Homeಕರ್ನಾಟಕಪೋಕ್ಸೋ ಪ್ರಕರಣ : ಯಡಿಯೂರಪ್ಪ ಅರ್ಜಿ ವಿಚಾರಣೆ ಮುಂದೂಡಿಕೆ

ಪೋಕ್ಸೋ ಪ್ರಕರಣ : ಯಡಿಯೂರಪ್ಪ ಅರ್ಜಿ ವಿಚಾರಣೆ ಮುಂದೂಡಿಕೆ

- Advertisement -
- Advertisement -

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಮೇಲೆ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು (ನ.28) ಮುಂದೂಡಿದೆ.

ಡಿಸೆಂಬರ್ 2 ಸೋಮವಾರ ಮಧ್ಯಾಹ್ನ 2.30ಕ್ಕೆ ಅರ್ಜಿಯ ಮುಂದಿನ ವಿಚಾರಣೆಯನ್ನು ಹೈಕೋರ್ಟ್ ನಿಗದಿಪಡಿಸಿದೆ.

ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ರದ್ದುಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯನ್ನು ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ ಇಂದು ವಿಚಾರಣೆ ನಡೆಸಿತು.

ಈ ವೇಳೆ ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ವಿಶೇಷ ಅಭಿಯೋಜಕೆ ಪ್ರೊ.ರವಿವರ್ಮ ಕುಮಾರ್, ಪ್ರಕರಣ ಸಂಬಂಧ ಈಗಾಗಲೇ ದೋಷಾರೋಪಪಟ್ಟಿ ಸಲ್ಲಿಕೆಯಾಗಿದೆ. ಪೋಕ್ಸೋ ಕಾಯ್ದೆಯ ಸೆಕ್ಷನ್ 35ರ ಪ್ರಕಾರ, ಪ್ರಕರಣ ಸಂಬಂಧ ಕಾಗ್ನಿಜೆನ್ಸ್ ಪಡೆದ ಬಳಿಕ ಮೂರು ತಿಂಗಳಲ್ಲಿ ಸಾಕ್ಷ್ಯಗಳನ್ನು ದಾಖಲಿಸಿಕೊಳ್ಳಬೇಕು. ವಿಳಂಬವಾದಲ್ಲಿ, ಅದಕ್ಕೆ ಸೂಕ್ತ ಕಾರಣವನ್ನು ವಿಶೇಷ ನ್ಯಾಯಾಲಯ ದಾಖಲಿಸಬೇಕು ಎಂದು ತಿಳಿಸಿದರು.

ಆದರೆ, ಕಾಗ್ನಿಜೆನ್ಸ್ ಪಡೆದು ಈಗಾಗಲೇ ಅರು ತಿಂಗಳು ಕಳೆದಿವೆ. ಆದ್ದರಿಂದ ಅರ್ಜಿದಾರ ಆರೋಪಿ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದಕ್ಕೆ ವಿನಾಯಿತಿ ನೀಡಿರುವ ಈ ಹಿಂದಿನ ಮಧ್ಯಂತರ ಆದೇಶ ತೆರವುಗೊಳಿಸಬೇಕು ಎಂದು ಕೋರಿದರು.

ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ಸಿ.ವಿ ನಾಗೇಶ್, ಅರ್ಜಿಗೆ ಸಂಬಂಧಿಸಿದಂತೆ ತಮ್ಮ ವಾದವನ್ನು ಸೋಮವಾರ ಪೂರ್ಣಗೊಳಿಸುವುದಾಗಿ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ನಿಗದಿಪಡಿಸಿದರು. ಅಂದೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ಅರ್ಜಿದಾರ ಯಡಿಯೂರಪ್ಪ ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ನೀಡಿರುವ ವಿನಾಯಿತಿಯನ್ನು ವಿಸ್ತರಿಸಿದರು.

ಪ್ರಕರಣ ಹಿನ್ನೆಲೆ : ಫೆಬ್ರವರಿ 2, 2024ರಂದು ಬೆಂಗಳೂರಿನ ಸಂಜಯನಗರದ ತಮ್ಮ ಮನೆಯಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಯಡಿಯೂರಪ್ಪ ಮೇಲಿದೆ. ಈ ಸಂಬಂಧ ಬಾಲಕಿಯ ತಾಯಿ ಮಾರ್ಚ್ 14, 2024 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯ ಕೊಡಿಸುವಂತೆ ಕೋರಿ ಬಾಲಕಿ ಮತ್ತು ಆಕೆಯ ತಾಯಿ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಯಡಿಯೂರಪ್ಪ ಅವರೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಯಡಿಯೂರಪ್ಪ ವಿರುದ್ಧದ ದೂರಿನ ಸಂಬಂಧ ಅಪ್ರಾಪ್ತ ಬಾಲಕಿಯ ತಾಯಿ ಮೇ 27, 2024 ರಂದು ವಕೀಲ ಬಾಲನ್ ಅವರನ್ನು ಭೇಟಿಯಾಗಬೇಕಿತ್ತು. ಆದರೆ, ಉಸಿರಾಟದ ತೊಂದರೆಯಿಂದ ಅವರು ಮೇ 26, 2024ರಂದು ಬೆಂಗಳೂರಿನ ನ್ಯಾನೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಈ ಸಾವಿನ ಸುತ್ತವೂ ಹಲವು ಅನುಮಾನಗಳು ವ್ಯಕ್ತವಾಗಿದ್ದು, ತನಿಖೆಗೆ ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮೇ 27,2024ರಂದು ದೂರು ದಾಖಲಿಸಿದೆ.

ಇದನ್ನೂ ಓದಿ : ಮರಕುಂಬಿ ತೀರ್ಪು: ದಲಿತರತ್ತ ತಿರುಗಿದ ನ್ಯಾಯದೇವತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...