Homeಕರ್ನಾಟಕಬ್ರಿಜ್‌ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ ಹಿಂಪಡೆದಿಲ್ಲ; ಮಾಧ್ಯಮಗಳ ಸುಳ್ಳು ಸುದ್ದಿಗೆ ದೂರುದಾರರ ಸ್ಪಷ್ಟನೆ

ಬ್ರಿಜ್‌ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ ಹಿಂಪಡೆದಿಲ್ಲ; ಮಾಧ್ಯಮಗಳ ಸುಳ್ಳು ಸುದ್ದಿಗೆ ದೂರುದಾರರ ಸ್ಪಷ್ಟನೆ

ಮಾಧ್ಯಮಗಳಲ್ಲಿ ಆಗಿರುವ ಸುಳ್ಳು ಸುದ್ದಿಗಳಿಗೆ ಸಂಬಂಧಿಸಿದಂತೆ ಸಂತ್ರಸ್ತ ಅಪ್ರಾಪ್ತ ಕುಸ್ತಿಪಟುವಿನ ತಂದೆ ಸ್ಪಷ್ಟನೆ ನೀಡಿದ್ದಾರೆ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ವಿರುದ್ಧ ಅಪ್ರಾಪ್ತ ಕುಸ್ತಿಪಟು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ಹಿಂತೆಗೆದುಕೊಳ್ಳಲಾಗಿಲ್ಲ ಎಂದು ಸಂತ್ರಸ್ತ ಬಾಲಕಿಯ ತಂದೆ ಸ್ಪಷ್ಟಪಡಿಸಿದ್ದಾರೆ.

ಬ್ರಿಜ್ ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣವನ್ನು ಸೋಮವಾರ ಹಿಂಪಡೆಯಲಾಗಿದೆ ಎಂಬ ವರದಿಗಳನ್ನು ಹಲವಾರು ಮಾಧ್ಯಮಗಳು ಮಾಡಿವೆ. ಆದರೆ, ಬ್ರಿಜ್ ಭೂಷಣ್‌ನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಬಾಲಕಿಯ ತಂದೆ ‘ದಿ ಪ್ರಿಂಟ್‌’ ಪ್ರತಿಕ್ರಿಯಿಸಿ, “ಈ ಸುದ್ದಿ ಸಂಪೂರ್ಣವಾಗಿ ಸುಳ್ಳು, ನಾನು ದೂರನ್ನು ಹಿಂಪಡೆದಿಲ್ಲ, ಹೋರಾಟ ಮಾಡುವ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಹೋರಾಟ ಮಾಡಿಯೇ ಮಾಡುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಬ್ರಿಜ್ ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ ಅಥವಾ ಎಫ್‌ಐಆರ್ ಹಿಂಪಡೆದಿಲ್ಲ ಎಂದು ಹೋರಾಟನಿರತ ಕುಸ್ತಿಪಟು ಸಾಕ್ಷಿ ಮಲ್ಲಿಕ್ ಕೂಡ ದೃಢಪಡಿಸಿದ್ದಾರೆ.

ಸೋಮವಾರ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇವೆ, ಸಾಮಾನ್ಯ ಮಾತುಕತೆಗಳು ನಡೆದಿವೆ. ಬ್ರಿಜ್ ಭೂಷಣ್ ಸಿಂಗ್‌ನನ್ನು ಬಂಧಿಸಬೇಕು ಎಂಬುದಷ್ಟೇ ನಮ್ಮ ಬೇಡಿಕೆಯಾಗಿದೆ. ನಾನು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ. ರೈಲ್ವೆಯಲ್ಲಿ ಓಎಸ್‌ಡಿಯಾಗಿ ನನ್ನ ಕೆಲಸವನ್ನು ಪುನರಾರಂಭಿಸಿದ್ದೇನೆ. ನಮಗೆ ನ್ಯಾಯ ಸಿಗುವವರೆಗೆ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಆಕೆ (ಅಪ್ರಾಪ್ತ ಬಾಲಕಿ) ಯಾವುದೇ ಎಫ್‌ಐಆರ್ ಹಿಂಪಡೆದಿಲ್ಲ, ಇದೆಲ್ಲವೂ ಸುಳ್ಳು” ಎಂದು ತಿಳಿಸಿದ್ದಾರೆ.

ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿ ತನ್ನ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್‌ ಮುಂದೆ ಸೆಕ್ಷನ್‌ 164ರ ಅನ್ವಯ  ನೀಡುವಾಗ ಹೊಸ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.

ಅಪ್ರಾಪ್ತ ಬಾಲಕಿಯ ತಂದೆ ‘ದಿ ಪ್ರಿಂಟ್‌’ ಪ್ರತಿಕ್ರಿಯಿಸಿ, “ಹೌದು, ನನಗೆ ಹೋರಾಡುವ ಉತ್ಸಾಹವಿದೆ. ನಾನು ಅದರ ವಿರುದ್ಧ ಹೋರಾಡುತ್ತಿದ್ದೇನೆ, ಆದರೆ ನಾನು ಎಲ್ಲಿಯವರೆಗೆ ಮುಂದುವರಿಯಬಹುದು? ಈ ಅನುಭವವು ನನ್ನನ್ನು ಸಂಪೂರ್ಣವಾಗಿ ಬರಿದು ಮಾಡಿದೆ. ಬ್ರಿಜ್ ಭೂಷಣ್ ನೀಡಿರುವ ಲೈಂಗಿಕ ಕಿರುಕುಳದಿಂದಾಗಿ ನನ್ನ ಮಗಳು ಇನ್ನೂ ಚೇತರಿಸಿಕೊಂಡಿಲ್ಲ. ಆಕೆ ಶಾಂತಿಯಿಂದ ಇರಲು ಸಾಧ್ಯವಾಗುತ್ತಿಲ್ಲ” ಎಂದಿದ್ದರು.

ಮಾಧ್ಯಮಗಳು ಮಾಡಿದ ವರದಿ ಏನು?

“ಪ್ರಕರಣ ದಾಖಲಿಸಿರುವ ಏಳು ಕುಸ್ತಿಪಟುಗಳ ಪೈಕಿ ಅಪ್ರಾಪ್ತ ಕುಸ್ತಿಪಟು ತನ್ನ ಹೇಳಿಕೆಯನ್ನು ಹಿಂಪಡೆದಿದ್ದಾರೆ” ಎಂದು ಮಾಧ್ಯಮಗಳು ಸುದ್ದಿ ಹಬ್ಬಿಸಿವೆ.

17 ವರ್ಷ ವಯಸ್ಸಿನ ಕುಸ್ತಿಪಟು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 164ರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹೊಸ ಹೇಳಿಕೆಯನ್ನು ದಾಖಲಿಸಿರುವುದಾಗಿ ಮೂಲಗಳು ತಿಳಿಸಿವೆ. ಈ ಹೇಳಿಕೆಯು ನ್ಯಾಯಾಲಯದ ಮುಂದೆ ಸಾಕ್ಷಿಯಾಗಿ ಪರಿಗಣಿಸಲ್ಪಡುತ್ತದೆ ಎಂದು ಮಾಧ್ಯಮಗಳು ವರದಿ ಪ್ರಕಟಿವೆ.

“ನಾವು ಕೇಳಿದ ಪ್ರಶ್ನೆಗೆ ಅಪ್ರಾಪ್ತ ಕುಸ್ತಿಪಟುವಿನ ತಂದೆ ಯಾವುದೇ ಪ್ರತಿಕ್ರಿಯೆಯನ್ನು ನೀಡಲಿಲ್ಲ” ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಹೇಳಿತ್ತು.

ದೆಹಲಿ ಪೊಲೀಸರು ಬ್ರಿಜ್‌ ವಿರುದ್ಧ ದಾಖಲಿಸಿದ ಎರಡು ಪ್ರಕರಣಗಳ ಪೈಕಿ ಒಂದು ಪೋಕ್ಸೋಗೆ ಸಂಬಂಧಿಸಿದೆ. ಅಪ್ರಾಪ್ತ ಕುಸ್ತಿಪಟುವಿನ ತಂದೆ ನೀಡಿದ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಾಗಿದೆ. “ನನ್ನ ಮಗಳು ಸಂಪೂರ್ಣವಾಗಿ ತೊಂದರೆಗೀಡಾಗಿದ್ದಾರೆ. ಮುಂದಿನ ದಿನಗಳಲ್ಲಿ ಮೊದಲಿನಂತೆ ಆಕೆ ಶಾಂತವಾಗಿ ಇರಲಾರಳು. ಆರೋಪಿ ಬ್ರಿಜ್ ಭೂಷಣ್ ನೀಡಿರುವ ಲೈಂಗಿಕ ಕಿರುಕುಳ ಆಕೆಯನ್ನು ಕಾಡುತ್ತಲೇ ಇದೆ” ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿರಿ: ಪ್ರತಿಭಟನೆಯಿಂದ ನಾನು ಹಿಂದೆ ಸರಿದಿಲ್ಲ, ಮಾಧ್ಯಮಗಳೇ ಸುಳ್ಳು ಸುದ್ದಿ ಹಬ್ಬಿಸಬೇಡಿ: ಸಾಕ್ಷಿ ಮಲಿಕ್ ಟ್ವೀಟ್

“ಫೋಟೋ ಕ್ಲಿಕ್ಕಿಸಿಕೊಳ್ಳುವ ನೆಪದಲ್ಲಿ ಬ್ರಿಜ್ ಭೂಷಣ್‌ ನನ್ನ ಮಗಳನ್ನು ಬಿಗಿಯಾಗಿ ಹಿಡಿದುಕೊಂಡು ಕಿರುಕುಳ ನೀಡಿದ್ದನು. ತನ್ನತ್ತ ಎಳೆದುಕೊಂಡು, ಮಗಳ ಭುಜವನ್ನು ಬಲವಾಗಿ ಒತ್ತಿದನು. ಉದ್ದೇಶಪೂರ್ವಕವಾಗಿ ಆಕೆಯ ಸ್ತನಗಳನ್ನು ಮುಟ್ಟಿದನು” ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಪೋಕ್ಸೋ ಕಾಯಿದೆಯ ಸೆಕ್ಷನ್ 10 ಮತ್ತು ಐಪಿಸಿ ಸೆಕ್ಷನ್‌ 354 (ಮಹಿಳೆಯರ ಮೇಲಿನ ದೌರ್ಜನ್ಯ ಅಥವಾ ಆಕೆಯ ನಮ್ರತೆಯನ್ನು ಕೆರಳಿಸಲು ಕ್ರಿಮಿನಲ್ ಬಲ ಪ್ರಯೋಗ), 354 ಎ (ಲೈಂಗಿಕ ಕಿರುಕುಳ), 354 ಡಿ (ಹಿಂಬಾಲಿಸುವುದು) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...