Homeಕರ್ನಾಟಕಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್‌

- Advertisement -
- Advertisement -

ಪೋಕ್ಸೊ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವುದನ್ನು (cognisance)ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮತ್ತು ಇತರರು ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ಗುರುವಾರ (ಅ.23) ಆದೇಶ ಕಾಯ್ದಿರಿಸಿದೆ.

ಯಡಿಯೂರಪ್ಪ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ ನಾಗೇಶ್, ವಿಚಾರಣಾ ನ್ಯಾಯಾಲಯವು ಸಂತ್ರಸ್ತೆಯ ಹೇಳಿಕೆಯನ್ನು ಮಾತ್ರ ಆಧರಿಸಿ ಸಂಜ್ಞೇ ಪರಿಗಣಿಸಿದೆ. ಈ ತೀರ್ಮಾನಕ್ಕೆ ಸರಿಯಾದ ಕಾರಣವನ್ನು ದಾಖಲಿಸಿಲ್ಲ ಮತ್ತು ನ್ಯಾಯಾಂಗ ವಿವೇಚನೆಯನ್ನು ಬಳಸಿಲ್ಲ ಎಂದಿದ್ದಾರೆ.

ಪ್ರಾಸಿಕ್ಯೂಷನ್‌ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್‌ ಜಗದೀಶ್‌ ಅವರು, “ಸಂತ್ರಸ್ತೆಯ ತಾಯಿ ಮತ್ತು ಯಡಿಯೂರಪ್ಪ ನಡುವಿನ ಆಡಿಯೋ ರೆಕಾರ್ಡಿಂಗ್‌ ಅನ್ನು ನಾಶಪಡಿಸಲಾಗಿದೆ. ಅದು ಇಲ್ಲ ಎಂದಾದರೆ ಯಡಿಯೂರಪ್ಪ ಅವರು ಎರಡು ಲಕ್ಷ ರೂಪಾಯಿಯನ್ನು ಸಂತ್ರಸ್ತೆಗೆ ಏಕೆ ನೀಡಿದ್ದರು? ಸಂತ್ರಸ್ತೆಯ ತಾಯಿಯ ಮೊಬೈಲ್‌ ಕಸಿದು ಸಹ ಆರೋಪಿ ಅರುಣ್‌ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಲಾಗಿದ್ದ ಆಡಿಯೋ ರೆಕಾರ್ಡಿಂಗ್‌ ಡಿಲೀಟ್‌ ಮಾಡಿಸಿದ್ದಾರೆ. ಆದರೆ, ಸಂತ್ರಸ್ತೆ ಮೊಬೈಲ್‌ನಲ್ಲಿ ಅಸಲಿ ಆಡಿಯೋ ಇದೆ” ಎಂದು ವಾದಿಸಿದ್ದಾರೆ.

ಆಡಿಯೊದಲ್ಲಿರುವ ಧ್ವನಿ ಯಡಿಯೂರಪ್ಪ ಅವರದ್ದೇ ಎಂದು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ವರದಿ ದೃಢಪಡಿಸಿದೆ ಎಂದು ಪ್ರಾಸಿಕ್ಯೂಷನ್ ಹೇಳಿದೆ.

ಎರಡೂ ಕಡೆಯ ವಿವರವಾದ ವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಎಂ.ಐ ಅರುಣ್ ಅವರ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿರುವುದಾಗಿ ತಿಳಿಸಿದೆ. ವಾಸ್ತವಿಕ ಅಂಶಗಳಿಗೆ ಸಂಬಂಧಿಸಿದ ವಿವರಣೆಯನ್ನು (ಶನಿವಾರ) ನೀಡಲಾಗುವುದು ಎಂದು ಮೌಖಿಕವಾಗಿ ಹೇಳಿದೆ.

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಸಂಬಂಧ ಸಂತ್ರಸ್ತೆಯ ತಾಯಿ 2024ರ ಮಾರ್ಚ್‌ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದರು. ಆ ದೂರು ಆಧರಿಸಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ನಂತರ ಪ್ರಕರಣ ಸಿಐಡಿಗೆ ತನಿಖೆ ವರ್ಗಾವಣೆಯಾಗಿತ್ತು. ಸಿಐಡಿ ಪೊಲೀಸರು ಯಡಿಯೂರಪ್ಪ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು.

ಪೋಕ್ಸೊ ಪ್ರಕರಣದಲ್ಲಿ ಮೊದಲ ಬಾರಿಗೆ ಸಂಜ್ಞೇ ಪರಿಗಣಿಸಿದ್ದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಹೊಸದಾಗಿ ಸಂಜ್ಞೇ ಪರಿಗಣಿಸುವಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ನಿರ್ದೇಶಿಸಿತ್ತು. ಈಗ ಎರಡನೇ ಬಾರಿಗೆ ಯಡಿಯೂರಪ್ಪ ಮತ್ತಿತರರು ಮತ್ತೇ ಸಂಜ್ಞೇ ಪರಿಗಣಿಸಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿದ್ದಾರೆ. ಎರಡನೇ ಸುತ್ತಿನ ಆದೇಶವನ್ನು ನ್ಯಾಯಾಲಯವು ಈಗ ಕಾಯ್ದಿರಿಸಿದೆ.

ಮೈಸೂರು| ಬನ್ನೂರು ಫಾರಂ ಹೌಸ್ ನಲ್ಲಿ ಲಿಂಗ ಭ್ರೂಣ ಪತ್ತೆ ಕಾರ್ಯ ಪತ್ತೆಹಚ್ಚಿದ ಆರೋಗ್ಯ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....