Homeಕರ್ನಾಟಕಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ 'ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹ': ಹೈಕೋರ್ಟ್‌

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ ‘ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹ’: ಹೈಕೋರ್ಟ್‌

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಬುಧವಾರ (ಸೆಪ್ಟೆಂಬರ್ 17) “ಇದು ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾದ ಪ್ರಕರಣ” ಎಂದು ಮೌಖಿಕವಾಗಿ ಹೇಳಿದೆ.

2025ರ ಫೆಬ್ರವರಿ 28ರಂದು ವಿಚಾರಣಾ ನ್ಯಾಯಾಲಯವು ತನಗೆ ಸಮನ್ಸ್ ಜಾರಿ ಮಾಡಿದ್ದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಎರಡನೇ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದೆ. ಪ್ರಕರಣದಲ್ಲಿ ದಾಖಲಿಸಲಾದ ಎಫ್‌ಐಆರ್ ಮತ್ತು ಸಲ್ಲಿಸಲಾದ ಚಾರ್ಜ್‌ಶೀಟ್ ಅನ್ನು ರದ್ದುಗೊಳಿಸುವಂತೆಯೂ ಯಡಿಯೂರಪ್ಪ ಕೋರಿದ್ದಾರೆ.

ಯಡಿಯೂರಪ್ಪ ಪರ ವಕೀಲರು ಮತ್ತು ರಾಜ್ಯ ಸರ್ಕಾರದ ವಾದವನ್ನು ದೀರ್ಘವಾಗಿ ಆಲಿಸಿದ ನಂತರ ನ್ಯಾಯಮೂರ್ತಿ ಎಂ.ಐ. ಅರುಣ್ ಅವರು “ಇದು ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾದ ಪ್ರಕರಣವಾಗಿದೆ. ಖಂಡಿತ ನಾನು ನಿಮ್ಮ ವಾದವನ್ನು ಆಲಿಸುತ್ತೇನೆ” ಎಂದು ಎಂದು ಯಡಿಯೂರಪ್ಪ ಪರ ವಕೀಲರಿಗೆ ಮೌಖಿಕವಾಗಿ ಹೇಳಿದ್ದಾರೆ.

ಮುಂದುವರಿದು, “ಯಡಿಯೂರಪ್ಪ ವಿರೋಧ ಪಕ್ಷದಲ್ಲಿದ್ದಾರೆ ಎಂಬುದು ಸತ್ಯ. ಅವರು ತನಗೆ ಅನಗತ್ಯವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಬಹುದು. ಈ ಕಿರುಕುಳವನ್ನು ತಡೆಗಟ್ಟಲು ಕೆಲವು ಅವಲೋಕನಗಳನ್ನು ಮಾಡಬಹುದು. ಸೆಕ್ಷನ್ 482 ನಿರ್ವಹಣೆಯ ಬಗ್ಗೆ ಸಾಮಾನ್ಯ ಅವಲೋಕನಗಳನ್ನು ಕೂಡ ಮಾಡಬಹುದು. “ಇದು ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾದ ಪ್ರಕರಣ ಎಂದಷ್ಟೇ ನಾನು ಹೇಳಬಲ್ಲೆ. ಇಲ್ಲದಿದ್ದರೆ, ಈ ವಿಷಯವನ್ನು ನಾನು ಒಂದು ವಾರಕ್ಕೂ ಹೆಚ್ಚು ಕಾಲ ಆಲಿಸಬೇಕಾಗುತ್ತದೆ” ಎಂದಿದ್ದಾರೆ.

“ಪೋಕ್ಸೊ ಕಾಯ್ದೆಯಡಿಯಲ್ಲಿ, ತಪ್ಪಿತಸ್ಥರನ್ನು ಶಿಕ್ಷಿಸಲು ಸಂತ್ರಸ್ತರ ಆರೋಪ ಮಾತ್ರವೇ ಸಾಕು. ಆದರೂ, ಸಂತ್ರಸ್ತರ ಹೇಳಿಕೆಯನ್ನು ಕಾನೂನಾತ್ಮಕವಾಗಿ ಪರಿಶೀಲನೆಗೆ ಒಳಪಡಿಸಬೇಕಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆ ಮತ್ತು ಆಕೆಯ ತಾಯಿಯ ವಿರುದ್ಧ ಅರ್ಜಿದಾರ ಹನಿಟ್ರ್ಯಾಪ್ ಆರೋಪ ಮಾಡಬಹುದು. ಆದರೆ, ಅವೆಲ್ಲವೂ ವಿಚಾರಣೆಯ ವಿಷಯವಾಗುತ್ತವೆ” ಎಂದು ನ್ಯಾಯಾಲಯವು ಮೌಖಿಕವಾಗಿ ಹೇಳಿದೆ.

“ಪ್ರಾಯೋಗಿಕವಾಗಿ ನಿಮ್ಮ ಆತಂಕವೇನು? ಎಲ್ಲಿ ನೀವು ಕಿರುಕುಳಕ್ಕೊಳಗಾಗಬಹುದು ಎಂದು ಭಾವಿಸುತ್ತೀರಿ? ಅದಕ್ಕೆ ಸಂಬಂಧಿಸಿದಂತೆ ಯಾವ ಅವಲೋಕನವನ್ನು ನೀವು ಬಯಸುತ್ತೀರಿ? ಕಾರ್ಯವಿಧಾನದ ಕಿರುಕುಳ ಮತ್ತು ನ್ಯಾಯಯುತ ವಿಚಾರಣೆಗಾಗಿ ನೀವು ಸಲಹೆ ನೀಡಬಹುದು, ಮತ್ತು ನಾವು ವಿಚಾರಣಾ ನ್ಯಾಯಾಲಯಕ್ಕೆ ಈ ಪ್ರಕರಣವನ್ನು ನಿರ್ದಿಷ್ಟ ಸಮಯದಲ್ಲಿ ಇತ್ಯರ್ಥಗೊಳಿಸಲು ಸೂಚಿಸಬಹುದು” ಎಂದು ಯಡಿಯೂಪ್ಪ ಪರ ವಕೀಲರಿಗೆ ಪೀಠ ತಿಳಿಸಿದೆ.

ಆಗ, ಯಡಿಯೂರಪ್ಪ ಪರ ವಕೀಲ ಸಂದೀಪ್ ಪಾಟೀಲ್‌ ಅವರು “ನ್ಯಾಯಾಲಯದ ಅಭಿಪ್ರಾಯ ಏನಿದೆ ಎಂಬುದು ಅರ್ಥವಾಗುತ್ತದೆ. ಈ ಕುರಿತು ಚರ್ಚಿಸಿ, ವಿಚಾರ ತಿಳಿಸಲಾಗುವುದು” ಎಂದಿದ್ದಾರೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಶುಕ್ರವಾರಕ್ಕೆ (ಸೆ. 19) ನಿಗದಿ ಮಾಡಿದೆ.

ಪ್ರಕರಣದ ತನಿಖಾಧಿಕಾರಿಯು ಸಿಆರ್‌ಪಿಸಿ ಸೆಕ್ಷನ್‌ 161 ಅಡಿ ದಾಖಲಿಸಿಕೊಂಡಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರ 6 ಏಪ್ರಿಲ್ 2024 ಮತ್ತು 29 ಏಪ್ರಿಲ್ 2024ರ ಹೇಳಿಕೆಯನ್ನು ಮೆಮೊ ಜೊತೆಗೆ ರಾಜ್ಯ ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್‌ ಸಲ್ಲಿಸಿದ್ದಾರೆ. ಇದನ್ನು ನ್ಯಾಯಾಲಯ ದಾಖಲೆಯಲ್ಲಿ ಸ್ವೀಕರಿಸಿದೆ. ಇದಕ್ಕೂ ಮುನ್ನ, ಯಡಿಯೂರಪ್ಪ ಪರ ವಕೀಲರು ಆರೋಪ ಪಟ್ಟಿಯಲ್ಲಿ ತಗಡೂರು ಅವರ ಹೇಳಿಕೆಯನ್ನು ಕೈಬಿಡಲಾಗಿದೆ. ಇದನ್ನು ನ್ಯಾಯಾಲಯ ತರಿಸಿಕೊಳ್ಳಬೇಕು ಎಂದು ವಾದಿಸಿದ್ದರು.

ಮಹಿಳೆಯೊಬ್ಬರು ತನ್ನ 17 ವರ್ಷದ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ 2024ರ ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಡಾಲರ್ಸ್ ಕಾಲೋನಿಯ ಮನೆಗೆ ತೆರಳಿ ಸಹಾಯ ಕೇಳಿದಾಗ ಯಡಿಯೂರಪ್ಪ ಅವರು ನನ್ನ ಮಗಳನ್ನು ಪ್ರತ್ಯೇಕ ಕೊಠಡಿಯೊಳಕ್ಕೆ ಕರೆದೊಯ್ದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವಿಷಯವನ್ನು ಯಾರಿಗೂ ಹೇಳದಂತೆ ಒಂದಿಷ್ಟು ಹಣ ನೀಡಿದ್ದರು ಎಂದು ಸಂತ್ರಸ್ತ ಬಾಲಕಿಯ ತಾಯಿ ಆರೋಪಿಸಿದ್ದರು.

ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ ಸದಾಶಿವನಗರ ಪೊಲೀಸರು ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಎಫ್​ಐಆರ್ ದಾಖಲಿಸಿದ್ದರು. ನಂತರ ಸರ್ಕಾರ ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿತ್ತು.

‘ಇಸ್ಲಾಮೋಫೋಬಿಕ್’ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ: ವ್ಯಾಪಕ ವಿರೋಧ, ದೂರು ದಾಖಲಿಸಲು ಮುಂದಾದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...