Homeಕರ್ನಾಟಕಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ 'ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹ': ಹೈಕೋರ್ಟ್‌

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ ‘ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹ’: ಹೈಕೋರ್ಟ್‌

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಬುಧವಾರ (ಸೆಪ್ಟೆಂಬರ್ 17) “ಇದು ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾದ ಪ್ರಕರಣ” ಎಂದು ಮೌಖಿಕವಾಗಿ ಹೇಳಿದೆ.

2025ರ ಫೆಬ್ರವರಿ 28ರಂದು ವಿಚಾರಣಾ ನ್ಯಾಯಾಲಯವು ತನಗೆ ಸಮನ್ಸ್ ಜಾರಿ ಮಾಡಿದ್ದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಎರಡನೇ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದೆ. ಪ್ರಕರಣದಲ್ಲಿ ದಾಖಲಿಸಲಾದ ಎಫ್‌ಐಆರ್ ಮತ್ತು ಸಲ್ಲಿಸಲಾದ ಚಾರ್ಜ್‌ಶೀಟ್ ಅನ್ನು ರದ್ದುಗೊಳಿಸುವಂತೆಯೂ ಯಡಿಯೂರಪ್ಪ ಕೋರಿದ್ದಾರೆ.

ಯಡಿಯೂರಪ್ಪ ಪರ ವಕೀಲರು ಮತ್ತು ರಾಜ್ಯ ಸರ್ಕಾರದ ವಾದವನ್ನು ದೀರ್ಘವಾಗಿ ಆಲಿಸಿದ ನಂತರ ನ್ಯಾಯಮೂರ್ತಿ ಎಂ.ಐ. ಅರುಣ್ ಅವರು “ಇದು ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾದ ಪ್ರಕರಣವಾಗಿದೆ. ಖಂಡಿತ ನಾನು ನಿಮ್ಮ ವಾದವನ್ನು ಆಲಿಸುತ್ತೇನೆ” ಎಂದು ಎಂದು ಯಡಿಯೂರಪ್ಪ ಪರ ವಕೀಲರಿಗೆ ಮೌಖಿಕವಾಗಿ ಹೇಳಿದ್ದಾರೆ.

ಮುಂದುವರಿದು, “ಯಡಿಯೂರಪ್ಪ ವಿರೋಧ ಪಕ್ಷದಲ್ಲಿದ್ದಾರೆ ಎಂಬುದು ಸತ್ಯ. ಅವರು ತನಗೆ ಅನಗತ್ಯವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಬಹುದು. ಈ ಕಿರುಕುಳವನ್ನು ತಡೆಗಟ್ಟಲು ಕೆಲವು ಅವಲೋಕನಗಳನ್ನು ಮಾಡಬಹುದು. ಸೆಕ್ಷನ್ 482 ನಿರ್ವಹಣೆಯ ಬಗ್ಗೆ ಸಾಮಾನ್ಯ ಅವಲೋಕನಗಳನ್ನು ಕೂಡ ಮಾಡಬಹುದು. “ಇದು ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾದ ಪ್ರಕರಣ ಎಂದಷ್ಟೇ ನಾನು ಹೇಳಬಲ್ಲೆ. ಇಲ್ಲದಿದ್ದರೆ, ಈ ವಿಷಯವನ್ನು ನಾನು ಒಂದು ವಾರಕ್ಕೂ ಹೆಚ್ಚು ಕಾಲ ಆಲಿಸಬೇಕಾಗುತ್ತದೆ” ಎಂದಿದ್ದಾರೆ.

“ಪೋಕ್ಸೊ ಕಾಯ್ದೆಯಡಿಯಲ್ಲಿ, ತಪ್ಪಿತಸ್ಥರನ್ನು ಶಿಕ್ಷಿಸಲು ಸಂತ್ರಸ್ತರ ಆರೋಪ ಮಾತ್ರವೇ ಸಾಕು. ಆದರೂ, ಸಂತ್ರಸ್ತರ ಹೇಳಿಕೆಯನ್ನು ಕಾನೂನಾತ್ಮಕವಾಗಿ ಪರಿಶೀಲನೆಗೆ ಒಳಪಡಿಸಬೇಕಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆ ಮತ್ತು ಆಕೆಯ ತಾಯಿಯ ವಿರುದ್ಧ ಅರ್ಜಿದಾರ ಹನಿಟ್ರ್ಯಾಪ್ ಆರೋಪ ಮಾಡಬಹುದು. ಆದರೆ, ಅವೆಲ್ಲವೂ ವಿಚಾರಣೆಯ ವಿಷಯವಾಗುತ್ತವೆ” ಎಂದು ನ್ಯಾಯಾಲಯವು ಮೌಖಿಕವಾಗಿ ಹೇಳಿದೆ.

“ಪ್ರಾಯೋಗಿಕವಾಗಿ ನಿಮ್ಮ ಆತಂಕವೇನು? ಎಲ್ಲಿ ನೀವು ಕಿರುಕುಳಕ್ಕೊಳಗಾಗಬಹುದು ಎಂದು ಭಾವಿಸುತ್ತೀರಿ? ಅದಕ್ಕೆ ಸಂಬಂಧಿಸಿದಂತೆ ಯಾವ ಅವಲೋಕನವನ್ನು ನೀವು ಬಯಸುತ್ತೀರಿ? ಕಾರ್ಯವಿಧಾನದ ಕಿರುಕುಳ ಮತ್ತು ನ್ಯಾಯಯುತ ವಿಚಾರಣೆಗಾಗಿ ನೀವು ಸಲಹೆ ನೀಡಬಹುದು, ಮತ್ತು ನಾವು ವಿಚಾರಣಾ ನ್ಯಾಯಾಲಯಕ್ಕೆ ಈ ಪ್ರಕರಣವನ್ನು ನಿರ್ದಿಷ್ಟ ಸಮಯದಲ್ಲಿ ಇತ್ಯರ್ಥಗೊಳಿಸಲು ಸೂಚಿಸಬಹುದು” ಎಂದು ಯಡಿಯೂಪ್ಪ ಪರ ವಕೀಲರಿಗೆ ಪೀಠ ತಿಳಿಸಿದೆ.

ಆಗ, ಯಡಿಯೂರಪ್ಪ ಪರ ವಕೀಲ ಸಂದೀಪ್ ಪಾಟೀಲ್‌ ಅವರು “ನ್ಯಾಯಾಲಯದ ಅಭಿಪ್ರಾಯ ಏನಿದೆ ಎಂಬುದು ಅರ್ಥವಾಗುತ್ತದೆ. ಈ ಕುರಿತು ಚರ್ಚಿಸಿ, ವಿಚಾರ ತಿಳಿಸಲಾಗುವುದು” ಎಂದಿದ್ದಾರೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಶುಕ್ರವಾರಕ್ಕೆ (ಸೆ. 19) ನಿಗದಿ ಮಾಡಿದೆ.

ಪ್ರಕರಣದ ತನಿಖಾಧಿಕಾರಿಯು ಸಿಆರ್‌ಪಿಸಿ ಸೆಕ್ಷನ್‌ 161 ಅಡಿ ದಾಖಲಿಸಿಕೊಂಡಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರ 6 ಏಪ್ರಿಲ್ 2024 ಮತ್ತು 29 ಏಪ್ರಿಲ್ 2024ರ ಹೇಳಿಕೆಯನ್ನು ಮೆಮೊ ಜೊತೆಗೆ ರಾಜ್ಯ ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್‌ ಸಲ್ಲಿಸಿದ್ದಾರೆ. ಇದನ್ನು ನ್ಯಾಯಾಲಯ ದಾಖಲೆಯಲ್ಲಿ ಸ್ವೀಕರಿಸಿದೆ. ಇದಕ್ಕೂ ಮುನ್ನ, ಯಡಿಯೂರಪ್ಪ ಪರ ವಕೀಲರು ಆರೋಪ ಪಟ್ಟಿಯಲ್ಲಿ ತಗಡೂರು ಅವರ ಹೇಳಿಕೆಯನ್ನು ಕೈಬಿಡಲಾಗಿದೆ. ಇದನ್ನು ನ್ಯಾಯಾಲಯ ತರಿಸಿಕೊಳ್ಳಬೇಕು ಎಂದು ವಾದಿಸಿದ್ದರು.

ಮಹಿಳೆಯೊಬ್ಬರು ತನ್ನ 17 ವರ್ಷದ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ 2024ರ ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಡಾಲರ್ಸ್ ಕಾಲೋನಿಯ ಮನೆಗೆ ತೆರಳಿ ಸಹಾಯ ಕೇಳಿದಾಗ ಯಡಿಯೂರಪ್ಪ ಅವರು ನನ್ನ ಮಗಳನ್ನು ಪ್ರತ್ಯೇಕ ಕೊಠಡಿಯೊಳಕ್ಕೆ ಕರೆದೊಯ್ದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವಿಷಯವನ್ನು ಯಾರಿಗೂ ಹೇಳದಂತೆ ಒಂದಿಷ್ಟು ಹಣ ನೀಡಿದ್ದರು ಎಂದು ಸಂತ್ರಸ್ತ ಬಾಲಕಿಯ ತಾಯಿ ಆರೋಪಿಸಿದ್ದರು.

ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ ಸದಾಶಿವನಗರ ಪೊಲೀಸರು ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಎಫ್​ಐಆರ್ ದಾಖಲಿಸಿದ್ದರು. ನಂತರ ಸರ್ಕಾರ ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿತ್ತು.

‘ಇಸ್ಲಾಮೋಫೋಬಿಕ್’ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ: ವ್ಯಾಪಕ ವಿರೋಧ, ದೂರು ದಾಖಲಿಸಲು ಮುಂದಾದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...