Homeಕರ್ನಾಟಕಬ್ರಿಜ್‌ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ ಹಿಂಪಡೆದಿಲ್ಲ; ಮಾಧ್ಯಮಗಳ ಸುಳ್ಳು ಸುದ್ದಿಗೆ ದೂರುದಾರರ ಸ್ಪಷ್ಟನೆ

ಬ್ರಿಜ್‌ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ ಹಿಂಪಡೆದಿಲ್ಲ; ಮಾಧ್ಯಮಗಳ ಸುಳ್ಳು ಸುದ್ದಿಗೆ ದೂರುದಾರರ ಸ್ಪಷ್ಟನೆ

ಮಾಧ್ಯಮಗಳಲ್ಲಿ ಆಗಿರುವ ಸುಳ್ಳು ಸುದ್ದಿಗಳಿಗೆ ಸಂಬಂಧಿಸಿದಂತೆ ಸಂತ್ರಸ್ತ ಅಪ್ರಾಪ್ತ ಕುಸ್ತಿಪಟುವಿನ ತಂದೆ ಸ್ಪಷ್ಟನೆ ನೀಡಿದ್ದಾರೆ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ವಿರುದ್ಧ ಅಪ್ರಾಪ್ತ ಕುಸ್ತಿಪಟು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ಹಿಂತೆಗೆದುಕೊಳ್ಳಲಾಗಿಲ್ಲ ಎಂದು ಸಂತ್ರಸ್ತ ಬಾಲಕಿಯ ತಂದೆ ಸ್ಪಷ್ಟಪಡಿಸಿದ್ದಾರೆ.

ಬ್ರಿಜ್ ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣವನ್ನು ಸೋಮವಾರ ಹಿಂಪಡೆಯಲಾಗಿದೆ ಎಂಬ ವರದಿಗಳನ್ನು ಹಲವಾರು ಮಾಧ್ಯಮಗಳು ಮಾಡಿವೆ. ಆದರೆ, ಬ್ರಿಜ್ ಭೂಷಣ್‌ನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಬಾಲಕಿಯ ತಂದೆ ‘ದಿ ಪ್ರಿಂಟ್‌’ ಪ್ರತಿಕ್ರಿಯಿಸಿ, “ಈ ಸುದ್ದಿ ಸಂಪೂರ್ಣವಾಗಿ ಸುಳ್ಳು, ನಾನು ದೂರನ್ನು ಹಿಂಪಡೆದಿಲ್ಲ, ಹೋರಾಟ ಮಾಡುವ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಹೋರಾಟ ಮಾಡಿಯೇ ಮಾಡುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಬ್ರಿಜ್ ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ ಅಥವಾ ಎಫ್‌ಐಆರ್ ಹಿಂಪಡೆದಿಲ್ಲ ಎಂದು ಹೋರಾಟನಿರತ ಕುಸ್ತಿಪಟು ಸಾಕ್ಷಿ ಮಲ್ಲಿಕ್ ಕೂಡ ದೃಢಪಡಿಸಿದ್ದಾರೆ.

ಸೋಮವಾರ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇವೆ, ಸಾಮಾನ್ಯ ಮಾತುಕತೆಗಳು ನಡೆದಿವೆ. ಬ್ರಿಜ್ ಭೂಷಣ್ ಸಿಂಗ್‌ನನ್ನು ಬಂಧಿಸಬೇಕು ಎಂಬುದಷ್ಟೇ ನಮ್ಮ ಬೇಡಿಕೆಯಾಗಿದೆ. ನಾನು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ. ರೈಲ್ವೆಯಲ್ಲಿ ಓಎಸ್‌ಡಿಯಾಗಿ ನನ್ನ ಕೆಲಸವನ್ನು ಪುನರಾರಂಭಿಸಿದ್ದೇನೆ. ನಮಗೆ ನ್ಯಾಯ ಸಿಗುವವರೆಗೆ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಆಕೆ (ಅಪ್ರಾಪ್ತ ಬಾಲಕಿ) ಯಾವುದೇ ಎಫ್‌ಐಆರ್ ಹಿಂಪಡೆದಿಲ್ಲ, ಇದೆಲ್ಲವೂ ಸುಳ್ಳು” ಎಂದು ತಿಳಿಸಿದ್ದಾರೆ.

ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿ ತನ್ನ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್‌ ಮುಂದೆ ಸೆಕ್ಷನ್‌ 164ರ ಅನ್ವಯ  ನೀಡುವಾಗ ಹೊಸ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.

ಅಪ್ರಾಪ್ತ ಬಾಲಕಿಯ ತಂದೆ ‘ದಿ ಪ್ರಿಂಟ್‌’ ಪ್ರತಿಕ್ರಿಯಿಸಿ, “ಹೌದು, ನನಗೆ ಹೋರಾಡುವ ಉತ್ಸಾಹವಿದೆ. ನಾನು ಅದರ ವಿರುದ್ಧ ಹೋರಾಡುತ್ತಿದ್ದೇನೆ, ಆದರೆ ನಾನು ಎಲ್ಲಿಯವರೆಗೆ ಮುಂದುವರಿಯಬಹುದು? ಈ ಅನುಭವವು ನನ್ನನ್ನು ಸಂಪೂರ್ಣವಾಗಿ ಬರಿದು ಮಾಡಿದೆ. ಬ್ರಿಜ್ ಭೂಷಣ್ ನೀಡಿರುವ ಲೈಂಗಿಕ ಕಿರುಕುಳದಿಂದಾಗಿ ನನ್ನ ಮಗಳು ಇನ್ನೂ ಚೇತರಿಸಿಕೊಂಡಿಲ್ಲ. ಆಕೆ ಶಾಂತಿಯಿಂದ ಇರಲು ಸಾಧ್ಯವಾಗುತ್ತಿಲ್ಲ” ಎಂದಿದ್ದರು.

ಮಾಧ್ಯಮಗಳು ಮಾಡಿದ ವರದಿ ಏನು?

“ಪ್ರಕರಣ ದಾಖಲಿಸಿರುವ ಏಳು ಕುಸ್ತಿಪಟುಗಳ ಪೈಕಿ ಅಪ್ರಾಪ್ತ ಕುಸ್ತಿಪಟು ತನ್ನ ಹೇಳಿಕೆಯನ್ನು ಹಿಂಪಡೆದಿದ್ದಾರೆ” ಎಂದು ಮಾಧ್ಯಮಗಳು ಸುದ್ದಿ ಹಬ್ಬಿಸಿವೆ.

17 ವರ್ಷ ವಯಸ್ಸಿನ ಕುಸ್ತಿಪಟು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 164ರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹೊಸ ಹೇಳಿಕೆಯನ್ನು ದಾಖಲಿಸಿರುವುದಾಗಿ ಮೂಲಗಳು ತಿಳಿಸಿವೆ. ಈ ಹೇಳಿಕೆಯು ನ್ಯಾಯಾಲಯದ ಮುಂದೆ ಸಾಕ್ಷಿಯಾಗಿ ಪರಿಗಣಿಸಲ್ಪಡುತ್ತದೆ ಎಂದು ಮಾಧ್ಯಮಗಳು ವರದಿ ಪ್ರಕಟಿವೆ.

“ನಾವು ಕೇಳಿದ ಪ್ರಶ್ನೆಗೆ ಅಪ್ರಾಪ್ತ ಕುಸ್ತಿಪಟುವಿನ ತಂದೆ ಯಾವುದೇ ಪ್ರತಿಕ್ರಿಯೆಯನ್ನು ನೀಡಲಿಲ್ಲ” ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಹೇಳಿತ್ತು.

ದೆಹಲಿ ಪೊಲೀಸರು ಬ್ರಿಜ್‌ ವಿರುದ್ಧ ದಾಖಲಿಸಿದ ಎರಡು ಪ್ರಕರಣಗಳ ಪೈಕಿ ಒಂದು ಪೋಕ್ಸೋಗೆ ಸಂಬಂಧಿಸಿದೆ. ಅಪ್ರಾಪ್ತ ಕುಸ್ತಿಪಟುವಿನ ತಂದೆ ನೀಡಿದ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಾಗಿದೆ. “ನನ್ನ ಮಗಳು ಸಂಪೂರ್ಣವಾಗಿ ತೊಂದರೆಗೀಡಾಗಿದ್ದಾರೆ. ಮುಂದಿನ ದಿನಗಳಲ್ಲಿ ಮೊದಲಿನಂತೆ ಆಕೆ ಶಾಂತವಾಗಿ ಇರಲಾರಳು. ಆರೋಪಿ ಬ್ರಿಜ್ ಭೂಷಣ್ ನೀಡಿರುವ ಲೈಂಗಿಕ ಕಿರುಕುಳ ಆಕೆಯನ್ನು ಕಾಡುತ್ತಲೇ ಇದೆ” ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿರಿ: ಪ್ರತಿಭಟನೆಯಿಂದ ನಾನು ಹಿಂದೆ ಸರಿದಿಲ್ಲ, ಮಾಧ್ಯಮಗಳೇ ಸುಳ್ಳು ಸುದ್ದಿ ಹಬ್ಬಿಸಬೇಡಿ: ಸಾಕ್ಷಿ ಮಲಿಕ್ ಟ್ವೀಟ್

“ಫೋಟೋ ಕ್ಲಿಕ್ಕಿಸಿಕೊಳ್ಳುವ ನೆಪದಲ್ಲಿ ಬ್ರಿಜ್ ಭೂಷಣ್‌ ನನ್ನ ಮಗಳನ್ನು ಬಿಗಿಯಾಗಿ ಹಿಡಿದುಕೊಂಡು ಕಿರುಕುಳ ನೀಡಿದ್ದನು. ತನ್ನತ್ತ ಎಳೆದುಕೊಂಡು, ಮಗಳ ಭುಜವನ್ನು ಬಲವಾಗಿ ಒತ್ತಿದನು. ಉದ್ದೇಶಪೂರ್ವಕವಾಗಿ ಆಕೆಯ ಸ್ತನಗಳನ್ನು ಮುಟ್ಟಿದನು” ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಪೋಕ್ಸೋ ಕಾಯಿದೆಯ ಸೆಕ್ಷನ್ 10 ಮತ್ತು ಐಪಿಸಿ ಸೆಕ್ಷನ್‌ 354 (ಮಹಿಳೆಯರ ಮೇಲಿನ ದೌರ್ಜನ್ಯ ಅಥವಾ ಆಕೆಯ ನಮ್ರತೆಯನ್ನು ಕೆರಳಿಸಲು ಕ್ರಿಮಿನಲ್ ಬಲ ಪ್ರಯೋಗ), 354 ಎ (ಲೈಂಗಿಕ ಕಿರುಕುಳ), 354 ಡಿ (ಹಿಂಬಾಲಿಸುವುದು) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...