Homeಕರ್ನಾಟಕಬ್ರಿಜ್‌ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ ಹಿಂಪಡೆದಿಲ್ಲ; ಮಾಧ್ಯಮಗಳ ಸುಳ್ಳು ಸುದ್ದಿಗೆ ದೂರುದಾರರ ಸ್ಪಷ್ಟನೆ

ಬ್ರಿಜ್‌ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ ಹಿಂಪಡೆದಿಲ್ಲ; ಮಾಧ್ಯಮಗಳ ಸುಳ್ಳು ಸುದ್ದಿಗೆ ದೂರುದಾರರ ಸ್ಪಷ್ಟನೆ

ಮಾಧ್ಯಮಗಳಲ್ಲಿ ಆಗಿರುವ ಸುಳ್ಳು ಸುದ್ದಿಗಳಿಗೆ ಸಂಬಂಧಿಸಿದಂತೆ ಸಂತ್ರಸ್ತ ಅಪ್ರಾಪ್ತ ಕುಸ್ತಿಪಟುವಿನ ತಂದೆ ಸ್ಪಷ್ಟನೆ ನೀಡಿದ್ದಾರೆ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ವಿರುದ್ಧ ಅಪ್ರಾಪ್ತ ಕುಸ್ತಿಪಟು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ಹಿಂತೆಗೆದುಕೊಳ್ಳಲಾಗಿಲ್ಲ ಎಂದು ಸಂತ್ರಸ್ತ ಬಾಲಕಿಯ ತಂದೆ ಸ್ಪಷ್ಟಪಡಿಸಿದ್ದಾರೆ.

ಬ್ರಿಜ್ ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣವನ್ನು ಸೋಮವಾರ ಹಿಂಪಡೆಯಲಾಗಿದೆ ಎಂಬ ವರದಿಗಳನ್ನು ಹಲವಾರು ಮಾಧ್ಯಮಗಳು ಮಾಡಿವೆ. ಆದರೆ, ಬ್ರಿಜ್ ಭೂಷಣ್‌ನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಬಾಲಕಿಯ ತಂದೆ ‘ದಿ ಪ್ರಿಂಟ್‌’ ಪ್ರತಿಕ್ರಿಯಿಸಿ, “ಈ ಸುದ್ದಿ ಸಂಪೂರ್ಣವಾಗಿ ಸುಳ್ಳು, ನಾನು ದೂರನ್ನು ಹಿಂಪಡೆದಿಲ್ಲ, ಹೋರಾಟ ಮಾಡುವ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಹೋರಾಟ ಮಾಡಿಯೇ ಮಾಡುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಬ್ರಿಜ್ ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ ಅಥವಾ ಎಫ್‌ಐಆರ್ ಹಿಂಪಡೆದಿಲ್ಲ ಎಂದು ಹೋರಾಟನಿರತ ಕುಸ್ತಿಪಟು ಸಾಕ್ಷಿ ಮಲ್ಲಿಕ್ ಕೂಡ ದೃಢಪಡಿಸಿದ್ದಾರೆ.

ಸೋಮವಾರ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇವೆ, ಸಾಮಾನ್ಯ ಮಾತುಕತೆಗಳು ನಡೆದಿವೆ. ಬ್ರಿಜ್ ಭೂಷಣ್ ಸಿಂಗ್‌ನನ್ನು ಬಂಧಿಸಬೇಕು ಎಂಬುದಷ್ಟೇ ನಮ್ಮ ಬೇಡಿಕೆಯಾಗಿದೆ. ನಾನು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ. ರೈಲ್ವೆಯಲ್ಲಿ ಓಎಸ್‌ಡಿಯಾಗಿ ನನ್ನ ಕೆಲಸವನ್ನು ಪುನರಾರಂಭಿಸಿದ್ದೇನೆ. ನಮಗೆ ನ್ಯಾಯ ಸಿಗುವವರೆಗೆ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಆಕೆ (ಅಪ್ರಾಪ್ತ ಬಾಲಕಿ) ಯಾವುದೇ ಎಫ್‌ಐಆರ್ ಹಿಂಪಡೆದಿಲ್ಲ, ಇದೆಲ್ಲವೂ ಸುಳ್ಳು” ಎಂದು ತಿಳಿಸಿದ್ದಾರೆ.

ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿ ತನ್ನ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್‌ ಮುಂದೆ ಸೆಕ್ಷನ್‌ 164ರ ಅನ್ವಯ  ನೀಡುವಾಗ ಹೊಸ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.

ಅಪ್ರಾಪ್ತ ಬಾಲಕಿಯ ತಂದೆ ‘ದಿ ಪ್ರಿಂಟ್‌’ ಪ್ರತಿಕ್ರಿಯಿಸಿ, “ಹೌದು, ನನಗೆ ಹೋರಾಡುವ ಉತ್ಸಾಹವಿದೆ. ನಾನು ಅದರ ವಿರುದ್ಧ ಹೋರಾಡುತ್ತಿದ್ದೇನೆ, ಆದರೆ ನಾನು ಎಲ್ಲಿಯವರೆಗೆ ಮುಂದುವರಿಯಬಹುದು? ಈ ಅನುಭವವು ನನ್ನನ್ನು ಸಂಪೂರ್ಣವಾಗಿ ಬರಿದು ಮಾಡಿದೆ. ಬ್ರಿಜ್ ಭೂಷಣ್ ನೀಡಿರುವ ಲೈಂಗಿಕ ಕಿರುಕುಳದಿಂದಾಗಿ ನನ್ನ ಮಗಳು ಇನ್ನೂ ಚೇತರಿಸಿಕೊಂಡಿಲ್ಲ. ಆಕೆ ಶಾಂತಿಯಿಂದ ಇರಲು ಸಾಧ್ಯವಾಗುತ್ತಿಲ್ಲ” ಎಂದಿದ್ದರು.

ಮಾಧ್ಯಮಗಳು ಮಾಡಿದ ವರದಿ ಏನು?

“ಪ್ರಕರಣ ದಾಖಲಿಸಿರುವ ಏಳು ಕುಸ್ತಿಪಟುಗಳ ಪೈಕಿ ಅಪ್ರಾಪ್ತ ಕುಸ್ತಿಪಟು ತನ್ನ ಹೇಳಿಕೆಯನ್ನು ಹಿಂಪಡೆದಿದ್ದಾರೆ” ಎಂದು ಮಾಧ್ಯಮಗಳು ಸುದ್ದಿ ಹಬ್ಬಿಸಿವೆ.

17 ವರ್ಷ ವಯಸ್ಸಿನ ಕುಸ್ತಿಪಟು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 164ರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹೊಸ ಹೇಳಿಕೆಯನ್ನು ದಾಖಲಿಸಿರುವುದಾಗಿ ಮೂಲಗಳು ತಿಳಿಸಿವೆ. ಈ ಹೇಳಿಕೆಯು ನ್ಯಾಯಾಲಯದ ಮುಂದೆ ಸಾಕ್ಷಿಯಾಗಿ ಪರಿಗಣಿಸಲ್ಪಡುತ್ತದೆ ಎಂದು ಮಾಧ್ಯಮಗಳು ವರದಿ ಪ್ರಕಟಿವೆ.

“ನಾವು ಕೇಳಿದ ಪ್ರಶ್ನೆಗೆ ಅಪ್ರಾಪ್ತ ಕುಸ್ತಿಪಟುವಿನ ತಂದೆ ಯಾವುದೇ ಪ್ರತಿಕ್ರಿಯೆಯನ್ನು ನೀಡಲಿಲ್ಲ” ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಹೇಳಿತ್ತು.

ದೆಹಲಿ ಪೊಲೀಸರು ಬ್ರಿಜ್‌ ವಿರುದ್ಧ ದಾಖಲಿಸಿದ ಎರಡು ಪ್ರಕರಣಗಳ ಪೈಕಿ ಒಂದು ಪೋಕ್ಸೋಗೆ ಸಂಬಂಧಿಸಿದೆ. ಅಪ್ರಾಪ್ತ ಕುಸ್ತಿಪಟುವಿನ ತಂದೆ ನೀಡಿದ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಾಗಿದೆ. “ನನ್ನ ಮಗಳು ಸಂಪೂರ್ಣವಾಗಿ ತೊಂದರೆಗೀಡಾಗಿದ್ದಾರೆ. ಮುಂದಿನ ದಿನಗಳಲ್ಲಿ ಮೊದಲಿನಂತೆ ಆಕೆ ಶಾಂತವಾಗಿ ಇರಲಾರಳು. ಆರೋಪಿ ಬ್ರಿಜ್ ಭೂಷಣ್ ನೀಡಿರುವ ಲೈಂಗಿಕ ಕಿರುಕುಳ ಆಕೆಯನ್ನು ಕಾಡುತ್ತಲೇ ಇದೆ” ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿರಿ: ಪ್ರತಿಭಟನೆಯಿಂದ ನಾನು ಹಿಂದೆ ಸರಿದಿಲ್ಲ, ಮಾಧ್ಯಮಗಳೇ ಸುಳ್ಳು ಸುದ್ದಿ ಹಬ್ಬಿಸಬೇಡಿ: ಸಾಕ್ಷಿ ಮಲಿಕ್ ಟ್ವೀಟ್

“ಫೋಟೋ ಕ್ಲಿಕ್ಕಿಸಿಕೊಳ್ಳುವ ನೆಪದಲ್ಲಿ ಬ್ರಿಜ್ ಭೂಷಣ್‌ ನನ್ನ ಮಗಳನ್ನು ಬಿಗಿಯಾಗಿ ಹಿಡಿದುಕೊಂಡು ಕಿರುಕುಳ ನೀಡಿದ್ದನು. ತನ್ನತ್ತ ಎಳೆದುಕೊಂಡು, ಮಗಳ ಭುಜವನ್ನು ಬಲವಾಗಿ ಒತ್ತಿದನು. ಉದ್ದೇಶಪೂರ್ವಕವಾಗಿ ಆಕೆಯ ಸ್ತನಗಳನ್ನು ಮುಟ್ಟಿದನು” ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಪೋಕ್ಸೋ ಕಾಯಿದೆಯ ಸೆಕ್ಷನ್ 10 ಮತ್ತು ಐಪಿಸಿ ಸೆಕ್ಷನ್‌ 354 (ಮಹಿಳೆಯರ ಮೇಲಿನ ದೌರ್ಜನ್ಯ ಅಥವಾ ಆಕೆಯ ನಮ್ರತೆಯನ್ನು ಕೆರಳಿಸಲು ಕ್ರಿಮಿನಲ್ ಬಲ ಪ್ರಯೋಗ), 354 ಎ (ಲೈಂಗಿಕ ಕಿರುಕುಳ), 354 ಡಿ (ಹಿಂಬಾಲಿಸುವುದು) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...