Homeಕರ್ನಾಟಕಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ 'ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹ': ಹೈಕೋರ್ಟ್‌

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ ‘ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹ’: ಹೈಕೋರ್ಟ್‌

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಬುಧವಾರ (ಸೆಪ್ಟೆಂಬರ್ 17) “ಇದು ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾದ ಪ್ರಕರಣ” ಎಂದು ಮೌಖಿಕವಾಗಿ ಹೇಳಿದೆ.

2025ರ ಫೆಬ್ರವರಿ 28ರಂದು ವಿಚಾರಣಾ ನ್ಯಾಯಾಲಯವು ತನಗೆ ಸಮನ್ಸ್ ಜಾರಿ ಮಾಡಿದ್ದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಎರಡನೇ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದೆ. ಪ್ರಕರಣದಲ್ಲಿ ದಾಖಲಿಸಲಾದ ಎಫ್‌ಐಆರ್ ಮತ್ತು ಸಲ್ಲಿಸಲಾದ ಚಾರ್ಜ್‌ಶೀಟ್ ಅನ್ನು ರದ್ದುಗೊಳಿಸುವಂತೆಯೂ ಯಡಿಯೂರಪ್ಪ ಕೋರಿದ್ದಾರೆ.

ಯಡಿಯೂರಪ್ಪ ಪರ ವಕೀಲರು ಮತ್ತು ರಾಜ್ಯ ಸರ್ಕಾರದ ವಾದವನ್ನು ದೀರ್ಘವಾಗಿ ಆಲಿಸಿದ ನಂತರ ನ್ಯಾಯಮೂರ್ತಿ ಎಂ.ಐ. ಅರುಣ್ ಅವರು “ಇದು ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾದ ಪ್ರಕರಣವಾಗಿದೆ. ಖಂಡಿತ ನಾನು ನಿಮ್ಮ ವಾದವನ್ನು ಆಲಿಸುತ್ತೇನೆ” ಎಂದು ಎಂದು ಯಡಿಯೂರಪ್ಪ ಪರ ವಕೀಲರಿಗೆ ಮೌಖಿಕವಾಗಿ ಹೇಳಿದ್ದಾರೆ.

ಮುಂದುವರಿದು, “ಯಡಿಯೂರಪ್ಪ ವಿರೋಧ ಪಕ್ಷದಲ್ಲಿದ್ದಾರೆ ಎಂಬುದು ಸತ್ಯ. ಅವರು ತನಗೆ ಅನಗತ್ಯವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಬಹುದು. ಈ ಕಿರುಕುಳವನ್ನು ತಡೆಗಟ್ಟಲು ಕೆಲವು ಅವಲೋಕನಗಳನ್ನು ಮಾಡಬಹುದು. ಸೆಕ್ಷನ್ 482 ನಿರ್ವಹಣೆಯ ಬಗ್ಗೆ ಸಾಮಾನ್ಯ ಅವಲೋಕನಗಳನ್ನು ಕೂಡ ಮಾಡಬಹುದು. “ಇದು ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾದ ಪ್ರಕರಣ ಎಂದಷ್ಟೇ ನಾನು ಹೇಳಬಲ್ಲೆ. ಇಲ್ಲದಿದ್ದರೆ, ಈ ವಿಷಯವನ್ನು ನಾನು ಒಂದು ವಾರಕ್ಕೂ ಹೆಚ್ಚು ಕಾಲ ಆಲಿಸಬೇಕಾಗುತ್ತದೆ” ಎಂದಿದ್ದಾರೆ.

“ಪೋಕ್ಸೊ ಕಾಯ್ದೆಯಡಿಯಲ್ಲಿ, ತಪ್ಪಿತಸ್ಥರನ್ನು ಶಿಕ್ಷಿಸಲು ಸಂತ್ರಸ್ತರ ಆರೋಪ ಮಾತ್ರವೇ ಸಾಕು. ಆದರೂ, ಸಂತ್ರಸ್ತರ ಹೇಳಿಕೆಯನ್ನು ಕಾನೂನಾತ್ಮಕವಾಗಿ ಪರಿಶೀಲನೆಗೆ ಒಳಪಡಿಸಬೇಕಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆ ಮತ್ತು ಆಕೆಯ ತಾಯಿಯ ವಿರುದ್ಧ ಅರ್ಜಿದಾರ ಹನಿಟ್ರ್ಯಾಪ್ ಆರೋಪ ಮಾಡಬಹುದು. ಆದರೆ, ಅವೆಲ್ಲವೂ ವಿಚಾರಣೆಯ ವಿಷಯವಾಗುತ್ತವೆ” ಎಂದು ನ್ಯಾಯಾಲಯವು ಮೌಖಿಕವಾಗಿ ಹೇಳಿದೆ.

“ಪ್ರಾಯೋಗಿಕವಾಗಿ ನಿಮ್ಮ ಆತಂಕವೇನು? ಎಲ್ಲಿ ನೀವು ಕಿರುಕುಳಕ್ಕೊಳಗಾಗಬಹುದು ಎಂದು ಭಾವಿಸುತ್ತೀರಿ? ಅದಕ್ಕೆ ಸಂಬಂಧಿಸಿದಂತೆ ಯಾವ ಅವಲೋಕನವನ್ನು ನೀವು ಬಯಸುತ್ತೀರಿ? ಕಾರ್ಯವಿಧಾನದ ಕಿರುಕುಳ ಮತ್ತು ನ್ಯಾಯಯುತ ವಿಚಾರಣೆಗಾಗಿ ನೀವು ಸಲಹೆ ನೀಡಬಹುದು, ಮತ್ತು ನಾವು ವಿಚಾರಣಾ ನ್ಯಾಯಾಲಯಕ್ಕೆ ಈ ಪ್ರಕರಣವನ್ನು ನಿರ್ದಿಷ್ಟ ಸಮಯದಲ್ಲಿ ಇತ್ಯರ್ಥಗೊಳಿಸಲು ಸೂಚಿಸಬಹುದು” ಎಂದು ಯಡಿಯೂಪ್ಪ ಪರ ವಕೀಲರಿಗೆ ಪೀಠ ತಿಳಿಸಿದೆ.

ಆಗ, ಯಡಿಯೂರಪ್ಪ ಪರ ವಕೀಲ ಸಂದೀಪ್ ಪಾಟೀಲ್‌ ಅವರು “ನ್ಯಾಯಾಲಯದ ಅಭಿಪ್ರಾಯ ಏನಿದೆ ಎಂಬುದು ಅರ್ಥವಾಗುತ್ತದೆ. ಈ ಕುರಿತು ಚರ್ಚಿಸಿ, ವಿಚಾರ ತಿಳಿಸಲಾಗುವುದು” ಎಂದಿದ್ದಾರೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಶುಕ್ರವಾರಕ್ಕೆ (ಸೆ. 19) ನಿಗದಿ ಮಾಡಿದೆ.

ಪ್ರಕರಣದ ತನಿಖಾಧಿಕಾರಿಯು ಸಿಆರ್‌ಪಿಸಿ ಸೆಕ್ಷನ್‌ 161 ಅಡಿ ದಾಖಲಿಸಿಕೊಂಡಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರ 6 ಏಪ್ರಿಲ್ 2024 ಮತ್ತು 29 ಏಪ್ರಿಲ್ 2024ರ ಹೇಳಿಕೆಯನ್ನು ಮೆಮೊ ಜೊತೆಗೆ ರಾಜ್ಯ ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್‌ ಸಲ್ಲಿಸಿದ್ದಾರೆ. ಇದನ್ನು ನ್ಯಾಯಾಲಯ ದಾಖಲೆಯಲ್ಲಿ ಸ್ವೀಕರಿಸಿದೆ. ಇದಕ್ಕೂ ಮುನ್ನ, ಯಡಿಯೂರಪ್ಪ ಪರ ವಕೀಲರು ಆರೋಪ ಪಟ್ಟಿಯಲ್ಲಿ ತಗಡೂರು ಅವರ ಹೇಳಿಕೆಯನ್ನು ಕೈಬಿಡಲಾಗಿದೆ. ಇದನ್ನು ನ್ಯಾಯಾಲಯ ತರಿಸಿಕೊಳ್ಳಬೇಕು ಎಂದು ವಾದಿಸಿದ್ದರು.

ಮಹಿಳೆಯೊಬ್ಬರು ತನ್ನ 17 ವರ್ಷದ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ 2024ರ ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಡಾಲರ್ಸ್ ಕಾಲೋನಿಯ ಮನೆಗೆ ತೆರಳಿ ಸಹಾಯ ಕೇಳಿದಾಗ ಯಡಿಯೂರಪ್ಪ ಅವರು ನನ್ನ ಮಗಳನ್ನು ಪ್ರತ್ಯೇಕ ಕೊಠಡಿಯೊಳಕ್ಕೆ ಕರೆದೊಯ್ದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವಿಷಯವನ್ನು ಯಾರಿಗೂ ಹೇಳದಂತೆ ಒಂದಿಷ್ಟು ಹಣ ನೀಡಿದ್ದರು ಎಂದು ಸಂತ್ರಸ್ತ ಬಾಲಕಿಯ ತಾಯಿ ಆರೋಪಿಸಿದ್ದರು.

ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ ಸದಾಶಿವನಗರ ಪೊಲೀಸರು ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಎಫ್​ಐಆರ್ ದಾಖಲಿಸಿದ್ದರು. ನಂತರ ಸರ್ಕಾರ ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿತ್ತು.

‘ಇಸ್ಲಾಮೋಫೋಬಿಕ್’ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ: ವ್ಯಾಪಕ ವಿರೋಧ, ದೂರು ದಾಖಲಿಸಲು ಮುಂದಾದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...