರಗಾಮಿ ಸಂಘಟನೆ ಮತ್ತು ಸಮಾಜ ಘಾತುಕ ಶಕ್ತಿಗಳಿಂದ ಕದ್ದ ಶಸ್ತ್ರಾಸ್ತ್ರಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಭದ್ರತಾ ಪಡೆಯ ಸಹಾಯ ಪಡೆದುಕೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿಗಳನ್ನು ಮುಕ್ತಗೊಳಿಸುವ ಮೂಲಕ ಅಗತ್ಯ ವಸ್ತುಗಳು ಜನರಿಗೆ ತಲುಪುವ ಹಾಗೆ ನೋಡಿಕೊಳ್ಳಬೇಕಿದೆ. ಹೆದ್ದಾರಿಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕಿದೆ” ಎಂದು ಖರ್ಗೆ ಆಗ್ರಹಿಸಿದ್ದಾರೆ.

”ಸಂತ್ರಸ್ತ ಕುಟುಂಬಗಳಿಗೆ ಪರಿಹಾರ-ಪುನರ್ವಸತಿ ಕಲ್ಪಿಸಬೇಕು. ಈ ವಿಷಯದಲ್ಲಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ಈಗಾಗಲೇ ಘೋಷಿಸಿರುವ ಪರಿಹಾರ ಕ್ರಮಗಳು ಅಸಮರ್ಪಕವಾಗಿವೆ” ಎಂದು ಮಲ್ಲಿಕಾರ್ಜುನ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...