Homeಕರ್ನಾಟಕಪೋಕ್ಸೊ ಮತ್ತು ಐಪಿಸಿ ‘ವೈಯಕ್ತಿಕ’ ಕಾನೂನನ್ನು ಮೀರಿ ಅನ್ವಯವಾಗುತ್ತದೆ: ಕರ್ನಾಟಕ ಹೈಕೋರ್ಟ್

ಪೋಕ್ಸೊ ಮತ್ತು ಐಪಿಸಿ ‘ವೈಯಕ್ತಿಕ’ ಕಾನೂನನ್ನು ಮೀರಿ ಅನ್ವಯವಾಗುತ್ತದೆ: ಕರ್ನಾಟಕ ಹೈಕೋರ್ಟ್

ಪ್ರೌಢಾವಸ್ಥೆಗೆ ಬಂದ ಅಪ್ರಾಪ್ತ ಮುಸ್ಲಿಂ ಬಾಲಕಿಯ ವಿವಾಹವಾಗುವುದು ಬಾಲ್ಯವಿವಾಹವಲ್ಲ ಎಂಬ ವಾದವನ್ನು ಕೋರ್ಟ್ ತಿರಸ್ಕರಿದೆ

- Advertisement -
- Advertisement -

ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯಿದೆಯು ವೈಯಕ್ತಿಕ ಕಾನೂನನ್ನು ಮೀರಿ ಅನ್ವಯವಾಗುವ ವಿಶೇಷ ಕಾಯಿದೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ವ್ಯಾಖ್ಯಾನಿಸಿದೆ. ಅಪ್ರಾಪ್ತ ವಯಸ್ಕರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಜಾಮೀನು ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರು ಎರಡು ವಿಭಿನ್ನ ಸಂದರ್ಭಗಳಲ್ಲಿ ಈ ಬಗ್ಗೆ ಉಲ್ಲೇಖಿಸಿದೆ.

ಪ್ರೌಢಾವಸ್ಥೆಗೆ ಬಂದ ಅಪ್ರಾಪ್ತ ಮುಸ್ಲಿಂ ಬಾಲಕಿಯ ವಿವಾಹವಾಗುವುದು ಬಾಲ್ಯವಿವಾಹ ನಿಷೇಧ ಕಾಯಿದೆಯ ಉಲ್ಲಂಘನೆಯಲ್ಲ ಎಂಬ ವಾದವನ್ನೂ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್‌‌ ಅವರು ತಿರಸ್ಕರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊದಲ ಪ್ರಕರಣದಲ್ಲಿ, 17 ವರ್ಷದ ಬಾಲಕಿ 2022 ರ ಜೂನ್ 16 ರಂದು ವೈದ್ಯಕೀಯ ತಪಾಸಣೆಗಾಗಿ ರಾಮಮೂರ್ತಿ ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋದ ವೇಳೆ ಅವರು ಗರ್ಭಿಣಿ ಎಂದು ಕಂಡು ಬಂದಿತ್ತು. ಈ ವೇಳೆ ಬಾಲಕಿಯ ಪತಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಮುಂಬೈ ಹೈಕೋರ್ಟ್‌: ಅತ್ಯಾಚಾರ ಸಂತ್ರಸ್ತೆ ವರ್ಷದೊಳಗೆ ಪತ್ತೆಯಾದರೆ ಮದುವೆಯಾಗುವಂತೆ ಆರೋಪಿಗೆ ಆದೇಶ!

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಕೀಯ ಅಧಿಕಾರಿ ನೀಡಿದ ಮಾಹಿತಿಯ ಆಧಾರದ ಮೇಲೆ ಆರ್‌ಕೆ ಪುರಂ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ (ಎಸ್‌ಐ) ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ಬಾಲ್ಯವಿವಾಹ ತಡೆ ಕಾಯಿದೆಯ ಸೆಕ್ಷನ್ 9 ಮತ್ತು 10 ಮತ್ತು ಪೋಕ್ಸೊ ಸೆಕ್ಷನ್ 4 ಮತ್ತು 6 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವನ್ನು ಅವರು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಇದರ ನಂತರ ಬಾಲಕಿಯ ಪತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

“ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ, ಪ್ರೌಢಾವಸ್ಥೆಯನ್ನು (ಸಾಮಾನ್ಯವಾಗಿ 15 ವರ್ಷಗಳು) ಮಹಿಳೆಯ ಮದುವೆಗೆ ಸಾಮಾನ್ಯ ವಯಸ್ಸು ಎಂದು ಪರಿಗಣಿಸಲಾಗುತ್ತದೆ. ಪ್ರಕರಣದಲ್ಲಿ ಮದುವೆಗೂ ಮುನ್ನವೇ ಬಾಲಕಿ ಪ್ರೌಢಾವಸ್ಥೆಗೆ ಬಂದಿದ್ದರಿಂದ ಬಾಲ್ಯವಿವಾಹ ತಡೆ ಕಾಯ್ದೆ ಪ್ರಕಾರ ಅವರ ಮದುವೆ ಅಪರಾಧವಲ್ಲ” ಎಂದು ಅರ್ಜಿದಾರರ ಪರವಾಗಿ ವಕೀಲರು ವಾದಿಸಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು: BJP ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆಯ ನಡುವೆ ದಲಿತ-ಮುಸ್ಲಿಂ ಜೋಡಿ ಮದುವೆ

ಈ ವಾದವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ, “POCSO ವೈಯಕ್ತಿಕ ಕಾನೂನನ್ನು ಅತಿಕ್ರಮಿಸುತ್ತದೆ ಮತ್ತು ಲೈಂಗಿಕ ಚಟುವಟಿಕೆಗಳಿಗೆ ಒಪ್ಪಿಗೆ ನೀಡುವ ವಯಸ್ಸು 18 ಆಗಿರುವುದರಿಂದ ಅಂತಹ ವಾದಗಳನ್ನು ಅನುಮತಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಆದಾಗ್ಯೂ, ತೀರ್ಪಿನಲ್ಲಿ,“ಸಂತ್ರಸ್ತೆಗೆ ಸುಮಾರು 17 ವರ್ಷ ವಯಸ್ಸಾಗಿದ್ದು, ವಿಷಯಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯವಿದೆ” ಎಂದು ಹೇಳಲಾಗಿದೆ. ತನ್ನ ಒಪ್ಪಿಗೆಯಿಲ್ಲದೆ ವಿವಾಹವನ್ನು ಶಾಸ್ತ್ರೋಕ್ತವಾಗಿ ನಡೆಸಲಾಗಿದೆ ಎಂದು ಆಕೆ ಆರೋಪಿಸಿದ್ದರೂ, ಅದಕ್ಕೆ ಆಕೆಯ ಆಕ್ಷೇಪಣೆಗೆ ಯಾವುದೇ ಪುರಾವೆಗಳಿಲ್ಲ ಎಂದು ಅದು ಹೇಳಿದೆ. ಆಕೆ ತನ್ನ ಪೋಷಕರ ಪ್ರಭಾವದಲ್ಲಿದ್ದರೂ ಒಪ್ಪಿಗೆ ನೀಡುವ ಪಕ್ಷವಾಗಿದ್ದಳು ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ಅರ್ಜಿದಾರರಿಗೆ ಜಾಮೀನು ನೀಡಲು ಯಾವುದೇ ಅಡ್ಡಿಯಿಲ್ಲ ಎಂದು ಉಲ್ಲೇಖಿಸಿದ ನ್ಯಾಯಾಧೀಶರು, “ಅರ್ಜಿದಾರರು ಸೂಕ್ತ ದಾಖಲೆಗಳನ್ನು ಹಾಜರುಪಡಿಸಿರುವುದರಿಂದ ಮದುವೆಗೆ ಸಂಬಂಧಿಸಿದಂತೆ ಯಾವುದೇ ಗಂಭೀರ ವಿವಾದವಿಲ್ಲ” ಎಂದು ಹೇಳಿದ್ದಾರೆ. ಪ್ರಕರಣದಲ್ಲಿ ಬಾಲಕಿಯ ಪತಿಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶರು, ಬಾಲಕಿ ಗರ್ಭಿಣಿಯಾಗಿರುವುದರಿಂದ ಆಕೆಗೆ ಪತಿಯ ಬೆಂಬಲದ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಕ್ತ ಸಂಬಂಧಗಳಲ್ಲಿಯೇ ಮದುವೆ: ಕರ್ನಾಟಕಕ್ಕೆ ಎರಡನೇ ಸ್ಥಾನ

ಅಮಾನ್ಯವಾದ ಅಪ್ರಾಪ್ತರ ಸಮ್ಮತಿ

ಅಕ್ಟೋಬರ್ 27 ರ ಮತ್ತೊಂದು ಪ್ರಕರಣದಲ್ಲಿ,“ಪೋಕ್ಸೊ ಮತ್ತು ಐಪಿಸಿ [ಭಾರತೀಯ ದಂಡ ಸಂಹಿತೆ] ಗಳು ದೃಢವಾದ ಕಾಯಿದೆಗಳು. ಅವು ವೈಯಕ್ತಿಕ ಕಾನೂನಿನ ಮೇಲೆ ಮೇಲುಗೈ ಸಾಧಿಸುತ್ತವೆ. ವೈಯಕ್ತಿಕ ಕಾನೂನಿನ ನೆಪದಲ್ಲಿ ಅರ್ಜಿದಾರರು ಸಾಮಾನ್ಯ ಜಾಮೀನು ಪಡೆಯಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಹೇಳಿತ್ತು.

16ರ ಹರೆಯದ ಬಾಲಕಿಯಿಂದ ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ 19 ವರ್ಷದ ಮುಸ್ಲಿಂ ಯುವಕನ ಜಾಮೀನು ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಾಲಕಿಯನ್ನು ವ್ಯಕ್ತಿಯು ಶ್ರೀರಂಗಪಟ್ಟಣದ ಲಾಡ್ಜ್‌ಗೆ ಕರೆದೊಯ್ದು ಅಲ್ಲಿ ರಾತ್ರಿ ತಂಗಿದ್ದರು. ಈ ನಡುವೆ ಬಾಲಕಿಯ ತಾಯಿ ನಾಪತ್ತೆ ದೂರು ದಾಖಲಿಸಿದ್ದರು. ವ್ಯಕ್ತಿಯು ಬಾಲಕಿಯನ್ನು ಮನಗೆ ಬಿಟ್ಟುಹೋದ ನಂತರ, ಹುಡುಗಿ ತನ್ನ ತಾಯಿಗೆ ಘಟನೆಯನ್ನು ವಿವರಿಸಿದ್ದರು.

ಇದನ್ನೂ ಓದಿ: ಲವ್‌ ಜಿಹಾದ್ ಆರೋಪಕ್ಕೆ ಟ್ವಿಸ್ಟ್‌: ಒಪ್ಪಿತ ಮದುವೆಯಲ್ಲಿ ಮಧ್ಯಪ್ರವೇಶ ಅಸಾಧ್ಯ ಎಂದ ಕೇರಳ ಹೈಕೋರ್ಟ್

ಇದರ ನಂತರ ತನಿಖಾಧಿಕಾರಿಯು ಹುಡುಗಿಯ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದು, ಹೇಳಿಕೆಯಲ್ಲಿ, ಹುಡುಗಿಯು ತಾನು ಸ್ವಯಂ ಪ್ರೇರಣೆಯಿಂದ ವ್ಯಕ್ತಿಯೊಂದಿಗೆ ತೆರಳಿ ಲೈಂಗಿಕ ಸಂಬಂಧ ಹೊಂದಿದ್ದಾರೆ ಎಂದು ಹೇಳಿದ್ದರು.

ಈ ಪ್ರಕರಣದಲ್ಲಿ ಪೋಕ್ಸೊ ಕಾಯ್ದೆಯ ಸೆಕ್ಷನ್ 6 ಮತ್ತು 12 ರ ಅಡಿಯಲ್ಲಿ ವ್ಯಕ್ತಿಯ ವಿರುದ್ಧ ದೂರು ದಾಖಲಿಸಲಾಗಿತ್ತು. ಇದರ ನಂತರ ಬಾಲಕಿಯು ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಹೇಳಿಕೆ ಬದಲಿಸಿ ಆಪಾದಿತ ವ್ಯಕ್ತಿಯು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಿದ್ದಾರೆ. ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವಿಚಾರಣೆ ವೇಳೆ ಆರೋಪಿ ಪರ ವಕೀಲರು ಬಾಲಕಿಯ ಹೇಳಿಕೆಯಲ್ಲಿ ವ್ಯತ್ಯಾಸವಿದೆ ಎಂದು ತಿಳಿಸಿದರು. ಯುವಕ ಮತ್ತು ಹುಡುಗಿ ಇಬ್ಬರೂ ಮುಸ್ಲಿಮರಾಗಿರುವುದರಿಂದ ಬಾಲಕಿಯು ಪ್ರೌಢಾವಸ್ಥೆಯನ್ನು ಮೀರಿದ್ದಾರೆ ಎಂಬವುದನ್ನು ಗಮನಿಸುವಂತೆಯೂ ವಕೀಲರು ಪೀಠವನ್ನು ಕೇಳಿದ್ದರು.

ಇದನ್ನೂ ಓದಿ: ಮುಸ್ಲಿಂ ಜೊತೆ ಮದುವೆಯಾದರೆ ಬಹಿಷ್ಕರಿಸಿ ಎನ್ನುವ ಬಿಜೆಪಿ ಮುಖಂಡ, ‘ಅಂತರ್ಜಾತಿ ವಿವಾಹ’ ಎಂದರೆ ಉತ್ತರಿಸುವುದಿಲ್ಲ!

ಆದಾಗ್ಯೂ, ನ್ಯಾಯಾಲಯವು ತೀರ್ಪಿನಲ್ಲಿ,“ಒಂದು ವೇಳೆ ಒಪ್ಪಿಗೆ ಇದೆ ಎಂದು ಹೇಳಿದರೂ, ಸಂತ್ರಸ್ತೆ ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿರುವುದರಿಂದ ಅವರ ಒಪ್ಪಿಗೆಯು ಅಪ್ರಸ್ತುತವಾಗುತ್ತದೆ” ಎಂದು ಎಂದು ಹೇಳಿತ್ತು. ಪ್ರಕರಣದಲ್ಲಿ ನ್ಯಾಯಾಲಯವು ಆರೋಪಿಗೆ ಜಾಮೀನು ಅರ್ಜಿಯನ್ನು ತಿರಸ್ಕರಿಸಿ, ಆರೋಪಪಟ್ಟಿ ಸಲ್ಲಿಸಿದ ಮಾತ್ರಕ್ಕೆ ಅರ್ಜಿದಾರರಿಗೆ ಜಾಮೀನು ಪಡೆಯುವ ಯಾವುದೇ ಹಕ್ಕು ಇಲ್ಲ” ಎಂದು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...