Homeಕರ್ನಾಟಕಪೋಕ್ಸೊ ಮತ್ತು ಐಪಿಸಿ ‘ವೈಯಕ್ತಿಕ’ ಕಾನೂನನ್ನು ಮೀರಿ ಅನ್ವಯವಾಗುತ್ತದೆ: ಕರ್ನಾಟಕ ಹೈಕೋರ್ಟ್

ಪೋಕ್ಸೊ ಮತ್ತು ಐಪಿಸಿ ‘ವೈಯಕ್ತಿಕ’ ಕಾನೂನನ್ನು ಮೀರಿ ಅನ್ವಯವಾಗುತ್ತದೆ: ಕರ್ನಾಟಕ ಹೈಕೋರ್ಟ್

ಪ್ರೌಢಾವಸ್ಥೆಗೆ ಬಂದ ಅಪ್ರಾಪ್ತ ಮುಸ್ಲಿಂ ಬಾಲಕಿಯ ವಿವಾಹವಾಗುವುದು ಬಾಲ್ಯವಿವಾಹವಲ್ಲ ಎಂಬ ವಾದವನ್ನು ಕೋರ್ಟ್ ತಿರಸ್ಕರಿದೆ

- Advertisement -
- Advertisement -

ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯಿದೆಯು ವೈಯಕ್ತಿಕ ಕಾನೂನನ್ನು ಮೀರಿ ಅನ್ವಯವಾಗುವ ವಿಶೇಷ ಕಾಯಿದೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ವ್ಯಾಖ್ಯಾನಿಸಿದೆ. ಅಪ್ರಾಪ್ತ ವಯಸ್ಕರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಜಾಮೀನು ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರು ಎರಡು ವಿಭಿನ್ನ ಸಂದರ್ಭಗಳಲ್ಲಿ ಈ ಬಗ್ಗೆ ಉಲ್ಲೇಖಿಸಿದೆ.

ಪ್ರೌಢಾವಸ್ಥೆಗೆ ಬಂದ ಅಪ್ರಾಪ್ತ ಮುಸ್ಲಿಂ ಬಾಲಕಿಯ ವಿವಾಹವಾಗುವುದು ಬಾಲ್ಯವಿವಾಹ ನಿಷೇಧ ಕಾಯಿದೆಯ ಉಲ್ಲಂಘನೆಯಲ್ಲ ಎಂಬ ವಾದವನ್ನೂ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್‌‌ ಅವರು ತಿರಸ್ಕರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊದಲ ಪ್ರಕರಣದಲ್ಲಿ, 17 ವರ್ಷದ ಬಾಲಕಿ 2022 ರ ಜೂನ್ 16 ರಂದು ವೈದ್ಯಕೀಯ ತಪಾಸಣೆಗಾಗಿ ರಾಮಮೂರ್ತಿ ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋದ ವೇಳೆ ಅವರು ಗರ್ಭಿಣಿ ಎಂದು ಕಂಡು ಬಂದಿತ್ತು. ಈ ವೇಳೆ ಬಾಲಕಿಯ ಪತಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಮುಂಬೈ ಹೈಕೋರ್ಟ್‌: ಅತ್ಯಾಚಾರ ಸಂತ್ರಸ್ತೆ ವರ್ಷದೊಳಗೆ ಪತ್ತೆಯಾದರೆ ಮದುವೆಯಾಗುವಂತೆ ಆರೋಪಿಗೆ ಆದೇಶ!

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಕೀಯ ಅಧಿಕಾರಿ ನೀಡಿದ ಮಾಹಿತಿಯ ಆಧಾರದ ಮೇಲೆ ಆರ್‌ಕೆ ಪುರಂ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ (ಎಸ್‌ಐ) ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ಬಾಲ್ಯವಿವಾಹ ತಡೆ ಕಾಯಿದೆಯ ಸೆಕ್ಷನ್ 9 ಮತ್ತು 10 ಮತ್ತು ಪೋಕ್ಸೊ ಸೆಕ್ಷನ್ 4 ಮತ್ತು 6 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವನ್ನು ಅವರು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಇದರ ನಂತರ ಬಾಲಕಿಯ ಪತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

“ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ, ಪ್ರೌಢಾವಸ್ಥೆಯನ್ನು (ಸಾಮಾನ್ಯವಾಗಿ 15 ವರ್ಷಗಳು) ಮಹಿಳೆಯ ಮದುವೆಗೆ ಸಾಮಾನ್ಯ ವಯಸ್ಸು ಎಂದು ಪರಿಗಣಿಸಲಾಗುತ್ತದೆ. ಪ್ರಕರಣದಲ್ಲಿ ಮದುವೆಗೂ ಮುನ್ನವೇ ಬಾಲಕಿ ಪ್ರೌಢಾವಸ್ಥೆಗೆ ಬಂದಿದ್ದರಿಂದ ಬಾಲ್ಯವಿವಾಹ ತಡೆ ಕಾಯ್ದೆ ಪ್ರಕಾರ ಅವರ ಮದುವೆ ಅಪರಾಧವಲ್ಲ” ಎಂದು ಅರ್ಜಿದಾರರ ಪರವಾಗಿ ವಕೀಲರು ವಾದಿಸಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು: BJP ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆಯ ನಡುವೆ ದಲಿತ-ಮುಸ್ಲಿಂ ಜೋಡಿ ಮದುವೆ

ಈ ವಾದವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ, “POCSO ವೈಯಕ್ತಿಕ ಕಾನೂನನ್ನು ಅತಿಕ್ರಮಿಸುತ್ತದೆ ಮತ್ತು ಲೈಂಗಿಕ ಚಟುವಟಿಕೆಗಳಿಗೆ ಒಪ್ಪಿಗೆ ನೀಡುವ ವಯಸ್ಸು 18 ಆಗಿರುವುದರಿಂದ ಅಂತಹ ವಾದಗಳನ್ನು ಅನುಮತಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಆದಾಗ್ಯೂ, ತೀರ್ಪಿನಲ್ಲಿ,“ಸಂತ್ರಸ್ತೆಗೆ ಸುಮಾರು 17 ವರ್ಷ ವಯಸ್ಸಾಗಿದ್ದು, ವಿಷಯಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯವಿದೆ” ಎಂದು ಹೇಳಲಾಗಿದೆ. ತನ್ನ ಒಪ್ಪಿಗೆಯಿಲ್ಲದೆ ವಿವಾಹವನ್ನು ಶಾಸ್ತ್ರೋಕ್ತವಾಗಿ ನಡೆಸಲಾಗಿದೆ ಎಂದು ಆಕೆ ಆರೋಪಿಸಿದ್ದರೂ, ಅದಕ್ಕೆ ಆಕೆಯ ಆಕ್ಷೇಪಣೆಗೆ ಯಾವುದೇ ಪುರಾವೆಗಳಿಲ್ಲ ಎಂದು ಅದು ಹೇಳಿದೆ. ಆಕೆ ತನ್ನ ಪೋಷಕರ ಪ್ರಭಾವದಲ್ಲಿದ್ದರೂ ಒಪ್ಪಿಗೆ ನೀಡುವ ಪಕ್ಷವಾಗಿದ್ದಳು ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ಅರ್ಜಿದಾರರಿಗೆ ಜಾಮೀನು ನೀಡಲು ಯಾವುದೇ ಅಡ್ಡಿಯಿಲ್ಲ ಎಂದು ಉಲ್ಲೇಖಿಸಿದ ನ್ಯಾಯಾಧೀಶರು, “ಅರ್ಜಿದಾರರು ಸೂಕ್ತ ದಾಖಲೆಗಳನ್ನು ಹಾಜರುಪಡಿಸಿರುವುದರಿಂದ ಮದುವೆಗೆ ಸಂಬಂಧಿಸಿದಂತೆ ಯಾವುದೇ ಗಂಭೀರ ವಿವಾದವಿಲ್ಲ” ಎಂದು ಹೇಳಿದ್ದಾರೆ. ಪ್ರಕರಣದಲ್ಲಿ ಬಾಲಕಿಯ ಪತಿಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶರು, ಬಾಲಕಿ ಗರ್ಭಿಣಿಯಾಗಿರುವುದರಿಂದ ಆಕೆಗೆ ಪತಿಯ ಬೆಂಬಲದ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಕ್ತ ಸಂಬಂಧಗಳಲ್ಲಿಯೇ ಮದುವೆ: ಕರ್ನಾಟಕಕ್ಕೆ ಎರಡನೇ ಸ್ಥಾನ

ಅಮಾನ್ಯವಾದ ಅಪ್ರಾಪ್ತರ ಸಮ್ಮತಿ

ಅಕ್ಟೋಬರ್ 27 ರ ಮತ್ತೊಂದು ಪ್ರಕರಣದಲ್ಲಿ,“ಪೋಕ್ಸೊ ಮತ್ತು ಐಪಿಸಿ [ಭಾರತೀಯ ದಂಡ ಸಂಹಿತೆ] ಗಳು ದೃಢವಾದ ಕಾಯಿದೆಗಳು. ಅವು ವೈಯಕ್ತಿಕ ಕಾನೂನಿನ ಮೇಲೆ ಮೇಲುಗೈ ಸಾಧಿಸುತ್ತವೆ. ವೈಯಕ್ತಿಕ ಕಾನೂನಿನ ನೆಪದಲ್ಲಿ ಅರ್ಜಿದಾರರು ಸಾಮಾನ್ಯ ಜಾಮೀನು ಪಡೆಯಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಹೇಳಿತ್ತು.

16ರ ಹರೆಯದ ಬಾಲಕಿಯಿಂದ ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ 19 ವರ್ಷದ ಮುಸ್ಲಿಂ ಯುವಕನ ಜಾಮೀನು ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಾಲಕಿಯನ್ನು ವ್ಯಕ್ತಿಯು ಶ್ರೀರಂಗಪಟ್ಟಣದ ಲಾಡ್ಜ್‌ಗೆ ಕರೆದೊಯ್ದು ಅಲ್ಲಿ ರಾತ್ರಿ ತಂಗಿದ್ದರು. ಈ ನಡುವೆ ಬಾಲಕಿಯ ತಾಯಿ ನಾಪತ್ತೆ ದೂರು ದಾಖಲಿಸಿದ್ದರು. ವ್ಯಕ್ತಿಯು ಬಾಲಕಿಯನ್ನು ಮನಗೆ ಬಿಟ್ಟುಹೋದ ನಂತರ, ಹುಡುಗಿ ತನ್ನ ತಾಯಿಗೆ ಘಟನೆಯನ್ನು ವಿವರಿಸಿದ್ದರು.

ಇದನ್ನೂ ಓದಿ: ಲವ್‌ ಜಿಹಾದ್ ಆರೋಪಕ್ಕೆ ಟ್ವಿಸ್ಟ್‌: ಒಪ್ಪಿತ ಮದುವೆಯಲ್ಲಿ ಮಧ್ಯಪ್ರವೇಶ ಅಸಾಧ್ಯ ಎಂದ ಕೇರಳ ಹೈಕೋರ್ಟ್

ಇದರ ನಂತರ ತನಿಖಾಧಿಕಾರಿಯು ಹುಡುಗಿಯ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದು, ಹೇಳಿಕೆಯಲ್ಲಿ, ಹುಡುಗಿಯು ತಾನು ಸ್ವಯಂ ಪ್ರೇರಣೆಯಿಂದ ವ್ಯಕ್ತಿಯೊಂದಿಗೆ ತೆರಳಿ ಲೈಂಗಿಕ ಸಂಬಂಧ ಹೊಂದಿದ್ದಾರೆ ಎಂದು ಹೇಳಿದ್ದರು.

ಈ ಪ್ರಕರಣದಲ್ಲಿ ಪೋಕ್ಸೊ ಕಾಯ್ದೆಯ ಸೆಕ್ಷನ್ 6 ಮತ್ತು 12 ರ ಅಡಿಯಲ್ಲಿ ವ್ಯಕ್ತಿಯ ವಿರುದ್ಧ ದೂರು ದಾಖಲಿಸಲಾಗಿತ್ತು. ಇದರ ನಂತರ ಬಾಲಕಿಯು ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಹೇಳಿಕೆ ಬದಲಿಸಿ ಆಪಾದಿತ ವ್ಯಕ್ತಿಯು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಿದ್ದಾರೆ. ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವಿಚಾರಣೆ ವೇಳೆ ಆರೋಪಿ ಪರ ವಕೀಲರು ಬಾಲಕಿಯ ಹೇಳಿಕೆಯಲ್ಲಿ ವ್ಯತ್ಯಾಸವಿದೆ ಎಂದು ತಿಳಿಸಿದರು. ಯುವಕ ಮತ್ತು ಹುಡುಗಿ ಇಬ್ಬರೂ ಮುಸ್ಲಿಮರಾಗಿರುವುದರಿಂದ ಬಾಲಕಿಯು ಪ್ರೌಢಾವಸ್ಥೆಯನ್ನು ಮೀರಿದ್ದಾರೆ ಎಂಬವುದನ್ನು ಗಮನಿಸುವಂತೆಯೂ ವಕೀಲರು ಪೀಠವನ್ನು ಕೇಳಿದ್ದರು.

ಇದನ್ನೂ ಓದಿ: ಮುಸ್ಲಿಂ ಜೊತೆ ಮದುವೆಯಾದರೆ ಬಹಿಷ್ಕರಿಸಿ ಎನ್ನುವ ಬಿಜೆಪಿ ಮುಖಂಡ, ‘ಅಂತರ್ಜಾತಿ ವಿವಾಹ’ ಎಂದರೆ ಉತ್ತರಿಸುವುದಿಲ್ಲ!

ಆದಾಗ್ಯೂ, ನ್ಯಾಯಾಲಯವು ತೀರ್ಪಿನಲ್ಲಿ,“ಒಂದು ವೇಳೆ ಒಪ್ಪಿಗೆ ಇದೆ ಎಂದು ಹೇಳಿದರೂ, ಸಂತ್ರಸ್ತೆ ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿರುವುದರಿಂದ ಅವರ ಒಪ್ಪಿಗೆಯು ಅಪ್ರಸ್ತುತವಾಗುತ್ತದೆ” ಎಂದು ಎಂದು ಹೇಳಿತ್ತು. ಪ್ರಕರಣದಲ್ಲಿ ನ್ಯಾಯಾಲಯವು ಆರೋಪಿಗೆ ಜಾಮೀನು ಅರ್ಜಿಯನ್ನು ತಿರಸ್ಕರಿಸಿ, ಆರೋಪಪಟ್ಟಿ ಸಲ್ಲಿಸಿದ ಮಾತ್ರಕ್ಕೆ ಅರ್ಜಿದಾರರಿಗೆ ಜಾಮೀನು ಪಡೆಯುವ ಯಾವುದೇ ಹಕ್ಕು ಇಲ್ಲ” ಎಂದು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...