Homeಕರ್ನಾಟಕಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ 'ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹ': ಹೈಕೋರ್ಟ್‌

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ ‘ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹ’: ಹೈಕೋರ್ಟ್‌

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಬುಧವಾರ (ಸೆಪ್ಟೆಂಬರ್ 17) “ಇದು ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾದ ಪ್ರಕರಣ” ಎಂದು ಮೌಖಿಕವಾಗಿ ಹೇಳಿದೆ.

2025ರ ಫೆಬ್ರವರಿ 28ರಂದು ವಿಚಾರಣಾ ನ್ಯಾಯಾಲಯವು ತನಗೆ ಸಮನ್ಸ್ ಜಾರಿ ಮಾಡಿದ್ದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಎರಡನೇ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದೆ. ಪ್ರಕರಣದಲ್ಲಿ ದಾಖಲಿಸಲಾದ ಎಫ್‌ಐಆರ್ ಮತ್ತು ಸಲ್ಲಿಸಲಾದ ಚಾರ್ಜ್‌ಶೀಟ್ ಅನ್ನು ರದ್ದುಗೊಳಿಸುವಂತೆಯೂ ಯಡಿಯೂರಪ್ಪ ಕೋರಿದ್ದಾರೆ.

ಯಡಿಯೂರಪ್ಪ ಪರ ವಕೀಲರು ಮತ್ತು ರಾಜ್ಯ ಸರ್ಕಾರದ ವಾದವನ್ನು ದೀರ್ಘವಾಗಿ ಆಲಿಸಿದ ನಂತರ ನ್ಯಾಯಮೂರ್ತಿ ಎಂ.ಐ. ಅರುಣ್ ಅವರು “ಇದು ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾದ ಪ್ರಕರಣವಾಗಿದೆ. ಖಂಡಿತ ನಾನು ನಿಮ್ಮ ವಾದವನ್ನು ಆಲಿಸುತ್ತೇನೆ” ಎಂದು ಎಂದು ಯಡಿಯೂರಪ್ಪ ಪರ ವಕೀಲರಿಗೆ ಮೌಖಿಕವಾಗಿ ಹೇಳಿದ್ದಾರೆ.

ಮುಂದುವರಿದು, “ಯಡಿಯೂರಪ್ಪ ವಿರೋಧ ಪಕ್ಷದಲ್ಲಿದ್ದಾರೆ ಎಂಬುದು ಸತ್ಯ. ಅವರು ತನಗೆ ಅನಗತ್ಯವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಬಹುದು. ಈ ಕಿರುಕುಳವನ್ನು ತಡೆಗಟ್ಟಲು ಕೆಲವು ಅವಲೋಕನಗಳನ್ನು ಮಾಡಬಹುದು. ಸೆಕ್ಷನ್ 482 ನಿರ್ವಹಣೆಯ ಬಗ್ಗೆ ಸಾಮಾನ್ಯ ಅವಲೋಕನಗಳನ್ನು ಕೂಡ ಮಾಡಬಹುದು. “ಇದು ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾದ ಪ್ರಕರಣ ಎಂದಷ್ಟೇ ನಾನು ಹೇಳಬಲ್ಲೆ. ಇಲ್ಲದಿದ್ದರೆ, ಈ ವಿಷಯವನ್ನು ನಾನು ಒಂದು ವಾರಕ್ಕೂ ಹೆಚ್ಚು ಕಾಲ ಆಲಿಸಬೇಕಾಗುತ್ತದೆ” ಎಂದಿದ್ದಾರೆ.

“ಪೋಕ್ಸೊ ಕಾಯ್ದೆಯಡಿಯಲ್ಲಿ, ತಪ್ಪಿತಸ್ಥರನ್ನು ಶಿಕ್ಷಿಸಲು ಸಂತ್ರಸ್ತರ ಆರೋಪ ಮಾತ್ರವೇ ಸಾಕು. ಆದರೂ, ಸಂತ್ರಸ್ತರ ಹೇಳಿಕೆಯನ್ನು ಕಾನೂನಾತ್ಮಕವಾಗಿ ಪರಿಶೀಲನೆಗೆ ಒಳಪಡಿಸಬೇಕಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆ ಮತ್ತು ಆಕೆಯ ತಾಯಿಯ ವಿರುದ್ಧ ಅರ್ಜಿದಾರ ಹನಿಟ್ರ್ಯಾಪ್ ಆರೋಪ ಮಾಡಬಹುದು. ಆದರೆ, ಅವೆಲ್ಲವೂ ವಿಚಾರಣೆಯ ವಿಷಯವಾಗುತ್ತವೆ” ಎಂದು ನ್ಯಾಯಾಲಯವು ಮೌಖಿಕವಾಗಿ ಹೇಳಿದೆ.

“ಪ್ರಾಯೋಗಿಕವಾಗಿ ನಿಮ್ಮ ಆತಂಕವೇನು? ಎಲ್ಲಿ ನೀವು ಕಿರುಕುಳಕ್ಕೊಳಗಾಗಬಹುದು ಎಂದು ಭಾವಿಸುತ್ತೀರಿ? ಅದಕ್ಕೆ ಸಂಬಂಧಿಸಿದಂತೆ ಯಾವ ಅವಲೋಕನವನ್ನು ನೀವು ಬಯಸುತ್ತೀರಿ? ಕಾರ್ಯವಿಧಾನದ ಕಿರುಕುಳ ಮತ್ತು ನ್ಯಾಯಯುತ ವಿಚಾರಣೆಗಾಗಿ ನೀವು ಸಲಹೆ ನೀಡಬಹುದು, ಮತ್ತು ನಾವು ವಿಚಾರಣಾ ನ್ಯಾಯಾಲಯಕ್ಕೆ ಈ ಪ್ರಕರಣವನ್ನು ನಿರ್ದಿಷ್ಟ ಸಮಯದಲ್ಲಿ ಇತ್ಯರ್ಥಗೊಳಿಸಲು ಸೂಚಿಸಬಹುದು” ಎಂದು ಯಡಿಯೂಪ್ಪ ಪರ ವಕೀಲರಿಗೆ ಪೀಠ ತಿಳಿಸಿದೆ.

ಆಗ, ಯಡಿಯೂರಪ್ಪ ಪರ ವಕೀಲ ಸಂದೀಪ್ ಪಾಟೀಲ್‌ ಅವರು “ನ್ಯಾಯಾಲಯದ ಅಭಿಪ್ರಾಯ ಏನಿದೆ ಎಂಬುದು ಅರ್ಥವಾಗುತ್ತದೆ. ಈ ಕುರಿತು ಚರ್ಚಿಸಿ, ವಿಚಾರ ತಿಳಿಸಲಾಗುವುದು” ಎಂದಿದ್ದಾರೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಶುಕ್ರವಾರಕ್ಕೆ (ಸೆ. 19) ನಿಗದಿ ಮಾಡಿದೆ.

ಪ್ರಕರಣದ ತನಿಖಾಧಿಕಾರಿಯು ಸಿಆರ್‌ಪಿಸಿ ಸೆಕ್ಷನ್‌ 161 ಅಡಿ ದಾಖಲಿಸಿಕೊಂಡಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರ 6 ಏಪ್ರಿಲ್ 2024 ಮತ್ತು 29 ಏಪ್ರಿಲ್ 2024ರ ಹೇಳಿಕೆಯನ್ನು ಮೆಮೊ ಜೊತೆಗೆ ರಾಜ್ಯ ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್‌ ಸಲ್ಲಿಸಿದ್ದಾರೆ. ಇದನ್ನು ನ್ಯಾಯಾಲಯ ದಾಖಲೆಯಲ್ಲಿ ಸ್ವೀಕರಿಸಿದೆ. ಇದಕ್ಕೂ ಮುನ್ನ, ಯಡಿಯೂರಪ್ಪ ಪರ ವಕೀಲರು ಆರೋಪ ಪಟ್ಟಿಯಲ್ಲಿ ತಗಡೂರು ಅವರ ಹೇಳಿಕೆಯನ್ನು ಕೈಬಿಡಲಾಗಿದೆ. ಇದನ್ನು ನ್ಯಾಯಾಲಯ ತರಿಸಿಕೊಳ್ಳಬೇಕು ಎಂದು ವಾದಿಸಿದ್ದರು.

ಮಹಿಳೆಯೊಬ್ಬರು ತನ್ನ 17 ವರ್ಷದ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ 2024ರ ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಡಾಲರ್ಸ್ ಕಾಲೋನಿಯ ಮನೆಗೆ ತೆರಳಿ ಸಹಾಯ ಕೇಳಿದಾಗ ಯಡಿಯೂರಪ್ಪ ಅವರು ನನ್ನ ಮಗಳನ್ನು ಪ್ರತ್ಯೇಕ ಕೊಠಡಿಯೊಳಕ್ಕೆ ಕರೆದೊಯ್ದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವಿಷಯವನ್ನು ಯಾರಿಗೂ ಹೇಳದಂತೆ ಒಂದಿಷ್ಟು ಹಣ ನೀಡಿದ್ದರು ಎಂದು ಸಂತ್ರಸ್ತ ಬಾಲಕಿಯ ತಾಯಿ ಆರೋಪಿಸಿದ್ದರು.

ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ ಸದಾಶಿವನಗರ ಪೊಲೀಸರು ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಎಫ್​ಐಆರ್ ದಾಖಲಿಸಿದ್ದರು. ನಂತರ ಸರ್ಕಾರ ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿತ್ತು.

‘ಇಸ್ಲಾಮೋಫೋಬಿಕ್’ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ: ವ್ಯಾಪಕ ವಿರೋಧ, ದೂರು ದಾಖಲಿಸಲು ಮುಂದಾದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...