Homeಮುಖಪುಟಮಣಿಪುರ ಹೊತ್ತಿಯುರಿಯುತ್ತಿದ್ದರೂ ಪ್ರಧಾನಿ 'ಮೌನ', ಗೃಹ ಸಚಿವ ಶಾ 'ನಿಷ್ಟ್ರಯೋಜಕ': ಜೈರಾಮ್ ರಮೇಶ್ ವಾಗ್ದಾಳಿ

ಮಣಿಪುರ ಹೊತ್ತಿಯುರಿಯುತ್ತಿದ್ದರೂ ಪ್ರಧಾನಿ ‘ಮೌನ’, ಗೃಹ ಸಚಿವ ಶಾ ‘ನಿಷ್ಟ್ರಯೋಜಕ’: ಜೈರಾಮ್ ರಮೇಶ್ ವಾಗ್ದಾಳಿ

- Advertisement -
- Advertisement -

ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ‘ಮೌನ’ವಾಗಿದ್ದಾರೆ, ಗೃಹ ಸಚಿವ ಅಮಿತ್ ಶಾ ‘ನಿಷ್ಟ್ರಯೋಜಕ’ರಾಗಿದ್ದಾರೆ ಮತ್ತು ಮುಖ್ಯಮಂತ್ರಿ ಎನ್‌. ಬಿರೆನ್ ಸಿಂಗ್ ‘ಕಾರ್ಯಹೀನರಾಗಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ವಾಗ್ದಾಳಿ ನಡೆಸಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದರೂ ಈ ವರೆಗೂ ಪರಿಸ್ಥಿತಿ ಹತೋಟೆಗೆ ಬಂದಿಲ್ಲ. ಮಣಿಪುರ ಶಾಂತಿಗೆ ಸಂಬಂಧಿಸಿದಂತೆ ಇಲ್ಲಿನ ಹರ್‌ಕಿಶನ್ ಸಿಂಗ್ ಸರ್ಜೀತ್‌ ಭವನದಲ್ಲಿ ಭಾನುವಾರ ರಾಷ್ಟ್ರೀಯ ಸಮಾವೇಶ ನಡೆಸಲಾಯಿತು.

ಸಮಾವೇಶದಲ್ಲಿ ಭಾಗವಹಿಸಿರುವ ಜೈರಾಮ್ ರಮೇಶ್ ಅವರು, ಸಂಘರ್ಷಪೀಡಿತ ಮಣಿಪುರದ ಪರಿಸ್ಥಿತಿ ಉಲ್ಲೇಖಿಸಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ”ಯಾವುದೇ ವಿಚಾರವಾಗಿ ಸರ್ವಸಮ್ಮತಿ ಸೂಚಿಸಲು ಸಾಧ್ಯವಾಗದೇ ಇರಬಹುದು ಆದರೆ ಒಮ್ಮತಕ್ಕೆ ಬರಲು ಸಾಧ್ಯವಿದೆ. ಭಾರತ ಸಂವಿಧಾನ ರಚನೆಯಾಗಿದ್ದೇ ಹೀಗೆ… ಎಲ್ಲರಿಗೂ ಕಿವಿಯಾಗಿ, ಸಂವೇದನಾಶೀಲವಾಗಿದ್ದರೆ ಮಣಿಪುರದಲ್ಲಿ ಶಾಂತಿ ಪುನಃಸ್ಥಾಪನೆ ಸಾಧ್ಯವಿದೆ. ಇದು ಸುದೀರ್ಘ ಪ್ರಕ್ರಿಯೆ; ಒಂದು ವಾರದಲ್ಲಿ ಸಾಧ್ಯವಿಲ್ಲ. ಅದಕ್ಕೆ ಒಂದು ತಿಂಗಳು ಅಥವಾ ವರ್ಷಾನುಗಟ್ಟಲೆ ಸಮಯ ಬೇಕು” ಎಂದು ಹೇಳಿದರು.

”ಮಣಿಪುರದಲ್ಲಿ ಕೂಡಲೇ ಮುಖ್ಯಮಂತ್ರಿ ಬದಲಾವಣೆಯಾಗಬೇಕು” ಎಂದು ಜೈರಾಮ್‌ ರಮೇಶ್ ಅವರು ಆಗ್ರಹಿಸಿದರು.

ಈಶಾನ್ಯ ರಾಜ್ಯದಲ್ಲಿ ಎರಡು ಮೂಲಭೂತ ಕ್ರಮಗಳನ್ನು ಅನುಷ್ಠಾನಗೊಳಿಸಬೇಕು

1- ಯಾವುದೇ ತಾರತಮ್ಯ ಇಲ್ಲದೆ ನಿರ್ದಾಕ್ಷಿಣ್ಯವಾಗಿ ಎಲ್ಲಾ ಸಶಸ್ತ್ರ ಗುಂಪನ್ನು ನಿಶ್ಯಸ್ತ್ರೀಕರಣಗೊಳಿಸಬೇಕು.

2- ನಂಬಿಕೆ, ಸಾಮರಸ್ಯದ ವಾತಾವರಣವನ್ನು ನಿರ್ಮಿಸಬೇಕು ಎಂದು ಹೇಳಿದರು.

ಈ ಬಗ್ಗೆ ಅವರು ಟ್ವಿಟ್ ಕೂಡ ಮಾಡಿದ್ದು, ”ಹತ್ತು ಸಮಾನ ಮನಸ್ಕ ರಾಜಕೀಯ ಪಕ್ಷಗಳು ಆಯೋಜಿಸಿದ್ದ ಸಮಾವೇಶದಲ್ಲಿ ಪಾಲ್ಗೊಂಡು ಮಣಿಪುರದಲ್ಲಿ ಉದ್ಭವಿಸಿರುವ ರಾಜಕೀಯ, ಆಡಳಿತಾತ್ಮಕ ಅರಾಜಕತೆ ಕುರಿತು ಅಭಿಪ್ರಾಯ ಹಂಚಿಕೊಂಡೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ಸಿಎಂ ಸಿಂಗ್‌ರನ್ನು ಪದಚ್ಯುತಗೊಳಿಸಲು ಸರ್ವಪಕ್ಷ ಸಭೆಯಲ್ಲಿ ಒತ್ತಾಯ

ಮಣಿಪುರದ ಬಗ್ಗೆ ಪ್ರಧಾನಿಗೆ ಕಾಳಜಿಯಿದ್ದರೆ ಸಿಎಂ ಸಿಎಂ ಸ್ಥಾನದಿಂದ ಸಿಂಗ್‌ರನ್ನು ವಜಾಗೊಳಿಸಲಿ: ಖರ್ಗೆ

ಮಣಿಪುರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಿಜವಾಗಿಯೂ ಕಾಳಜಿಯಿದ್ದರೆ, ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಎನ್. ಬಿರೇನ್ ಸಿಂಗ್ ಅವರನ್ನು ವಜಾಗೊಳಿಸಬೇಕು. ಇದು ಅವರು ಮಾಡಬೇಕಾದ ಮೊದಲ ಕೆಲಸವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ”ಮಣಿಪುರ ಹಿಂಸಾಚಾರದ ವಿಚಾರವಾಗಿ ಬಿಜೆಪಿ ತನ್ನ ವೈಫಲ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ” ಎಂದಿದ್ದಾರೆ.

”ಮಣಿಪುರ ಹಿಂಸಾಚಾರ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಧಾನಿಯೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಆದರೆ, ಕಳೆದ 55 ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರದ ಹಿಂಸಾಚಾರದ ಬಗ್ಗೆ ಒಂದೇ ಒಂದು ಮಾತು ಆಡಲಿಲ್ಲ. ಪ್ರಧಾನಿ ಅವರ ಪ್ರತಿಕ್ರಿಯೆಗಾಗಿ ಇಡೀ ದೇಶವೇ ಎದುರು ನೋಡುತ್ತಿದೆ. ಮಣಿಪುರದ ಬಗ್ಗೆ ಪ್ರಧಾನಿಗೆ ನಿಜವಾಗಿಯೂ ಕಾಳಜಿ ಇದ್ದರೆ ಮುಖ್ಯಮಂತ್ರಿ ಸ್ಥಾನದಿಂದ ಬಿರೇನ್ ಸಿಂಗ್ ಅವರನ್ನು ವಜಾಗೊಳಿಸಲಿ” ಎಂದು ಹೇಳಿದರು.

”ಮೊದಲಿಗೆ ಸರ್ಕಾರವು ಎಲ್ಲ ಪಕ್ಷಗಳ ಜೊತೆ ಮಾತುಕತೆ ನಡೆಸಬೇಕು. ಉಗ್ರಗಾಮಿ ಸಂಘಟನೆ ಮತ್ತು ಸಮಾಜ ಘಾತುಕ ಶಕ್ತಿಗಳಿಂದ ಕದ್ದ ಶಸ್ತ್ರಾಸ್ತ್ರಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಭದ್ರತಾ ಪಡೆಯ ಸಹಾಯ ಪಡೆದುಕೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿಗಳನ್ನು ಮುಕ್ತಗೊಳಿಸುವ ಮೂಲಕ ಅಗತ್ಯ ವಸ್ತುಗಳು ಜನರಿಗೆ ತಲುಪುವ ಹಾಗೆ ನೋಡಿಕೊಳ್ಳಬೇಕಿದೆ. ಹೆದ್ದಾರಿಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕಿದೆ” ಎಂದು ಖರ್ಗೆ ಆಗ್ರಹಿಸಿದ್ದಾರೆ.

”ಸಂತ್ರಸ್ತ ಕುಟುಂಬಗಳಿಗೆ ಪರಿಹಾರ-ಪುನರ್ವಸತಿ ಕಲ್ಪಿಸಬೇಕು. ಈ ವಿಷಯದಲ್ಲಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ಈಗಾಗಲೇ ಘೋಷಿಸಿರುವ ಪರಿಹಾರ ಕ್ರಮಗಳು ಅಸಮರ್ಪಕವಾಗಿವೆ” ಎಂದು ಮಲ್ಲಿಕಾರ್ಜುನ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...