Homeಕರ್ನಾಟಕಪೋಕ್ಸೊ ಮತ್ತು ಐಪಿಸಿ ‘ವೈಯಕ್ತಿಕ’ ಕಾನೂನನ್ನು ಮೀರಿ ಅನ್ವಯವಾಗುತ್ತದೆ: ಕರ್ನಾಟಕ ಹೈಕೋರ್ಟ್

ಪೋಕ್ಸೊ ಮತ್ತು ಐಪಿಸಿ ‘ವೈಯಕ್ತಿಕ’ ಕಾನೂನನ್ನು ಮೀರಿ ಅನ್ವಯವಾಗುತ್ತದೆ: ಕರ್ನಾಟಕ ಹೈಕೋರ್ಟ್

ಪ್ರೌಢಾವಸ್ಥೆಗೆ ಬಂದ ಅಪ್ರಾಪ್ತ ಮುಸ್ಲಿಂ ಬಾಲಕಿಯ ವಿವಾಹವಾಗುವುದು ಬಾಲ್ಯವಿವಾಹವಲ್ಲ ಎಂಬ ವಾದವನ್ನು ಕೋರ್ಟ್ ತಿರಸ್ಕರಿದೆ

- Advertisement -
- Advertisement -

ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯಿದೆಯು ವೈಯಕ್ತಿಕ ಕಾನೂನನ್ನು ಮೀರಿ ಅನ್ವಯವಾಗುವ ವಿಶೇಷ ಕಾಯಿದೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ವ್ಯಾಖ್ಯಾನಿಸಿದೆ. ಅಪ್ರಾಪ್ತ ವಯಸ್ಕರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಜಾಮೀನು ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರು ಎರಡು ವಿಭಿನ್ನ ಸಂದರ್ಭಗಳಲ್ಲಿ ಈ ಬಗ್ಗೆ ಉಲ್ಲೇಖಿಸಿದೆ.

ಪ್ರೌಢಾವಸ್ಥೆಗೆ ಬಂದ ಅಪ್ರಾಪ್ತ ಮುಸ್ಲಿಂ ಬಾಲಕಿಯ ವಿವಾಹವಾಗುವುದು ಬಾಲ್ಯವಿವಾಹ ನಿಷೇಧ ಕಾಯಿದೆಯ ಉಲ್ಲಂಘನೆಯಲ್ಲ ಎಂಬ ವಾದವನ್ನೂ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್‌‌ ಅವರು ತಿರಸ್ಕರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊದಲ ಪ್ರಕರಣದಲ್ಲಿ, 17 ವರ್ಷದ ಬಾಲಕಿ 2022 ರ ಜೂನ್ 16 ರಂದು ವೈದ್ಯಕೀಯ ತಪಾಸಣೆಗಾಗಿ ರಾಮಮೂರ್ತಿ ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋದ ವೇಳೆ ಅವರು ಗರ್ಭಿಣಿ ಎಂದು ಕಂಡು ಬಂದಿತ್ತು. ಈ ವೇಳೆ ಬಾಲಕಿಯ ಪತಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಮುಂಬೈ ಹೈಕೋರ್ಟ್‌: ಅತ್ಯಾಚಾರ ಸಂತ್ರಸ್ತೆ ವರ್ಷದೊಳಗೆ ಪತ್ತೆಯಾದರೆ ಮದುವೆಯಾಗುವಂತೆ ಆರೋಪಿಗೆ ಆದೇಶ!

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಕೀಯ ಅಧಿಕಾರಿ ನೀಡಿದ ಮಾಹಿತಿಯ ಆಧಾರದ ಮೇಲೆ ಆರ್‌ಕೆ ಪುರಂ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ (ಎಸ್‌ಐ) ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ಬಾಲ್ಯವಿವಾಹ ತಡೆ ಕಾಯಿದೆಯ ಸೆಕ್ಷನ್ 9 ಮತ್ತು 10 ಮತ್ತು ಪೋಕ್ಸೊ ಸೆಕ್ಷನ್ 4 ಮತ್ತು 6 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವನ್ನು ಅವರು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಇದರ ನಂತರ ಬಾಲಕಿಯ ಪತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

“ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ, ಪ್ರೌಢಾವಸ್ಥೆಯನ್ನು (ಸಾಮಾನ್ಯವಾಗಿ 15 ವರ್ಷಗಳು) ಮಹಿಳೆಯ ಮದುವೆಗೆ ಸಾಮಾನ್ಯ ವಯಸ್ಸು ಎಂದು ಪರಿಗಣಿಸಲಾಗುತ್ತದೆ. ಪ್ರಕರಣದಲ್ಲಿ ಮದುವೆಗೂ ಮುನ್ನವೇ ಬಾಲಕಿ ಪ್ರೌಢಾವಸ್ಥೆಗೆ ಬಂದಿದ್ದರಿಂದ ಬಾಲ್ಯವಿವಾಹ ತಡೆ ಕಾಯ್ದೆ ಪ್ರಕಾರ ಅವರ ಮದುವೆ ಅಪರಾಧವಲ್ಲ” ಎಂದು ಅರ್ಜಿದಾರರ ಪರವಾಗಿ ವಕೀಲರು ವಾದಿಸಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು: BJP ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆಯ ನಡುವೆ ದಲಿತ-ಮುಸ್ಲಿಂ ಜೋಡಿ ಮದುವೆ

ಈ ವಾದವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ, “POCSO ವೈಯಕ್ತಿಕ ಕಾನೂನನ್ನು ಅತಿಕ್ರಮಿಸುತ್ತದೆ ಮತ್ತು ಲೈಂಗಿಕ ಚಟುವಟಿಕೆಗಳಿಗೆ ಒಪ್ಪಿಗೆ ನೀಡುವ ವಯಸ್ಸು 18 ಆಗಿರುವುದರಿಂದ ಅಂತಹ ವಾದಗಳನ್ನು ಅನುಮತಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಆದಾಗ್ಯೂ, ತೀರ್ಪಿನಲ್ಲಿ,“ಸಂತ್ರಸ್ತೆಗೆ ಸುಮಾರು 17 ವರ್ಷ ವಯಸ್ಸಾಗಿದ್ದು, ವಿಷಯಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯವಿದೆ” ಎಂದು ಹೇಳಲಾಗಿದೆ. ತನ್ನ ಒಪ್ಪಿಗೆಯಿಲ್ಲದೆ ವಿವಾಹವನ್ನು ಶಾಸ್ತ್ರೋಕ್ತವಾಗಿ ನಡೆಸಲಾಗಿದೆ ಎಂದು ಆಕೆ ಆರೋಪಿಸಿದ್ದರೂ, ಅದಕ್ಕೆ ಆಕೆಯ ಆಕ್ಷೇಪಣೆಗೆ ಯಾವುದೇ ಪುರಾವೆಗಳಿಲ್ಲ ಎಂದು ಅದು ಹೇಳಿದೆ. ಆಕೆ ತನ್ನ ಪೋಷಕರ ಪ್ರಭಾವದಲ್ಲಿದ್ದರೂ ಒಪ್ಪಿಗೆ ನೀಡುವ ಪಕ್ಷವಾಗಿದ್ದಳು ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ಅರ್ಜಿದಾರರಿಗೆ ಜಾಮೀನು ನೀಡಲು ಯಾವುದೇ ಅಡ್ಡಿಯಿಲ್ಲ ಎಂದು ಉಲ್ಲೇಖಿಸಿದ ನ್ಯಾಯಾಧೀಶರು, “ಅರ್ಜಿದಾರರು ಸೂಕ್ತ ದಾಖಲೆಗಳನ್ನು ಹಾಜರುಪಡಿಸಿರುವುದರಿಂದ ಮದುವೆಗೆ ಸಂಬಂಧಿಸಿದಂತೆ ಯಾವುದೇ ಗಂಭೀರ ವಿವಾದವಿಲ್ಲ” ಎಂದು ಹೇಳಿದ್ದಾರೆ. ಪ್ರಕರಣದಲ್ಲಿ ಬಾಲಕಿಯ ಪತಿಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶರು, ಬಾಲಕಿ ಗರ್ಭಿಣಿಯಾಗಿರುವುದರಿಂದ ಆಕೆಗೆ ಪತಿಯ ಬೆಂಬಲದ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಕ್ತ ಸಂಬಂಧಗಳಲ್ಲಿಯೇ ಮದುವೆ: ಕರ್ನಾಟಕಕ್ಕೆ ಎರಡನೇ ಸ್ಥಾನ

ಅಮಾನ್ಯವಾದ ಅಪ್ರಾಪ್ತರ ಸಮ್ಮತಿ

ಅಕ್ಟೋಬರ್ 27 ರ ಮತ್ತೊಂದು ಪ್ರಕರಣದಲ್ಲಿ,“ಪೋಕ್ಸೊ ಮತ್ತು ಐಪಿಸಿ [ಭಾರತೀಯ ದಂಡ ಸಂಹಿತೆ] ಗಳು ದೃಢವಾದ ಕಾಯಿದೆಗಳು. ಅವು ವೈಯಕ್ತಿಕ ಕಾನೂನಿನ ಮೇಲೆ ಮೇಲುಗೈ ಸಾಧಿಸುತ್ತವೆ. ವೈಯಕ್ತಿಕ ಕಾನೂನಿನ ನೆಪದಲ್ಲಿ ಅರ್ಜಿದಾರರು ಸಾಮಾನ್ಯ ಜಾಮೀನು ಪಡೆಯಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಹೇಳಿತ್ತು.

16ರ ಹರೆಯದ ಬಾಲಕಿಯಿಂದ ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ 19 ವರ್ಷದ ಮುಸ್ಲಿಂ ಯುವಕನ ಜಾಮೀನು ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಾಲಕಿಯನ್ನು ವ್ಯಕ್ತಿಯು ಶ್ರೀರಂಗಪಟ್ಟಣದ ಲಾಡ್ಜ್‌ಗೆ ಕರೆದೊಯ್ದು ಅಲ್ಲಿ ರಾತ್ರಿ ತಂಗಿದ್ದರು. ಈ ನಡುವೆ ಬಾಲಕಿಯ ತಾಯಿ ನಾಪತ್ತೆ ದೂರು ದಾಖಲಿಸಿದ್ದರು. ವ್ಯಕ್ತಿಯು ಬಾಲಕಿಯನ್ನು ಮನಗೆ ಬಿಟ್ಟುಹೋದ ನಂತರ, ಹುಡುಗಿ ತನ್ನ ತಾಯಿಗೆ ಘಟನೆಯನ್ನು ವಿವರಿಸಿದ್ದರು.

ಇದನ್ನೂ ಓದಿ: ಲವ್‌ ಜಿಹಾದ್ ಆರೋಪಕ್ಕೆ ಟ್ವಿಸ್ಟ್‌: ಒಪ್ಪಿತ ಮದುವೆಯಲ್ಲಿ ಮಧ್ಯಪ್ರವೇಶ ಅಸಾಧ್ಯ ಎಂದ ಕೇರಳ ಹೈಕೋರ್ಟ್

ಇದರ ನಂತರ ತನಿಖಾಧಿಕಾರಿಯು ಹುಡುಗಿಯ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದು, ಹೇಳಿಕೆಯಲ್ಲಿ, ಹುಡುಗಿಯು ತಾನು ಸ್ವಯಂ ಪ್ರೇರಣೆಯಿಂದ ವ್ಯಕ್ತಿಯೊಂದಿಗೆ ತೆರಳಿ ಲೈಂಗಿಕ ಸಂಬಂಧ ಹೊಂದಿದ್ದಾರೆ ಎಂದು ಹೇಳಿದ್ದರು.

ಈ ಪ್ರಕರಣದಲ್ಲಿ ಪೋಕ್ಸೊ ಕಾಯ್ದೆಯ ಸೆಕ್ಷನ್ 6 ಮತ್ತು 12 ರ ಅಡಿಯಲ್ಲಿ ವ್ಯಕ್ತಿಯ ವಿರುದ್ಧ ದೂರು ದಾಖಲಿಸಲಾಗಿತ್ತು. ಇದರ ನಂತರ ಬಾಲಕಿಯು ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಹೇಳಿಕೆ ಬದಲಿಸಿ ಆಪಾದಿತ ವ್ಯಕ್ತಿಯು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಿದ್ದಾರೆ. ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವಿಚಾರಣೆ ವೇಳೆ ಆರೋಪಿ ಪರ ವಕೀಲರು ಬಾಲಕಿಯ ಹೇಳಿಕೆಯಲ್ಲಿ ವ್ಯತ್ಯಾಸವಿದೆ ಎಂದು ತಿಳಿಸಿದರು. ಯುವಕ ಮತ್ತು ಹುಡುಗಿ ಇಬ್ಬರೂ ಮುಸ್ಲಿಮರಾಗಿರುವುದರಿಂದ ಬಾಲಕಿಯು ಪ್ರೌಢಾವಸ್ಥೆಯನ್ನು ಮೀರಿದ್ದಾರೆ ಎಂಬವುದನ್ನು ಗಮನಿಸುವಂತೆಯೂ ವಕೀಲರು ಪೀಠವನ್ನು ಕೇಳಿದ್ದರು.

ಇದನ್ನೂ ಓದಿ: ಮುಸ್ಲಿಂ ಜೊತೆ ಮದುವೆಯಾದರೆ ಬಹಿಷ್ಕರಿಸಿ ಎನ್ನುವ ಬಿಜೆಪಿ ಮುಖಂಡ, ‘ಅಂತರ್ಜಾತಿ ವಿವಾಹ’ ಎಂದರೆ ಉತ್ತರಿಸುವುದಿಲ್ಲ!

ಆದಾಗ್ಯೂ, ನ್ಯಾಯಾಲಯವು ತೀರ್ಪಿನಲ್ಲಿ,“ಒಂದು ವೇಳೆ ಒಪ್ಪಿಗೆ ಇದೆ ಎಂದು ಹೇಳಿದರೂ, ಸಂತ್ರಸ್ತೆ ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿರುವುದರಿಂದ ಅವರ ಒಪ್ಪಿಗೆಯು ಅಪ್ರಸ್ತುತವಾಗುತ್ತದೆ” ಎಂದು ಎಂದು ಹೇಳಿತ್ತು. ಪ್ರಕರಣದಲ್ಲಿ ನ್ಯಾಯಾಲಯವು ಆರೋಪಿಗೆ ಜಾಮೀನು ಅರ್ಜಿಯನ್ನು ತಿರಸ್ಕರಿಸಿ, ಆರೋಪಪಟ್ಟಿ ಸಲ್ಲಿಸಿದ ಮಾತ್ರಕ್ಕೆ ಅರ್ಜಿದಾರರಿಗೆ ಜಾಮೀನು ಪಡೆಯುವ ಯಾವುದೇ ಹಕ್ಕು ಇಲ್ಲ” ಎಂದು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...