Homeಕರ್ನಾಟಕಪೋಕ್ಸೋ ಪ್ರಕರಣ: ಮುರುಘಾ ಶರಣರಿಗೆ ಜಾಮೀನು ನಿರಾಕರಣೆ

ಪೋಕ್ಸೋ ಪ್ರಕರಣ: ಮುರುಘಾ ಶರಣರಿಗೆ ಜಾಮೀನು ನಿರಾಕರಣೆ

- Advertisement -
- Advertisement -

ಪೋಕ್ಸೋ ಪ್ರಕರಣದ ಪ್ರಮುಖ ಆರೋಪಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿಯನ್ನು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.

ಇಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಶಿವಮೂರ್ತಿ ಮುರುಘಾ ಶರಣರನ್ನು ಸೆ.1ರಂದು ಬಂಧಿಸಲಾಗಿದೆ. ಜಾಮೀನು ಕೋರಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು.

ಇದಕ್ಕೆ ತಕರಾರು ಸಲ್ಲಿಸಿದ್ದ ವಿಶೇಷ ಸರ್ಕಾರಿ ವಕೀಲೆ ಕೆ.ಬಿ. ನಾಗವೇಣಿ, “ಬಂಧಿತ ಆರೋಪಿ ಪ್ರಭಾವಿಯಾಗಿದ್ದು, ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ” ಎಂಬ ವಾದವನ್ನು ಮುಂದಿಟ್ಟರು. ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಅವರು ವಕೀಲರ ವಾದವನ್ನು ಪರಿಗಣಿಸಿದ್ದು, ಮುರುಘಾ ಮಠಾಧೀಶರ ಅರ್ಜಿ ತಿರಸ್ಕರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಶರಣರನ್ನು ಶಿವಮೊಗ್ಗದ ಮೆಗ್ಗಾನ್‌ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲು ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿತ್ತು. ಅದಂತೆ ಅವರನ್ನು ಬುಧವಾರ ರಾತ್ರಿ ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಕರೆತರಲಾಗಿತ್ತು. ಸದ್ಯ ಆರೋಗ್ಯ ಸ್ಥಿರವಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಶರಣರನ್ನು ಆಸ್ಪತ್ರೆಯಿಂದ ಚಿತ್ರದುರ್ಗದ ಕಾರಾಗೃಹಕ್ಕೆ ವಾಪಸ್‌ ಕರೆದೊಯ್ಯಲಾಗಿದೆ.

“ವೈದ್ಯಕೀಯ ಪ್ರಕ್ರಿಯೆಯ ವರದಿಯನ್ನು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಆಸ್ಪತ್ರೆಯಿಂದ ಬಿಡುಗಡೆ ಆಗುವಾಗ ಶರಣರು ಆರೋಗ್ಯವಾಗಿದ್ದಾರೆ” ಎಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ವಿರೂಪಾಕ್ಷಪ್ಪ ತಿಳಿಸಿದ್ದಾರೆ.

ಮರುಘಾ ಶರಣರು ಪೀಠ ತೊರೆಯುವಂತೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಯತ್ನಾಳ್ ಪತ್ರ

ಲೈಂಗಿಕ ಕಿರುಕುಳ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಪೀಠತ್ಯಾಗ ಮಾಡಲು ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿಗಳಿಗೆ ಹಾಗೂ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪತ್ರ ಬರೆದಿದ್ದಾರೆ.

ಮಠದ ಸಾವಿರಾರು ನೌಕರರು ಸಂಬಳ, ಸಾರಿಗೆಯ ಖರ್ಚಿಗಾಗಿ ಮತ್ತು ಜೀವನ ನಿರ್ವಹಣೆಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯಕೀಯ, ಎಂಜಿನಿಯರಿಂಗ್‌ ಕಾಲೇಜು, ಬ್ಯಾಂಕ್‌ಗಳು ಸೇರಿದಂತೆ ಎಸ್‌ಜೆಎಂ ವಿದ್ಯಾಸಂಸ್ಥೆಯ ಅಧೀನದಲ್ಲಿ ರಾಜ್ಯದ ವಿವಿಧೆಡೆ ಇರುವ ನೂರಾರು ಘಟಕಗಳ ನಿತ್ಯದ ಆಡಳಿತಕ್ಕೆ ಪಾರ್ಶ್ವವಾಯು ಹೊಡೆದಂತಾಗುತ್ತದೆ ಎಂದು ಅವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಶಿವಮೂರ್ತಿ ಮುರುಘಾ ಶರಣರು ಪೀಠದಲ್ಲಿ ಮುಂದುವರಿಯುವುದು ಶ್ರೀಮಠದ ಘನ ಪರಂಪರೆಯಗೆ ಕಳಂಕ ತರುವಂತಹ ಸಂಗತಿಯಾಗಿರುತ್ತದೆ. ಆದ್ದರಿಂದ ಶಿವಮೂರ್ತಿ ಶರಣರು ಈ ಕೂಡಲೇ ಸ್ವಇಚ್ಛೆಯಿಂದ ಪೀಠತ್ಯಾಗ ಮಾಡಬೇಕು. ಇಲ್ಲವಾದಲ್ಲಿ ಅವರನ್ನು ಪದಚ್ಯುತಗೊಳಿಸುವ ಕಾನೂನುಬದ್ಧ ಪ್ರಕ್ರಿಯೆಗೆ ನಾಡಿನ ಭಕ್ತ ಸಮೂಹ ಮುಂದಾಗಲು ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿರಿ: ಮುರುಘಾ ಶರಣರ ಪ್ರಕರಣ: ನೈಜ ವರದಿ ಸಲ್ಲಿಸಲು ಎಸ್‌ಸಿ, ಎಸ್‌ಟಿ ಆಯೋಗ ಸೂಚನೆ

“ಜಗದ್ಗುರು ಮುರುಘರಾಜೇಂದ್ರ ವಿದ್ಯಾಪೀಠದ ಹಾಲಿ ಕಾರ್ಯದರ್ಶಿ ವಸ್ತ್ರದಮಠ ಅವರು ಶಿವಮೂರ್ತಿ ಮುರುಘಾ ಶರಣರ ಏಕಪಕ್ಷೀಯ ನೇಮಕವಾಗಿರುತ್ತದೆ. ಇವರ ನೇಮಕದಿಂದ ಸ್ಥಳೀಯ ಭಕ್ತ ಸಮೂಹ ಅಸಮಾಧಾನಗೊಂಡಿದ್ದಾರೆ. ಈಗಿನ ಸಂದಿಗ್ಧ ಸಮಯದಲ್ಲಿ ಮಠದ ಸಾವಿರಾರು ನೌಕರರು ಸಂಬಳ, ಸಾರಿಗೆಯ ಖರ್ಚಿಗಾಗಿ ಮತ್ತು ಜೀವನ ನಿರ್ವಹಣೆಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜು, ಬ್ಯಾಂಕ್‌ಗಳು ಸೇರಿದಂತೆ ಎಸ್‌ಜೆಎಂ ವಿದ್ಯಾಸಂಸ್ಥೆಯ ಅಧೀನದಲ್ಲಿ ರಾಜ್ಯದ ವಿವಿಧೆಡೆ ಇರುವ ನೂರಾರು ಘಟಕಗಳ ನಿತ್ಯದ ಆಡಳಿತಕ್ಕೆ ಪಾರ್ಶ್ವವಾಯು ಹೊಡೆದಂತಾಗುತ್ತದೆ. ಮಠದ ಸಾವಿರಾರು ಕೋಟಿ ರೂ. ಮೊತ್ತದ ಚರ ಮತ್ತು ಸ್ಥಿರಾಸ್ತಿ ದುರುಪಯೋಗವಾಗುವ ಸಾಧ್ಯತೆ ಇದೆ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...