Homeಮುಖಪುಟಪಿಎನ್‌ಬಿ ಸಾಲ ಹಗರಣ| 'ಮೆಹುಲ್ ಚೋಕ್ಸಿ ನಮ್ಮ ದೇಶದಲ್ಲಿಲ್ಲ..' ಎಂದ ಆಂಟಿಗುವಾ ವಿದೇಶಾಂಗ ಸಚಿವ

ಪಿಎನ್‌ಬಿ ಸಾಲ ಹಗರಣ| ‘ಮೆಹುಲ್ ಚೋಕ್ಸಿ ನಮ್ಮ ದೇಶದಲ್ಲಿಲ್ಲ..’ ಎಂದ ಆಂಟಿಗುವಾ ವಿದೇಶಾಂಗ ಸಚಿವ

- Advertisement -
- Advertisement -

ಭಾರತದ ಬ್ಯಾಂಕ್‌ಗೆ ಸಾಲ ಮರುಪಾವತಿಸದೆ ತಪ್ಪಿಸಿಕೊಂಡಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಪ್ರಸ್ತುತ ಆಂಟಿಗುವಾದಲ್ಲಿಲ್ಲ ಎಂದು ಆಂಟಿಗುವಾ-ಬಾರ್ಬುಡಾ ವಿದೇಶಾಂಗ ಸಚಿವ ಪಾಲ್ ಚೆಟ್ ಗ್ರೀನ್ ತಿಳಿಸಿದ್ದಾರೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಸಾಲ ವಂಚನೆ ಪ್ರಕರಣದಲ್ಲಿ ಚೋಕ್ಸಿ ಪ್ರಮುಖ ಆರೋಪಿಯಾಗಿದ್ದಾರೆ.

“ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿಲ್ಲ; ಕೊನೆಯದಾಗಿ ನಾನು ಕೇಳಿದ ಹಾಗೆ, ಅವರು ವೈದ್ಯಕೀಯ ಚಿಕಿತ್ಸೆ ಪಡೆಯಲು ಬೇರೆಡೆಗೆ  ತೆರಳಿದ್ದರು. ಅವರ ಪ್ರಕರಣದಲ್ಲಿ ನಾವು ಕಾನೂನಿನಲ್ಲಿ ಸರಿಯಾದ ಗಮನ ಹರಿಸುತ್ತೇವೆ. ಭಾರತದ ಜನರಿಗೆ ಮತ್ತು ಸರ್ಕಾರಕ್ಕೆ ಯಾವುದೇ ನಮ್ಮ ಕಡೆಯಿಂದ ಕುತಂತ್ರ ಇರುವುದಿಲ್ಲ ಎಂದು ನಾನು ಭರವಸೆ ನೀಡಲು ಬಯಸುತ್ತೇನೆ” ಎಂದರು.

ಇಲ್ಲಿಯವರೆಗೆ, ರೂ.13,850 ಕೋಟಿ ಹಗರಣ ಪತ್ತೆಯಾಗುವ ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ಎಫ್‌ಐಆರ್‌ಗಳನ್ನು ದಾಖಲಿಸುವ ಸ್ವಲ್ಪ ಸಮಯದ ಮೊದಲು, ಜನವರಿ 2018 ರಲ್ಲಿ ಭಾರತವನ್ನು ತೊರೆದ ನಂತರ ಚೋಕ್ಸಿ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿದ್ದಾರೆ ಎಂದು ನಂಬಲಾಗಿತ್ತು. ಭಾರತ ಅವರನ್ನು ಹಸ್ತಾಂತರಿಸುವಂತೆ ಕೋರಿದೆ, ಅದನ್ನು ಅವರು ಸ್ಥಳೀಯ ನ್ಯಾಯಾಲಯಗಳಲ್ಲಿ ಪ್ರಶ್ನಿಸಿದ್ದಾರೆ.

ಚೋಕ್ಸಿ ಮತ್ತು ಅವರ ಸೋದರಳಿಯ ನೀರವ್ ಮೋದಿ, ಮುಂಬೈನಲ್ಲಿರುವ ಬ್ಯಾಂಕಿನ ಬ್ರಾಡಿ ಹೌಸ್ ಶಾಖೆಯ ಅಧಿಕಾರಿಗಳಿಗೆ ಲಂಚ ನೀಡುವ ಮೂಲಕ ಪಿಎನ್‌ಬಿಯಿಂದ ರೂ. 13,850 ಕೋಟಿಗಳನ್ನು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಫೆಬ್ರವರಿಯಲ್ಲಿ, ವಿಶೇಷ ಸಿಬಿಐ ನ್ಯಾಯಾಲಯವು ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿಗೆ ಸಂಬಂಧಿಸಿದ ಕಂಪನಿಯಾದ ಗೀತಾಂಜಲಿ ಜೆಮ್ಸ್ ಲಿಮಿಟೆಡ್ ಒಡೆತನದ ಆಸ್ತಿಗಳನ್ನು ಹರಾಜಿಗೆ ಅನುಮತಿ ನೀಡಿತು.

ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿಯಲ್ಲಿ ಲಿಕ್ವಿಡೇಟರ್ ಶಾಂತನು ರೇ ಅವರ ಕೋರಿಕೆಯ ಮೇರೆಗೆ ವಿಶೇಷ ನ್ಯಾಯಾಧೀಶ ಎಸ್.ಎಂ. ಮೆನ್ಜೋಗೆ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. “ಆಸ್ತಿಯನ್ನು ನಿಷ್ಕ್ರಿಯವಾಗಿ ಮತ್ತು ನಿರ್ವಹಣೆ ಇಲ್ಲದೆ ಇರಿಸಿದರೆ, ಅದು ಖಂಡಿತವಾಗಿಯೂ ಮೌಲ್ಯವನ್ನು ಕಡಿಮೆ ಮಾಡುತ್ತದೆ” ಎಂದು ನ್ಯಾಯಾಧೀಶರು ಹೇಳಿದರು. “ಆದ್ದರಿಂದ, ಈ ಪ್ರಕರಣದಲ್ಲಿ ತುರ್ತಾಗಿ ಆದೇಶ ಹೊರಡಿಸುವುದು ಅವಶ್ಯಕ” ಎಂದು ಅವರು ಹೇಳಿದರು.

2014 ಮತ್ತು 2017 ರ ನಡುವೆ ಮೆಹುಲ್ ಚೋಕ್ಸಿ ಪಂಜಾಬ್ ನ್ಯಾಷನಲ್ ಬ್ಯಾಂಕಿನ ಸಹಚರರು ಮತ್ತು ಅಧಿಕಾರಿಗಳೊಂದಿಗೆ ವಂಚನೆಯ ಅಂಡರ್‌ಟೇಕಿಂಗ್ ಲೆಟರ್‌ಗಳು ಮತ್ತು ವಿದೇಶಿ ಕ್ರೆಡಿಟ್ ಲೆಟರ್‌ಗಳನ್ನು ಪಡೆಯಲು ಸಂಚು ರೂಪಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಇದರಿಂದಾಗಿ ಬ್ಯಾಂಕಿಗೆ ರೂ. 6,097.63 ಕೋಟಿ ನಷ್ಟ ಉಂಟಾಗಿದೆ. ಚೋಕ್ಸಿ ಐಸಿಐಸಿಐ ಬ್ಯಾಂಕಿನಿಂದ ಪಡೆದ ಸಾಲವನ್ನು ಮರುಪಾವತಿಸುವಲ್ಲಿಯೂ ವಿಫಲರಾಗಿದ್ದಾರೆ.

ಚೋಕ್ಸಿಯವರ ಸೋದರಳಿಯ, ಪಿಎನ್‌ಬಿ ಪ್ರಕರಣದಲ್ಲಿ ಆರೋಪಿಯಾಗಿರುವ ನೀರವ್ ಮೋದಿ, ಹಗರಣ ಪತ್ತೆಯಾಗುವ ಮೊದಲು 2018 ರ ಜನವರಿಯಲ್ಲಿ ಭಾರತವನ್ನು ತೊರೆದರು. ಏಜೆನ್ಸಿಯ ಮಾಹಿತಿಯ ಆಧಾರದ ಮೇಲೆ, ಮೋದಿಯನ್ನು ಮಾರ್ಚ್ 2019 ರಲ್ಲಿ ಲಂಡನ್‌ನಲ್ಲಿ ಬಂಧಿಸಲಾಯಿತು. ಹಸ್ತಾಂತರ ಪ್ರಕ್ರಿಯೆಗಳು ನಡೆಯುತ್ತಿವೆ.

ವಿದೇಶ ಪ್ರವಾಸಕ್ಕೆ ಹೈಕೋರ್ಟ್ ಅನುಮತಿ ಕೋರಿದ ಪ್ರೊಫೆಸರ್ ಆನಂದ್ ತೇಲ್ತುಂಬ್ಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...