Homeಮುಖಪುಟಪಿಎನ್‌ಬಿ ಸಾಲ ಹಗರಣ| 'ಮೆಹುಲ್ ಚೋಕ್ಸಿ ನಮ್ಮ ದೇಶದಲ್ಲಿಲ್ಲ..' ಎಂದ ಆಂಟಿಗುವಾ ವಿದೇಶಾಂಗ ಸಚಿವ

ಪಿಎನ್‌ಬಿ ಸಾಲ ಹಗರಣ| ‘ಮೆಹುಲ್ ಚೋಕ್ಸಿ ನಮ್ಮ ದೇಶದಲ್ಲಿಲ್ಲ..’ ಎಂದ ಆಂಟಿಗುವಾ ವಿದೇಶಾಂಗ ಸಚಿವ

- Advertisement -
- Advertisement -

ಭಾರತದ ಬ್ಯಾಂಕ್‌ಗೆ ಸಾಲ ಮರುಪಾವತಿಸದೆ ತಪ್ಪಿಸಿಕೊಂಡಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಪ್ರಸ್ತುತ ಆಂಟಿಗುವಾದಲ್ಲಿಲ್ಲ ಎಂದು ಆಂಟಿಗುವಾ-ಬಾರ್ಬುಡಾ ವಿದೇಶಾಂಗ ಸಚಿವ ಪಾಲ್ ಚೆಟ್ ಗ್ರೀನ್ ತಿಳಿಸಿದ್ದಾರೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಸಾಲ ವಂಚನೆ ಪ್ರಕರಣದಲ್ಲಿ ಚೋಕ್ಸಿ ಪ್ರಮುಖ ಆರೋಪಿಯಾಗಿದ್ದಾರೆ.

“ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿಲ್ಲ; ಕೊನೆಯದಾಗಿ ನಾನು ಕೇಳಿದ ಹಾಗೆ, ಅವರು ವೈದ್ಯಕೀಯ ಚಿಕಿತ್ಸೆ ಪಡೆಯಲು ಬೇರೆಡೆಗೆ  ತೆರಳಿದ್ದರು. ಅವರ ಪ್ರಕರಣದಲ್ಲಿ ನಾವು ಕಾನೂನಿನಲ್ಲಿ ಸರಿಯಾದ ಗಮನ ಹರಿಸುತ್ತೇವೆ. ಭಾರತದ ಜನರಿಗೆ ಮತ್ತು ಸರ್ಕಾರಕ್ಕೆ ಯಾವುದೇ ನಮ್ಮ ಕಡೆಯಿಂದ ಕುತಂತ್ರ ಇರುವುದಿಲ್ಲ ಎಂದು ನಾನು ಭರವಸೆ ನೀಡಲು ಬಯಸುತ್ತೇನೆ” ಎಂದರು.

ಇಲ್ಲಿಯವರೆಗೆ, ರೂ.13,850 ಕೋಟಿ ಹಗರಣ ಪತ್ತೆಯಾಗುವ ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ಎಫ್‌ಐಆರ್‌ಗಳನ್ನು ದಾಖಲಿಸುವ ಸ್ವಲ್ಪ ಸಮಯದ ಮೊದಲು, ಜನವರಿ 2018 ರಲ್ಲಿ ಭಾರತವನ್ನು ತೊರೆದ ನಂತರ ಚೋಕ್ಸಿ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿದ್ದಾರೆ ಎಂದು ನಂಬಲಾಗಿತ್ತು. ಭಾರತ ಅವರನ್ನು ಹಸ್ತಾಂತರಿಸುವಂತೆ ಕೋರಿದೆ, ಅದನ್ನು ಅವರು ಸ್ಥಳೀಯ ನ್ಯಾಯಾಲಯಗಳಲ್ಲಿ ಪ್ರಶ್ನಿಸಿದ್ದಾರೆ.

ಚೋಕ್ಸಿ ಮತ್ತು ಅವರ ಸೋದರಳಿಯ ನೀರವ್ ಮೋದಿ, ಮುಂಬೈನಲ್ಲಿರುವ ಬ್ಯಾಂಕಿನ ಬ್ರಾಡಿ ಹೌಸ್ ಶಾಖೆಯ ಅಧಿಕಾರಿಗಳಿಗೆ ಲಂಚ ನೀಡುವ ಮೂಲಕ ಪಿಎನ್‌ಬಿಯಿಂದ ರೂ. 13,850 ಕೋಟಿಗಳನ್ನು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಫೆಬ್ರವರಿಯಲ್ಲಿ, ವಿಶೇಷ ಸಿಬಿಐ ನ್ಯಾಯಾಲಯವು ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿಗೆ ಸಂಬಂಧಿಸಿದ ಕಂಪನಿಯಾದ ಗೀತಾಂಜಲಿ ಜೆಮ್ಸ್ ಲಿಮಿಟೆಡ್ ಒಡೆತನದ ಆಸ್ತಿಗಳನ್ನು ಹರಾಜಿಗೆ ಅನುಮತಿ ನೀಡಿತು.

ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿಯಲ್ಲಿ ಲಿಕ್ವಿಡೇಟರ್ ಶಾಂತನು ರೇ ಅವರ ಕೋರಿಕೆಯ ಮೇರೆಗೆ ವಿಶೇಷ ನ್ಯಾಯಾಧೀಶ ಎಸ್.ಎಂ. ಮೆನ್ಜೋಗೆ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. “ಆಸ್ತಿಯನ್ನು ನಿಷ್ಕ್ರಿಯವಾಗಿ ಮತ್ತು ನಿರ್ವಹಣೆ ಇಲ್ಲದೆ ಇರಿಸಿದರೆ, ಅದು ಖಂಡಿತವಾಗಿಯೂ ಮೌಲ್ಯವನ್ನು ಕಡಿಮೆ ಮಾಡುತ್ತದೆ” ಎಂದು ನ್ಯಾಯಾಧೀಶರು ಹೇಳಿದರು. “ಆದ್ದರಿಂದ, ಈ ಪ್ರಕರಣದಲ್ಲಿ ತುರ್ತಾಗಿ ಆದೇಶ ಹೊರಡಿಸುವುದು ಅವಶ್ಯಕ” ಎಂದು ಅವರು ಹೇಳಿದರು.

2014 ಮತ್ತು 2017 ರ ನಡುವೆ ಮೆಹುಲ್ ಚೋಕ್ಸಿ ಪಂಜಾಬ್ ನ್ಯಾಷನಲ್ ಬ್ಯಾಂಕಿನ ಸಹಚರರು ಮತ್ತು ಅಧಿಕಾರಿಗಳೊಂದಿಗೆ ವಂಚನೆಯ ಅಂಡರ್‌ಟೇಕಿಂಗ್ ಲೆಟರ್‌ಗಳು ಮತ್ತು ವಿದೇಶಿ ಕ್ರೆಡಿಟ್ ಲೆಟರ್‌ಗಳನ್ನು ಪಡೆಯಲು ಸಂಚು ರೂಪಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಇದರಿಂದಾಗಿ ಬ್ಯಾಂಕಿಗೆ ರೂ. 6,097.63 ಕೋಟಿ ನಷ್ಟ ಉಂಟಾಗಿದೆ. ಚೋಕ್ಸಿ ಐಸಿಐಸಿಐ ಬ್ಯಾಂಕಿನಿಂದ ಪಡೆದ ಸಾಲವನ್ನು ಮರುಪಾವತಿಸುವಲ್ಲಿಯೂ ವಿಫಲರಾಗಿದ್ದಾರೆ.

ಚೋಕ್ಸಿಯವರ ಸೋದರಳಿಯ, ಪಿಎನ್‌ಬಿ ಪ್ರಕರಣದಲ್ಲಿ ಆರೋಪಿಯಾಗಿರುವ ನೀರವ್ ಮೋದಿ, ಹಗರಣ ಪತ್ತೆಯಾಗುವ ಮೊದಲು 2018 ರ ಜನವರಿಯಲ್ಲಿ ಭಾರತವನ್ನು ತೊರೆದರು. ಏಜೆನ್ಸಿಯ ಮಾಹಿತಿಯ ಆಧಾರದ ಮೇಲೆ, ಮೋದಿಯನ್ನು ಮಾರ್ಚ್ 2019 ರಲ್ಲಿ ಲಂಡನ್‌ನಲ್ಲಿ ಬಂಧಿಸಲಾಯಿತು. ಹಸ್ತಾಂತರ ಪ್ರಕ್ರಿಯೆಗಳು ನಡೆಯುತ್ತಿವೆ.

ವಿದೇಶ ಪ್ರವಾಸಕ್ಕೆ ಹೈಕೋರ್ಟ್ ಅನುಮತಿ ಕೋರಿದ ಪ್ರೊಫೆಸರ್ ಆನಂದ್ ತೇಲ್ತುಂಬ್ಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...