Homeಮುಖಪುಟಪಿಎನ್‌ಬಿ ಸಾಲ ಹಗರಣ| 'ಮೆಹುಲ್ ಚೋಕ್ಸಿ ನಮ್ಮ ದೇಶದಲ್ಲಿಲ್ಲ..' ಎಂದ ಆಂಟಿಗುವಾ ವಿದೇಶಾಂಗ ಸಚಿವ

ಪಿಎನ್‌ಬಿ ಸಾಲ ಹಗರಣ| ‘ಮೆಹುಲ್ ಚೋಕ್ಸಿ ನಮ್ಮ ದೇಶದಲ್ಲಿಲ್ಲ..’ ಎಂದ ಆಂಟಿಗುವಾ ವಿದೇಶಾಂಗ ಸಚಿವ

- Advertisement -
- Advertisement -

ಭಾರತದ ಬ್ಯಾಂಕ್‌ಗೆ ಸಾಲ ಮರುಪಾವತಿಸದೆ ತಪ್ಪಿಸಿಕೊಂಡಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಪ್ರಸ್ತುತ ಆಂಟಿಗುವಾದಲ್ಲಿಲ್ಲ ಎಂದು ಆಂಟಿಗುವಾ-ಬಾರ್ಬುಡಾ ವಿದೇಶಾಂಗ ಸಚಿವ ಪಾಲ್ ಚೆಟ್ ಗ್ರೀನ್ ತಿಳಿಸಿದ್ದಾರೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಸಾಲ ವಂಚನೆ ಪ್ರಕರಣದಲ್ಲಿ ಚೋಕ್ಸಿ ಪ್ರಮುಖ ಆರೋಪಿಯಾಗಿದ್ದಾರೆ.

“ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿಲ್ಲ; ಕೊನೆಯದಾಗಿ ನಾನು ಕೇಳಿದ ಹಾಗೆ, ಅವರು ವೈದ್ಯಕೀಯ ಚಿಕಿತ್ಸೆ ಪಡೆಯಲು ಬೇರೆಡೆಗೆ  ತೆರಳಿದ್ದರು. ಅವರ ಪ್ರಕರಣದಲ್ಲಿ ನಾವು ಕಾನೂನಿನಲ್ಲಿ ಸರಿಯಾದ ಗಮನ ಹರಿಸುತ್ತೇವೆ. ಭಾರತದ ಜನರಿಗೆ ಮತ್ತು ಸರ್ಕಾರಕ್ಕೆ ಯಾವುದೇ ನಮ್ಮ ಕಡೆಯಿಂದ ಕುತಂತ್ರ ಇರುವುದಿಲ್ಲ ಎಂದು ನಾನು ಭರವಸೆ ನೀಡಲು ಬಯಸುತ್ತೇನೆ” ಎಂದರು.

ಇಲ್ಲಿಯವರೆಗೆ, ರೂ.13,850 ಕೋಟಿ ಹಗರಣ ಪತ್ತೆಯಾಗುವ ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ಎಫ್‌ಐಆರ್‌ಗಳನ್ನು ದಾಖಲಿಸುವ ಸ್ವಲ್ಪ ಸಮಯದ ಮೊದಲು, ಜನವರಿ 2018 ರಲ್ಲಿ ಭಾರತವನ್ನು ತೊರೆದ ನಂತರ ಚೋಕ್ಸಿ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿದ್ದಾರೆ ಎಂದು ನಂಬಲಾಗಿತ್ತು. ಭಾರತ ಅವರನ್ನು ಹಸ್ತಾಂತರಿಸುವಂತೆ ಕೋರಿದೆ, ಅದನ್ನು ಅವರು ಸ್ಥಳೀಯ ನ್ಯಾಯಾಲಯಗಳಲ್ಲಿ ಪ್ರಶ್ನಿಸಿದ್ದಾರೆ.

ಚೋಕ್ಸಿ ಮತ್ತು ಅವರ ಸೋದರಳಿಯ ನೀರವ್ ಮೋದಿ, ಮುಂಬೈನಲ್ಲಿರುವ ಬ್ಯಾಂಕಿನ ಬ್ರಾಡಿ ಹೌಸ್ ಶಾಖೆಯ ಅಧಿಕಾರಿಗಳಿಗೆ ಲಂಚ ನೀಡುವ ಮೂಲಕ ಪಿಎನ್‌ಬಿಯಿಂದ ರೂ. 13,850 ಕೋಟಿಗಳನ್ನು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಫೆಬ್ರವರಿಯಲ್ಲಿ, ವಿಶೇಷ ಸಿಬಿಐ ನ್ಯಾಯಾಲಯವು ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿಗೆ ಸಂಬಂಧಿಸಿದ ಕಂಪನಿಯಾದ ಗೀತಾಂಜಲಿ ಜೆಮ್ಸ್ ಲಿಮಿಟೆಡ್ ಒಡೆತನದ ಆಸ್ತಿಗಳನ್ನು ಹರಾಜಿಗೆ ಅನುಮತಿ ನೀಡಿತು.

ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿಯಲ್ಲಿ ಲಿಕ್ವಿಡೇಟರ್ ಶಾಂತನು ರೇ ಅವರ ಕೋರಿಕೆಯ ಮೇರೆಗೆ ವಿಶೇಷ ನ್ಯಾಯಾಧೀಶ ಎಸ್.ಎಂ. ಮೆನ್ಜೋಗೆ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. “ಆಸ್ತಿಯನ್ನು ನಿಷ್ಕ್ರಿಯವಾಗಿ ಮತ್ತು ನಿರ್ವಹಣೆ ಇಲ್ಲದೆ ಇರಿಸಿದರೆ, ಅದು ಖಂಡಿತವಾಗಿಯೂ ಮೌಲ್ಯವನ್ನು ಕಡಿಮೆ ಮಾಡುತ್ತದೆ” ಎಂದು ನ್ಯಾಯಾಧೀಶರು ಹೇಳಿದರು. “ಆದ್ದರಿಂದ, ಈ ಪ್ರಕರಣದಲ್ಲಿ ತುರ್ತಾಗಿ ಆದೇಶ ಹೊರಡಿಸುವುದು ಅವಶ್ಯಕ” ಎಂದು ಅವರು ಹೇಳಿದರು.

2014 ಮತ್ತು 2017 ರ ನಡುವೆ ಮೆಹುಲ್ ಚೋಕ್ಸಿ ಪಂಜಾಬ್ ನ್ಯಾಷನಲ್ ಬ್ಯಾಂಕಿನ ಸಹಚರರು ಮತ್ತು ಅಧಿಕಾರಿಗಳೊಂದಿಗೆ ವಂಚನೆಯ ಅಂಡರ್‌ಟೇಕಿಂಗ್ ಲೆಟರ್‌ಗಳು ಮತ್ತು ವಿದೇಶಿ ಕ್ರೆಡಿಟ್ ಲೆಟರ್‌ಗಳನ್ನು ಪಡೆಯಲು ಸಂಚು ರೂಪಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಇದರಿಂದಾಗಿ ಬ್ಯಾಂಕಿಗೆ ರೂ. 6,097.63 ಕೋಟಿ ನಷ್ಟ ಉಂಟಾಗಿದೆ. ಚೋಕ್ಸಿ ಐಸಿಐಸಿಐ ಬ್ಯಾಂಕಿನಿಂದ ಪಡೆದ ಸಾಲವನ್ನು ಮರುಪಾವತಿಸುವಲ್ಲಿಯೂ ವಿಫಲರಾಗಿದ್ದಾರೆ.

ಚೋಕ್ಸಿಯವರ ಸೋದರಳಿಯ, ಪಿಎನ್‌ಬಿ ಪ್ರಕರಣದಲ್ಲಿ ಆರೋಪಿಯಾಗಿರುವ ನೀರವ್ ಮೋದಿ, ಹಗರಣ ಪತ್ತೆಯಾಗುವ ಮೊದಲು 2018 ರ ಜನವರಿಯಲ್ಲಿ ಭಾರತವನ್ನು ತೊರೆದರು. ಏಜೆನ್ಸಿಯ ಮಾಹಿತಿಯ ಆಧಾರದ ಮೇಲೆ, ಮೋದಿಯನ್ನು ಮಾರ್ಚ್ 2019 ರಲ್ಲಿ ಲಂಡನ್‌ನಲ್ಲಿ ಬಂಧಿಸಲಾಯಿತು. ಹಸ್ತಾಂತರ ಪ್ರಕ್ರಿಯೆಗಳು ನಡೆಯುತ್ತಿವೆ.

ವಿದೇಶ ಪ್ರವಾಸಕ್ಕೆ ಹೈಕೋರ್ಟ್ ಅನುಮತಿ ಕೋರಿದ ಪ್ರೊಫೆಸರ್ ಆನಂದ್ ತೇಲ್ತುಂಬ್ಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...