Homeಕರ್ನಾಟಕಪೋಕ್ಸೊ ಮತ್ತು ಐಪಿಸಿ ‘ವೈಯಕ್ತಿಕ’ ಕಾನೂನನ್ನು ಮೀರಿ ಅನ್ವಯವಾಗುತ್ತದೆ: ಕರ್ನಾಟಕ ಹೈಕೋರ್ಟ್

ಪೋಕ್ಸೊ ಮತ್ತು ಐಪಿಸಿ ‘ವೈಯಕ್ತಿಕ’ ಕಾನೂನನ್ನು ಮೀರಿ ಅನ್ವಯವಾಗುತ್ತದೆ: ಕರ್ನಾಟಕ ಹೈಕೋರ್ಟ್

ಪ್ರೌಢಾವಸ್ಥೆಗೆ ಬಂದ ಅಪ್ರಾಪ್ತ ಮುಸ್ಲಿಂ ಬಾಲಕಿಯ ವಿವಾಹವಾಗುವುದು ಬಾಲ್ಯವಿವಾಹವಲ್ಲ ಎಂಬ ವಾದವನ್ನು ಕೋರ್ಟ್ ತಿರಸ್ಕರಿದೆ

- Advertisement -
- Advertisement -

ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯಿದೆಯು ವೈಯಕ್ತಿಕ ಕಾನೂನನ್ನು ಮೀರಿ ಅನ್ವಯವಾಗುವ ವಿಶೇಷ ಕಾಯಿದೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ವ್ಯಾಖ್ಯಾನಿಸಿದೆ. ಅಪ್ರಾಪ್ತ ವಯಸ್ಕರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಜಾಮೀನು ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರು ಎರಡು ವಿಭಿನ್ನ ಸಂದರ್ಭಗಳಲ್ಲಿ ಈ ಬಗ್ಗೆ ಉಲ್ಲೇಖಿಸಿದೆ.

ಪ್ರೌಢಾವಸ್ಥೆಗೆ ಬಂದ ಅಪ್ರಾಪ್ತ ಮುಸ್ಲಿಂ ಬಾಲಕಿಯ ವಿವಾಹವಾಗುವುದು ಬಾಲ್ಯವಿವಾಹ ನಿಷೇಧ ಕಾಯಿದೆಯ ಉಲ್ಲಂಘನೆಯಲ್ಲ ಎಂಬ ವಾದವನ್ನೂ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್‌‌ ಅವರು ತಿರಸ್ಕರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊದಲ ಪ್ರಕರಣದಲ್ಲಿ, 17 ವರ್ಷದ ಬಾಲಕಿ 2022 ರ ಜೂನ್ 16 ರಂದು ವೈದ್ಯಕೀಯ ತಪಾಸಣೆಗಾಗಿ ರಾಮಮೂರ್ತಿ ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋದ ವೇಳೆ ಅವರು ಗರ್ಭಿಣಿ ಎಂದು ಕಂಡು ಬಂದಿತ್ತು. ಈ ವೇಳೆ ಬಾಲಕಿಯ ಪತಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಮುಂಬೈ ಹೈಕೋರ್ಟ್‌: ಅತ್ಯಾಚಾರ ಸಂತ್ರಸ್ತೆ ವರ್ಷದೊಳಗೆ ಪತ್ತೆಯಾದರೆ ಮದುವೆಯಾಗುವಂತೆ ಆರೋಪಿಗೆ ಆದೇಶ!

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಕೀಯ ಅಧಿಕಾರಿ ನೀಡಿದ ಮಾಹಿತಿಯ ಆಧಾರದ ಮೇಲೆ ಆರ್‌ಕೆ ಪುರಂ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ (ಎಸ್‌ಐ) ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ಬಾಲ್ಯವಿವಾಹ ತಡೆ ಕಾಯಿದೆಯ ಸೆಕ್ಷನ್ 9 ಮತ್ತು 10 ಮತ್ತು ಪೋಕ್ಸೊ ಸೆಕ್ಷನ್ 4 ಮತ್ತು 6 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವನ್ನು ಅವರು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಇದರ ನಂತರ ಬಾಲಕಿಯ ಪತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

“ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ, ಪ್ರೌಢಾವಸ್ಥೆಯನ್ನು (ಸಾಮಾನ್ಯವಾಗಿ 15 ವರ್ಷಗಳು) ಮಹಿಳೆಯ ಮದುವೆಗೆ ಸಾಮಾನ್ಯ ವಯಸ್ಸು ಎಂದು ಪರಿಗಣಿಸಲಾಗುತ್ತದೆ. ಪ್ರಕರಣದಲ್ಲಿ ಮದುವೆಗೂ ಮುನ್ನವೇ ಬಾಲಕಿ ಪ್ರೌಢಾವಸ್ಥೆಗೆ ಬಂದಿದ್ದರಿಂದ ಬಾಲ್ಯವಿವಾಹ ತಡೆ ಕಾಯ್ದೆ ಪ್ರಕಾರ ಅವರ ಮದುವೆ ಅಪರಾಧವಲ್ಲ” ಎಂದು ಅರ್ಜಿದಾರರ ಪರವಾಗಿ ವಕೀಲರು ವಾದಿಸಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು: BJP ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆಯ ನಡುವೆ ದಲಿತ-ಮುಸ್ಲಿಂ ಜೋಡಿ ಮದುವೆ

ಈ ವಾದವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ, “POCSO ವೈಯಕ್ತಿಕ ಕಾನೂನನ್ನು ಅತಿಕ್ರಮಿಸುತ್ತದೆ ಮತ್ತು ಲೈಂಗಿಕ ಚಟುವಟಿಕೆಗಳಿಗೆ ಒಪ್ಪಿಗೆ ನೀಡುವ ವಯಸ್ಸು 18 ಆಗಿರುವುದರಿಂದ ಅಂತಹ ವಾದಗಳನ್ನು ಅನುಮತಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಆದಾಗ್ಯೂ, ತೀರ್ಪಿನಲ್ಲಿ,“ಸಂತ್ರಸ್ತೆಗೆ ಸುಮಾರು 17 ವರ್ಷ ವಯಸ್ಸಾಗಿದ್ದು, ವಿಷಯಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯವಿದೆ” ಎಂದು ಹೇಳಲಾಗಿದೆ. ತನ್ನ ಒಪ್ಪಿಗೆಯಿಲ್ಲದೆ ವಿವಾಹವನ್ನು ಶಾಸ್ತ್ರೋಕ್ತವಾಗಿ ನಡೆಸಲಾಗಿದೆ ಎಂದು ಆಕೆ ಆರೋಪಿಸಿದ್ದರೂ, ಅದಕ್ಕೆ ಆಕೆಯ ಆಕ್ಷೇಪಣೆಗೆ ಯಾವುದೇ ಪುರಾವೆಗಳಿಲ್ಲ ಎಂದು ಅದು ಹೇಳಿದೆ. ಆಕೆ ತನ್ನ ಪೋಷಕರ ಪ್ರಭಾವದಲ್ಲಿದ್ದರೂ ಒಪ್ಪಿಗೆ ನೀಡುವ ಪಕ್ಷವಾಗಿದ್ದಳು ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ಅರ್ಜಿದಾರರಿಗೆ ಜಾಮೀನು ನೀಡಲು ಯಾವುದೇ ಅಡ್ಡಿಯಿಲ್ಲ ಎಂದು ಉಲ್ಲೇಖಿಸಿದ ನ್ಯಾಯಾಧೀಶರು, “ಅರ್ಜಿದಾರರು ಸೂಕ್ತ ದಾಖಲೆಗಳನ್ನು ಹಾಜರುಪಡಿಸಿರುವುದರಿಂದ ಮದುವೆಗೆ ಸಂಬಂಧಿಸಿದಂತೆ ಯಾವುದೇ ಗಂಭೀರ ವಿವಾದವಿಲ್ಲ” ಎಂದು ಹೇಳಿದ್ದಾರೆ. ಪ್ರಕರಣದಲ್ಲಿ ಬಾಲಕಿಯ ಪತಿಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶರು, ಬಾಲಕಿ ಗರ್ಭಿಣಿಯಾಗಿರುವುದರಿಂದ ಆಕೆಗೆ ಪತಿಯ ಬೆಂಬಲದ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಕ್ತ ಸಂಬಂಧಗಳಲ್ಲಿಯೇ ಮದುವೆ: ಕರ್ನಾಟಕಕ್ಕೆ ಎರಡನೇ ಸ್ಥಾನ

ಅಮಾನ್ಯವಾದ ಅಪ್ರಾಪ್ತರ ಸಮ್ಮತಿ

ಅಕ್ಟೋಬರ್ 27 ರ ಮತ್ತೊಂದು ಪ್ರಕರಣದಲ್ಲಿ,“ಪೋಕ್ಸೊ ಮತ್ತು ಐಪಿಸಿ [ಭಾರತೀಯ ದಂಡ ಸಂಹಿತೆ] ಗಳು ದೃಢವಾದ ಕಾಯಿದೆಗಳು. ಅವು ವೈಯಕ್ತಿಕ ಕಾನೂನಿನ ಮೇಲೆ ಮೇಲುಗೈ ಸಾಧಿಸುತ್ತವೆ. ವೈಯಕ್ತಿಕ ಕಾನೂನಿನ ನೆಪದಲ್ಲಿ ಅರ್ಜಿದಾರರು ಸಾಮಾನ್ಯ ಜಾಮೀನು ಪಡೆಯಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಹೇಳಿತ್ತು.

16ರ ಹರೆಯದ ಬಾಲಕಿಯಿಂದ ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ 19 ವರ್ಷದ ಮುಸ್ಲಿಂ ಯುವಕನ ಜಾಮೀನು ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಾಲಕಿಯನ್ನು ವ್ಯಕ್ತಿಯು ಶ್ರೀರಂಗಪಟ್ಟಣದ ಲಾಡ್ಜ್‌ಗೆ ಕರೆದೊಯ್ದು ಅಲ್ಲಿ ರಾತ್ರಿ ತಂಗಿದ್ದರು. ಈ ನಡುವೆ ಬಾಲಕಿಯ ತಾಯಿ ನಾಪತ್ತೆ ದೂರು ದಾಖಲಿಸಿದ್ದರು. ವ್ಯಕ್ತಿಯು ಬಾಲಕಿಯನ್ನು ಮನಗೆ ಬಿಟ್ಟುಹೋದ ನಂತರ, ಹುಡುಗಿ ತನ್ನ ತಾಯಿಗೆ ಘಟನೆಯನ್ನು ವಿವರಿಸಿದ್ದರು.

ಇದನ್ನೂ ಓದಿ: ಲವ್‌ ಜಿಹಾದ್ ಆರೋಪಕ್ಕೆ ಟ್ವಿಸ್ಟ್‌: ಒಪ್ಪಿತ ಮದುವೆಯಲ್ಲಿ ಮಧ್ಯಪ್ರವೇಶ ಅಸಾಧ್ಯ ಎಂದ ಕೇರಳ ಹೈಕೋರ್ಟ್

ಇದರ ನಂತರ ತನಿಖಾಧಿಕಾರಿಯು ಹುಡುಗಿಯ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದು, ಹೇಳಿಕೆಯಲ್ಲಿ, ಹುಡುಗಿಯು ತಾನು ಸ್ವಯಂ ಪ್ರೇರಣೆಯಿಂದ ವ್ಯಕ್ತಿಯೊಂದಿಗೆ ತೆರಳಿ ಲೈಂಗಿಕ ಸಂಬಂಧ ಹೊಂದಿದ್ದಾರೆ ಎಂದು ಹೇಳಿದ್ದರು.

ಈ ಪ್ರಕರಣದಲ್ಲಿ ಪೋಕ್ಸೊ ಕಾಯ್ದೆಯ ಸೆಕ್ಷನ್ 6 ಮತ್ತು 12 ರ ಅಡಿಯಲ್ಲಿ ವ್ಯಕ್ತಿಯ ವಿರುದ್ಧ ದೂರು ದಾಖಲಿಸಲಾಗಿತ್ತು. ಇದರ ನಂತರ ಬಾಲಕಿಯು ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಹೇಳಿಕೆ ಬದಲಿಸಿ ಆಪಾದಿತ ವ್ಯಕ್ತಿಯು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಿದ್ದಾರೆ. ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವಿಚಾರಣೆ ವೇಳೆ ಆರೋಪಿ ಪರ ವಕೀಲರು ಬಾಲಕಿಯ ಹೇಳಿಕೆಯಲ್ಲಿ ವ್ಯತ್ಯಾಸವಿದೆ ಎಂದು ತಿಳಿಸಿದರು. ಯುವಕ ಮತ್ತು ಹುಡುಗಿ ಇಬ್ಬರೂ ಮುಸ್ಲಿಮರಾಗಿರುವುದರಿಂದ ಬಾಲಕಿಯು ಪ್ರೌಢಾವಸ್ಥೆಯನ್ನು ಮೀರಿದ್ದಾರೆ ಎಂಬವುದನ್ನು ಗಮನಿಸುವಂತೆಯೂ ವಕೀಲರು ಪೀಠವನ್ನು ಕೇಳಿದ್ದರು.

ಇದನ್ನೂ ಓದಿ: ಮುಸ್ಲಿಂ ಜೊತೆ ಮದುವೆಯಾದರೆ ಬಹಿಷ್ಕರಿಸಿ ಎನ್ನುವ ಬಿಜೆಪಿ ಮುಖಂಡ, ‘ಅಂತರ್ಜಾತಿ ವಿವಾಹ’ ಎಂದರೆ ಉತ್ತರಿಸುವುದಿಲ್ಲ!

ಆದಾಗ್ಯೂ, ನ್ಯಾಯಾಲಯವು ತೀರ್ಪಿನಲ್ಲಿ,“ಒಂದು ವೇಳೆ ಒಪ್ಪಿಗೆ ಇದೆ ಎಂದು ಹೇಳಿದರೂ, ಸಂತ್ರಸ್ತೆ ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿರುವುದರಿಂದ ಅವರ ಒಪ್ಪಿಗೆಯು ಅಪ್ರಸ್ತುತವಾಗುತ್ತದೆ” ಎಂದು ಎಂದು ಹೇಳಿತ್ತು. ಪ್ರಕರಣದಲ್ಲಿ ನ್ಯಾಯಾಲಯವು ಆರೋಪಿಗೆ ಜಾಮೀನು ಅರ್ಜಿಯನ್ನು ತಿರಸ್ಕರಿಸಿ, ಆರೋಪಪಟ್ಟಿ ಸಲ್ಲಿಸಿದ ಮಾತ್ರಕ್ಕೆ ಅರ್ಜಿದಾರರಿಗೆ ಜಾಮೀನು ಪಡೆಯುವ ಯಾವುದೇ ಹಕ್ಕು ಇಲ್ಲ” ಎಂದು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...