Homeಕರ್ನಾಟಕಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ 'ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹ': ಹೈಕೋರ್ಟ್‌

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ ‘ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹ’: ಹೈಕೋರ್ಟ್‌

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಬುಧವಾರ (ಸೆಪ್ಟೆಂಬರ್ 17) “ಇದು ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾದ ಪ್ರಕರಣ” ಎಂದು ಮೌಖಿಕವಾಗಿ ಹೇಳಿದೆ.

2025ರ ಫೆಬ್ರವರಿ 28ರಂದು ವಿಚಾರಣಾ ನ್ಯಾಯಾಲಯವು ತನಗೆ ಸಮನ್ಸ್ ಜಾರಿ ಮಾಡಿದ್ದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಎರಡನೇ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದೆ. ಪ್ರಕರಣದಲ್ಲಿ ದಾಖಲಿಸಲಾದ ಎಫ್‌ಐಆರ್ ಮತ್ತು ಸಲ್ಲಿಸಲಾದ ಚಾರ್ಜ್‌ಶೀಟ್ ಅನ್ನು ರದ್ದುಗೊಳಿಸುವಂತೆಯೂ ಯಡಿಯೂರಪ್ಪ ಕೋರಿದ್ದಾರೆ.

ಯಡಿಯೂರಪ್ಪ ಪರ ವಕೀಲರು ಮತ್ತು ರಾಜ್ಯ ಸರ್ಕಾರದ ವಾದವನ್ನು ದೀರ್ಘವಾಗಿ ಆಲಿಸಿದ ನಂತರ ನ್ಯಾಯಮೂರ್ತಿ ಎಂ.ಐ. ಅರುಣ್ ಅವರು “ಇದು ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾದ ಪ್ರಕರಣವಾಗಿದೆ. ಖಂಡಿತ ನಾನು ನಿಮ್ಮ ವಾದವನ್ನು ಆಲಿಸುತ್ತೇನೆ” ಎಂದು ಎಂದು ಯಡಿಯೂರಪ್ಪ ಪರ ವಕೀಲರಿಗೆ ಮೌಖಿಕವಾಗಿ ಹೇಳಿದ್ದಾರೆ.

ಮುಂದುವರಿದು, “ಯಡಿಯೂರಪ್ಪ ವಿರೋಧ ಪಕ್ಷದಲ್ಲಿದ್ದಾರೆ ಎಂಬುದು ಸತ್ಯ. ಅವರು ತನಗೆ ಅನಗತ್ಯವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಬಹುದು. ಈ ಕಿರುಕುಳವನ್ನು ತಡೆಗಟ್ಟಲು ಕೆಲವು ಅವಲೋಕನಗಳನ್ನು ಮಾಡಬಹುದು. ಸೆಕ್ಷನ್ 482 ನಿರ್ವಹಣೆಯ ಬಗ್ಗೆ ಸಾಮಾನ್ಯ ಅವಲೋಕನಗಳನ್ನು ಕೂಡ ಮಾಡಬಹುದು. “ಇದು ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾದ ಪ್ರಕರಣ ಎಂದಷ್ಟೇ ನಾನು ಹೇಳಬಲ್ಲೆ. ಇಲ್ಲದಿದ್ದರೆ, ಈ ವಿಷಯವನ್ನು ನಾನು ಒಂದು ವಾರಕ್ಕೂ ಹೆಚ್ಚು ಕಾಲ ಆಲಿಸಬೇಕಾಗುತ್ತದೆ” ಎಂದಿದ್ದಾರೆ.

“ಪೋಕ್ಸೊ ಕಾಯ್ದೆಯಡಿಯಲ್ಲಿ, ತಪ್ಪಿತಸ್ಥರನ್ನು ಶಿಕ್ಷಿಸಲು ಸಂತ್ರಸ್ತರ ಆರೋಪ ಮಾತ್ರವೇ ಸಾಕು. ಆದರೂ, ಸಂತ್ರಸ್ತರ ಹೇಳಿಕೆಯನ್ನು ಕಾನೂನಾತ್ಮಕವಾಗಿ ಪರಿಶೀಲನೆಗೆ ಒಳಪಡಿಸಬೇಕಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆ ಮತ್ತು ಆಕೆಯ ತಾಯಿಯ ವಿರುದ್ಧ ಅರ್ಜಿದಾರ ಹನಿಟ್ರ್ಯಾಪ್ ಆರೋಪ ಮಾಡಬಹುದು. ಆದರೆ, ಅವೆಲ್ಲವೂ ವಿಚಾರಣೆಯ ವಿಷಯವಾಗುತ್ತವೆ” ಎಂದು ನ್ಯಾಯಾಲಯವು ಮೌಖಿಕವಾಗಿ ಹೇಳಿದೆ.

“ಪ್ರಾಯೋಗಿಕವಾಗಿ ನಿಮ್ಮ ಆತಂಕವೇನು? ಎಲ್ಲಿ ನೀವು ಕಿರುಕುಳಕ್ಕೊಳಗಾಗಬಹುದು ಎಂದು ಭಾವಿಸುತ್ತೀರಿ? ಅದಕ್ಕೆ ಸಂಬಂಧಿಸಿದಂತೆ ಯಾವ ಅವಲೋಕನವನ್ನು ನೀವು ಬಯಸುತ್ತೀರಿ? ಕಾರ್ಯವಿಧಾನದ ಕಿರುಕುಳ ಮತ್ತು ನ್ಯಾಯಯುತ ವಿಚಾರಣೆಗಾಗಿ ನೀವು ಸಲಹೆ ನೀಡಬಹುದು, ಮತ್ತು ನಾವು ವಿಚಾರಣಾ ನ್ಯಾಯಾಲಯಕ್ಕೆ ಈ ಪ್ರಕರಣವನ್ನು ನಿರ್ದಿಷ್ಟ ಸಮಯದಲ್ಲಿ ಇತ್ಯರ್ಥಗೊಳಿಸಲು ಸೂಚಿಸಬಹುದು” ಎಂದು ಯಡಿಯೂಪ್ಪ ಪರ ವಕೀಲರಿಗೆ ಪೀಠ ತಿಳಿಸಿದೆ.

ಆಗ, ಯಡಿಯೂರಪ್ಪ ಪರ ವಕೀಲ ಸಂದೀಪ್ ಪಾಟೀಲ್‌ ಅವರು “ನ್ಯಾಯಾಲಯದ ಅಭಿಪ್ರಾಯ ಏನಿದೆ ಎಂಬುದು ಅರ್ಥವಾಗುತ್ತದೆ. ಈ ಕುರಿತು ಚರ್ಚಿಸಿ, ವಿಚಾರ ತಿಳಿಸಲಾಗುವುದು” ಎಂದಿದ್ದಾರೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಶುಕ್ರವಾರಕ್ಕೆ (ಸೆ. 19) ನಿಗದಿ ಮಾಡಿದೆ.

ಪ್ರಕರಣದ ತನಿಖಾಧಿಕಾರಿಯು ಸಿಆರ್‌ಪಿಸಿ ಸೆಕ್ಷನ್‌ 161 ಅಡಿ ದಾಖಲಿಸಿಕೊಂಡಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರ 6 ಏಪ್ರಿಲ್ 2024 ಮತ್ತು 29 ಏಪ್ರಿಲ್ 2024ರ ಹೇಳಿಕೆಯನ್ನು ಮೆಮೊ ಜೊತೆಗೆ ರಾಜ್ಯ ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್‌ ಸಲ್ಲಿಸಿದ್ದಾರೆ. ಇದನ್ನು ನ್ಯಾಯಾಲಯ ದಾಖಲೆಯಲ್ಲಿ ಸ್ವೀಕರಿಸಿದೆ. ಇದಕ್ಕೂ ಮುನ್ನ, ಯಡಿಯೂರಪ್ಪ ಪರ ವಕೀಲರು ಆರೋಪ ಪಟ್ಟಿಯಲ್ಲಿ ತಗಡೂರು ಅವರ ಹೇಳಿಕೆಯನ್ನು ಕೈಬಿಡಲಾಗಿದೆ. ಇದನ್ನು ನ್ಯಾಯಾಲಯ ತರಿಸಿಕೊಳ್ಳಬೇಕು ಎಂದು ವಾದಿಸಿದ್ದರು.

ಮಹಿಳೆಯೊಬ್ಬರು ತನ್ನ 17 ವರ್ಷದ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ 2024ರ ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಡಾಲರ್ಸ್ ಕಾಲೋನಿಯ ಮನೆಗೆ ತೆರಳಿ ಸಹಾಯ ಕೇಳಿದಾಗ ಯಡಿಯೂರಪ್ಪ ಅವರು ನನ್ನ ಮಗಳನ್ನು ಪ್ರತ್ಯೇಕ ಕೊಠಡಿಯೊಳಕ್ಕೆ ಕರೆದೊಯ್ದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವಿಷಯವನ್ನು ಯಾರಿಗೂ ಹೇಳದಂತೆ ಒಂದಿಷ್ಟು ಹಣ ನೀಡಿದ್ದರು ಎಂದು ಸಂತ್ರಸ್ತ ಬಾಲಕಿಯ ತಾಯಿ ಆರೋಪಿಸಿದ್ದರು.

ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ ಸದಾಶಿವನಗರ ಪೊಲೀಸರು ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಎಫ್​ಐಆರ್ ದಾಖಲಿಸಿದ್ದರು. ನಂತರ ಸರ್ಕಾರ ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿತ್ತು.

‘ಇಸ್ಲಾಮೋಫೋಬಿಕ್’ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ: ವ್ಯಾಪಕ ವಿರೋಧ, ದೂರು ದಾಖಲಿಸಲು ಮುಂದಾದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...